ಬೆಳ್ತಂಗಡಿ :ಅಕ್ರಮವಾಗಿ ಮರಳು ಸಾಗಾಟದ ಪ್ರಕರಣವೊಂದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿದ್ದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಬಂಧಿತ ಆರೋಪಿ ಧನಕೀರ್ತಿ ಎಂಬಾತನಾಗಿದ್ದಾನೆ. ಸೆ. 2ರಂದು ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಕೊಕ್ರಾಡಿ ಬಳಿ ನಾರಾವಿ- ವೇಣೂರು – ಸಾರ್ವಜನಿಕ ರಸ್ತೆಯಲ್ಲಿ ನಾರಾವಿ ಕಡೆಯಿಂದ ವೇಣೂರು ಕಡೆಗೆ ಬರುತ್ತಿದ್ದ 407 ಗೂಡ್ಸ್ ಮಿನಿ ಟಿಪ್ಪರ್ ನಂಬ್ರ KA 70.4468 ನೇದರಲ್ಲಿ ಮರಳು ಸಾಗಾಟ ಮಾಡುತ್ತಿರುವುದನ್ನು ಗಮನಿಸಿದ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಆರೋಪಿತ ಟಿಪ್ಪರ್ ಚಾಲಕನಲ್ಲಿ ಮರಳು ಸಾಗಾಟದ ಬಗ್ಗೆ ಯಾವುದೇ ದಾಖಲೆ/ಪರವಾನಿಗೆ ಇಲ್ಲದಿರುವುದು ಕಂಡುಬಂದಿದೆ ಅಲ್ಲದೇ ಸದ್ರಿ ಮರಳನ್ನು ಸುಲ್ಕೇರಿ ಗ್ರಾಮದ ಸುಲ್ಕೇರಿ ಎಂಬಲ್ಲಿ ಹರಿಯುವ ನದಿಯಿಂದ ತುಂಬಿಸಿ ಸಾಗಾಟ ಮಾಡುತ್ತಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿದ್ದ ಸುಮಾರು ಒಂದೂವರೆ ಯೂನಿಟ್ ಮರಳು ಇದ್ದು ಅದರ ಅಂದಾಜು ಮೌಲ್ಯ ರೂ 6,000/- ಗಳಾಗಿದ್ದು…
Author: main-admin
ಮಂಗಳೂರು: ಅತ್ಯಾಚಾರ ಸಂತ್ರಸ್ಥೆಯ ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾಕ್ಟರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಬಿಸಿ ರೋಡ್ನ ವೈದ್ಯ ಡಾ| ಸೋಮೇಶ್ ಸೊಲೊಮನ್, ಮಂಗಳೂರಿನ ಪಿಜಿ ಮಾಲಕಿ ವಿಜಯಲಕ್ಷ್ಮಿ ಆಲಿಯಾಸ್ ವಿಜಯ ಮತ್ತು ಅತ್ಯಾಚಾರ ಆರೋಪಿ ನವನೀತ್ ನಾರಾಯಣ ಬಂಧಿತರು. ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಈ ವೇಳೆ ಅಂಗನವಾಡಿ ಕಾರ್ಯಕರ್ತೆಗೆ ಇದು ಇವರ ಮಗುವಲ್ಲ ಎಂದು ತಿಳಿದು ಬಂದಿದೆ. ಅವರದಲ್ಲದ ಮಗುವಿನ ಬಗ್ಗೆ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮಂಗಳೂರಿನ ಕೊಲಾಸೋ ಆಸ್ಪತ್ರೆಯಲ್ಲಿ ಅವಿವಾಹಿತ ಮಹಿಳೆಗೆ ಹೆರಿಗೆಯಾಗಿದ್ದು, ಹಣ ನೀಡಿ ಆಸ್ಪತ್ರೆಯ ಮೂಲಕ ಮಗುವನ್ನು ಪಡೆದುಕೊಂಡು ಬಂದಿರುವುದಾಗಿ ದಂಪತಿ ಅಂಗನವಾಡಿ ಕಾರ್ಯಕರ್ತೆಗೆ ಮಾಹಿತಿ ನೀಡಿದ್ದಾರೆ . ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆ ಶಿರ್ವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಶಿರ್ವಪೊಲೀಸರು ಪ್ರಭಾವತಿಯವರ ಮನೆಗೆ ಭೇಟಿ ನೀಡಿ ವಿಚಾರಿಸಿದಾಗ ಹೆಣ್ಣು ಮಗು ಆಗಸ್ಟ್ 3 ಮಂಗಳೂರಿನ ಕೊಲಾಸೋ ಆಸ್ಪತ್ರೆಯಲ್ಲಿ…
