Author: main-admin

ಮಂಗಳೂರು: ವಾರದಲ್ಲಿ ಮೂರು ದಿನ ಮಂಗಳೂರು -ಬೆಂಗಳೂರು ವಿಶೇಷ ರಾತ್ರಿ ರೈಲು ಸೇವೆ ಆರಂಭಿಸಲಾಗುವುದು. ಜುಲೈ 27 ರಿಂದ ಆಗಸ್ಟ್ 31 ರವರೆಗೆ ಪ್ರತಿ ಸೋಮವಾರ, ಬುಧವಾರ, ಶುಕ್ರವಾರ ಮಂಗಳೂರಿನಿಂದ ಬೆಂಗಳೂರು ನಗರಕ್ಕೆ ರೈಲು ಸಂಚರಿಸಲಿದೆ. ಜುಲೈ 26 ರಿಂದ ಆಗಸ್ಟ್ 30ರವರೆಗೆ ಪ್ರತಿ ಭಾನುವಾರ, ಮಂಗಳವಾರ, ಗುರುವಾರ ಬೆಂಗಳೂರಿನಿಂದ ಮಂಗಳೂರಿಗೆ ರೈಲು ಸಂಚರಿಸಲಿದೆ. ಭಾರಿ ಮಳೆಯ ಕಾರಣ ಬೆಂಗಳೂರು -ಮಂಗಳೂರು ಹೆದ್ದಾರಿ ಸಂಚಾರ ದುಸ್ತರವಾಗಿರುವ ಹಿನ್ನೆಲೆಯಲ್ಲಿ ರೈಲು ಸಂಚಾರಕ್ಕೆ ಬೇಡಿಕೆ ಬಂದಿದೆ. ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಅನುಕೂಲವಾಗುವಂತೆ, ಮಂಗಳೂರು ಸೆಂಟ್ರಲ್ ಮತ್ತು ಬೆಂಗಳೂರು ಸಿಟಿ ಜಂಕ್ಷನ್ ನಡುವೆ ಮೈಸೂರು ಮಾರ್ಗದಲ್ಲಿ ಜನವರಿ 26ರಿಂದ ಆಗಸ್ಟ್ 31ರವರೆಗೆ ವಾರದಲ್ಲಿ ಮೂರು ದಿನ ವಿಶೇಷ ರಾತ್ರಿ ರೈಲು ಸೇವೆಗೆ ರೈಲ್ವೆ ಮಂಡಳಿಯಿಂದ ಅನುಮೋದನೆ ನೀಡಲಾಗಿದೆ. ಭಾರಿ ಮಳೆ ಮತ್ತು ಭೂಕುಸಿತದ ಕಾರಣ ರಸ್ತೆ ಸಂಚಾರಕ್ಕೆ ತೊಂದರೆಯಾಗಿರುವುದರಿಂದ ಹೆಚ್ಚುವರಿ ರೈಲು ಒದಗಿಸಲು ಪಶ್ಚಿಮ ಕರಾವಳಿ ರೈಲು ಯಾತ್ರಾ ಅಭಿವೃದ್ಧಿ ಸಮಿತಿ ಸಂಸದ ನಳಿನ್ ಕುಮಾರ್ ಕಟೀಲ್…

