Author: main-admin

ಮಂಗಳೂರು : ಮಸೀದಿಗೆ ನುಗ್ಗಿ ಧರ್ಮ ಗುರುವಿಗೆ ಹಿಗ್ಗಾಮುಗ್ಗವಾಗಿ ಥಳಿಸಿರುವ ಘಟನೆ ಮಂಗಳೂರಿನ ಸೂರತ್ಕಲ್ ನಲ್ಲಿ ನಡೆದಿದೆ. ಅಲ್ಲದೆ ಧರ್ಮಗುರು ಮೇಲೆ ಹಲ್ಲೆಗೈದು ಕೊಲೆ ಬೆದರಿಕೆ ಹಾಕಲಾಗಿದೆ. ಮದರಸ ಕಲಿಸುವ ವೇಳೆ ವಿದ್ಯಾರ್ಥಿಗೆ ಧರ್ಮಗುರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಕೃಷ್ಣಾಪುರ ಭಾಗದ ದ್ವೈಬ ಮಸೀದಿಯ ಧರ್ಮ ಗುರುವಿನ ಮೇಲೆ ಹಲ್ಲೆ ನಡೆದಿದೆ ಮಗುವಿನ ತಂದೆ ತಾಯಿ ಮತ್ತು ಕುಟುಂಬದವರಿಂದ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ. ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಸೂರತ್ಕಲ್ ಠಾಣೆಗೆ ದೂರು ನೀಡಲು ಸಿದ್ಧತೆ ಮಾಡಿಕೊಂಡಿದ್ದು ಮಸೀದಿ ಆಡಳಿತ ಹಾಗೂ ಧರ್ಮ ಗುರುವಿನಿಂದ ದೂರು ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

Read More

ಉಡುಪಿ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಉಡುಪಿಗೆ ಕೆಲಸಕ್ಕೆಂದು ಬಂದಿದ್ದ ಅಪ್ರಾಪ್ತ ವಯಸ್ಕ ಬಾಲಕಿಗೆ ಮದುವೆಯ ಭರವಸೆ ನೀಡಿ ಗರ್ಭವತಿಯನ್ನಾಗಿ ಮಾಡಿದ ಪ್ರಕರಣ ಸಂಬಂಧಿಸಿ ಮೂವರು ಆರೋಪಿಗಳ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಸ್ಸಾಂ ಮೂಲದ ಕುಶಾಲ್, ರಾಜೇಶ್ ಹಾಗೂ ಕೌಶಲ್ ಸೇರಿ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಕಳೆದ ಡಿಸೆಂಬ‌ರ್ ತಿಂಗಳಿನಿಂದ ಒಬ್ಬರಾದ ಬಳಿಕ ಒಬ್ಬರು ದುರ್ಬಳಕೆ ಮಾಡುತ್ತಿದ್ದರು. ಬಾಲಕಿ ಸದ್ಯ 7 ತಿಂಗಳ ಗರ್ಭಿಣಿಯಾಗಿದ್ದು, ಆಪ್ತರ ಸಹಾಯದೊಂದಿಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

Read More

ಕಲಬುರ್ಗಿ : ನಗರದ ಅತ್ಯಂತ ಪ್ರಮುಖ ಹಾಗೂ ಜನನಿಬಿಡ ಪ್ರದೇಶವಾದ ಜಗತ್ ವೃತ್ತದಲ್ಲಿ ಮಂಗಳವಾರ ರಾತ್ರಿ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿ ಕರ್ತವ್ಯದಲ್ಲಿದ್ದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (CAR) ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು, ತಮ್ಮ ಸೇವಾ ರೈಫಲ್‌ನಿಂದಲೇ ತಮಗೆ ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ನಡೆದ ಈ ಘಟನೆಯು ಇಡೀ ಪೊಲೀಸ್ ಇಲಾಖೆ ಹಾಗೂ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಆತ್ಮಹತ್ಯೆಗೆ ಶರಣಾದ ಪೊಲೀಸ್ ಸಿಬ್ಬಂದಿಯನ್ನು ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದ ನಿವಾಸಿ ಶಿವಕುಮಾರ ನರಿಬೋಳ (32) ಎಂದು ಗುರುತಿಸಲಾಗಿದೆ. ಮೃತ ಶಿವಕುಮಾರ ಅವರು ಸಶಸ್ತ್ರ ಮೀಸಲು ಪಡೆಯಲ್ಲಿ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ದುರಂತದ ಸಮಯದಲ್ಲಿ ಅವರು ಎಂದಿನಂತೆ ಜಗತ್ ವೃತ್ತದಲ್ಲಿ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಸಣ್ಣ ಮಕ್ಕಳನ್ನು ಅಗಲಿದ್ದಾರೆ. ಮಂಗಳವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಜಗತ್ ವೃತ್ತದ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ…

