Author: main-admin

ಬ್ರಹ್ಮಾವರ: ಬ್ರಹ್ಮಾವರ ಠಾಣೆ ವ್ಯಾಪ್ತಿಯ ಮಾಬುಕಳ ಸೇತುವೆಯ ಸಮೀಪ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾರೆ. ಕಾರು ಚಾಲಕ ಅತಿ ವೇಗದಿಂದ ಕುಂದಾಪುರದಿಂದ ಉಡುಪಿಯತ್ತ ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ನಿಯಂತ್ರಣ ಸಿಗದೆ ರಸ್ತೆ ವಿಭಜಕ ದಾಟಿ ಕುಂದಾಪುರದತ್ತ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಿಂದ ಕಾರು ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಕಾರು ಚಾಲಕನ ಕೈ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ರಹ್ಮಾವರ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು: ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು. ಕೆಲ ದಿನಗಳ ಹಿಂದಷ್ಟೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಸಾಲುಮರದ ತಿಮ್ಮಕ್ಕ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ನಂತರ ಸಿಎಂ ಸೂಚನೆ ಮೇರೆಗೆ ಬಿಡಿಎ ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕನಿಗೆ ನೀಡಿತ್ತು.ಇಂದು ಬೆಳಗ್ಗೆ ರೇಸ್ ಕೋರ್ಸ್ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಕರಾರು ಪತ್ರವನ್ನು ಸಿಎಂ ನೀಡಿದರು. ಇನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್‌ ನಲ್ಲಿ ನಿವೇಶನವನ್ನು ಗುರುತಿಸಿ ವಿತರಿಸಲಾಗುತ್ತಿದೆ ಎಂದು ಬಿಡಿಎ ಅಧ್ಯಕ್ಷ ವಿಶ್ವನಾಥ್‌ ಹೇಳಿದ್ದಾರೆ. ತಿಮ್ಮಕ್ಕನಿಗೆ 50#80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ ಎಂದರು.

Read More

ದಕ್ಷಿಣ ಕನ್ನಡದ ಸುಳ್ಯ ತಾಲೂಕು, ಕೊಡಗು ಜಿಲ್ಲೆಯ ಕೆಲವೆಡೆ ಶನಿವಾರ ಬೆಳಗ್ಗೆ ಭೂಕಂಪನ ಅನುಭವವಾಗಿದ್ದು, ಸ್ಥಳೀಯರಲ್ಲಿ ಮತ್ತೆ ಆತಂಕ ಹುಟ್ಟಸಿದೆ. ಬೆಳಗ್ಗೆ ಸುಮಾರು 9.10ಕ್ಕೆ ಭೂಕಂಪನದ ಅನುಭವವಾಗಿದ್ದು, ಕೆಲ ಕ್ಷಣ ದೊಡ್ಡ ಶಬ್ದದೊಂದಿಗೆ ಭೂಮಿ ಕಂಪಿಸಿದೆ. ಇದರಿಂದಾಗಿ ಮನೆಯಲ್ಲಿದ್ದ ವಸ್ತುಗಳು ಕಂಪಿಸಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಡಿಕೇರಿ ತಾಲೂಕಿನ ಚೆಂಬು, ಕರಿಕೆ ಸಂಪಾಜೆ, ಕೊಡಗು ಗಡಿಗೆ ಹೊಂದಿಕೊಂಡಿರುವ ದ.ಕ ಜಿಲ್ಲೆಯ ಕಲ್ಲುಗುಂಡಿ, ಗೂನಡ್ಕ ಭಾಗದಲ್ಲೂ ಕಂಪಿಸಿದೆ ಎಂದು ತಿಳಿದು ಬಂದಿದೆ.

