ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಆರು ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಸದಾಗಿ ಅಳವಡಿಸಲಾದ ಸುಧಾರಿತ ವೇಗದ ರಾಡಾರ್ ಕ್ಯಾಮೆರಾಗಳ ಮೂಲಕ ಒಂದು ವಾರದೊಳಗೆ ಒಟ್ಟು 47,709 ಸಂಚಾರ ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ. ಈ ಪೈಕಿ 243 ಪ್ರಕರಣಗಳಲ್ಲಿ ಈಗಾಗಲೇ ಚಲನ್ ನೀಡಲಾಗಿದೆ.ಪೊಲೀಸರ ಮಾಹಿತಿಯ ಪ್ರಕಾರ, ಮೇ 21 ರಿಂದ 26 ರವರೆಗೆ, 3,99,319 ವಾಹನಗಳನ್ನು ಸ್ಪೀಡ್ ರಾಡಾರ್ ಕ್ಯಾಮೆರಾ ವ್ಯವಸ್ಥೆಯಿಂದ ಮೇಲ್ವಿಚಾರಣೆ ಮಾಡಲಾಗಿದೆ. ಸೀಟ್ ಬೆಲ್ಟ್ ಧರಿಸದ 12,440 ಪ್ರಕರಣಗಳು, ಹೆಲ್ಮೆಟ್ ಇಲ್ಲದೆ ಸವಾರಿ ಮಾಡಿದ 11,509 ಪ್ರಕರಣಗಳು, ರಾಂಗ್ ಸೈಡ್ ಚಾಲನೆಯ 2,783 ಪ್ರಕರಣಗಳು, ಟ್ರಿಪಲ್ ರೈಡಿಂಗ್ 2,438 ಪ್ರಕರಣಗಳು, ಹೆವಿ ಮೋಟಾರ್ ವೆಹಿಕಲ್ (HMV) ವೇಗ ಉಲ್ಲಂಘನೆ 2,346 ಮತ್ತು ವೇಗಕ್ಕೆ ಸಂಬಂಧಿಸಿದ 1,110 ಇತರ ಅಪರಾಧಗಳು ದಾಖಲಾಗಿವೆ.ಗಂಗೊಳ್ಳಿಯ ತ್ರಾಸಿಯಲ್ಲಿ 29, ಬೈಂದೂರಿನ ನಾಯಕನಕಟ್ಟೆಯಲ್ಲಿ 36, ಕೋಟದ ತೆಕ್ಕಟ್ಟೆಯಲ್ಲಿ 35, ಕಾಪು ದಂಡತೀರ್ಥದಲ್ಲಿ 42, ಪಡುಬಿದ್ರಿಯ ಉಚ್ಚಿಲದಲ್ಲಿ 59, ಕಾರ್ಕಳದ ದೂಪದಕಟ್ಟೆಯಲ್ಲಿ 34 ಪ್ರಕರಣಗಳು ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು…
Author: main-admin
ಲಕ್ನೋ: ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ. ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಎಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ.ಉನ್ನಾವೋ ಜಿಲ್ಲೆಯ ಔರಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ನಿಭಾ ಖೇಡಾ ಗ್ರಾಮದ ಸಮೀಪ, ಆಗ್ರಾ-ಲಕ್ನೋ ಎಕ್ಸ್ಪ್ರೆಸ್ ವೇಯಲ್ಲಿ ಬೆಳಗ್ಗೆ ಸುಮಾರು 5:15ರ ವೇಳೆಗೆ ಅಪಘಾತ ಸಂಭವಿಸಿದೆ. ಬಸ್ನಲ್ಲಿ ಸುಮಾರು 50 ಪ್ರಯಾಣಿಕರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಪೋಲಿಸ್ ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ ಅತಿವೇಗದಲ್ಲಿ ಸಂಚರಿಸುತ್ತಿದ್ದು, ಈ ವೇಳೆ ಚಾಲಕ ನಿದ್ರೆಗೆ ಜಾರಿದ್ದಾನೆ. ಪರಿಣಾಮ ಬಸ್ ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕೆಲ ಪ್ರಯಾಣಿಕರು ಕಿಟಕಿಗಳ ಮೂಲಕ ಹೊರಗೆ ಬಿದ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರು ಪೊಲೀಸ್ ಸಿಬ್ಬಂದಿ ಸೇರಿ ಹಲವರನ್ನ ಲಖ್ನೋ ಟ್ರಾಮಾ ಸೆಂಟರ್ಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ಜಿಲ್ಲಾ…
ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ ಜಾಲದಲ್ಲಿ ಬೀಳಿಸಿ, ಲಾಡ್ಜ್ಗೆ ಕರೆದೊಯ್ದು ಸರಣಿ ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ವಂಚಿಸಿರುವ ಅತ್ಯಂತ ಗಂಭೀರ ಹಾಗೂ ಪೈಶಾಚಿಕ ಪ್ರಕರಣವೊಂದು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ತೆಕ್ಕಟ್ಟೆಯ ಜಿತೇಂದ್ರ ಶೆಟ್ಟಿ (ಆರೋಪಿ-1) ಹಾಗೂ ಸುಶಾನ್ ಪೂಜಾರಿ (ಆರೋಪಿ-2) ಎಂಬ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ (POCSO) ಮತ್ತು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಬಂದಿಸಲಾಗಿದೆ.ಘಟನೆ ವಿವರ:ಸ್ನಾಪ್ಚಾಟ್ನಲ್ಲಿ ಶುರುವಾದ ಪರಿಚಯ, ಲಾಡ್ಜ್ನಲ್ಲಿ ಅತ್ಯಾಚಾರ:ಪೊಲೀಸ್ ಮೂಲಗಳ ಪ್ರಕಾರ, ಕೊಡವೂರು ಮಲ್ಪೆ ನಿವಾಸಿಯಾದ 17 ವರ್ಷದ ಅಪ್ರಾಪ್ತ ಬಾಲಕಿಗೆ ಕಳೆದ ಮಾರ್ಚ್ ತಿಂಗಳಲ್ಲಿ ‘ಸ್ನಾಪ್ಚಾಟ್’ (Snapchat) ಸಾಮಾಜಿಕ ಜಾಲತಾಣದ ಮೂಲಕ ಎರಡನೇ ಆರೋಪಿ ಸುಶಾನ್ ಪೂಜಾರಿ ಪರಿಚಯವಾಗಿದ್ದನು. ಈತನ ಮೂಲಕ ಮೊದಲನೇ ಆರೋಪಿ ಜಿತೇಂದ್ರನ ಪರಿಚಯವಾಗಿದೆ. ಬಾಲಕಿಯ ಮುಗ್ಧತೆಯನ್ನು ಬಂಡವಾಳ ಮಾಡಿಕೊಂಡ ಜಿತೇಂದ್ರ, ದಿನಾಂಕ 25/03/2026 ರಂದು ಆಕೆಯನ್ನು ಪುಸಲಾಯಿಸಿ ಬ್ರಹ್ಮಾವರ ತಾಲೂಕಿನ ಬಾರ್ಕೂರು-ಮಂದಾರ್ತಿ ರಸ್ತೆಯಲ್ಲಿರುವ ‘ರಶ್ಮಿ ಲಾಡ್ಜ್’ಗೆ…
ಬೆಂಗಳೂರು: ಸೈಬರ್ ವಂಚಕರ ಕೈಚಳಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೊದಲು ಸಾಮಾನ್ಯ ಜನರೇ ಇವರ ಟಾರ್ಗೆಟ್ ಆಗಿತ್ತು. ಆದರೆ ಇದೀಗ ಸೆಲೆಬ್ರಿಟಿಗಳನ್ನು ಬಿಡುತ್ತಿಲ್ಲ. ಈಗ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪುರಸ್ಕೃತರನ್ನೂ ಬಿಡದೆ ವಂಚಿಸಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಪ್ಯಾರಾ ಅಥ್ಲೀಟ್ ಕೆ. ವೈ. ವೆಂಕಟೇಶ್ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಸೈಬರ್ ಖದೀಮರು, ಸುಮಾರು 90 ಸಾವಿರ ರೂಪಾಯಿ ಹಣವನ್ನು ಲೂಟಿ ಮಾಡಿದ್ದಾರೆ.