Read More

ಬೆಳ್ತಂಗಡಿ: ತಾಲೂಕಿನ ಶಿರ್ಲಾಲಿನಲ್ಲಿ ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ದಲಿತ ಸಮುದಾಯಕ್ಕೆ ಸೇರಿದ‌ ಬಿ.ಎಲ್.ಒ ಗೆ ಸ್ಥಳೀಯ ನಿವಾಸಿ ಯಶೋಧ ಆಚಾರ್ಯ ಎಂಬವರು ಮನೆಯೊಳಗೆ ಪ್ರವೇಶಿಸಲು ಅನುಮತಿ ನೀಡದೆ ನೀನು ಹೊರಗೆ ನಿಲ್ಲು ನಿನ್ನ ಜಾತಿಯವರು ಅಲ್ಲಿಯೇ ನಿಲ್ಲುವುದು ಬರಬಾರದು ಎಂದು ಜಾತಿ ನಿಂದನೆ ಮಾಡಿರುವುದಾಗಿ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ದಲಿತ ಸಮುದಾಯಕ್ಕೆ ಸೇರಿದ ಮಹಿಳೆ ಬಿಎಲ್.ಒ ಆಗಿ ಕೆಲಸ ಮಾಡುತ್ತಿದ್ದು ಪಲ್ಲದೋಡಿ ಕಾಳಿಕಾಂಬಾ ನಿವಾಸ ಯಶೋಧ ಆಚಾರ್ಯ ಎಂಬವರ ಮನೆಗೆ ಎ.ಎಲ್.ಒ‌ ಮಾಧವ ಎಂಬರೊಂದಿಗೆ ಜು.6 ರಂದು ಎಸ್.ಐ.ಆರ್ ಗೆಂದು ತೆರಳಿದ್ದಾರೆ. ಇವರ ಮನೆಯ ಅಂಗಳಕ್ಕೆ ಪ್ರವೇಶಿಸಿದಾಗ “ನೀನು ಅಲ್ಲಿಯೇ ನಿಲ್ಲು ನಿಮ್ಮ ಜಾತಿಯವರು ಇಲ್ಲಿಗೆ ಬರುವುದಿಲ್ಲ” ಎಂದು ಹೇಳಿದ್ದು ಮನೆಯ ಸಿಟ್ ಔಟ್ ಗೆ ಪ್ರವೇಶ ನೀಡದೆ ಮೆಟ್ಟಿಲು ಬಳಿಯೇ ಮಾತಿನಲ್ಲಿಯೇ ತಡೆದು ನಿಲ್ಲಿಸಿ ಅಪಮಾನ ಮಾಡಿ ಜಾತಿ ನಿಂದನೆ ಮಾಡಿರುವುದಾಗಿ ಜು.7 ರಂದು ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆಯ ಬಗ್ಗೆ…

Read More

ವಿಟ್ಲ: ಕಳ್ಳತನ ಪ್ರಕರಣವೊಂದರಲ್ಲಿ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ನಿವಾಸಿ ರಾಜೇಶ್ (41) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ವಿಟ್ಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 204/2018ರ ಐಪಿಸಿ ಕಲಂ 379ರಡಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ರಾಜೇಶ್ ಆರೋಪಿ ಆಗಿದ್ದನು. ಆದರೆ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ಎಎಸ್‌ಐ ಜಯರಾಮ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸಿಪಿಸಿ ವೆಂಕಪ್ಪ (2355) ಹಾಗೂ ಸಿಪಿಸಿ ಶಿವಾನಂದ (2462) ಅವರು ಜುಲೈ 6ರಂದು ಮಂಗಳೂರಿನಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Read More