Read More

ಮಂಗಳೂರು: ನಗರ ಹೊರವಲಯದ ಪಣಂಬೂರಿನಲ್ಲಿರುವ MCF ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆಯಾದ ಬಗ್ಗೆ ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರವೂರಿನ ಅಣೆಕಟ್ಟು ಬಳಿ ಆತನ ಸ್ಕೂಟರ್‌ ಪತ್ತೆಯಾಗಿದೆ. ನಾಪತ್ತೆಯಾದವನನ್ನು ಆದಿತ್ಯ ವಿ ಅಲಗೂರು(27) ಎಂದು ಗುರುತಿಸಲಾಗಿದೆ. ಘಟನೆ ವಿವರ ಆದಿತ್ಯ ವಿ ಅಲಗೂರು ಮೂಲತ: ಯಾದಗಿರಿಯವನಾಗಿದ್ದು, ಪಣಂಬೂರಿನಲ್ಲಿರುವ MCF ಫ್ಯಾಕ್ಟರಿಯಲ್ಲಿ ಪ್ರೊಡಕ್ಷನ್ ಡಿಪಾರ್ಟ್‌ಮೆಂಟ್‌ನಲ್ಲಿ ಉದ್ಯೋಗಿಯಾಗಿದ್ದನು. ಜು.16 ರಂದು ಕೆಲಸಕ್ಕೆ ಹೋದ ಈತ ರಾತ್ರಿ 7.20 ರ ಸುಮಾರಿಗೆ ಮನೆಗೆ ಬರಲು ಸ್ವಲ್ಪ ತಡವಾಗುತ್ತದೆಂದು ಮನೆಯವರಿಗೆ ತಿಳಿಸಿದ್ದನು. ಅದಾದ ನಂತರ ಆತನ ಮೊಬೈಲ್‌ ಸ್ವಿಚ್‌ ಆಫ್‌ ಆಗಿತ್ತು. ಈ ಬಗ್ಗೆ ಕಾವೂರು ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಆತನ ಸ್ಕೂಟರ್‌ ಮಂಗಳೂರು ಹೊರವಲಯದ ಮರವೂರು ಆಣೆಕಟ್ಟಿನಲ್ಲಿ ಪತ್ತೆಯಾಗಿದ್ದು, ವ್ಯಕ್ತಿ ಪತ್ತೆಯಾಗಿಲ್ಲ.

Read More

ಬಜ್ಪೆ:ಮಹಿಳೆಯ‌ ಮಾನಭಂಗಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 9 ವರ್ಷಗಳ ಬಳಿಕ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನೌಶದ್‌ ಬಂಧಿತ ಆರೋಪಿ.ಈತ 2013ರ ಮಾ. 22ರಂದು ಮಹಿಳೆಯ ಚೂಡಿದಾರದ ಶಾಲನ್ನು ಎಳೆದು ಮಾನಭಂಗವನ್ನುಂಟು ಮಾಡಿದ್ದು, ಬಳಿಕ ಕೋರ್ಟಿನಿಂದ ಕೇಸ್‌ ಅನ್ನು ಹಿಂದಕ್ಕೆ ತೆಗೆಯಲು ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈತ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ.ಈತವಿಳಾಸ ಬದಲಿಸಿ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ವಾಸ ಮಾಡಿಕೊಂಡಿದ್ದ ಎನ್ನುವುದು ತಿಳಿದು‌ ಬಂದಿದ್ದು, ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Read More

ವಿಟ್ಲ: ಆಟೋ ರಿಕ್ಷಾಕ್ಕೆ ಹಿಂದಿನಿಂದ ಬಂದ ಲಾರಿವೊಂದು ಡಿಕ್ಕಿ ಹೊಡೆದ ಘಟನೆ ಇಂದು ಮಾಣಿ ಸಮೀಪದ ಸೂರಿಕುಮೇರು ರಾಜ್ ಕಮಲ್ ಸಭಾಭವನ ಬಳಿ ನಡೆದಿದೆ. ಮಂಗಳೂರು ಮೂಲದ ಆಟೋ ರಿಕ್ಷಾವೊಂದು ಮಾಣಿಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಆಟೋ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಕೆಲ ಕಾಲ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು.

Read More

ಬಂಟ್ವಾಳ; ಬಿಸಿಎಂ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ಘಟನೆ ವಾಮದಪದವಿನಲ್ಲಿರುವ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ. ಪಿಯುಸಿ ವಿದ್ಯಾರ್ಥಿಗಳಿಗೆ ಅದೇ ವಿದ್ಯಾರ್ಥಿ ನಿಲಯದ ಪದವಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಈ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಮದಪದವು ಕಾಲೇಜಿ‌ನ ಪ್ರಾಂಶುಪಾಲರು ದೂರು ನೀಡಿದ್ದಾರೆ. ವಿದ್ಯಾರ್ಥಿ ನಿಲಯದಲ್ಲಿ ವಾಮದಪದವು ಪದವಿ ಪೂರ್ವ ಕಾಲೇಜಿನ 14 ವಿದ್ಯಾರ್ಥಿಗಳು ವಾಸವಿದ್ದರು.‌ಇವರಿಗೆ ಪದವಿ ವಿದ್ಯಾರ್ಥಿಗಳಾದ ಶರತ್ ಎಸ್, ಅಭಿಷೇಕ್, ಸುದೀಪ್, ರಾಕೇಶ್ ಹಾಗೂ ಸಂಗಡಿಗರು ಸೇರಿ ಬೆಲ್ಟ್, ವಿಕೆಟ್ ಗಳಿಂದ ಹಲ್ಲೆ ಮಾಡಿದ್ದಾರೆಂದು ದೂರು ದಾಖಲಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ವಿದ್ಯಾರ್ಥಿಗಳಿಗೆ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.

