ಬೆಂಗಳೂರು : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ರಾಜ್ಯದ ಹಲವೆಡೆ ಆಟೋಗಳಿಗೆ ಗ್ಯಾಸ್ ಪೂರೈಕೆಯಲ್ಲಿ ಅಭಾವ ಉಂಟಾಗಿದ್ದು, ಈ ಹಿನ್ನೆಲೆ ಚಾಲಕರು ಪರದಾಟ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಕೇಂದ್ರ ಸರ್ಕಾರಕ್ಕೆ ನಾವು ಕೂಡ ಬೇಡಿಕೆ ಇಟ್ಟಿದ್ದೇವೆ. ಕಾಳ ಸಂತೆಯಲ್ಲಿ ಸಿಲಿಂಡರ್ ಏನಾದರು ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ವಿಚಾರವಾಗಿ ಮಾತನಾಡಿದ ಅವರು ಯುದ್ಧದಿಂದ ತೊಂದರೆ ಆಗುತ್ತಿದೆ ಅನ್ನುವುದು ಎಲ್ಲರಿಗೂ ಗೊತ್ತು. ಆದರೆ ನಮಗೆ ಕೊಡಬೇಕಾಗಿರುವುದನ್ನು ಕೊಡಬೇಕು ಅಲ್ವಾ? ಎಲ್ಲಾ ರಾಜ್ಯಗಳಿಗೆ ಕೊಟ್ಟಂತೆ ನಮಗೂ ಪೂರೈಕೆ ಮಾಡಬೇಕು. ನಮಗೂ ಸಿಲಿಂಡರ್ ಹಾಗು ತೈಲ ಬೇಕು. ಆದರೆ ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
Author: main-admin
ಉಡುಪಿ ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ ಮೂವರನ್ನು ಬಂಧಿಸಿದ್ದಾರೆ. ಮುಸ್ತಾಕ್ ಹುಸೇನ್ ಸಾಬ್ ನದಾಫ್ (29), ಸಲೀಂ ಹುಸೇನ್ ಸಾಬ್ ನದಾಫ್ (33) ಹಾಗೂ ನದೀಂ ಅಬ್ದುಲ್ ಖಾದರ್ (34) ಬಂಧಿತರು. ಏಪ್ರಿಲ್ 5ರಂದು ಮುಂಜಾನೆ ಸುಮಾರು 5 ಗಂಟೆಗೆ ಪೊಲೀಸರು ಹೊಸಂಗಡಿ ಚೆಕ್ಪೋಸ್ಟ್ನಲ್ಲಿ ವಾಹನ ತಪಾಸಣೆ ನಡೆಸುವಾಗ, ಹುಲಿಕಲ್ ಘಾಟಿ ದಿಕ್ಕಿನಿಂದ ಬರುತ್ತಿದ್ದ ಟಾಟಾ ಇಂಟ್ರಾ ವಾಹನವನ್ನು ತಡೆದು ಪರಿಶೀಲಿಸಿದಾಗ ಎರಡು ಎತ್ತುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಿಸಲಾಗುತ್ತಿರುವುದು ಬೆಳಕಿಗೆ ಬಂದಿದೆ. ಚಾಲಕರನ್ನು ವಿಚಾರಿಸಿದಾಗ, ಜಾನುವಾರುಗಳನ್ನು ವಧೆಗಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ದೊರಕಿದೆ. ಜಾನುವಾರುಗಳ ಅಂದಾಜು ಮೌಲ್ಯ ರೂ.1 ಲಕ್ಷವಾಗಿದ್ದು, ವಾಹನದ ಮೌಲ್ಯ ರೂ.4 ಲಕ್ಷ ಎಂದು ಅಂದಾಜಿಸಲಾಗಿದೆ. ಈ ವೇಳೆ ಅದೇ ದಿಕ್ಕಿನಿಂದ ಟೊಯೋಟಾ ಇಟಿಯೊಸ್ ಕಾರು ಅಕ್ರಮ ಸಾಗಾಟಕ್ಕೆ ಬೆಂಗಾವಲಾಗಿ ಬಂದಿರುವ ಶಂಕೆ ವ್ಯಕ್ತವಾಗಿದ್ದು, ಕಾರನ್ನು ತಡೆದು ನಿಲ್ಲಿಸಿದಾಗ, ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಓಡಿ ಪರಾರಿಯಾಗಿದ್ದು,…
