ಬೈಂದೂರು: ಭೀಕರ ರಸ್ತೆ ಅಪಘಾತದಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡ ಮಹಿಳೆಯ ಮೈಮೇಲಿದ್ದ ಬಂಗಾರದ ಒಡವೆಗಳನ್ನು ಖದೀಮರು ಲಪಟಾಯಿಸಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಮೇ 17ರಂದು ಕೊಲ್ಲೂರಿನ ದಳಿ ಎಂಬ ಸ್ಥಳದಲ್ಲಿ ಕೇರಳ ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಜೀಪಿಗೆ ಮೀನು ಸಾಗಾಟದ ಇನ್ಸುಲೇಟರ್ ವಾಹನವೊಂದು ಭೀಕರವಾಗಿ ಡಿಕ್ಕಿ ಹೊಡೆದಿತ್ತು. ಈ ಘೋರ ದುರಂತದಲ್ಲಿ ಜ್ಯೋತಿ ಹಾಗೂ ಅರಿಯಾ ಅನೂಫ್ ಎಂಬುವವರು ಮೃತಪಟ್ಟು, ಇತರ ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತ ಸಂಭವಿಸಿದ ತಕ್ಷಣ ಸ್ಥಳದಲ್ಲಿ ಸೃಷ್ಟಿಯಾಗಿದ್ದ ಗಂಭೀರ ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡ ಕಳ್ಳರು, ಮೃತ ಮಹಿಳೆ ಜ್ಯೋತಿ ಅವರ ಮೈಮೇಲಿದ್ದ ಸುಮಾರು 18 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಕದ್ದೊಯ್ದಿದ್ದಾರೆ ಎಂದು ಶಂಕಿಸಲಾಗಿದೆ.
Author: main-admin
ಕಾರವಾರ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 11 ಜನರ ಪೈಕಿ ಒಂದೇ ಕುಟುಂಬದ 8 ಮಂದಿ ಜಲಸಮಾಧಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ ನಡೆದಿದೆ.ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದುಬಂದಿದೆ. ಒಟ್ಟು 11 ಮಂದಿ ಕಪ್ಪೆಚಿಪ್ಪು ತೆಗೆಲು ಹೋಗಿದ್ದರು. ಈ ಪೈಕಿ ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿದ್ದಾರೆ. ಇನ್ನುಳಿದವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.ಇನ್ನೂ ಮೃತಪಟ್ಟ 8 ಮಂದಿಯ ಮೃತದೇಹಗಳನ್ನ ಭಟ್ಕಳ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಘಟನಾ ಸ್ಥಳಕ್ಕೆ ಮಾಜಿ ಶಾಸಕ ಸುನೀಲ್ ನಾಯ್ಕ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಕೃಷ್ಣಮೂರ್ತಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಉಡುಪಿ: ಮೂಡನಿಡಂಬೂರು ಗ್ರಾಮದ ಕರಾವಳಿ ಬೈಪಾಸ್ ಬಳಿ ಬೇಕರಿ ಮಾಲೀಕರೊಬ್ಬರ ಮೇಲೆ ಹಲ್ಲೆ ನಡೆದಿದ್ದು, ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿದಿಯೂರು ಗ್ರಾಮದ ಮುರಳಿಧರ್ (35) ಎಂಬುವರು ನೀಡಿದ ದೂರಿನ ಪ್ರಕಾರ, ಅವರು ಕಳೆದ 20 ವರ್ಷಗಳಿಂದ ಕರಾವಳಿ ಬೈಪಾಸ್ ಬಳಿಯ ಸಾಗರ್ ಗಂಗಾ ಕಟ್ಟಡದ ನೆಲಮಹಡಿಯಲ್ಲಿ ‘ಪೂಜಾ ಬೇಕರಿ’ ನಡೆಸುತ್ತಿದ್ದಾರೆ. ಇವರ ಅಂಗಡಿಯ ಪಕ್ಕದಲ್ಲೇ ಅಶೋಕ್ ಎಂಬಾತ ಕಳೆದ ಒಂದು ವರ್ಷದಿಂದ ‘ಕೃಷ್ಣ ಬೇಕರಿ’ ನಡೆಸುತ್ತಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ವಿವರಮೇ 23ರಂದು ಮಧ್ಯಾಹ್ನ ಸುಮಾರು 12:30ರ ವೇಳೆಗೆ ಮುರಳಿಧರ್ ಅವರು ತಮ್ಮ ಬೇಕರಿಯಲ್ಲಿ ಗ್ರಾಹಕರಿಗೆ ವ್ಯಾಪಾರ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಆರೋಪಿ ಅಶೋಕ್ ಇದ್ದಕ್ಕಿದ್ದಂತೆ ಅಂಗಡಿಯ ಬಳಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅಕ್ರಮವಾಗಿ ಒಳಗೆ ನುಗ್ಗಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಮುರಳಿಧರ್ ಅವರ ಕಾಲರ್ ಪಟ್ಟಿ ಹಿಡಿದು, ಕೆನ್ನೆಗೆ ಹಾಗೂ ಕುತ್ತಿಗೆಗೆ ಹೊಡೆದು, ಕಾಲಿನಿಂದ ಒದ್ದು ನೆಲಕ್ಕೆ ತಳ್ಳಿದ್ದಾನೆ ಎಂದು…
ಹೆಬ್ರಿ: ಕರಾವಳಿ ಮತ್ತು ಮಲೆನಾಡು ಭಾಗವನ್ನು ಸಂಪರ್ಕಿಸುವ ಆಗುಂಬೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯ ಎರಡನೇ ತಿರುವಿನ ಬಳಿ ಶನಿವಾರ ಸಂಜೆ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.ಈ ಘಟನೆಯಿಂದಾಗಿ ಈಗಾಗಲೇ ಟ್ರಾಫಿಕ್ ಸಮಸ್ಯೆಯಿಂದ ತತ್ತರಿಸಿದ್ದ ಘಾಟಿ ರಸ್ತೆಯಲ್ಲಿ ವಾಹನ ದಟ್ಟಣೆ ಮತ್ತಷ್ಟು ತೀವ್ರಗೊಂಡಿತು. ಇತ್ತೀಚಿನ ದಿನಗಳಲ್ಲಿ ಈ ಭಾಗಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ವಾಹನಗಳ ದಟ್ಟಣೆಯಿಂದಾಗಿ ಪ್ರತಿದಿನ ಇಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.ಇದರ ಬೆನ್ನಲ್ಲೇ, ಘಾಟಿಯ ವಿವಿಧ ತಿರುವುಗಳಲ್ಲಿ ಹಲವು ಅಪಾಯಕಾರಿ ಮರಗಳು ರಸ್ತೆಯ ಕಡೆಗೆ ವಾಲಿ ನಿಂತಿರುವುದು ವಾಹನ ಸವಾರರು ಮತ್ತು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮುಂಬರುವ ದಿನಗಳಲ್ಲಿ ಭಾರಿ ಗಾಳಿ-ಮಳೆಗೆ ಈ ಮರಗಳು ರಸ್ತೆಗೆ ಉರುಳುವ ಸಾಧ್ಯತೆ ಹೆಚ್ಚಾಗಿದೆ. ಇದಲ್ಲದೆ, ಘಾಟಿ ರಸ್ತೆಯುದ್ದಕ್ಕೂ ಬಿದ್ದಿರುವ ತಡೆಗೋಡೆಗಳ ದುರಸ್ತಿ ಕಾರ್ಯವೂ ಇನ್ನೂ ನಡೆದಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮುಂಗಾರು ಮಳೆ…