ಹುಟ್ಟಿನಿಂದಲೇ ಅಕೊಂಡ್ರೋಪ್ಲಾಸಿಯಾ ( ಕುಬ್ಜತೆ) ಸಮಸ್ಯೆಯಿಂದ ಬಳಲುತ್ತಿದ್ದರೂ, ಅದನ್ನೇ ಸವಾಲಾಗಿ ಸ್ವೀಕರಿಸಿದ ಕೆ. ವೈ. ವೆಂಕಟೇಶ್ ಅವರು ದೇಶ ಕಂಡ ಅಪರೂಪದ ಪ್ಯಾರಾ ಅಥ್ಲೀಟ್ ಆಗಿದ್ದಾರೆ. 50ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತಂದಿರುವ ಇವರ ಸಾಧನೆಯನ್ನು ಗುರುತಿಸಿ ಕೇಂದ್ರ ಸರ್ಕಾರವು 2021ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.ಇದೀಗ ಅವರ ಮೇಲೆಯೂ ಈ ವಂಚಕರ ಜಾಲದ ದೃಷ್ಟಿ ಬಿದ್ದಿದೆ. ಕಳೆದ ಕೆಲವು ದಿನಗಳ ಹಿಂದೆ…
ಕೊಯಮತ್ತೂರು: ಸುಲೂರಿನಲ್ಲಿ 10 ವರ್ಷದ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣವನ್ನು ತಮಿಳುನಾಡು ಸರ್ಕಾರ ನಿರ್ವಹಿಸಿದ ರೀತಿಗೆ ಸಂಬಂಧಿಸಿದಂತೆ ಎರಡು ದೊಡ್ಡ ವಿವಾದಗಳು ಮುನ್ನೆಲೆಗೆ ಬಂದಿದ್ದು, ಹೊಸದಾಗಿ ಆಯ್ಕೆಯಾಗಿರುವ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಸರ್ಕಾರವನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿವೆ.ಮಗುವಿನ ಹತ್ಯೆಯ ಇಂತಹ ಸೂಕ್ಷ್ಮ ಪ್ರಕರಣದ ಕುರಿತು ಮಾತನಾಡುವಾಗ ಕೈಗಾರಿಕಾ ಸಚಿವೆ ಎಸ್. ಕೀರ್ತನಾ ಹಾಗೂ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳು ಜಂಟಿ ಪತ್ರಿಕಾಗೋಷ್ಠಿಯಲ್ಲಿ ನಗುತ್ತಾ ಬೇಜವಾಬ್ದಾರಿತನ ಪ್ರದರ್ಶಿಸಿರುವುದು ಸಾರ್ವಜನಿಕರು ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ಸಚಿವೆ ಮತ್ತು ಐಪಿಎಸ್ ಅಧಿಕಾರಿಗಳ ನಗು ಸೋಷಿಯಲ್ ಮೀಡಿಯಾದಲ್ಲಿ ವೈರಲ್:ಮೊದಲನೆಯದಾಗಿ, ಬಾಲಕಿಯ ಕೊಲೆ ಪ್ರಕರಣದ ಬಗ್ಗೆ ಪ್ರಶ್ನಿಸಿದಾಗ ತಮಿಳುನಾಡು ಕೈಗಾರಿಕಾ ಸಚಿವೆ ಎಸ್. ಕೀರ್ತನಾ ಅವರು ನಗುತ್ತಿರುವುದು ಮಾಧ್ಯಮಗಳಲ್ಲಿ ಪ್ರಸಾರವಾಗಿ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದರು. ತದನಂತರ, ಮಾಧ್ಯಮ ಸಂವಾದ ಮುಗಿದ ಬಳಿಕ ತಾನು ನಕ್ಕಿದ್ದಾಗಿ ಸಚಿವೆ ಸ್ಪಷ್ಟನೆ ನೀಡಿದ್ದಾರೆ. ಆದರೆ, ವಿವಾದ ಇಲ್ಲಿಗೆ ನಿಲ್ಲದೆ, ಪ್ರಕರಣದ ತನಿಖೆ…