ಮಂಗಳೂರು: ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ, ಪಿ ಎ ಪ್ರಥಮ ದರ್ಜೆ ಕಾಲೇಜು ನಡುಪದವು ಇವರ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್, ಮೊಂಟೆಪದವಿನಲ್ಲಿ “ನನ್ನ ಭಾರತಕ್ಕಾಗಿ ಯುವ ಜನತೆ ಡಿಜಿಟಲ್ ಸಾಕ್ಷರತೆಗಾಗಿ ಯುವ ಜನತೆ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ನಡೆಯಲಿರುವ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ 2025-26ಕ್ಕೆ ಎಪ್ರಿಲ್ 4, 2026ರಂದು ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಡಾ. ಶೇಷಪ್ಪ ಕೆ. ಅಮೀನ್ ಕಾರ್ಯಕ್ರಮ ಸಂಯೋಜನಾಧಿಕಾರಿ, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ, ಉದ್ಘಾಟಿಸಿ ಶುಭಹಾರೈಸಿದರು. ಪಿ ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ ಹಾಸಿಂ ಅಧ್ಯಕ್ಷತೆ ವಹಿಸಿದ್ದರು. ಡಾ. ಇಕ್ಬಾಲ್, ನಿರ್ದೇಶಕರು, ದೈಹಿಕ ಶಿಕ್ಷಣ ವಿಭಾಗ, ಪಿ. ಎ. ಕಾಲೇಜ್ ಆಫ್ ಇಂಜಿನಿಯರಿಂಗ್, ಶ್ರೀ ಸತ್ಯನಾರಾಯಣ ಭಟ್ ಎಡಂಬಳೆ, ಪ್ರಗತಿಪರ ಕೃಷಿಕರು, ಮೊಂಟೆಪದವು, ಶ್ರೀಮತಿ ಪ್ರಮೀಳಾ ಕೆ. ಬಿ., ಮುಖ್ಯೋಪಾಧ್ಯಾಯರು ಕರ್ನಾಟಕ ಪಬ್ಲಿಕ್ ಸ್ಕೂಲ್, ಮೊಂಟೆಪದವು, ಜ। ಮಹಮ್ಮದ್ ಹನೀಫ್ ಚಂದಹಿತ್ಲು, ಅಧ್ಯಕ್ಷರು, ಶಾಲಾ…
ಉಡುಪಿ: ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ರೌಡಿ ಆಸಾಮಿ ಗಣೇಶ್ ಪೂಜಾರಿ (48) ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಪೊಲೀಸ್ ಅಧೀಕ್ಷಕರ ವರದಿಯ ಮೇರೆಗೆ, ಉಡುಪಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಏಪ್ರಿಲ್ 4, 2026 ರಂದು ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದಾರೆ. ಬಂಧಿತ ಗಣೇಶ್ ಪೂಜಾರಿ ಅವರು ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ಸದ್ಗುಣ ನಿವಾಸದವರು. ಆರೋಪಿಯ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ 4, ದರೋಡೆ 1, ಹಲ್ಲೆ 3, ಅಕ್ರಮ ಕೂಟ 1, ಜೂಜಾಟ 1 ಸೇರಿದಂತೆ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ 1ರಲ್ಲಿ ಶಿಕ್ಷೆ ವಿಧಿಸಲಾಗಿದ್ದು, 7 ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದಾರೆ. ಒಂದು ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಉಳಿದ 2 ಪ್ರಕರಣಗಳು ತನಿಖೆಯಲ್ಲಿವೆ. ಬಂಧಿತನನ್ನು ಕಲಬುರ್ಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಅಧಿಕಾರಿಗಳು ಆದೇಶಿಸಿದ್ದಾರೆ.