Read More

ಮಂಗಳೂರು: ಮಂಗಳೂರು ಹೊರವಲಯದ ಮಳಲಿ ಪೇಟೆ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ಆ. 1ರಂದು ಆದೇಶ ನೀಡಲಿದೆ. ಮಸೀದಿ ಕಟ್ಟಡದಲ್ಲಿ ದೇವಸ್ಥಾನ ಹೋಲುವ ರಚನೆ ಕಂಡುಬಂದಿದ್ದ ಹಿನ್ನೆಲೆಯಲ್ಲಿ ಕೋರ್ಟ್‌ ಕಮಿಷನರ್‌ ಮೂಲಕ ಸಮೀಕ್ಷೆ ನಡೆಸುವಂತೆ ಹಿಂದೂ ಸಂಘಟನೆ ಪರ ವಕೀಲರು ಮನವಿ ಮಾಡಿದ್ದರು. ಇದಕ್ಕೆ ಮಸೀದಿ ಪರ ವಕೀಲರು ಆಕ್ಷೇಪಿಸಿದ್ದರು. ವಕ್ಫ್ ಬೋರ್ಡ್‌ ಅಧೀನದಲ್ಲಿ ಇರುವುದರಿಂದ ಸರ್ವೇ ನಡೆಸಲು ಅವಕಾಶ ನೀಡದೆ ನವೀಕರಣ ಕಾಮಗಾರಿ ಮುಂದುವರಿಸಲು ಅವಕಾಶ ನೀಡಬೇಕು ಎಂದು ವಾದ ಮಂಡಿಸಿದ್ದರು. ಸಿವಿಲ್‌ ನ್ಯಾಯಾಲಯ ತೀರ್ಪು ಪ್ರಕಟಿಸದಂತೆ ಸ್ಥಳೀಯರಾದ ಮನೋಜ್‌ ಕುಮಾರ್‌, ಧನಂಜಯ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್‌ ವಜಾಗೊಳಿಸಿದ್ದ ಆದೇಶದ ಪ್ರತಿಯನ್ನು ಮಸೀದಿ ಪರ ವಕೀಲರು ಸಿವಿಲ್‌ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಆದೇಶದ ಪ್ರತಿ ಸ್ವೀಕರಿಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯವು ತೀರ್ಪನ್ನು ಆ. 1ಕ್ಕೆ ನಿಗದಿಗೊಳಿಸಿದೆ.

Read More

ಬೆಳ್ತಂಗಡಿ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪದಲ್ಲಿ ಯುವಕರ ತಂಡವೊಂದು ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ್ದು, ಈ ವೇಳೆ ಗಲಾಟೆಯನ್ನು ತಡೆಯಲು ಬಂದ ವ್ಯಕ್ತಿಗೂ ಹಲ್ಲೆ ನಡೆಸಲಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸಿ ಜಾರಪ್ಪ ನಾಯ್ಕ ( 55 ) ಮೃತಪಟ್ಟ ವ್ಯಕ್ತಿ. ನಾರಾಯಣ ನಾಯ್ಕ (47) ಎಂಬಾತ ಸ್ಥಳೀಯ ಆರು ವರ್ಷದ ಅಪ್ರಾಪ್ತ ಬಾಲಕಿಗೆ ಕಳೆದ 10 ದಿನಗಳ ಹಿಂದೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ಹೇಳಲಾಗುತ್ತಿದೆ. ಈ ಲೈಂಗಿಕ ಕಿರುಕುಳ ವಿಚಾರವಾಗಿ ಅದಾಗಲೆ ರಾಜಿ ಸಂಧಾನವೂ ನಡೆದಿತ್ತು. ಆದರೆ ನಿನ್ನೆ ಸಂಜೆ ವೇಳೆ ಆತ ಮತ್ತೆ ಬಾಲಕಿಯನ್ನು ಕರೆದು ಮಾತಾಡಿಸಿದ್ದ ಎಂದು ಆರೋಪಿಸಲಾಗಿದೆ. ಪರಿಣಾಮ ಇದರ ಬಗ್ಗೆ ತಗಾದೆ ತೆಗೆದ ಯುವಕರ ತಂಡ ನಾರಾಯಣ ನಾಯ್ಕನನ್ನು ತಡೆದು ಹಲ್ಲೆಗೆ ಮುಂದಾಗಿದೆ. ಇದನ್ನು ನೋಡಿ ಜಾರಪ್ಪ ನಾಯ್ಕ ಎಂಬವರು ಹಲ್ಲೆ ನಡೆಸುವುದನ್ನು…