ಚೆನ್ನೈ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಅಪರಾಧಿಗೆ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಪೋಕ್ಸೋ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಧರ್ಮ ಮುನೀಶ್ವರನ್ ಶಿಕ್ಷೆಗೆ ಗುರಿಯಾದ ಅಪರಾಧಿ. ಅಪರಾಧಿಯು ಕೃತ್ಯ ಎಸಗಿದ 77 ದಿನಗಳಲ್ಲೇ ಆತನಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ. ಲೈಂಗಿಕ ದೌರ್ಜನ್ಯ ಹಾಗೂ ಕೊಲೆ, ಎರಡೂ ಪ್ರಕರಣದಲ್ಲೂ ಆತ ಅಪರಾಧಿ ಎಂದು ಸಾಬೀತಾಗಿದ್ದು, ಪ್ರತ್ಯೇಕವಾಗಿ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ. ವಿಲಾತಿಕುಲಂನ 12 ನೇ ತರಗತಿಯ ೧೭ ವರ್ಷದ ವಿದ್ಯಾರ್ಥಿನಿ ಈ ವರ್ಷ ಮಾರ್ಚ್ನಲ್ಲಿ ನಾಪತ್ತೆಯಾಗಿದ್ದಳು. ಆಕೆಯ ಶವ ಮನೆಯ ಸಮೀಪವಿರುವ ಕುರುಚಲು ಪ್ರದೇಶದಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಅಪರಾಧಿಯನ್ನು ಪತ್ತೆ ಹಚ್ಚಲು ಪೊಲೀಸರು ಅಪರಾಧ ನಡೆದ ಸ್ಥಳದ ಬಳಿ ಸಿಸಿಟಿವಿ ಕ್ಯಾಮೆರಾಗಳಿಲ್ಲದ ಕಾರಣ, 10 ವಿಶೇಷ ತಂಡಗಳು ಇತರ ಸ್ಥಳಗಳಲ್ಲಿ 98 ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು. ಟವರ್ ಡಂಪ್ ವಿಧಾನವನ್ನು ಬಳಸಿಕೊಂಡು 2,574 ಫೋನ್ ಸಂಖ್ಯೆಗಳನ್ನು ಪರಿಶೀಲಿಸಲಾಗಿತ್ತು. ಅಪರಾಧ ನಡೆದ ಸ್ಥಳದ ಬಳಿ…
ಬೆಳ್ತಂಗಡಿ :ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಚಾರಣ ತಾಣಗಳು ಮತ್ತು ಪ್ರಮುಖ ಜಲಪಾತಗಳು ಜೂನ್ 1 ರಿಂದ ಪ್ರವಾಸಿಗರಿಗೆ ಮತ್ತೆ ವೀಕ್ಷಣೆಗೆ ತೆರೆದುಕೊಳ್ಳಲಿದೆ. ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗವು ಈ ಹಿಂದೆ ಜನವರಿಯಲ್ಲಿ ನೇತ್ರಾವತಿ ಶಿಖರ, ಬಂಡಾಜೆ ಜಲಪಾತ ಮತ್ತು ಗಡಾಯಿಕಲ್ಲು ಮುಂತಾದ ಜನಪ್ರಿಯ ತಾಣಗಳಿಗೆ ಭೇಟಿ ನೀಡುವುದನ್ನು ನಿಷೇಧ ಹೇರಲಾಗಿತ್ತು.ಬೇಸಿಗೆಯ ತಿಂಗಳುಗಳಲ್ಲಿ ಕಾಡ್ಗಿಚ್ಚು ತಡೆಗಟ್ಟಲು ಮತ್ತು ಹುಲಿ ಗಣತಿಗೆ ಅನುಕೂಲವಾಗುವಂತೆ ಈ ನಿರ್ಬಂಧವನ್ನು ಪ್ರಾಥಮಿಕವಾಗಿ ಜಾರಿಗೆ ತರಲಾಯಿತು. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಗೆ ಬರುವ ತಾಲ್ಲೂಕಿನ ಮಲವಂತಿಗೆ ಗ್ರಾಮವು ಹಲವಾರು ಪ್ರವಾಸಿ ಆಕರ್ಷಣೆಗಳಿಗೆ ನೆಲೆಯಾಗಿದೆ. ಇದು ಚಾರಣಿಗರು ಮತ್ತು ಪ್ರಕೃತಿ ಪ್ರಿಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುತ್ತಿದ್ದರೂ, ಬೇಸಿಗೆಯಲ್ಲಿ ಈ ದಟ್ಟ ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಸಂಭವಿಸುವ ಅಪಾಯ ಹೆಚ್ಚಾಗಿರುತ್ತದೆ. ಪ್ರವಾಸಿಗರು ಸುರಕ್ಷತಾ ಎಚ್ಚರಿಕೆಗಳನ್ನು ಹೆಚ್ಚಾಗಿ ನಿರ್ಲಕ್ಷಿಸುವುದರಿಂದ, ಅರಣ್ಯ ಇಲಾಖೆಯು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧವನ್ನು ವಿಧಿಸಿತ್ತು.