Read More

ಮಂಗಳೂರು: ಮಾವಿನಕಾಯಿ ಕೊಯ್ಯಲೆಂದು ಮರ ಏರಿದ ಯುವಕನೋರ್ವ ವಿದ್ಯುತ್ ಶಾಕ್ ತಗಲಿ ಸಾವನ್ನಪ್ಪಿರುವ ದಾರುಣ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜಲಾಲ್ ಬಾಗ್ ನಲ್ಲಿ ಶುಕ್ರವಾರ ಸಂಜೆ ವೇಳೆ ಸಂಭವಿಸಿದೆ.ಮಹಮ್ಮದ್ ಇಲಿಯಾಸ್ (21) ಮೃತ ಯುವಕನಾಗಿದ್ದಾನೆ . ಸಂಜೆ ವೇಳೆ ಮನೆ ಸಮೀಪದ ಕಾಂಪೌಂಡಿನಲ್ಲಿರುವ ಮಾವಿನಮರಕ್ಕೆ ಕಾಯಿ ಕೀಳಲೆಂದು ತೆರಳಿದ ಸಂದರ್ಭ ಘಟನೆ ನಡೆದಿದೆ.ಮಾವಿನ ಕಾಯಿ ಕೀಳಲು ಬಳಸುತ್ತಿದ್ದ ಕೋಲಿನ ಕಬ್ಬಿಣದ ಕೊಕ್ಕೆಗೆ ಮರದ ಕೊಂಬೆಗಳ ಮೂಲಕ ಹಾದು ಹೋಗಿದ್ದ  ವಿದ್ಯುತ್ ತಂತಿಗೆ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

Read More

ಕಾಸರಗೋಡು : ಮನೆಯೊಂದಕ್ಕೆ ನುಗ್ಗಿ ಮನೆಯವರ ಪ್ರಜ್ಞೆ ತಪ್ಪಿಸಿ 30 ಪವನ್ ಚಿನ್ನಾಭರಣ ಹಾಗೂ ನಾಲ್ಕು ಲಕ್ಷ ರೂ. ಕಳವು ಗೈದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೂಚ ಕ್ಕಾಡ್ ನಲ್ಲಿ ನಡೆದಿದೆ. ಪೂಚಕ್ಕಾಡ್ ಮುನೀರ್ ಎಂಬವರ ಮನೆಯ ಮೇಲಂತಸ್ತಿನ ಕಿಟಿಕಿ ಸರಳು ಮುರಿದು ಕಳ್ಳರು ಒಳನುಗ್ಗಿದ್ದು, ಕಪಾಟಿನಲ್ಲಿ ಇರಿಸಲಾಗಿದ್ದ ಚಿನಾಭರಣ ಮತ್ತು ನಗದು ಕಳವು ಮಾಡಿದ್ದಾರೆ. ಮುನೀರ್ ಹಾಗೂ ಮನೆಯವರು ಮನೆಯಲ್ಲಿ ಮಲಗಿದ್ದು, ಬೆಳಿಗ್ಗೆ ತಡವಾಗಿ ಎಚ್ಚೆತ್ತಿದ್ದು, ಈ ಸಂದರ್ಭದಲ್ಲಿ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರು ಪ್ರಜ್ಞೆ ತಪ್ಪಿಸುವ ರಾಸಾಯನಿಕ ವಸ್ತು ಸಿಂಪಡಿಸಿರಬಹುದು ಎಂದು ಶಂಕಿಸಲಾಗಿದೆ. ಸಾಮಾನ್ಯ ವಾಗಿ ಮುನೀರ್ ಮುಂಜಾನೆ 4 ಗಂಟೆಗೆ ಏಳುತ್ತಿದ್ದು, ಇಂದು ಬೆಳಿಗ್ಗೆ ಎಂಟು ಗಂಟೆಗೆ ಎಚ್ಚರವಾಗಿದೆ. ಇದರಿಂದ ಪ್ರಜ್ಞೆ ತಪ್ಪಿಸುವ ರಾಸಾಯನಿಕ ಸ್ಪ್ರೇ ಮಾಡಿ ಕಳ್ಳರು ಕೃತ್ಯ ನಡೆಸಿರಬಹುದು ಎಂದು ಸಂಶಯಿಸಲಾಗಿದೆ. ಇನ್ನು ಬೇಕಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Read More

