Author: main-admin

ಬೆಂಗಳೂರು : ವಿಶ್ವ ಅಂಗಾಂಗ ದಾನ ದಿನಾಚರಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಸ್ವತಃ ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಅಂಗಾಂಗ ದಾನಕ್ಕೆ ನೋಂದಣಿ ಮಾಡಿಕೊಂಡ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ನಾವು ಸಾವನ್ನಪ್ಪಿದ ಬಳಿಕವೂ ಎಂಟು ಮಂದಿ ಜನರಿಗೆ ಬದುಕು ಕಲ್ಪಿಸಿಕೊಡಲು ಅಂಗಾಂಗ ದಾನದ ಮೂಲಕ ಸಾಧ್ಯ. ಆ ಮೂಲಕ ಸತ್ತ ಮೇಲೆಯೂ ಬದುಕಿರಬಹುದು. ಅಂಗಾಂಗ ದಾನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡಿ ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.ಮಾನವ ಜನ್ಮ ಶ್ರೇಷ್ಠವಾದುದು. ಆ ಶ್ರೇಷ್ಠತೆಯನ್ನು ಉಳಿಸುವ ಕೆಲಸ ನಮ್ಮದಾಗಬೇಕು. ಸಾವಿನ ನಂತರವೂ ಬದುಕಬೇಕೆಂದರೆ ಅಂಗಾಂಗಗಳನ್ನು ದಾನ ಮಾಡಬೇಕು. ಈ ನಿಟ್ಟಿನಲ್ಲಿ ಯುವಜನತೆ ಮಹತ್ವದ ಹೆಜ್ಜೆ ಇಡಬೇಕು ಎಂದು ತಿಳಿಸಿದರು.

Read More

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇದೆ. ಹೀಗಾಗಿ ಇನ್ನೇನು 75ನೇ ಸ್ವಾತಂತ್ರ್ಯ ದಿನಾಚರಣೆ ಹತ್ರ ಬರಲಿದೆ. ಈ ವೇಳೆ ಬೃಹತ್‌ ಸಭೆ-ಸಮಾರಂಭ ಆಯೋಜಿಸದಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಸ್ವಾತಂತ್ರ್ಯ ದಿನಾಚರಣೆ ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನಸಂದಣಿಗೆ ಅವಕಾಶ ನೀಡಬೇಡಿ. ಕಾರ್ಯಕ್ರಮಗಳಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಸೂಚನೆ ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿ ಜಿಲ್ಲೆಯ ಪ್ರಮುಖ ಸ್ಥಳದಲ್ಲಿ ‘ಸ್ವಚ್ಛ ಭಾರತ್’ ಅಭಿಯಾನ ಕೈಗೊಳ್ಳಿ. ತಿಂಗಳ ಅವಧಿಯ ಅಭಿಯಾನ ಕೈಗೊಂಡು, ನಾಗರಿಕರು ಸ್ವಯಂಪ್ರೇರಿತರಾಗಿ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ತಿಳಿಸಿದೆ.

Read More

ಕೊಯಿಕ್ಕೋಡ್: ಪೊಲೀಸ್​ ಠಾಣೆಯ ಒಳಗೆ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಕುಸಿದು ಬಿದ್ದು ಸಾವಿಗೀಡಾಗಿರುವ ಘಟನೆ ಕೇರಳದ ಥಾಮರಸ್ಸೆರೆ ಠಾಣೆಯಲ್ಲಿ ನಡೆದಿದೆ. ಸನೋಜ್​ (37) ಮೃತ ಸಬ್ ಇನ್ಸ್​ಪೆಕ್ಟರ್​. ಕರ್ತವ್ಯ ನಿಮಿತ್ತ ಪೊಲೀಸ್​ ಠಾಣೆಗೆ ಆಗಮಿಸಿದ ಸನೋಜ್​, ಠಾಣೆಯ ಒಳಗೆ ಕಾಲಿಡುತ್ತಿದ್ದಂತೆಯೇ ಎದೆ ನೋವಿನಿಂದಾಗಿ ಎದೆ ಹಿಡಿದುಕೊಂಡು ಕುಸಿದು ಬಿದ್ದರು. ಠಾಣೆಯಲ್ಲಿ ಸಿಬ್ಬಂದಿ ಸನೋಜ್​ ಕುಸಿದು ಬಿದ್ದಿದ್ದನ್ನು ನೋಡಿ, ತಕ್ಷಣ ಅವರನ್ನು ಕೊಯಿಕ್ಕೋಡ್​ ಮೆಡಿಕಲ್​ ಕಾಲೇಜು ಹಾಸ್ಪಿಟಲ್​ಗೆ ಚಿಕಿತ್ಸೆಗೆಂದು ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸನೋಜ್​ ಕೊನೆಯುಸಿರೆಳೆದಿದ್ದಾರೆ. ಸನೋಜ್​ ಸಾವಿನ ಸುದ್ದಿ ಕೇಳಿ ಅವರ ಕುಟುಂಬಕ್ಕೆ ಆಘಾತವಾಗಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸಹೋದ್ಯೋಗಿಯೊಬ್ಬರನ್ನು ಕಳೆದುಕೊಂಡ ಸಿಬ್ಬಂದಿ ಸಹ ಕಂಬನಿ ಮಿಡಿದಿದ್ದಾರೆ.

