ಮಂಗಳೂರು: ಸುರತ್ಕಲ್ ಬಳಿಯ ಮುಕ್ಕದ ಲೇಔಟ್ ಒಂದರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ರತುವಾ ಪರಂಪುರ್ ನಿವಾಸಿ ಮುಖೇಶ್ ಮಂಡಲ್ (27) ಎಂಬವರನ್ನು ಕೊಲೆ ಮಾಡಿ ಎಸ್ಟಿಪಿ ಟ್ಯಾಂಕ್ ನಲ್ಲಿ ಹಾಕಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ ಆರೋಪಿಯನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ರತುವಾ ಬಾದೋ ಗ್ರಾಮದ ನಿವಾಸಿ ಲಕ್ಷ್ಮಣ್ ಮಂಡಲ್ ಯಾನೇ ಲಖನ್ (30) ಎಂದು ಗುರುತಿಸಲಾಗಿದೆ. ಮುಖೇಶ್ ಮಂಡಲ್ ಲೇ ಔಟ್ನಿಂದ ಜೂ.24ರಂದು ದಿಢೀರ್ ಕಣ್ಮರೆಯಾಗಿದ್ದು, ಈ ಬಗ್ಗೆ ಆತನ ಜತಗೆ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ ನಿವಾಸಿ ದೀಪಾಂಕರ್ ಜು.2ರಂದು ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಈ ನಡುವೆ ಆ.21ರಂದು ಬೆಳಗ್ಗೆ 10 ಗಂಟೆಗೆ ಲೇಔಟ್ ಎಸ್ಟಿಪಿ ಟ್ಯಾಂಕ್ನಲ್ಲಿ ಕೊಳೆತ ಸ್ಥಿತಿಯಲ್ಲಿ ಮುಖೇಶ್ ಮಂಡಲ್ನ ಮೃತ ದೇಹ ಪತ್ತೆಯಾಗಿತ್ತು. ಮುಖೇಶ್ನನ್ನು ಲಕ್ಷ್ಮಣ್ ಮಂಡಲ್ ಕೊಲೆ ಮಾಡಿ…
Author: main-admin
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರೋಹನ್ ಕಾರ್ಪೋರೇಶನ್ ರೇಶನ್ ಸಂಸ್ಥೆಯ ವತಿಯಿಂದ ರೋಹನ್ ಸಿಟಿ ಕಛೇರಿಯಲ್ಲಿ ಒಣಂ ಹಬ್ಬವನ್ನು ಆಚರಿಸಲಾಯಿತು. ಸಿಬ್ಬಂದಿಗಳು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು, ಸಾಂಸ್ಕೃತಿಕ ವೈಭವವನ್ನು ಹಂಚಿಕೊಂಡರು.ಕಾರ್ಯಕ್ರಮವು ದೀಪಪ್ರಜ್ವಲನದೊಂದಿಗೆ ಆರಂಭಗೊಂಡಿತು. ಸಂಸ್ಥೆಯ ನಿರ್ದೇಶಕ ಶ್ರೀ ಡಿಯೋನ್ ಮೊಂತೆರೋ ಮತ್ತು ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ಅವರು ದೀಪ ಬೆಳಗುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು. ಓಣಂ ಹಬ್ಬದ ಹೂವಿನ ಅಲಂಕಾರ ( ಪೂಕಳಂ ), ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳ ಸಕ್ರಿಯ ಭಾಗವಹಿಸುವಿಕೆ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರಗು ತಂದಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಿರ್ದೇಶಕ ಶ್ರೀ ಡಿಯೋನ್ ಮೊಂತೆರೋ “ಒಣಂ ಹಬ್ಬವು ಏಕತೆ ಸಂಕೇತ. ಇಂತಹ ಆಚರಣೆಗಳು ನಮ್ಮ ಬಾಂಧವ್ಯವನ್ನು ಬಲಪಡಿಸುತ್ತವೆ” ಎಂದು ಹೇಳಿದರು.“ಎಲ್ಲರೂ ಒಗ್ಗಟ್ಟಿನಿಂದ ಒಂದು ಕುಟುಂಬದಂತೆ ಹಬ್ಬವನ್ನು ಆಚರಿಸುತ್ತಿರುವುದು ಸಂತೋಷಕರ. ಇಂತಹ ಸಂದರ್ಭಗಳು ಪರಸ್ಪರ ಗೌರವ ಮತ್ತು ಸ್ನೇಹವನ್ನು ಹೆಚ್ಚಿಸುತ್ತವೆ” ಎಂದು ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ಹೇಳಿದರು. ರೋಹನ್ ಕಾರ್ಪೋರೇಶನ್ ವತಿಯಿಂದ ಹಮ್ಮಿಕೊಂಡಿದ್ದ ಈ…
ಉಪ್ಪಿನಂಗಡಿ: ಹಟ್ಟಿಯಿಂದ ದನವನ್ನು ಕದ್ದುಕೊಂಡು ಹೋಗಿ ದನದ ಮಾಲಕನ ತೋಟದಲ್ಲೇ ಅದನ್ನು ಕೊಂದು ಅದರ ಕರುಳು ಸಹಿತ ಹೊಟ್ಟೆಯೊಳಗಿನ ತ್ಯಾಜ್ಯವನ್ನು ಅಲ್ಲೇ ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಸೆ.4ರಂದು ನಸುಕಿನ ವೇಳೆ ಪೆರ್ನೆಯ ಕಡಂಬು ನಿವಾಸಿ ದೇಜಪ್ಪ ಮೂಲ್ಯರ ಹಟ್ಟಿಯಿಂದ ದನವನ್ನು ಕದ್ದು, ದೇಜಪ್ಪ ಮೂಲ್ಯರ ಜಾಗದಲ್ಲೇ ಅದನ್ನು ಕೊಂದು ಅದರ ಹೊಟ್ಟೆಯೊಳಗಿನ ಕರುಳು ಸೇರಿದಂತೆ ತ್ಯಾಜ್ಯವನ್ನು ಹೊರತೆಗೆದು, ಅದನ್ನು ಅಲ್ಲೇ ಎಸೆದು ಹೋಗಿರುವುದಾಗಿ ದೂರಲಾಗಿತ್ತು. ದುಷ್ಕರ್ಮಿಗಳ ಇಂತಹ ಹೀನ ಕೃತ್ಯದ ವಿರುದ್ಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
ಉಡುಪಿ : ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಗೆ ಮತ್ತು ನ್ಯಾಯಾಲಯಕ್ಕೆ ನಕಲಿ ಇನ್ಸೂರೆನ್ಸ್ ಪಾಲಿಸಿ ಸೃಷ್ಟಿಸಿ ನೀಡಿ ವಂಚಿಸಿರುವ ಬಗ್ಗೆ ಬಸ್ರೂರು ಶ್ರೀ ಶಾರದಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಇದರ ಮಾಲಕರ ವಿರುದ್ಧ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಹುಣ್ಸೆಮಕ್ಕಿಯಲ್ಲಿ 25/11/2024 ರಂದು ಶಾಲಾ ವಾಹನ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆದು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಕೆ ಮಾಡಲಾಗಿತ್ತು. ಪ್ರಕರಣದ ವಿಚಾರಣೆ ಕುಂದಾಪುರದ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವಾಗ ಪ್ರಕರಣದಲ್ಲಿ ರಿಕ್ಷಾ ಚಾಲಕ ಉದಯ ವಿಮಾ ಪರಿಹಾರ ಕೋರಿ ಅರ್ಜಿ ಸಲ್ಲಿಸಿರುತ್ತಾರೆ. ಆಗ ವಿಮಾ ಕಂಪೆನಿಯವರು ಶಾಲಾ ವಾಹನದ ವಿಮಾ ಪಾಲಿಸಿಯನ್ನು ಪರಿಶೀಲಿಸಿದಾಗ ಪಾಲಿಸಿ ನಕಲಿ ಎಂಬುವುದಾಗಿ ಕಂಡುಬಂದಿರುತ್ತದೆ . ಆದ್ದರಿಂದ ಆರೋಪಿ ಶ್ರೀ ಶಾರದಾ ಇಂಗ್ಲಿಷ್ ಮೀಡಿಯಂ ಶಾಲೆಯ ಮಾಲಕರ ವಿರುದ್ಧ ನಕಲಿ ವಿಮಾ ಸೃಷ್ಟಿಸಿ ಠಾಣೆಗೆ ಮತ್ತು ಮಾನ್ಯ ನ್ಯಾಯಾಲಯಕ್ಕೆ ಹಾಜರು…
1998ರಲ್ಲಿ ಕಥೊಲಿಕ್ ಉದ್ಯಮಿಗಳು, ವೃತ್ತಿಪರರು ಹಾಗೂ ಕೃಷಿಕರು ಒಟ್ಟಾಗಿ ಸೇರಿ ಆರಂಭಿಸಿದ ರಚನಾ ಸಂಸ್ಥೆಯು ತನ್ನ ಮೂಲ ಆಶಯವಾದ ಕಥೊಲಿಕ್ ಯುವಜನರಿಗೆ ಉದ್ಯಮದಲ್ಲಿ ತೊಡಗಿಸಿಕೊಳ್ಳಲು ತರಬೇತಿ, ಬಂಡವಾಳ ಜೋಡಿಸುವಿಕೆ, ತಾಂತ್ರಿಕ ಸಹಕಾರ ನೀಡುವುದರ ಜೊತೆಗೆ ಸಂಸ್ಥೆಯ ಸದಸ್ಯರಲ್ಲಿ ಸಹಕಾರ ಹಾಗೂ ಸಂಬಂಧವನ್ನು ಬೆಳೆಸುವ ನಿಟ್ಟಿನಲ್ಲಿ ಶ್ರಮಿಸುತ್ತಾ ಬಂದಿದೆ.ಇದಕ್ಕೆ ಪೂರಕವಾಗಿ ರಚನಾ ಉದ್ಯಮ ತರಬೇತಿ ವಿಭಾಗವನ್ನು ಆರಂಭಿಸಿ ಕಳೆದ ಕೆಲವು ವರ್ಷಗಳಿಂದ ಹಲವು ಯುವ ಜನರಿಗೆ ತರಬೇತಿಯನ್ನು ನೀಡಲಾಗಿದೆ. ಕ್ರೈಸ್ತ ಕಥೊಲಿಕ್ ಸಮಾಜದ ಯಶಸ್ವಿ ಉದ್ಯಮಿಗಳು, ವೃತ್ತಿಪರರು, ಕೃಷಿಕರು, ಅನಿವಾಸಿ ಭಾರತೀಯರು ಹಾಗೂ ಸಾಧಕ ಮಹಿಳೆಯರನ್ನು ಗುರುತಿಸಿ ಪ್ರತಿಷ್ಠಿತ ರಚನಾ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.ಕಳೆದ ಬಾರಿಯಂತೆ ಈ ಬಾರಿಯೂ ಸುಮಾರು 25 ಜ್ಯೂರಿ ಸದಸ್ಯರನ್ನೊಳಗೊಂಡ ಸಮಿತಿಯು ಪರಿಶೀಲನೆ ನಡೆಸಿ ಈ ಕೆಳಗಿನ ವ್ಯಕ್ತಿಗಳನ್ನು 2025ನೇ ಸಾಲಿನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ:ರಚನಾ ಉದ್ಯಮಿ – ಶ್ರೀ ಆಸ್ಟಿನ್ ರೋಚ್, ಬೆಂಗಳೂರುರಚನಾ ವೃತ್ತಿಪರ – ಶ್ರೀ ಜಾನ್ ರಿಚರ್ಡ್ ಲೋಬೊ ಕೆ.ಎ.ಎಸ್, ಮಂಗಳೂರುರಚನಾ ಕೃಷಿಕ -…