ಕೇರಳ: ಕಳೆದ ಎರಡು ವರ್ಷಗಳ ಹಿಂದೆ ಚೂರಲ್ಮಲದಲ್ಲಿ ನಡೆದಿದ್ದ ಭೀಕರ ಭೂಕುಸಿತದ ಕಹಿ ನೆನಪು ಮಾಸುವ ಮುನ್ನವೇ, ಕೇರಳದ ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಮೆಪ್ಪಾಡಿ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಸುರಂಗ ಮಾರ್ಗ ನಿರ್ಮಾಣದ ಪ್ರದೇಶದಲ್ಲಿ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದ್ದು, ಇಬ್ಬರು ಕಾರ್ಮಿಕರು ಜೀವ ಕಳೆದುಕೊಂಡಿದ್ದಾರೆ. ವಯನಾಡು ಸುರಂಗ ಯೋಜನೆಯ ಮೀನಾಕ್ಷಿ ಸೇತುವೆ ಬಳಿ ಈ ಘಟನೆ ನಡೆದಿದೆ. ಅವಶೇಷಗಳಡಿ ಸಿಲುಕಿದ ಕಾರ್ಮಿಕರು; ಮುಂದುವರಿದ ಆತಂಕ ದುರಂತದ ತೀವ್ರತೆಗೆ ಸುಮಾರು 20 ಕಾರ್ಮಿಕರು ಮಣ್ಣಿನ ರಾಶಿಯಡಿಯಲ್ಲಿ ಸಿಲುಕಿಕೊಂಡಿದ್ದು, 30 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ನೂರಾರು ವಾಹನಗಳು ಕೂಡ ಮಣ್ಣಿನಡಿ ಹೂತುಹೋಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ. ಸ್ಥಳೀಯರ ಸಕಾಲಿಕ ರಕ್ಷಣಾ ಕಾರ್ಯಾಚರಣೆಯಿಂದಾಗಿ ಆರು ಜನರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದ್ದು, ಅವರನ್ನು ಮೆಪ್ಪಾಡಿಯ ಡಾ. ಮೂಪೆನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಗೊಂಡವರನ್ನು ಹೀರಾ ಸುರೇಶ್, ದಿಲೀಪ್, ಸೂರಜ್, ಸಂಜಯ್ ಥಾಪುರ್, ರಜನೀಶ್ ಮತ್ತು…

Read More

ಉಡುಪಿ ಜಿಲ್ಲೆಯ ಪಡುಬಿದ್ರಿ‌ ಸಮೀಪದ ಹೆಜಮಾಡಿ ಕನ್ನಂಗಾರ್ ನ ಹುಸೇನ್ ಎಂಬವರಿಗೆ ವ್ಯಕ್ತಿಯೋರ್ವ ಚಾಕು ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಬೆದರಿಕೆ ಹಾಕಿದ ಆರೋಪಿ ಜಾಕೀರ್ ಹುಸೇನ್ ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ವಿವರ: ಪಿರ್ಯಾದಿದಾರರಾದ ಬಿ.ಎಂ. ಹುಸೇನ್‌ ,ಹೆಜಮಾಡಿ ಗ್ರಾಮ, ಕಾಪು ಇವರು ದಿನಾಂಕ 04/04/2025 ರಂದು ಶುಕ್ರವಾರದ ಜುಮ್ಮಾ ನಮಾಜನ್ನು ಮಾಡಲು ಕಾಫು ತಾಲೂಕು ಹೆಜಮಾಡಿ ಗ್ರಾಮದ ಕನ್ನಂಗಾರ್‌ ಜುಮ್ಮಾ ಮಸೀದಿಗೆ ಬಂದು ನಮಾಜ್‌ ಮಾಡಿ ವಾಪಾಸು ಹೋಗಲು ಮಸೀದಿ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ತನ್ನ ಕಾರಿನಲ್ಲಿ ಕುಳಿತುಕೊಂಡಾಗ ಮದ್ಯಾಹ್ನ 1:30 ಗಂಟೆಗೆ ಆರೋಪಿ ಜಾಕೀರ್‌ ಹುಸೇನ್‌ ಇತರರೊಂದಿಗೆ KA-20-MG-0243 ನೇ ಕಾರಿನಲ್ಲಿ ಬಂದು ಪಿರ್ಯಾದಿದಾರರಿಗೆ ಮುಂದಕ್ಕೆ ಹೋಗದಂತೆ ಅಡ್ಡಗಟ್ಟಿ ಇದು ನಾವು ಪಾರ್ಕ್‌ ಮಾಡುವ ಸ್ಥಳ ನೀನೇಕೆ ಇಲ್ಲಿ ಕಾರು ನಿಲ್ಲಿಸಿದ್ದಿಯಾ ಎಂದು ಬೈದು, ಚಾಕು ತೋರಿಸಿ ಬೆದರಿಕೆ ಹಾಕಿರುವುದಾಗಿ…