Read More

ಮಂಗಳೂರು : ರಕ್ಷಾಬಂಧನ ಕಟ್ಟಿಕೊಂಡು ಬಂದಿದ್ದ ವಿಧ್ಯಾರ್ಥಿಗಳ ಕೈಯಲ್ಲಿರುವ ರಕ್ಷಾ ಬಂಧನವನ್ನುಶಿಕ್ಷಕರು ತುಂಡರಿಸಿ ಹಾಕಿದ ಘಟನೆ ಮಂಗಳೂರಿನ ಕಾಟಿಪಳ್ಳದಲ್ಲಿರುವ ಚರ್ಚ್ ಶಾಲೆಯೊಂದರಲ್ಲಿ ನಡೆದಿದ್ದು, ವಿವಾದಕ್ಕೆ ಕಾರಣವಾಗಿದೆ. ಹಿಂದೂ ಸಮುದಾಯದ ಈ ಆಚರಣೆಗೆ ಅವಮಾನ ಮಾಡಿದ ಚರ್ಚ್ ಶಾಲೆಯ ವಿರುದ್ಧ ಪೋಷಕರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಶಾಲೆಯ ಮುಂದೆ ಜಮಾಯಿಸಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ ಘಟನೆ ನಡೆದಿತ್ತು. ಹಿಂದೂ ಸಂಘಟನೆಯ ಪ್ರಮುಖರು ಕೂಡ ಶಾಲೆಯ ವರ್ತನೆಯ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಪೋಷಕರು- ಹಿಂದೂ ಸಮಾಜದ ಪ್ರಮುಖರು ಶಾಲೆಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮಧ್ಯಪ್ರವೇಶಿಸಿದರು. ಶಾಲಾ ಆಡಳಿತ ಮಂಡಳಿ ಘಟನೆಯ ಕುರಿತಂತೆ ಕ್ಷಮೆ ಕೇಳಿದ್ದು, ಪ್ರಕರಣ ಸುಖಾಂತ್ಯವಾಗಿದೆ. ಬಳಿಕ ಶಾಲೆಯಲ್ಲಿ ಶಾಲೆಯ ಪ್ರಾಶುಂ ಪಾಲರು ಮಾತನಾಡಿ ನನಗೆ ಅರಿವಿಲ್ಲದೇ ಈ ಘಟನೆ ಸಂಭವಿಸಿದೆ. ನಮ್ಮ ಶಾಲೆಯಲ್ಲಿ ತಾವುದೇ ತಾರತಮ್ಯವಿಲ್ಲ. ಸಮಾರಸ್ಯತೆಯನ್ನು ಮೂಡಿಸುವ ಕೆಲಸ ಮಾಡುತ್ತೇವೆ. ತಿಳಿಯದೆ ಶಿಕ್ಷಕಿಯೊಬ್ಬರು ಹೀಗೆ ಮಾಡಿರಬೇಕು. ಕೂಡಲೇ ಶಿಕ್ಷಕಿಯಿಂದಲೇ ಕ್ಷಮೇ ಯಾಚಿಸಲು ತಿಳಿಸಿದ್ದಾರೆ. ಬಳಿಕ ಶಿಕ್ಷಕಿ ಪೋಷಕರ ಎದುರೇ…

Read More

ಬೆಳ್ತಂಗಡಿ: ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿಯ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ. ಗದಗ ಮೂಲದ ರಫೀಕ್(21) ಎಂಬಾತ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು, ಖಾಸಗಿ ಲಾಡ್ಜ್‌ಗೆ ರೂಮ್ ಬುಕ್ಕಿಂಗ್ ಗಾಗಿ ಬಂದಿದ್ದಾರೆ ಎನ್ನಲಾಗಿದೆ. ನವ ವಿವಾಹಿತ ಅನ್ಯಕೋಮಿನ ಜೋಡಿ ಎಂದು ತಿಳಿಯುತ್ತಲೇ ಲಾಡ್ಜ್ ಸಿಬ್ಬಂದಿ ರೂಮ್ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ತಕ್ಷಣ ಅವರಿಬ್ಬರು ಅಲ್ಲಿಂದ ಬೆಂಗಳೂರು ಕಡೆಗೆ ತೆರಳಲು ಬಸ್ ಹತ್ತಿದ್ದು, ಈ ಬಗ್ಗೆ ವಿಷಯ ತಿಳಿದ ಕಾರ್ಯಕರ್ತರು ಕೊಕ್ಕಡದಲ್ಲಿ ಅಡ್ಡಗಟ್ಟಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ತದನಂತರ ಅನ್ಯಕೋಮಿನ ಜೋಡಿಯನ್ನು ಕಾರ್ಯಕರ್ತರು ನೆಲ್ಯಾಡಿ ಪೊಲೀಸರಿಗೆ ಒಪ್ಪಿಸಿದ್ದು, ಯುವತಿಯು ವಿದ್ಯಾಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು ಎನ್ನಲಾಗುತ್ತಿದೆ. ಜೋಡಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Read More