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಹನಿಟ್ರ್ಯಾಪ್ ಪ್ರಕರಣವೊಂದು ನಡೆದ ಬಗ್ಗೆ ವರದಿಯಾಗಿದ್ದು, ಹನಿಟ್ರ್ಯಾಪ್ ಜಾಲವನ್ನು ಬೇಧಿಸಿದ ಕುಂದಾಪುರ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧೀ ಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್(36), ಕುಂಭಾಶಿ ಮೂಡುಗೋಪಾಡಿ ಜನತಾ ಕಾಲೋನಿಯ ಅಬ್ದುಲ್ ಸತ್ತಾರ್(23), ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗೋಡಿಯ ಅಬ್ದುಲ್ ಅಝೀಝ್(26), ಕುಂದಾಪುರ ಎಂ.ಕೋಡಿಯ ಆಸ್ಮಾ(43) ಬಂಧಿತ ಆರೋಪಿಗಳು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಒಟ್ಟು 18 ಲಕ್ಷ ರೂ. ಮೌಲ್ಯದ ಎರಡು ಕಾರುಗಳನ್ನು ವಶಪಡಿಸಿಕೊಳ್ಳ ಲಾಗಿದೆ. ಆರೋಪಿಗಳನ್ನು ಕೋಟೇಶ್ವರ ಗ್ರಾಮದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ; ಶರನ್ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಈ ಪ್ರಕರಣದಲ್ಲಿ…
70 ಸಾವಿರ ರೂ.ಲಂಚ ಪಡೆಯುತ್ತಿರುವಾಗಲೇ ದೇವನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಲೋಕಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಅಂಬರೀಶ್ ಎಂಬುವರ 70 ಸಾವಿರ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆ ಬಿದ್ದಿದ್ದಾರೆ. ಪೋಕ್ಸೋ ಕೇಸ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಲಂಚ ಸ್ವೀಕರಿಸುತ್ತಿದ್ದ ಹಿನ್ನೆಲೆಯಲ್ಲಿ ನೊಂದ ಯುವತಿ ಕಡೆಯವರ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಿಎಸ್ ಐ ಜಗದೇವಿ. 