ಉಳ್ಳಾಲ: ಕಳೆದೆರಡು ದಿವಸಗಳಿಂದ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು ಸೋಮೇಶ್ವರ, ಉಚ್ಚಿಲದ ಬಟ್ಟಂಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಕಳೆದ ವರುಷ ಭಾಗಶಃ ಅಳಿದುಹೋಗಿ ಉಳಿದಿದ್ದ ರಸ್ತೆಯು ಸಮುದ್ರ ಪಾಲಾಗಿದೆ. ಸೋಮೇಶ್ವರ, ಉಚ್ಚಿಲ ಪ್ರದೇಶಗಳು ಕಳೆದ ಐದು ವರುಷಗಳಿಂದಲೂ ಕಡಲ್ಕೊರೆತ ಸಮಸ್ಯೆಯಿಂದ ನಲುಗುತ್ತಿದೆ.ಈ ಪ್ರದೇಶದಲ್ಲಿ ನಡೆದ ಅವೈಜ್ಞಾನಿಕ ಬ್ರೇಕ್ ವಾಟರ್ ಕಾಮಗಾರಿಯು ಯಾವುದೇ ಪರಿಣಾಮ ಬೀರಿಲ್ಲ. ಕಳೆದ ಕೆಲ ದಿನಗಳ ಹಿಂದಷ್ಟೇ ಬಂದರು ಸಚಿವ ಎಸ್.ಅಂಗಾರ ಅವರು ಇಲ್ಲಿಗೆ ಭೇಟಿ ನೀಡಿ ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀ ಬ್ರೇಕ್ ವಾಟರ್ ಕಾಮಗಾರಿಯನ್ನ ಇಲ್ಲಿಯೂ ನಡೆಸುವ ಬಗ್ಗೆ ಅಧ್ಯಯನ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದರು. ಸರಕಾರವು ಸುಖಾ ಸಮ್ಮನೆ ವ್ಯರ್ಥ ಯೋಜನೆಗಳಿಗೆ ಹಣ ಪೋಲು ಮಾಡದೇ ಆದಷ್ಟು ಶೀಘ್ರದಲ್ಲಿ ಶಾಶ್ವತ ಕಡಲ್ಕೊರೆತ ತಡೆ ಕಾಮಗಾರಿ ನಡೆಸುವಂತೆ ಸ್ಥಳೀಯ ಮೀನುಗಾರ ಸುಖೇಶ್ ಉಚ್ಚಿಲ್ ಆಗ್ರಹಿಸಿದ್ದಾರೆ.

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಕಳಪೆ ರಸ್ತೆಗಳನ್ನು ದುರಸ್ಥಿತಿಗೊಳಿಸಿದರ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ಬಳಿಯ ರಸ್ತೆಯನ್ನು ಮೋದಿ ಅವರು ಬೇಸ್ ಕ್ಯಾಂಪಸ್ ಅನ್ನು ಉದ್ಘಾಟಿಸಲು ಭೇಟಿ ನೀಡುವ ಕೆಲವು ದಿನಗಳಷ್ಟೇ ರಸ್ತೆಯನ್ನು ಸರಿ ಮಾಡಿದ್ದರು. ಇದೀಗ ಕಳಪೆ ಕಾಮಗಾರಿಯ ಬಗ್ಗೆ ತನಿಖೆ ನಡೆಸುವಂತೆ, ಹಾಗೂ ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಮೂಲಗಳ ಪ್ರಕಾರ, ನೀರಿನ ಪೈಪ್ ಸೋರಿಕೆಯಿಂದಾಗಿ ರಸ್ತೆ ಕುಸಿದಿದೆ ಎಂದು ತಿಳಿದುಬಂದಿದೆ. ಬೊಮ್ಮಾಯಿ ಅವರ ದೆಹಲಿ ಭೇಟಿಯು ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಗಳ ಹೊಸ ಊಹಾಪೋಹಗಳಿಗೆ ಕಾರಣವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಂಗಳವಾರ ಮೋದಿ ಅವರ ನಗರಕ್ಕೆ ಭೇಟಿ ನೀಡುವ ಮುನ್ನ ಸುಮಾರು 14 ಕಿ.ಮೀ ರಸ್ತೆಗಳನ್ನು ಸರಿಪಡಿಸಲು ಹಗಲಿರುಳು ಶ್ರಮಿಸಿದ್ದಾರೆ.ಇನ್ನು ಪ್ರಧಾನಿ ನರೇಂದ್ರ ಮೋದಿ…