ಬೆಳ್ತಂಗಡಿ: ಅನ್ಯ ಕೋಮಿನ ಜೋಡಿಯನ್ನು ತಡೆದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ‌. ಗದಗ ಮೂಲದ ರಫೀಕ್ (21)ಎಂಬಾತ ಗದಗ ಮೂಲದ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು ಖಾಸಗಿ ಲಾಡ್ಜ್ ಬುಕ್ಕಿಂಗ್ ಗಾಗಿ ಬಂದಿರುತ್ತಾರೆ ಎನ್ನಲಾಗಿದೆ. ಅನ್ಯಮತೀಯ ಜೋಡಿ ಎಂದು ತಿಳಿದ ಕೂಡಲೆ ಲಾಡ್ಜ್ ಸಿಬ್ಬಂದಿಯು, ರೂಮ್ ನೀಡಲು ನಿರಾಕರಿಸಿದ್ದಾರೆ. ಆಗ ಅವರು ತಕ್ಷಣ ಅಲ್ಲಿಂದ ಮರಳಿ ಬೆಂಗಳೂರು ಕಡೆಗೆ ತೆರಳಲು ಬಸ್ ಹತ್ತಿದ್ದರು. ಇದರಿಂದ‌ ಕೊಕ್ಕಡದಲ್ಲಿ ಸುದ್ದಿ ತಿಳಿದ ಹಿಂದೂ ಕಾರ್ಯಕರ್ತರು ಬಸ್ ಅಡ್ಡಗಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಂತರ ಜೋಡಿಯನ್ನು ನೆಲ್ಯಾಡಿ ಪೋಲಿಸರಿಗೆ ಒಪ್ಪಿಸಿದ್ದಾರೆ. ಯುವತಿಯು ಒಂದು ವಿದ್ಯಾ ಸಂಸ್ಥೆಯಲ್ಲಿ ಲೆಕ್ಚರ್ ಎಂದು ವಿಚಾರಿಸಿದಾಗ ತಿಳಿದು ಬಂದಿದೆ.

Read More

ಉಡುಪಿ : ಈ ಹಿಂದಿನ ವರ್ಷಗಳಲ್ಲಿ ಸ್ವಾತಂತ್ಯೋತ್ಸವದಂದು ನಡೆದಂತೆ ಈ ಬಾರಿಯೂ ರಿಕ್ಷಾ, ಬಸ್, ಟೆಂಪೋ, ಬೈಕ್ ಇತ್ಯಾದಿಗಳಿಗೆ ರಾಷ್ಟ್ರಧ್ವಜ ಕಟ್ಟಿಕೊಂಡು ರ್ಯಾಲಿ ಮಾಡಲು ಅವಕಾಶವಿದೆ. ಆದರೆ ರಾಷ್ಟ್ರಧ್ವಜಕ್ಕೆ ಸ್ವಲ್ಪವೂ ಅವಮಾನ ಆಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದ್ದಾರೆ. ಈ ವಿಚಾರವಾಗಿ ಮಾಹಿತಿ ನೀಡಿದ ಅವರು, ಹರ್ ಘರ್ ತಿರಂಗಾ ಕಾರ್ಯಕ್ರಮವು ಆ. 13ರಿಂದ 15ರ ವರೆಗೆ ನಡೆಯಲಿದೆ. ಸ್ವಾತಂತ್ರೋತ್ಸವದ ಧ್ವಜಾರೋಹಣವು ಆ. 15ರಂದು ಎಲ್ಲ ಕಡೆಯೂ ನಡೆಯಲಿದೆ. ಸರಕಾರಿ ಕಚೇರಿ, ಶಾಲೆ, ಆಸ್ಪತ್ರೆ ಸಹಿತ ವಿವಿಧ ಕಡೆಗಳಲ್ಲಿ ಸೂರ್ಯೋದಯದ ಅನಂತರ ಧ್ವಜಾರೋಹಣ ನಡೆದು, ಸೂರ್ಯಾಸ್ತದ ಮೊದಲು ಧ್ವಜವನ್ನು ಕೆಳಗೆ ಇಳಿಸಲಾಗುತ್ತದೆ. ಆದರೆ ಈ ವರ್ಷಕ್ಕೆ ಅನ್ವಯವಾಗುವಂತೆ ಮೂರು ದಿನ ಹರ್ ಘರ್ ತಿರಂಗಾ ನಡೆಯುತ್ತಿರುವುದರಿಂದ ಆ. 13ರಿಂದ 15ರ ವರೆಗೆ ಮನೆ, ಕಟ್ಟಡ ಮೊದಲಾದ ಸ್ಥಳಗಳಲ್ಲಿ ರಾತ್ರಿಯೂ ಧ್ವಜಾರೋಹಣ ಇರಲಿದೆ. ಹಾಗೂ ಅಮೃತ ಸರೋವರವಾಗಿ ಅಭಿವೃದ್ಧಿಪಡಿಸಿರುವ ಕೆರೆಯ ಆವರಣಗಳಲ್ಲೂ ಧ್ವಜಾರೋಹಣ ನಡೆಯಲಿದೆ ಎಂದು ಹೇಳಿದರು.…