Read More

ಕೋಟ: ಮೀನುಗಾರಿಕೆ ತೆರಳಿದ ವೇಳೆ ದೋಣಿ ಮಗುಚಿ ಬಿದ್ದು ಓರ್ವ ಮೃತಪಟ್ಟ ಘಟನೆ ಪಾರಂಪಳ್ಳಿ ಪಡುಕರೆಯ ಕಡಲ ಕಿನಾರೆಯಲ್ಲಿ ನಡೆದಿದೆ‌. ಪಾರಂಪಳ್ಳಿ ನಿವಾಸಿ ಸುಮಂತ್ ಮೊಗವೀರ (23) ಮೃತ ದುರ್ದೈವಿ. ನಿನ್ನೆ ಬೆಳಿಗ್ಗೆ ಸಂದೀಪ್, ಪ್ರಜ್ವಲ್ ಹಾಗೂ ಸುಮಂತ್ ಮೀನುಗಾರಿಕೆ ತೆರಳಲು ನಾಡದೋಣಿಯ ಮೂಲಕ ಸಮುದ್ರಕ್ಕೆ ತೆರಳಿದ್ದರು. ಸಮುದ್ರದಲ್ಲಿ ಈ ವೇಳೆ ಭಾರೀ ಗಾತ್ರದ ಅಲೆಗೆ ಸಿಲುಕಿ ದೋಣಿಯಲ್ಲಿದ್ದ ಮೂವರು ಮುಗುಚಿ ಬಿದ್ದಿದ್ದು, ಇಬ್ಬರು ಸಂದೀಪ್ ಮತ್ತು ಪ್ರಜ್ವಲ್ ಈಜಿ ದಡ ಸೇರಿದ್ದಾರೆ. ಆದರೆ ಸುಮಂತ್ ಬಾರಿ ಗಾತ್ರದ ಅಲೆಗಳಿಗೆ ಸಿಲುಕಿ‌ ಸಮುದ್ರಪಾಲಾಗಿದ್ದಾನೆ.

Read More

ಬೈಂದೂರು; ಉಪ್ಪುಂದ ನಂದನವನ ವಸತಿ ಗೃಹಕ್ಕೆ ಅನ್ಯಕೋಮಿನ ಜೋಡಿಗಳು ಬಂದ ವಿಷಯ ತಿಳಿದು ಹಿಂದೂ ಸಂಘಟನೆಯ ಕಾರ್ಯಕರ್ತರು ಬೈಂದೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಉಳ್ಳಾಲದ ನಿವಾಸಿ ಅಮೀರ್ (45) ಎಂಬವರು 28 ವರ್ಷದ ಯುವತಿಯೊಂದಿಗೆ ಬೈಂದೂರು ಲಾಡ್ಜ್ ಗೆ ತೆರಳಿದ್ದರು. ಅಮೀರ್ ಗುಜರಿ ವ್ಯಾಪಾರಿಯಾಗಿದ್ದು, ಯುವತಿ ಆತನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದಳು ಎನ್ನಲಾಗಿದೆ. ಇದೀಗ ಇಬ್ಬರನ್ನು ವಶಕ್ಕೆ ಪಡೆದು ಈ‌ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ‌.

Read More

ಮಂಗಳೂರು: ಸ್ವಾಮೀಜಿ ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಜಪೆಯ ತಲಕಲ ಸ್ವಾಮಿ ಆತ್ಮಹತ್ಯೆ ಮಾಡಿಕೊಂಡವರು. ಇವರು ಜೀವನದಲ್ಲಿ ಜಿಗುಪ್ಸೆ ಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.‌ಇನ್ನೊಂದು ಕಡೆ ಅವರ ಸಾವಿನ ಬಗ್ಗೆ ಅನುಮಾನ‌ ಕೂಡ ವ್ಯಕ್ತವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More