ಉಡುಪಿ : ಆನ್ಲೈನ್ ಟ್ರೇಡಿಂಗ್ನಲ್ಲಿ ಲಾಭದ ಆಮಿಷವೊಡ್ಡಿ ಸುಮಾರು 44 ಲಕ್ಷ ರೂಪಾಯಿ ವಂಚಿಸಿರುವ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಭಂದಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಮೈಸೂರಿನ ಶೋಯಬ್ ಅಹಮದ್ (28) ಹಾಗೂ ಮುದ್ದಾಸಿರ್ ಅಹಮದ್ (40) ಎಂದು ಗುರುತಿಸಲಾಗಿದೆ. ಉಡುಪಿಯ ಶಿವಳ್ಳಿ ಗ್ರಾಮದ ತೀರ್ಥರಾಜ ಶೆಣೈ(51) ಎಂಬುವವರು ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತೀರ್ಥರಾಜ ಶೆಣೈ ನೀಡಿದ ದೂರಿನನ್ವಯ “Capital Gains Crew ಎಂಬ ಟೆಲಿಗ್ರಾಂ ಗ್ರೂಪ್ ಗೆ Adi Nihal ಎಂಬ ಅಪರಿಚಿತ ವ್ಯಕ್ತಿ ಸೇರ್ಪಡೆಗೊಳಿಸಿದ್ದಾನೆ. ಬಳಿಕ Fidility Institutional Partners F – 101 ಗ್ರೂಪ್ ಗೆ ಸೇರಿಸಿದ್ದು, ಈ ಗ್ರೂಪ್ನಲ್ಲಿ ಷೇರು ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ್ದಾರೆ. ಬಳಿಕ ತೀರ್ಥರಾಜ ಅವರು ತಮ್ಮ ಮತ್ತು ಅವರ ತಾಯಿಯ ಬ್ಯಾಂಕ್ ಖಾತೆಯಿಂದ 2024ರ ಡಿಸೆಂಬರ್ 19 ರಿಂದ 2025ರ ಜನವರಿ 7 ರವರೆಗೆ ಅಪರಿಚಿತರು…
ಉಳ್ಳಾಲ: ತಡರಾತ್ರಿ ಕೋಟೆಕಾರು ಬೀರಿ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿಯ ಕಣ್ಗಾವಲು ವ್ಯವಸ್ಥೆಯ ಎಚ್ಚರಿಕೆಯ ಮೇರೆಗೆ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿಯ ನಿವಾಸಿ ನಾಗಪ್ಪ ಕೇರಳಟ್ಟಿ (41) ಎಂದು ಗುರುತಿಸಲಾಗಿದೆ. ನಾಗಪ್ಪ (41) ಎಂಬಾತನನ್ನು ಮುಂಜಾನೆ 3 ಗಂಟೆ ಸುಮಾರಿಗೆ ಎಸ್ಬಿಐ ಎಟಿಎಂನಲ್ಲಿದ್ದ ಕ್ಯಾಶ್ ಬಾಕ್ಸ್ ಒಡೆಯಲು ಯತ್ನಿಸುತ್ತಿದ್ದಾಗ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಪೊಲೀಸರ ಪ್ರಕಾರ, ನಾಗಪ್ಪ ಬೆಳಗಿನ ಜಾವ 2:30 ರ ಸುಮಾರಿಗೆ ಎಟಿಎಂ ಒಳಗೆ ಪ್ರವೇಶಿಸಿ, ತಾನು ತಂದಿದ್ದ ಉಪಕರಣಗಳನ್ನು ಬಳಸಿ ಕ್ಯಾಶ್ ಬಾಕ್ಸ್ ಅನ್ನು ಹಾನಿಗೊಳಿಸಿದ್ದಾನೆ. ದೆಹಲಿಯಿಂದ ಹಿಡಿದು ವಿವಿಧ ಜಿಲ್ಲೆಗಳ ಎಟಿಎಂಗಳ ಮೇಲೆ ನಿಗಾ ಇಡುವ ದೆಹಲಿಯ ಕಣ್ಗಾವಲು ವ್ಯವಸ್ಥೆಯು ಈ ಕೃತ್ಯದ ಬಗ್ಗೆ ಎಚ್ಚರಿಕೆ ನೀಡಿದೆ. ಬಳಿಕ ಕಣ್ಗಾವಲು ಸಿಬ್ಬಂದಿ ರಂಜಿತ್ ಅವರು ಬೀರಿ ಎಟಿಎಂ ನೋಡಿಕೊಳ್ಳುವ ದೀಪಕ್ ಅಮಿನ್ ಅವರಿಗೆ ಮಾಹಿತಿ ನೀಡಿದ್ದು, ಅವರು ತಕ್ಷಣ 112 ಗೆ ಕರೆ ಮಾಡಿದ್ದಾರೆ.…
ಮಂಗಳೂರು: ಗಸ್ತು ನಿರತ ಕಂಕನಾಡಿ ನಗರ ಠಾಣೆ ಎಎಸ್ಸೈ ಅಶೋಕ್ ಕೆ. ಮತ್ತು ಸಿಬ್ಬಂದಿ ಸುರೇಂದ್ರ ಕುಮಾರ್ ಅವರಿಗೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಹಲಸೋಗೆ ಗ್ರಾಮದ ನಿವಾಸಿ ಸುಲೈಮಾನ್ (42) ಜೀವ ಬೆದರಿಕೆ ಹಾಕಿದ ಆರೋಪಿಯಾಗಿದ್ದು, ಈತನನ್ನು ಬಂಧಿಸಲಾಗಿದೆ. ಸೆ.2ರಂದು ರಾತ್ರಿ 12:45ಕ್ಕೆ ಅಶೋಕ್ ಅವರು ಸಿಬ್ಬಂದಿಯೊಂದಿಗೆ ರೌಂಡ್ಸ್ನಲ್ಲಿದ್ದಾಗ ನಾಗುರಿಯಲ್ಲಿ ಚಿಕ್ ಗ್ರಿಲ್ ಎಂಬ ಅಂಗಡಿ ಬಳಿ ಓಣಿಯಲ್ಲಿ ಐದಾರು ದ್ವಿಚಕ್ರ ವಾಹನಗಳ ಸಮೇತ ಏಳೆಂಟು ಮಂದಿಯನ್ನು ನಿಂತಿದ್ದರು. ತಕ್ಷಣ ಎಎಸ್ಸೈ ಯಾಕೆ ಇಲ್ಲಿ ನಿಂತಿದ್ದೀರಿ ಎಂದು ಪ್ರಶ್ನಿಸಿದಾಗ ಹಿಂಬದಿಯ ಅಡುಗೆ ಕೋಣೆಯಿಂದ ಏಕಾಏಕಿ ಬಂದ ಸುಲೈಮಾನ್ ಎಂಬಾತ ನಮ್ಮನ್ನು ಕೇಳಲು ನೀವು ಯಾರು? ಎಂದು ಪ್ರಶ್ನಿಸಿ ಅಶೋಕ್ ಅವರಿಗೆ ಹಲ್ಲೆಗೆ ಯತ್ನಿಸಿದ್ದಾನೆ. ಅಲ್ಲದೆ ಎಸ್ಸೈಯ ಮೊಬೈಲ್ಗೆ ಅಳವಡಿಸಿದ್ದ ಫಿಂಗರ್ ಪ್ರಿಂಟ್ ಸ್ಕ್ಯಾನರನ್ನು ಆರೋಪಿ ಹಿಡಿದು ಎಳೆದು ತುಂಡು ಮಾಡಿ ನೆಲಕ್ಕೆ ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ. ತಕ್ಷಣ ಪೊಲೀಸ್…
ಒಂದು ವರ್ಷದ ಹಿಂದೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾದ ನೇಹಾ ಹಿರೇಮಠ ಅವರ ಕಾಲೇಜು ಕ್ಯಾಂಪಸ್ ನಲ್ಲಿ ಹಾಡುಹಗಲೇ ನಡೆದ ಕೊಲೆ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಹಾಗೂ ರಾಜ್ಯಾದ್ಯಂತ ಕ್ಯಾಂಪಸ್ಗಳಲ್ಲಿ ಭಯದ ವಾತಾವರಣವನ್ನು ಹೋಗಲಾಡಿಸಲು ಸೂಕ್ತ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ನಗರದ ಜೋಡುಕಟ್ಟೆಯಿಂದ ಪ್ರಾರಂಭವಾಗಿ ಸರ್ವಿಸ್ ಬಸ್ ಸ್ಟ್ಯಾಂಡ್, ಕ್ಲಾಕ್ ಟವರ್ ವರೆಗೆ ನಡೆದ ಪ್ರತಿಭಟನಾ ಜಾತದ ವಿರುದ್ಧ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಬಿವಿಪಿಯ 15 ವಿದ್ಯಾರ್ಥಿ ನಾಯಕರ ಮೇಲೆ ಐಪಿಸಿ ಕಲಂ 143, 147, 341, 290, 149 ರಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಮೊದಲ ಹಂತದಲ್ಲಿ ಉಡುಪಿಯ ನ್ಯಾಯಾಲಯದಲ್ಲಿ ವಕೀಲರಾದ ಶ್ರೀನಿಧಿ ಹೆಗ್ಡೆ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಜಾಮೀನನ್ನು ಪಡೆಯಲು ಯಶಸ್ವಿಯಾದರೆ ನಂತರ ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ವಕೀಲರಾದ ಅರುಣ್ ಶ್ಯಾಮ್…
ಬೆಳ್ತಂಗಡಿ :ಅಕ್ರಮವಾಗಿ ಮರಳು ಸಾಗಾಟದ ಪ್ರಕರಣವೊಂದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿದ್ದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಬಂಧಿತ ಆರೋಪಿ ಧನಕೀರ್ತಿ ಎಂಬಾತನಾಗಿದ್ದಾನೆ. ಸೆ. 2ರಂದು ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಕೊಕ್ರಾಡಿ ಬಳಿ ನಾರಾವಿ- ವೇಣೂರು – ಸಾರ್ವಜನಿಕ ರಸ್ತೆಯಲ್ಲಿ ನಾರಾವಿ ಕಡೆಯಿಂದ ವೇಣೂರು ಕಡೆಗೆ ಬರುತ್ತಿದ್ದ 407 ಗೂಡ್ಸ್ ಮಿನಿ ಟಿಪ್ಪರ್ ನಂಬ್ರ KA 70.4468 ನೇದರಲ್ಲಿ ಮರಳು ಸಾಗಾಟ ಮಾಡುತ್ತಿರುವುದನ್ನು ಗಮನಿಸಿದ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಆರೋಪಿತ ಟಿಪ್ಪರ್ ಚಾಲಕನಲ್ಲಿ ಮರಳು ಸಾಗಾಟದ ಬಗ್ಗೆ ಯಾವುದೇ ದಾಖಲೆ/ಪರವಾನಿಗೆ ಇಲ್ಲದಿರುವುದು ಕಂಡುಬಂದಿದೆ ಅಲ್ಲದೇ ಸದ್ರಿ ಮರಳನ್ನು ಸುಲ್ಕೇರಿ ಗ್ರಾಮದ ಸುಲ್ಕೇರಿ ಎಂಬಲ್ಲಿ ಹರಿಯುವ ನದಿಯಿಂದ ತುಂಬಿಸಿ ಸಾಗಾಟ ಮಾಡುತ್ತಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿದ್ದ ಸುಮಾರು ಒಂದೂವರೆ ಯೂನಿಟ್ ಮರಳು ಇದ್ದು ಅದರ ಅಂದಾಜು ಮೌಲ್ಯ ರೂ 6,000/- ಗಳಾಗಿದ್ದು…