ಇತ್ತೀಚಿನ ಬೇಸಿಗೆಯ ಮಳೆಯಿಂದಾಗಿ, ಅರಣ್ಯ ಪ್ರದೇಶಗಳು ಈಗ ತೇವದಿಂದ ಕೂಡಿದ್ದು, ಹಚ್ಚ ಹಸಿರಿನಿಂದ ಕೂಡಿದ್ದು, ಹೊಳೆಗಳು ಸಾಮಾನ್ಯವಾಗಿ…
ಕಾಸರಗೋಡು: ಪೊಲೀಸ್ ಇಲಾಖೆಯ ಸಿಬ್ಬಂದಿಯನ್ನೊಳಗೊಂಡ ವಾಟ್ಸಾಪ್ ಗುಂಪಿನಲ್ಲಿ ರಾಜಕೀಯ ಪ್ರೇರಿತ ಹಾಗೂ ವಿವಾದಾತ್ಮಕ ಸಂದೇಶವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ವೆಳ್ಳರಿಕುಂಡು ಪೊಲೀಸ್ ಠಾಣೆಯ ಸಿವಿಲ್ ಪೊಲೀಸ್ ಅಧಿಕಾರಿ (CPO) ಸುಜಿತ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.ರಾಜಕೀಯ ಪ್ರೇರಿತ ಸಂದೇಶದ ಸ್ಕ್ರೀನ್ಶಾಟ್ಗಳು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಕಾಸರಗೋಡು ಜಿಲ್ಲಾ ಪೊಲೀಸ್ ಮುಖ್ಯಸ್ಥ (SP) ಬಿ.ವಿ. ವಿಜಯ ಭರತ್ ರೆಡ್ಡಿ ಅವರು ವಿಚಾರಣೆ ಬಾಕಿ ಇರುವವರೆಗೂ ಅಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಕಾಸರಗೋಡು ಜಿಲ್ಲೆಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ‘ಪೊಲೀಸ್ ಫ್ರೆಂಡ್ಸ್’ ಎಂಬ ವಾಟ್ಸಾಪ್ ಗ್ರೂಪ್ನಲ್ಲಿ ಸಿಪಿಒ ಸುಜಿತ್ ಅವರು ವಿವಾದಾತ್ಮಕ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದರು ಎಂದು ಆರೋಪಿಸಲಾಗಿದೆ. ಹೊಸ ಸರ್ಕಾರದ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಉಲ್ಲೇಖಿಸಿ ಪ್ರಾರಂಭವಾಗುವ ಈ ಪೋಸ್ಟ್ನಲ್ಲಿ, ಸ್ಥಳೀಯ ಸ್ವ-ಸರ್ಕಾರಿ ಸಚಿವ ಮತ್ತು ಮುಸ್ಲಿಂ ಲೀಗ್ ನಾಯಕ ಕೆ.ಎಂ. ಶಾಜಿ ಅವರನ್ನು ಗುರಿಯಾಗಿಸಿಕೊಂಡು ಹರಿಹಾಯಲಾಗಿತ್ತು. ಅಲ್ಲದೆ, ಶಾಜಿ ಅವರನ್ನು ‘ಕಮ್ಯುನಲಿಸ್ಟ್…
ಉಡುಪಿ: ವಿದೇಶದಲ್ಲಿ ಆಕರ್ಷಕ ಕೆಲಸ ಕೊಡಿಸುವುದಾಗಿ ನಂಬಿಸಿ ನಿಟ್ಟೂರು ನಿವಾಸಿಯೊಬ್ಬರಿಂದ ಲಕ್ಷಾಂತರ ರೂಪಾಯಿ ಹಣ ಹಾಗೂ ಪಾಸ್ಪೋರ್ಟ್ ಪಡೆದು ವಂಚಿಸಿರುವ ಜಾಲದ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನ್ಯಾಯಾಲಯದ ಖಾಸಗಿ ದೂರಿನ ಅನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ನಿಟ್ಟೂರು ನಿವಾಸಿ ಎನ್. ಆರ್. ಪದ್ಮನಾಭ ಉಪಾಧ್ಯ ವಂಚನೆಗೊಳಗಾದ ಪಿರ್ಯಾದಿದಾರರು. ಇವರಿಂದ ಹಣ ಪಡೆದು ವಂಚಿಸಿದ ಆರೋಪಿಗಳಾದ ಆಶ್ಲೆ ಕರ್ನೇಲಿಯೋ, ಸವಿತಾ, ಪ್ರಕೃತಿ ಮತ್ತು ಪ್ರಶಾಂತ್ ಎಂಬ ನಾಲ್ವರ ವಿರುದ್ಧ ಪೊಲೀಸರು ಕೇಸ್ ಬುಕ್ ಮಾಡಿದ್ದಾರೆ.