Read More

ಮಂಗಳೂರು: ಎಲೆಕ್ಟ್ರಿಕ್‌ ದ್ವಿಚಕ್ರ ವಾಹನದ ಶೋ ರೂಂನಲ್ಲಿ ಭಾರಿ ಬೆಂಕಿ ಆಕಸ್ಮಿಕ ಸಂಭವಿಸಿದ ಘಟನೆ ಮಂಗಳೂರು ನಗರದ ನಾಗುರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ನಾಗುರಿಯಲ್ಲಿರುವ ಪ್ರಶಾಂತ್‌ ಮಾಲಕತ್ವದ ಓಕಿನವ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಮ್‌ನಲ್ಲಿ ಇಂದು ಬೆಳಗ್ಗೆ ಏಕಾಏಕಿ ಬೆಂಕಿ ಅವಘಡ ಸಂಭವಿಸಿದೆ. ಈ ವೇಳೆ ಶೋರೂಂನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಹಲವು ವಾಹನಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಯಾವುದೇ ಸಾವು-ನೋವು ಉಂಟಾಗಿಲ್ಲ. ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ದಳ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ…ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Read More

ಮಂಗಳೂರು : ತಂದೆಯೋರ್ವ ತನ್ನ ಮೂವರು ಮಕ್ಕಳು ಹಾಗೂ ಪತ್ನಿಯನ್ನು ಬಾವಿಗೆ ತಳ್ಳಿ ತಾನು ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ರಶ್ಮಿತಾ (13), ಉದಯ (11), ದಕ್ಷಿತ್ (4) ಮೃತಪಟ್ಟ ಮಕ್ಕಳು ಎಂದು ತಿಳಿದು ಬಂದಿದೆ. ಪದ್ಮನೂರು ಶೆಟ್ಟಿಗಾಡು ನಿವಾಸಿ ಹಿತೇಶ್ ಶೆಟ್ಟಿಗಾರ್ ಕೃತ್ಯವೆಸಗಿದಾತ. ಗುರುವಾರ ಬೆಳಿಗ್ಗೆ ಎಂದಿನಂತೆ ಮಕ್ಕಳನ್ನು ಶಾಲೆಗೆ ಕಳುಹಿಸಿ ಕೆಲಸಕ್ಕೆ ಹೋಗಿ ಸಂಜೆ ವಾಪಸಾಗುತ್ತಿದ್ದಾಗ ಮಕ್ಕಳು ಮನೆಯಲ್ಲಿ ಇಲ್ಲದ್ದನ್ನು ಕಂಡು ಸಂಶಯಗೊಂಡ ಪತ್ನಿ ಎಲ್ಲಾ ಕಡೆ ಹುಡುಕಾಟ ನಡೆಸಿದ ಬಳಿಕ ಸಮೀಪದ ಮನೆಯ ಬಾವಿ ಕಡೆ ಹುಡುಕಾಡಿದಾಗ ಬಾವಿಯಲ್ಲಿ ಮಕ್ಕಳು ನೀರಿನಲ್ಲಿ ಬಿದ್ದಿರುವುದನ್ನು ನೋಡಿದ್ದಾರೆ. ಬಾವಿಯ ಪಕ್ಕ ನಿಂತು ಸಹಾಯಕ್ಕೆ ಕೂಗುತ್ತಿದ್ದಾಗ ಪತ್ನಿಯನ್ನು ಹಿಂಬಾಲಿಸಿಕೊಂಡು ಬಂದ ಪತಿ ಹಿತೇಶ್, ಪತ್ನಿಯನ್ನೂ ಬಾವಿಗೆ ದೂಡಿ ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳೀಯರು ತಕ್ಷಣ ಕಾರ್ಯಾಚರಣೆ ನಡೆಸಿ ಹಿತೇಶ್ ಮತ್ತು…