ಬಂಟ್ವಾಳ: 2020ರಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 7 ವರ್ಷಗಳ ಶಿಕ್ಷೆ ಹಾಗೂ ₹70,000 ದಂಡ ವಿಧಿಸಿ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ದಿನಾಂಕ 10-11-2020 ರಂದು ಮೇಲ್ಕಾರ್ ಬಸ್ ನಿಲ್ದಾಣದ ಬಳಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ, ಆಗಿನ ಬಂಟ್ವಾಳ ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಚೆಲುವರಾಜ್ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ₹49,000 ಮೌಲ್ಯದ 1.480 ಕೆ.ಜಿ ಗಾಂಜಾ ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.ಈ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ಅಕ್ರಮ ಸಂಖ್ಯೆ 126/2020ರಂತೆ ಪ್ರಕರಣ ದಾಖಲಾಗಿತ್ತು. ಬಳಿಕ ಆಗಿನ ವೃತ್ತ ನಿರೀಕ್ಷಕರಾದ ಟಿ.ಡಿ. ನಾಗರಾಜ್ ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್ ಅವರು, ಆರೋಪಿತ ಮಂಗಳೂರು ಬಂದರು ನಿವಾಸಿ ಟಿ.ಪಿ.…
ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ. ಮಾರ್ಚ್ 6, 2026 ರಂದು ಸಂಜೆ 7:45ರಿಂದ ರಾತ್ರಿ 10:15ರ ನಡುವೆ, ಹೇರಾಡಿ ಗ್ರಾಮದ ಶ್ರೀ ಸುಬ್ರಹ್ಮಣ್ಯ ಪ್ರದೇಶದ ನಿವಾಸಿ 77 ವರ್ಷದ ಮಂಜುನಾಥ ರಾವ್ ಅವರು ತಮ್ಮ ಪತ್ನಿಯೊಂದಿಗೆ ಮನೆಗೆ ಬೀಗ ಹಾಕಿ ಬಾರಕೂರಿನಲ್ಲಿ ನಡೆಯುತ್ತಿದ್ದ ನಾಗಮಂಡಲ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ವೇಳೆ ಅಪರಿಚಿತರು ಮನೆಯ ಮುಂದಿನ ಬಾಗಿಲು ಒಡೆದು ಒಳನುಗ್ಗಿ, ಬೆಡ್ ರೂಮ್ನಲ್ಲಿದ್ದ ಗೋಡ್ರೇಜ್ ಅಲಮಾರಿಯನ್ನು ಒಡೆದು ಚಿನ್ನಾಭರಣ ಹಾಗೂ ನಗದು ಕಳವು ಮಾಡಿಕೊಂಡಿದ್ದರು. ಕಳುವಾದ ವಸ್ತುಗಳಲ್ಲಿ ಸುಮಾರು 47 ಗ್ರಾಂ ಚಿನ್ನದ ಸರ-ಪೆಂಡೆಂಟ್, 32 ಗ್ರಾಂ ಬಳೆಗಳು, 6 ಗ್ರಾಂ ಬೆಂಡೋಲೆ, 4 ಗ್ರಾಂ ಉಂಗುರ, 3 ಗ್ರಾಂ ಬೆಂಡೋಲೆ, 250 ಗ್ರಾಂ ಬೆಳ್ಳಿಯ ವಸ್ತುಗಳು ಹಾಗೂ ₹49,000 ನಗದು ಸೇರಿದ್ದು, ಒಟ್ಟು ಮೌಲ್ಯ…
ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಪೊಲೀಸರು ಪತ್ತೆಹಚ್ಚಿ, 20 ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಏಪ್ರಿಲ್ 3ರಂದು ಮುಂಜಾನೆ ನಡೆದಿದೆ. ಪೆರಿಯಶಾಂತಿ ಕಡೆಯಿಂದ ಮರ್ಧಾಳ ಕಡೆಗೆ ಕಂಟೈನರ್ ಲಾರಿಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಜಂಬುರಾಜ್ ಮಹಾಜನ್ ಪೊಲೀಸ್ ಉಪನಿರೀಕ್ಷಕರು ಕಡಬ ಪೊಲೀಸ್ ಠಾಣೆ ಸಿಬ್ಬಂದಿಗಳೊಂದಿಗೆ ನೂಜಿಬಾಳ್ತಿಲ ಗ್ರಾಮದ ಕನ್ವರೆ ಪ್ರದೇಶದಲ್ಲಿ ದಾಳಿ ನಡೆಸಿದರು. ಈ ವೇಳೆ KA 11 B 9413 ನೋಂದಣಿಯ ಕಂಟೈನರ್ ಲಾರಿಯನ್ನು ತಡೆದು ಪರಿಶೀಲಿಸಿದಾಗ, ಲಾರಿಯಲ್ಲಿ 20 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಪತ್ತೆಯಾಯಿತು. ಲಾರಿಯಲ್ಲಿದ್ದ ವ್ಯಕ್ತಿಯನ್ನು ವಿಚಾರಿಸಿದಾಗ, ಆತ ಹಾಸನ ಜಿಲ್ಲೆಯ ಬೇಲೂರು ನಿವಾಸಿ ಇರ್ಫಾನ್ (26) ಎಂದು ತಿಳಿದುಬಂದಿದೆ.ಜಾನುವಾರು ಸಾಗಾಟಕ್ಕೆ ಸಂಬಂಧಿಸಿದಂತೆ ಯಾವುದೇ ಪರವಾನಿಗೆ ಇಲ್ಲದೇ, ಹಾಸನದಿಂದ ಕೇರಳಕ್ಕೆ ಸಾಗಾಟ ಮಾಡುತ್ತಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಪೊಲೀಸರು ಲಾರಿ ಹಾಗೂ ಜಾನುವಾರುಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 36/2026 ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ…