75 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ದೇವನಹಳ್ಳಿ ಪಿಎಸ್ ಐ ಜಗದೇವಿ. ಈ ಹಿಂದೆ 5 ಸಾವಿರ ರೂ. ನೀಡಿದ್ದು, ಇಂದು 70 ಸಾವಿರ ರೂ. ನೀಡುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಎಸ್ ಐ ಜಗದೇವಿ ಪರ ಲಂಚ ಸ್ವೀಕರಿಸುತ್ತಿದ್ದ ಪಿಸಿ ಅಂಬರೀಶ್ ಲೋಕಾಯುಕ್ತ ಬಲೆ ಬಿದ್ದಿದ್ದಾರೆ. ಲೋಕಾಯುಕ್ತ ಬಲೆಗೆ ಬೀಳುತ್ತಿದ್ದಂತೆ ಪಿಎಸ್ ಐ ಜಗದೇವಿ, ಪಿಸಿ ಮಂಜುನಾಥ್ ಪರಾರಿಯಾಗಿದ್ದಾರೆ. ಪಿಸಿ ಅಂಬರೀಶ್ ನನ್ನು ವಶಕ್ಕೆ ಪಡೆದು ದೇವನಹಳ್ಳಿ ಠಾಣೆಯಲ್ಲಿ…
ಕಾಸರಗೋಡು: ಆಟೋರಿಕ್ಷಾದಲ್ಲಿ ಸಾಗಿಸುತಿದ್ದ 18.240 ಗ್ರಾಂ. ಎ ಡಿ. ಎಂ. ಎ ಮಾದಕ ವಸ್ತು ಸಹಿತ ಓರ್ವನನ್ನು ಕುಂಬಳೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಡಿಯಮ್ಮೆ ಪೂಕಟ್ಟೆ ನಿವಾಸಿ ಎಂ ಅಬ್ದುಲ್ ಅಜೀಜ್ (42) ಎಂದು ಗುರುತಿಸಲಾಗಿದೆ. ಸಾಗಾಟಕ್ಕೆ ಬಳಸಿದ ಆಟೋ ರಿಕ್ಷಾ ವಶಕ್ಕೆ ಪಡೆಯಲಾಗಿದೆ. ಮಂಗಳವಾರ ರಾತ್ರಿ ಕೊಡಿಯಮ್ಮೆಯಲ್ಲಿ ವಾಹನ ತಡೆದು ತಪಾಸಣೆ ನಡೆಸಿ ವಿಚಾರಣೆ ನಡೆಸುವಾಗ ಮಾದಕ ವಸ್ತು ಸಾಗಾಟ ಪತ್ತೆಯಗಿದೆ. ಪೊಲೀಸರನ್ನು ಕಂಡಾಗ ಆರೋಪಿ ರಿಕ್ಷಾ ಬಿಟ್ಟು ಪರಾರಿಯಾಗಲು ಯತ್ನಿಸಿದ್ದನು. ಇದರಿಂದ ಸಂಶಯಗೊಂಡ ಪೊಲೀಸರು ಆರೋಪಿಯನ್ನು ಬೆನ್ನಟ್ಟಿ ಹಿಡಿದು ವಿಚಾರಣೆ ನಡೆಸಿದಾಗ ಮಾದಕ ವಸ್ತು ಪತ್ತೆಯಾಗಿದೆ.
ಬಜ್ಪೆ: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು 4.5ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿರುವ ಪ್ರಕರಣದಲ್ಲಿ 5 ಮಂದಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಲೋಡಿಂಗ್ ಅನ್ ಲೋಡಿಂಗ್ ಮಾಡುವ ಸಾಟ್ಸ್ ನೌಕರರಾದ ನಿತಿನ್, ಮೂಡುಪೆರಾರದ ನಿವಾಸಿಗಳಾದ ಸದಾನಂದ, ರಾಜೇಶ್, ಬಜ್ಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಮತ್ತು ಚಿನ್ನಾಭರಣ ಪಡೆದುಕೊಂಡು ಚಿನ್ನದ ಗಟ್ಟಿಯಾಗಿಸಿದ್ದ ಬಜ್ಪೆ ಮೂಡು ಪೆರಾರ ನಿವಾಸಿ ರವಿರಾಜ್ ಎಂದು ತಿಳಿದು ಬಂದಿದೆ. ರಾಜೇಶ್ವರಿ ಪದ್ಮಶಾಲಿ ಅವರು ಆ.30ರಂದು ಬೆಂಗಳೂರಿನಿಂದ ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಈ ಸಂದರ್ಭ ಅವರ ಲಗೇಜ್ ಟ್ರೋಲಿ ಬ್ಯಾಗನ್ನು ತೆರೆದು 4.5ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು. ಈ ಕುರಿತು ಅವರು ಬಜ್ಪೆ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ದೂರು ದಾಖಲಿಸಿಕೊಂಡ ಬಜ್ಪೆ ಪೊಲೀಸರು ತನಿಖೆ ಆರಂಭಿಸಿ ವಿಮಾನ ನಿಲ್ದಾಣದ ಲೋಡ್ ಮತ್ತು ಅನ್ ಲೋಡ್…