ಬೆಂಗಳೂರು: ತಂದೆ-ತಾಯಿಗೆ ಮರ್ಯಾದೆ ಕೊಡುವುದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್ ಕಾನ್ಸ್ಟೇಬಲ್ ಪತ್ನಿ (wife) ಪೊಲೀಸ್ ಕ್ವಾಟ್ರಸ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಹೆಚ್ಎಎಲ್ ಪೊಲೀಸ್ ಠಾಣೆ ಕಾನ್ಸ್ಟೇಬಲ್ ರಾಜೇಶ್ ಆರಾಧ್ಯ ಪತ್ನಿ ಲಕ್ಷ್ಮೀಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ನಡೆದಿದ್ದೇನು?ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್ ಆರಾಧ್ಯ ಮತ್ತು ಲಕ್ಷ್ಮೀಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ 8 ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾಟ್ರಸ್ನಲ್ಲಿ ಈ ಕುಟುಂಬ ವಾಸವಾಗಿತ್ತು. ನಿನ್ನೆ (ಮೇ 22) ಬೆಳಿಗ್ಗೆ ದಂಪತಿ ನಡುವೆ ಕೌಟುಂಬಿಕ ವಿಷಯಕ್ಕೆ ದೊಡ್ಡ ಜಗಳ ಉಂಟಾಗಿದೆ. “ನನ್ನ ತಂದೆ-ತಾಯಿಗೆ ನೀನು ಸರಿಯಾಗಿ ಮರ್ಯಾದೆ ಕೊಡುವುದಿಲ್ಲ” ಎಂದು ಪತಿ ರಾಜೇಶ್ ಪತ್ನಿಗೆ ಬೈದಿದ್ದರು. ಇದೇ ಕಾರಣಕ್ಕೆ ತೀವ್ರ ಬೇಸರಗೊಂಡಿದ್ದ ಲಕ್ಷ್ಮೀಪ್ರಿಯಾ, ನಿನ್ನೆ ರಾತ್ರಿ ರಾಜೇಶ್ ನೈಟ್ ಡ್ಯೂಟಿಗೆ ತೆರಳಿದ್ದಾಗ ಇತ್ತ ಕ್ವಾಟ್ರಸ್ನಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ.…
ಉಪ್ಪಿನಂಗಡಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು ೭ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.ಉಪ್ಪಿನಂಗಡಿ ಠಾಣಾ ಅಕ್ರ:158/2015 ಕಲಂ: 457, 380 ಐಪಿಸಿ ಪ್ರಕರಣದ ಆರೋಪಿಯಾಗಿರುವ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ ಯಾನೆ ಬೋಜ ಅಕ್ರ ಬಂಧಿತ ಆರೋಪಿ.ಪೊಲೀಸರು ಆರೋಪಿಯನ್ನು ಮಂಗಳೂರಿನ ಪಣಂಬೂರಿನಲ್ಲಿ ದಸ್ತಗಿರಿ ಮಾಡಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸೈ ರವರಾದ ಕೌಶೀಕ್ ಬಿಸಿ, ಸಿಬ್ಬಂದಿಯವರಾದ ಹೆಡ್ ಕಾನ್ಸ್ಟೇಬಲ್ ಶಿವರಾಮ್ ರೈ, ಪೊಲೀಸ್ ಕಾನ್ಸ್ಟೇಬಲ್ ಮಹದೇವರವರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.ಆರೊಪಿಯ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿರುತ್ತದೆ.