ಮಂಗಳೂರು: ನಗರದ ಹೊರವಲಯದ ಕೊಣಾಜೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಯಾವುದೋ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ವಾಗ್ವಾದವು ವಿಕೋಪಕ್ಕೆ ತಿರುಗಿ, ವಿದ್ಯಾರ್ಥಿಗಳು ಪರಸ್ಪರ ಹೊಡೆದಾಟಕ್ಕಿಳಿದಿದ್ದಾರೆ ಎನ್ನಲಾಗಿದೆ. ರಸ್ತೆಯಲ್ಲೇ ನಡೆದ ಈ ಗುಂಪು ಘರ್ಷಣೆಯನ್ನು ಕಂಡು ಸಾರ್ವಜನಿಕರು ಹಾಗೂ ಇತರ ವಿದ್ಯಾರ್ಥಿಗಳು ಕೆಲಕಾಲ ಆತಂಕಕ್ಕೊಳಗಾಗಿದ್ದರು. ಸ್ಥಳದಲ್ಲಿದ್ದ ಕೆಲ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್ಗಳಲ್ಲಿ ಈ ದೃಶ್ಯವನ್ನು ಸೆರೆಹಿಡಿದಿದ್ದು, ಈ ವೀಡಿಯೋ ಈಗ ವೈರಲ್ ಆಗಿದೆ. ಈ ಗಲಾಟೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಈ ಬಗ್ಗೆ ಇದುವರೆಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ಅಧಿಕೃತ ದೂರು ಅಥವಾ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.
ಉಡುಪಿ: ಜಿಲ್ಲೆಯ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ವಿಜೇತ ಹಾಗೂ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿದ್ದಾರೆ. ಈ ಪೈಕಿ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ವಿಜೇತ ವಿರುದ್ಧ 4 ಕೊಲೆಗೆ ಪ್ರಯತ್ನ ಪ್ರಕರಣ ಮತ್ತು ಹಲ್ಲೆ ಪ್ರಕರಣಗಳು ದಾಖಲಾಗಿವೆ. ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ ವಿರುದ್ಧ 5 ಕೊಲೆಗೆ ಪ್ರಯತ್ನ, ಹಲ್ಲೆ ಹಾಗೂ ಮಾದಕ ದ್ರವ್ಯ ಸೇವನೆ ಪ್ರಕರಣಗಳು ದಾಖಲಾಗಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. ವಿಜೇತನನ್ನು ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಮತ್ತು ಆರೀಫ್ ಸಾಹೇಬ್ ನನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.ಉಡುಪಿ: ಜಿಲ್ಲೆಯ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ವಿಜೇತ ಹಾಗೂ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ ಎಂಬುವರ…
ಮಂಗಳೂರು: ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಗಾಯಗೊಂಡ ಯುವಕನನ್ನು ನಡುಪದವು ನಿವಾಸಿ ಬೇಬಿ ಎಂಬವರ ಮಗ ಸುಶಾಂತ್ (23) ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸುಶಾಂತ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ವೇಳೆ ತಲೆಗೆ ತೀವ್ರ ಗಾಯಗಳಾಗಿದೆ. ತಕ್ಷಣ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯನ್ನು ಹಿಟ್ ಅಂಡ್ ರನ್ ಪ್ರಕರಣವೆಂದು ಪರಿಗಣಿಸಲಾಗಿದ್ದು, ಟ್ರಕ್ ಚಾಲಕ ಮೋಟಾರ್ ಸೈಕಲ್ಗೆ ಡಿಕ್ಕಿ ಹೊಡೆದ ನಂತರ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಚಾಲಕನ ಅಜಾಗರೂಕತೆಯಿಂದ ಸ್ಥಳೀಯ ಸಾರ್ವಜನಿಕರಿಂದ ತೀವ್ರ ಆಕ್ರೋಶವಾಗಿದೆ. ಅಪಘಾತದ ಸ್ವಲ್ಪ ಸಮಯದ ನಂತರ ಸ್ಥಳಕ್ಕೆ ಆಗಮಿಸಿದ ಕೊಣಾಜೆ ಪೊಲೀಸರು ಶೋಧ ಕಾರ್ಯಾಚರಣೆಯನ್ನು ನಡೆಸಿ ಅಪಘಾತಕ್ಕೆ ಕಾರಣವಾದ ಟ್ರಕ್ ಅನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಚಾಲಕನನ್ನು ಬಂಧಿಸಲು ಮತ್ತು ಘಟನೆಗಳ ನಿಖರವಾದ ಮಾಹಿತಿ ಪಡೆಯಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂಬುದಾಗಿ…