ಬಾಡಿಗೆ ಮನೆಯನ್ನು.ಪರಭಾಷಿಗರಿಗೆ ಹಾಗೂ ವಿದೇಶಿಗರು ಮನೆಗಳನ್ನು ಬಾಡಿಗೆಗೆ ಪಡೆದು ವಾಸಿಸುತ್ತಾರೆ. ಯಾವುದೇ ಮಾಹಿತಿ ತಿಳಿಯದೆ ಮನೆ ಬಾಡಿಗೆಗೆ ಕೊಡುವುದ್ರಿಂದ ನಾನಾ ಅನಾಹುತ ಕೂಡ ಸಂಭವಿಸುತ್ತದೆ. ಹೀಗಾಗಿ ಪೊಲೀಸರು ಸಿಲಿಕಾನ್ ಸಿಟಿ ಮನೆ ಮಾಲೀಕರಿಗೆ ಗೈಡ್ ಲೈನ್ಸ್ ಹೊರಡಿಸಿದ್ದಾರೆ. ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆಗೆ ಕೊಡುವುದು ಸಿಕ್ಕಾಪಟ್ಟೆ ಡೇಂಜರ್ ಎನ್ನಲಾಗ್ತಿದೆ. ಕೆಲವರು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರ್ತಾರೆ. ಇಂಥವರನ್ನ ಗುರುತಿಸೋದು ಕಷ್ಟವಾಗಿದೆ. ಹೀಗಾಗಿ ವಿದೇಶಿ ಪ್ರಜೆಗಳು ವಾಸವಿರುವ ಮನೆ ಮಾಲೀಕರಿಗಾಗಿ ಮಾರ್ಗಸೂಚಿ ಹೊರಡಿಸಿದ್ದಾರೆ. ಮನೆ ಮಾಲೀಕರಿಗೆ 7 ಗೈಡ್ಲೈನ್ಸ್ 1. ಮನೆ ಮಾಲೀಕರು ಸಿ ಫಾರ್ಮ್ ಅನ್ನ ಎಫ್ಆರ್ ಆರ್ ಓ/ ಎಫ್ಆರ್ ಓಗೆ ಸಲ್ಲಿಸಬೇಕು. 2. ಬಾಡಿಗೆದಾರರ ಪಾಸ್ ಪೋರ್ಟ್ ಮತ್ತು ವೀಸಾ ಪ್ರತಿಗಳು ಕಡ್ಡಾಯವಾಗಿ ಸಂಗ್ರಹಿಸಬೇಕು. 3. ಬಾಡಿಗೆ ನೀಡುವ ಮೊದಲು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. 4. ಮಾನ್ಯ ವೀಸಾ/ಅನುಮತಿ ಇಲ್ಲದೆ ವಾಸಿಸಲು ಅವಕಾಶ ನೀಡಬಾರದು. 5. ನೊಂದಾಯಿತ ಬಾಡಿಗೆ ಒಪ್ಪಂದ ಮಾಡಬೇಕು. 6. ವಿದೇಶಿ ಬಾಡಿಗೆದಾರರ…
ಮಂಗಳೂರು : ನಗರದ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಸುನೀಲ್ ಎಂದು ತಿಳಿದು ಬಂದಿದೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ಸಹಿತ ಸೊತ್ತುಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದಿನಾಂಕ: 01-09-2025 ರಂದು ಸಂಜೆ:4-00 ಗಂಟೆಗೆ ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣೆಯ ಉಪ ನಿರೀಕ್ಷಕ ವಿನಾಯಕ ರವರಿಗೆ ಬಾತ್ಮೀದಾರರೊಬ್ಬರಿಂದ ಮಂಗಳೂರು ನಗರದ ಸುಲ್ತಾನ್ ಭತ್ತೇರಿ ಎಂಬಲ್ಲಿ ಒಬ್ಬ ವ್ಯಕ್ತಿಯು KA-19 HJ1184 ನೇ ಬಿಳಿ ಬಣ್ಣದ ಸ್ಕೂಟರ್ ನಲ್ಲಿ ಅಕ್ರಮವಾಗಿ ಗಾಂಜಾ ಎಂಬ ಮಾದಕ ವಸ್ತುವನ್ನು ಇಟ್ಟು ಕೊಂಡು ಮಾರಾಟ ಮಾಡಲು ಬರುತ್ತಿದ್ದಾನೆಂದು ಮಾಹಿತಿ ಬಂದಂತೆ ಸಂಜೆ 7-15 ಗಂಟೆಗೆ ದಾಳಿ ನಡೆಸಿದಾಗ ಆರೋಪಿ ಸುನೀಲ್ ನು ಎನ್.