ಮಣಿಪಾಲ: ಅನುಮಾನಾಸ್ಪದವಾಗಿ ನಿಂತಿದ್ದ ದಂಪತಿಯನ್ನು ಇಂದ್ರಾಳಿ ರೈಲ್ವೆ ಸ್ಟೇಷನ್ ಬಳಿ ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ರಮೇಶ ಬಂಡಿ ವಡ್ಡರ(45) ಹಾಗೂ ಆತನ ಪತ್ನಿ ಸುಧಾ(30) ಬಂಧಿತ ಆರೋಪಿಗಳು.ರಮೇಶ್ ಕೈಯಲ್ಲಿ ಎರಡು ಮೊಬೈಲ್ ಇದ್ದು ಅದರಲ್ಲಿ ಒಂದು ಸಿಮ್ ಹಾಗೂ ಸುಧಾ ಕೈಯಲ್ಲಿ ಒಂದು ಮೊಬೈಲ್ ಇತ್ತು. ಈ ಬಗ್ಗೆ ಸಮರ್ಪಕ ಉತ್ತರ ನೀಡದೆ ಇರುವುದರಿಂದ ಪೊಲೀಸರು ಅನುಮಾನ ಗೊಂಡು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಮುಂಗಾರು ಮಳೆಯ ಸಂದರ್ಭ ಗುಡ್ಡಕುಸಿತ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಪ್ರಾಣ ಹಾನಿ ತಪ್ಪಿಸಲು ಜೂ. 1ರಿಂದ ಸೆಪ್ಟಂಬರ್ 30ರವರೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ, ಗುಡ್ಡ ಹಾಗೂ ಮಣ್ಣು ಅಗೆಯುವುದನ್ನು ನಿಷೇಧಿಸಲಾಗಿದೆ. ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್ ಅವರು ಈ ಬಗ್ಗೆ ಪ್ರಕಟನೆಯಲ್ಲಿ ಸೂಚನೆ ನೀಡಿದ್ದು, ಇಂತಹ ಯಾವುದೇ ರೀತಿಯ ಅಗೆತದ ಕಾಮಗಾರಿ ನಡೆಸದಂತೆ ಹಾಗೂ ಈ ಅವಧಿಯಲ್ಲಿ ಮಣ್ಣು ಸಾಗಾಟ ಮಾಡುವುದನ್ನು ಸಂಪೂರ್ಣ ವಾಗಿ ನಿಷೇಧಿಸಿರುವುದಾಗಿ ತಿಳಿಸಿದ್ದಾರೆ.ಅಧಿಕೃತ ಅನುಮತಿ ಪಡೆದ ನಂತರ ಈಗಾಗಲೇ ಪ್ರಾರಂಭವಾಗಿರುವ ನಿರ್ಮಾಣ ಯೋಜನೆಗಳು ಸಾಕಷ್ಟು ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡರೆ ಮುಂದುವರಿಯಬಹುದು ಎಂದು ನಿಗಮ ಸ್ಪಷ್ಟಪಡಿಸಿದೆ. ಪಕ್ಕದ ಆಸ್ತಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಮತ್ತು ನಿರ್ಮಾಣ ಸ್ಥಳಗಳಲ್ಲಿ ಸರಿಯಾದ ಬ್ಯಾಕ್ಫಿಲ್ಲಿಂಗ್ ಕೆಲಸವನ್ನು ಕೈಗೊಳ್ಳಲು ಬಿಲ್ಡರ್ಗಳು ಮತ್ತು ಆಸ್ತಿ ಮಾಲೀಕರಿಗೆ ಸೂಚನೆ ನೀಡಲಾಗಿದೆ.ಯಾವುದೇ ಅಪಘಾತ ಅಥವಾ ವಿಪತ್ತು ಸಂಭವಿಸಿದಲ್ಲಿ, ಆಸ್ತಿ ಮಾಲೀಕರು ಮತ್ತು ಸಂಬಂಧಪಟ್ಟ ಎಂಜಿನಿಯರ್ ನೇರ ಹೊಣೆಗಾರರಾಗಿರುತ್ತಾರೆ ಎಂದು ಎಂಸಿಸಿ ಮತ್ತಷ್ಟು ಎಚ್ಚರಿಸಿದೆ.…