ಉದ್ಯೋಗ ಹುಡುಕುತ್ತಿದ್ದ ಪದ್ಮನಾಭ ಉಪಾಧ್ಯ ಅವರನ್ನು 2025ರ ಫೆಬ್ರವರಿ 12ರಂದು ಸಂಪರ್ಕಿಸಿದ್ದ 1ನೇ ಆರೋಪಿ ಆಶ್ಲೆ ಕರ್ನೇಲಿಯೋ, ಯುನೈಟೆಡ್ ಕಿಂಗ್ಡಮ್ (UK) ದೇಶದಲ್ಲಿ ‘ಹೌಸ್ ಕೀಪಿಂಗ್ ಸೂಪರ್ವೈಸರ್’ ಉದ್ಯೋಗವಿದ್ದು, ತಾನು ಕೆಲಸ ಕೊಡಿಸುವುದಾಗಿ ನಂಬಿಸಿದ್ದನು. ಬಳಿಕ ತನ್ನ ಸಹಾಯಕಿ, 2ನೇ ಆರೋಪಿ ಸವಿತಾಳ ಮೊಬೈಲ್ ಸಂಖ್ಯೆಯನ್ನು ನೀಡಿದ್ದನು. ಪಿರ್ಯಾದಿದಾರರು ಸವಿತಾಳನ್ನು ಸಂಪರ್ಕಿಸಿದಾಗ, ಯು.ಕೆ. ವೀಸಾ ಪ್ರಕ್ರಿಯೆಗಾಗಿ ₹2,00,000 ಪ್ರೊಸೆಸಿಂಗ್ ಶುಲ್ಕ ಪಾವತಿಸುವಂತೆ…
ಮಂಗಳೂರು: ತಡರಾತ್ರಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೆಬಲ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆಮಂಗಳೂರಿನ ಕೋಡಿಕಲ್ನಲ್ಲಿ ಭಾನುವಾರ ನಡೆದಿದೆ. ಪೊಲೀಸ್ ಕಾನ್ಸ್ಟೆಬಲ್ ಹನುಮಂತ್ ಕಾಂತಿ ಅವರ ಮೇಲೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ತಲೆಗೆ ಹೊಡೆದು ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಾರಾಯಣ ಗುರು ಸಹಕಾರಿ ಸಂಘದ ಕಟ್ಟಡದ ಬಳಿ ಕಾನ್ಸ್ಟೆಬಲ್ ಹನುಮಂತ್ ಮತ್ತು ಗೃಹರಕ್ಷಕ ಸಿಬ್ಬಂದಿ ಬಸವರಾಜ್ ಕರ್ತವ್ಯದಲ್ಲಿದ್ದರು.ಈ ವೇಳೆ ವೇಗವಾಗಿ ಬಂದ ದ್ವಿಚಕ್ರ ವಾಹನವನ್ನು ನಿಲ್ಲಿಸಲು ಸೂಚಿಸಿದಾಗ ಸವಾರರು ನಿಲ್ಲಿಸದೆ ತಲೆ ತಪ್ಪಿಸಿಕೊಂಡಿದ್ದಾರೆ. ಆದರೆ, ಕೆಲವು ನಿಮಿಷಗಳ ನಂತರ ಮತ್ತೆ ಸ್ಥಳಕ್ಕೆ ಹಿಂತಿರುಗಿದ ಬೈಕ್ ಸವಾರ, ಕಾನ್ಸ್ಟೆಬಲ್ ಹನುಮಂತ್ ಅವರ ತಲೆಗೆ ಬಲವಾಗಿ ಹೊಡೆದು ಎಸ್ಕೇಪ್ ಆಗಿದ್ದಾನೆ. ಗಾಯಗೊಂಡ ಸಿಬ್ಬಂದಿ ಹಲ್ಲೆಕೋರರನ್ನು ಹಿಡಿಯಲು ಪ್ರಯತ್ನಿಸಿದರಾದರೂ ಅವರು ಸಿಗಲಿಲ್ಲ.ಸದ್ಯ ತಲೆಗೆ ಸಣ್ಣಪುಟ್ಟ ಗಾಯಗಳಾಗಿರುವ ಹನುಮಂತ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅಪಾಯದಿಂದ ಪಾರಾಗಿದ್ದಾರೆ. ಇಡೀ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉರ್ವಾ ಪೊಲೀಸರು ಆರೋಪಿಗಳ…