ಡಿ.ಪಿ.ಎಸ್ ಕಾಯ್ದೆಯನ್ನು ಉಲ್ಲಂಘಿಸಿ ಅಕ್ರಮ ಲಾಭ ಗಳಿಸಲು ಯಾವುದೇ ಪರವಾನಿಗೆ ಇಲ್ಲದೇ ಆರೋಗ್ಯಕ್ಕೆ ಹಾನಿಕಾರಕವಾದ ಒಟ್ಟು 1 ಕೆಜಿ 394 ಗ್ರಾಂ ತೂಕದ ವಾಣಿಜ್ಯ ಪ್ರಮಾಣದ ನಿಷೇದಿತ ಗಾಂಜಾ ಎಂಬ ಮಾಧಕ ವಸ್ತುವನ್ನು…
ಮಂಗಳೂರು: ನಗರದ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ (18) ಎಂಬವರು ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದು, ಸೆಪ್ಟೆಂಬರ್ 1 ರಂದು ಕಾಲೇಜು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗುವುದಾಗಿ ತಾಯಿಯಲ್ಲಿ ತಿಳಿಸಿ ಹೋದವರು ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ:- ಎತ್ತರ ಸುಮಾರು 5.3 ಅಡಿ, ಸಾಧಾರಣ ಮೈಕಟ್ಟು, ಕೋಲು ಮುಖ, ಗೋಧಿ ಮೈಬಣ್ಣ, ಕಪ್ಪು ಕೂದಲು ಹೊಂದಿರುತ್ತಾರೆ. ಕನ್ನಡ, ತುಳು, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ಬ್ಲೂ ಬಣ್ಣದ ಅರ್ಧ ತೋಳಿನ ಕಾಲೇಜು ಸಮವಸ್ತ್ರ ಶರ್ಟ್ ಹಾಗೂ ಕಪ್ಪು ಬಣ್ಣದ ಕಾಲೇಜು ಸಮವಸ್ತ್ರ ಪ್ಯಾಂಟ್ ಧರಿಸಿದ್ದರು. ಕಾಣೆಯಾದವರ ಗುರುತು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಲ್ಕಿಯ ಕೊಲ್ನಾಡು ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿಯಿಂದ ಮಂಗಳೂರು ಕಡೆಗೆ ಹಾದು ಹೋಗುವ ರಸ್ತೆಯ ಬಳಿ ಪೊಲೀಸರು ವ್ಯಕ್ತಿಯೋರ್ವನಿಂದ ಸುಮಾರು 1 ಕೆ.ಜಿ 160 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರು ಕೋಡಿಕಲ್ ನಿವಾಸಿ ಧನೇಶ್ ಎಸ್. ಕುಮಾರ್ (35) ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಮುಲ್ಕಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ಬಿ.ಎಸ್ ರವರು ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿದ್ದು, ಮೊಬೈಲ್ ಫೋನ್ ಹಾಗೂ ಗಾಂಜಾ ತೂಕ ಮಾಡುವ ಯಂತ್ರ ಮತ್ತು ಇತರೆ ವಸ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.