Read More

ಮಂಗಳೂರು:: ಅಪರಿಚಿತ ವಾಹನವೊಂದು ರಾಷ್ಟ್ರೀಯ ಹೆದ್ದಾರಿ 66 ರ ಜೆಪ್ಪಿನಮೊಗರು ಬಳಿ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳು ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಹಾರ ಜಾಮೂಲ್ ನಿವಾಸಿ ವಿಕ್ಕಿ ಖಾನ್ (23) ಮೃತ ಕಾರ್ಮಿಕ. ಗೋಪಾಲ್ ಪೂಜಾರಿ ಗಾಯಗೊಂಡವರು. ಬೆಳಿಗ್ಗೆ ಎಂಟು ಗಂಟೆ ಸುಮಾರಿಗೆ ಹೆದ್ದಾರಿ ಬಳಿಯ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದಾಗ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವಾಹನ ಢಿಕ್ಕಿ ಹೊಡೆದಿದೆ. ಪಿಕಪ್ ವಾಹನದ ಮೇಲೆ ಸಂಶಯ ವ್ಯಕ್ತಪಡಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ನಾಗುರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸುಳ್ಯ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಬಂಧಿಸಲಾದ ಮೂರು ಮಂದಿ ಆರೋಪಿಗಳಿಗೆ ಆ.16ರವರೆಗೆ ಪೊಲೀಸ್ ಕಸ್ಟಡಿ ವಿಧಿಸಿ ಸುಳ್ಯ ನ್ಯಾಯಾಲಯ ಆದೇಶ ನೀಡಿದೆ. ಇಂದು ಬಂಧಿಸಲಾದ ಪ್ರಕರಣದ ಪ್ರಮುಖ ಆರೋಪಿಗಳಾದ ಸುಳ್ಯ ನಿವಾಸಿ ಶಿಯಾಬುದ್ದೀನ್ (33), ರಿಯಾಜ್ ಅಂಕತಡ್ಕ(27), ಎಲಿಮಲೆ ನಿವಾಸಿ ಬಶೀರ್(29) ಎಂಬವರನ್ನು ಗುರುವಾರ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸ್ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯವು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿದೆ ಎಂದು ತಿಳಿದು ಬಂದಿದೆ. ಪುತ್ತೂರು ಡಿವೈಎಸ್‌ಪಿ ಗಾನಾ ಪಿ ಕುಮಾರ್, ಸುಳ್ಯ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

Read More

ಕಡಬ: ಎರಡು ನಂಬರ್ ಪ್ಲೇಟ್ ಹೊಂದಿರುವ ಅಪರಿಚಿತ ಕಾರೊಂದು ಮರ್ಧಾಳದಲ್ಲಿ ಕಂಡುಬಂದಿದ್ದು, ಪೊಲೀಸರು ಲಾಕ್ ಮಾಡಿದ್ದಾರೆ. ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಬೇರೆ ಬೇರೆ ನಕಲಿ ನಂಬರ್ ಪ್ಲೇಟ್ ಗಳನ್ನು ಹಾಕಲಾಗಿದ್ದು, ಬುಧವಾರ ರಾತ್ರಿ ಕಡಬ ಠಾಣಾ ಪೊಲೀಸರು ಮರ್ಧಾಳ ಜಂಕ್ಷನ್ ನಲ್ಲಿ ಕಾರಿನ ಚಕ್ರಗಳಿಗೆ ಲಾಕ್ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿ, ನಕಲಿ ನಂಬರ್ ಪ್ಲೇಟ್ ಹಾಕಿರುವ ಕಾರಿಗೆ ಲಾಕ್ ಮಾಡಲಾಗಿದ್ದು, ಕಾರಿನ ಮಾಲಕರನ್ನು ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Read More