Read More

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವುಗೊಂಡ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿ ಮೂವರು ಮಹಿಳಾ ಆರೋಪಿಗಳನ್ನು ಬಂಧಿಸಿದ್ದಾರೆ. ಜುಲೈ 5ರಂದು ನಿಮಿಶಾ ಹಾಗೂ ಅವರ ಪತಿ ಪ್ರಜೋಶ್ ದೇವರ ದರ್ಶನ ಮುಗಿಸಿ ದೇವಸ್ಥಾನದ ಹೊರಾಂಗಣಕ್ಕೆ ಬಂದಾಗ, ನಿಮಿಶಾ ಅವರ ವ್ಯಾನಿಟಿ ಬ್ಯಾಗ್‌ನ ಜಿಪ್ ತೆರೆದಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ ಬ್ಯಾಗ್‌ನಲ್ಲಿದ್ದ ₹80 ಸಾವಿರ ನಗದು ಹೊಂದಿದ್ದ ಪರ್ಸ್ ಕಳವಾಗಿರುವುದು ಪತ್ತೆಯಾಯಿತು. ಸುತ್ತಮುತ್ತ ಹುಡುಕಿದರೂ ಪರ್ಸ್ ಪತ್ತೆಯಾಗದ ಹಿನ್ನೆಲೆಯಲ್ಲಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 43/2026, ಕಲಂ 303(2) BNS ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಯಿತು. ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ, ಕೊಲ್ಲೂರು ಠಾಣೆಯ ಉಪನಿರೀಕ್ಷಕ ವಿನಯ ಎಂ. ಕೊರ್ಲಹಳ್ಳಿ ನೇತೃತ್ವದ…

Read More

ಬೆಳ್ತಂಗಡಿ: ವಾರಂಟ್ ಬಂಧನ ಪ್ರಕರಣದಲ್ಲಿ ಗಂಭೀರ ಕಾರ್ಯವಿಧಾನದ ಲೋಪಗಳ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ನಿಯೋಜಿಸಲಾದ ಹೆಡ್ ಕಾನ್‌ಸ್ಟೆಬಲ್ ಹೆಚ್‌ಸಿ 404 ಮಾಲತೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅಧಿಕೃತ ಮೂಲಗಳ ಪ್ರಕಾರ, ಪೊಲೀಸ್ ಸಿಬ್ಬಂದಿ ವಾರಂಟ್ ಆರೋಪಿಯನ್ನು ಬಂಧಿಸಿದ್ದರು ಆದರೆ ಕಾನೂನಿನ ಪ್ರಕಾರ ಮುಂದಿನ ಕಾನೂನು ಕ್ರಮಗಳಿಗಾಗಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸದೆ ಆರೋಪಿ ವಿರುದ್ದ ಜಾರಿಯಾಗಿರುವ ವಾರೆಂಟನ್ನು ರಿ-ಕಾಲ್ ಮಾಡಿಸಿಕೊಳ್ಳಲು ಸಹಕರಿಸಿರುವುದು ಕಂಡುಬಂದಿದ್ದು ಪ್ರಕರಣದ ವಿಚಾರಣೆಯ ಸಮಯದಲ್ಲಿ ಆಪಾದಿತ ಅಕ್ರಮಗಳು ಬೆಳಕಿಗೆ ಬಂದಿದ್ದು, ಇಲಾಖಾ ಕ್ರಮ ಕೈಗೊಳ್ಳಲಾಗಿದೆ. ಕರ್ತವ್ಯ ಲೋಪವನ್ನು ಸೂಚಿಸುವ ಪ್ರಾಥಮಿಕ ಸಂಶೋಧನೆಗಳ ನಂತರ, ಪೊಲೀಸ್ ಇಲಾಖೆ ಶಿಸ್ತು ಕ್ರಮವನ್ನು ಪ್ರಾರಂಭಿಸಿ, ವಿವರವಾದ ವಿಚಾರಣೆಯವರೆಗೆ ಹೆಡ್ ಕಾನ್‌ಸ್ಟೆಬಲ್ ಅನ್ನು ಅಮಾನತುಗೊಳಿಸಿದೆ.

Read More

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಮೊಂತಿಮಾರು ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಿಗ್ಗೆ ಸುಮಾರು 8.45 ಗಂಟೆಗೆ 17 ವರ್ಷದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವೇಳೆ ಬಂಟ್ವಾಳದ ಮಂಚಿ ನಿವಾಸಿ ಮೊಹಮ್ಮದ್ ಜವ್ವಾ‌ರ್ (28) ಎಂಬಾತ ವಿದ್ಯಾರ್ಥಿನಿಯ ತಲೆ ಹಾಗೂ ಕೈಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ಆರೋಪಿ ಸ್ವತಃ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಗೆ ತೆರಳಿ ಶರಣಾಗಿದ್ದಾನೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

Read More