Read More

ತುಂಬೆ ಹೂವು ಶಿವನಿಗೆ ಪ್ರಿಯವಾದ ಹೂವು. ಶಿವರಾತ್ರಿ ದಿನದಂದು ಭಕ್ತರು ಈ ಹೂವನ್ನು ಹುಡುಕಿ ಶಿವನಿಗೆ ಅರ್ಪಿಸುತ್ತಾರೆ. ಈ ಸಣ್ಣ ಗಿಡದಲ್ಲಿ ಸಾಕಷ್ಟು ಔಷಧೀಯ ಗುಣಗಳಿವೆ. ಇದರ ಬಿಳಿ ಬಣ್ಣದ ಹೂವುಗಳಿಂದ ಹಲವು ಪ್ರಯೋಜನಗಳಿವೆ. ಹೊಟ್ಟೆಯಲ್ಲಿ ಹುಳು ಆಗಿದ್ದರೆ ತುಂಬೆ ಹೂವು ಮತ್ತು ಅದರ ಎಲೆಯ ರಸಕ್ಕೆ ಜೇನುತುಪ್ಪ ಸೇರಿಸಿ ತಿನ್ನುವುದರಿಂದ ಹುಳುಗಳು ನಾಶವಾಗುತ್ತವೆ. ಇನ್ನು ಪದೇ ಪದೇ ಜ್ವರ ಬರುತ್ತಿದ್ದರೆ ತುಂಬೆ ಎಲೆ ರಸಕ್ಕೆ ಕಾಳು ಮೆಣಸಿನ ಪುಡಿ ಹಾಕಿ ಸೇವನೆ ಮಾಡಿದರೆ ಜ್ವರ ಕಡಿಮೆ ಆಗುತ್ತದೆ. ಮನೆಯಲ್ಲಿ ಸೊಳ್ಳೆಗಳ ಕಾಟ ಮತ್ತು ಕೀಟಗಳ ಕಾಟ ಹೆಚ್ಚು ಇದ್ದರೆ ತುಂಬೆ ಗಿಡದ ಎಲೆ ಒಣಗಿಸಿ ಹೊಗೆ ಹಾಕಿದರೆ ಅವು ದೂರ ಹೋಗುತ್ತವೆ. ಮನೆಯ ಅಂಗಳದಲ್ಲಿ ತುಂಬೆ ಗಿಡವನ್ನು ಬೆಳೆಸುವುದರಿಂದ ಕೀಟಗಳ ಬಾಧೆಯನ್ನು ತಪ್ಪಿಸಬಹುದು. ಇನ್ನು ಚರ್ಮದ ತುರಿಕೆ ಮತ್ತು ಅಲರ್ಜಿ ಇದ್ದರೆ ಈ ತುಂಬೆ ಎಲೆಯನ್ನು ಪೇಸ್ಟ್ ಮಾಡಿ ಚರ್ಮದ ಮೇಲೆ ಲೇಪಿಸುವುದರಿಂದ ಚರ್ಮದ ತುರಿಕೆ – ಅಲರ್ಜಿ ಕಡಿಮೆಯಾಗುತ್ತದೆ.

Read More