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಶನಿವಾರದಂದು ಮತ್ತೊಮ್ಮೆ ಹೆಚ್ಚಿಸಲಾಗಿದ್ದು, ಕಳೆದ 10 ದಿನಗಳಿಗಿಂತಲೂ ಕಡಿಮೆ ಅವಧಿಯಲ್ಲಿ ಇದು ಮೂರನೇ ದರ ಏರಿಕೆಯಾಗಿದೆ. ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಸಂಘರ್ಷಕ್ಕೆ ಸಂಬಂಧಿಸಿದಂತೆ ಹೆಚ್ಚುತ್ತಿರುವ ಇಂಧನ ವೆಚ್ಚದ ಹೊರೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಗ್ರಾಹಕರ ಮೇಲೆ ವರ್ಗಾಯಿಸುವುದನ್ನು ಮುಂದುವರಿಸಿರುವುದು ಇದಕ್ಕೆ ಕಾರಣವಾಗಿದೆ. ಪಿಟಿಐ (PTI) ವರದಿಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 87 ಪೈಸೆ ಏರಿಕೆಯಾಗಿದ್ದು, 98.64 ರೂಪಾಯಿಯಿಂದ 99.51 ರೂಪಾಯಿಗೆ ತಲುಪಿದೆ. ಇತ್ತ ಡೀಸೆಲ್ ದರವು ಲೀಟರ್ಗೆ 91 ಪೈಸೆ ಹೆಚ್ಚಳವಾಗಿದ್ದು, 91.58 ರೂಪಾಯಿಯಿಂದ 92.49 ರೂಪಾಯಿಗೆ ಏರಿಕೆಯಾಗಿದೆ. ದೆಹಲಿಯ ಇಂಧನ ವಿತರಕರನ್ನು ಉಲ್ಲೇಖಿಸಿ ರಾಯಿಟರ್ಸ್ (Reuters) ವರದಿಯು ಸಹ ಈ ಬೆಳವಣಿಗೆಯನ್ನು ಖಚಿತಪಡಿಸಿದೆ.ಈ ಇತ್ತೀಚಿನ ದರ ಪರಿಷ್ಕರಣೆಯು ಮೇ 15 ರಂದು ನಡೆದ ಪ್ರತಿ ಲೀಟರ್ಗೆ 3 ರೂಪಾಯಿ ಹೆಚ್ಚಳ ಮತ್ತು ಮೇ 19 ರಂದು ನಡೆದ ಮತ್ತೊಂದು 90 ಪೈಸೆ ಏರಿಕೆಯ ಬೆನ್ನಲ್ಲೇ ಬಂದಿದೆ.…
ಉಡುಪಿ : ಮಲ್ಪೆ ಸಮೀಪ ಕೊಡವೂರಿನ ಗರಡಿಮಜಲು ಎಂಬಲ್ಲಿ ಬಾವಿ ತೋಡುವ ಕೆಲಸದ ವೇಳೆ ಒಂದು ಭಾಗ ಕುಸಿದು ಕೊಪ್ಪಳದ 25 ವರ್ಷದ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ರಮೇಶ್ (25) ಎಂದು ಗುರುತಿಸಲಾಗಿದ್ದು, ಇವರು ಕಾರ್ಕಳದ ಪ್ರಭಾತ್ ಶೆಟ್ಟಿ ಎಂಬವರ ಗುತ್ತಿಗೆಯಡಿ ಬಾವಿ ತೋಡುವ ಕೆಲಸಲ್ಲೆ ಇತರ ಐದು ಮಂದಿಯೊಂದಿಗೆ ಕಾರ್ಕಳದಿಂದ ಬಂದಿದ್ದರು. ಬಾವಿ ತೋಡಿ ಕಾರ್ಮಿಕರು ಮೇಲೆ ಬರುವಾಗ ಕುಸಿತ ಸಂಭವಿಸಿದೆ. ಉಳಿದವರು ಅದಾಗಲೇ ಮೇಲೆ ಬಂದಾಗಿತ್ತು. ಹೀಗಾಗಿ ಅವರ ಪ್ರಾಣ ಉಳಿದಿದೆ. ರಮೇಶ್ ಮೇಲೆ ಬರುವಷ್ಟರಲ್ಲಿ ಕುಸಿತ ಉಂಟಾಗಿ ಅವರು ಭಾರಿ ಮಣ್ಣಿನ ರಾಶಿಯಡಿ ಸಿಲುಕಿ ಮೃತಪಟ್ಟಿದ್ದಾರೆ. ಅವಘಡದ ಬಗ್ಗೆ ಮಾಹಿತಿ ಬಂದ ಕೂಡಲೇ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ಪೊಲೀಸರೊಂದಿಗೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಕುಸಿದ ಮಣ್ಣಿನ ಅಡಿಯಿಂದ ರಕ್ಷಣಾ ತಂಡಗಳು ಕಾರ್ಮಿಕನ ಮೃತದೇಹವನ್ನು ಹೊರತೆಗೆದಿವೆ. ಉಡುಪಿ ಶಾಸಕ ಯಶಪಾಲ್ ಸುವರ್ಣ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.…










