Author: main-admin

ಪುತ್ತೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ರೈಲ್ವೆ ಹಳಿ ಪಕ್ಕದ ಗುಡ್ಡಗಾಡು ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಮೇಲೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಪ್ರಾಪ್ತ ವಯಸ್ಸಿನ ಬಾಲಕಿ ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಸಂತ್ರಸ್ತೆ ಕಳೆದ ಎರಡು ತಿಂಗಳಿನಿಂದ ಪುತ್ತೂರು ಪಟ್ಟಣದ ಬಾಡಿಗೆ ಮನೆಯಲ್ಲಿ ತನ್ನ ತಾಯಿ ಮತ್ತು ತಂಗಿಯೊಂದಿಗೆ ವಾಸಿಸುತ್ತಿದ್ದಳು. ಕಳೆದ ಮಾರ್ಚ್‌ನಿಂದೀಚೆಗೆ ಆಕೆ ತನ್ನ ತಾಯಿಯ ಮೊಬೈಲ್ ಬಳಸಿ ಆರೋಪಿಯೊಂದಿಗೆ ಸಂಪರ್ಕದಲ್ಲಿದ್ದಳು. ಆರೋಪಿಯು ಆಕೆಯನ್ನು ರೈಲ್ವೆ ಹಳಿಯ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಹಲ್ಲೆ ನಡೆಸಿದ್ದಾನೆ. ಆರೋಪಿಯು ತನ್ನನ್ನು ಬೆದರಿಸಿ ಅದೇ ಸ್ಥಳಕ್ಕೆ ಕರೆಸಿಕೊಂಡು ಪದೇ ಪದೆ ದೌರ್ಜನ್ಯ ನಡೆಸುತ್ತಿದ್ದನು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ. ಆಕೆಯ ಹೇಳಿಕೆಯ ಆಧಾರದ ಮೇಲೆ, ಪೊಲೀಸರು ಭಾರತೀಯ…

Read More

ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ದೋಣಿಯೊಂದು ಮಗುಚಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ನಡೆದಿದೆ. ಅಬ್ಬರದ ಅಲೆಗಳಿಂದಾಗಿ ದೋಣಿ ಮಗುಚಿ ಬಿದ್ದಿದ್ದು, ಏಡಿ ಬಲೆಗೆ ತೆರಳಿದ  ನಾಲ್ವರು ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದಾರೆ. ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯ ಯೋಗೇಶ್ ಅವರು ಈಶ್ವರ್ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಸ್ಥಳಿಯರಾದ ಪ್ರವೀಣ್, ಉದಯ್ ಜೊತೆ ಸೇರಿ ಲೈಫ್ ಜಾಕೇಟ್ ನೀಡಿ ಮೀನುಗಾರರನ್ನು ರಕ್ಷಿಸಲಾಗಿದೆ.  ಕಡಲು  ಪ್ರಕ್ಷುಬ್ದಗೊಂಡಿದ್ದು, ಈಜು ಬರುತ್ತದೆ ಎಂದು ಹೇಳಿ ಯಾರೂ ಸಹ ನೀರಿಗೆ ಇಳಿಯಬೇಡಿ. ಯಾವ ಕ್ಷಣದಲ್ಲಿ ಅಲೆಗಳು ಮೇಲುಕ್ಕಿ ಬರುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಎಲ್ಲಾ ಮೀನುಗಾರರು ಲೈಫ್ ಜಾಕೇಟ್ ಹಾಕಿಯೇ ಮೀನುಗಾರಿಕೆಗೆ ಹೋಗಿ ಎಂದು ಈಶ್ವರ್ ಮಲ್ಪೆ ಸಲಹೆ ನೀಡಿದ್ದಾರೆ.

Read More

ಉಡುಪಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಕರಣ ಸಂಬಂಧ ಮೂವರು ಆರೋಪಿಗಳಾದ ಉಜಿರೆ ನಿವಾಸಿಗಳಾದ ಸೃಜನ್ ಎಲ್ , ಹಿತೇಶ್ ಶೆಟ್ಟಿ, ಸಹನ್ ಗೆ ಉಡುಪಿ ನ್ಯಾಯಾಲಯ ಆ.28 ರಂದು ಜಾಮೀನು ಮಂಜೂರು ಮಾಡಿದೆ. ಪ್ರಕರಣ ವಿವರ: ಆ. 21 ರಂದು ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025 ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತನಾದ ಮಹೇಶ್ ಶೆಟ್ಟಿ ತಿಮರೋಡಿ ರವರನ್ನು ಉಜಿರೆ ನಿವಾಸದಿಂದ ವಶಕ್ಕೆ ಪಡೆದುಕೊಂಡು ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ಅವರ ಬೆಂಬಲಿಗರು ಪೊಲೀಸ್ ವಾಹನಗಳನ್ನು ಹಿಂಬಾಲಿಸಿಕೊಂಡು ಬಂದಿದ್ದು ಎಸ್ಟೇ ಬಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಂದು ಕರ್ತವ್ಯಕ್ಕೆ ಅಡ್ಡಿ ಪಡಿಸಬೇಡಿ ಎಂದು ಸೂಚನೆ ನೀಡಿದರು ಪಾಲಿಸದೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ್ಮಾರ್ ಹೆದ್ದಾರಿಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸುವಂತೆ ಬಂದು ಸದ್ರಿ ತಂಡದಲ್ಲಿದ್ದ ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖಾ ವಾಹನ ನಂಬರ್ KA-20-G-0669 ವಾಹನಕ್ಕೆ KA-70-M-3048 ಬಿಳಿ ಬಣ್ಣದ ಶಿಫ್ಟ್ ಕಾರು ಡಿಕ್ಕಿ…

Read More

ಉಳ್ಳಾಲ: ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ ಐವರು ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ತಲಪಾಡಿಯ ಟೋಲ್ ಗೇಟ್ ಬಳಿಯಲ್ಲಿ ಇಂದು ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಕೆಸಿ ರೋಡ್ ನಿಂದ ತೆರಳುತ್ತಿದ್ದಂತ ಆಟೋ ರಿಕ್ಷಾ ಹಾಗೂ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕೆಸಿ ರೋಡ್ ಮೂಲದವರೆನ್ನಲಾದಂತ ಐವರು ಮೃತಪಟ್ಟಿರೋದಾಗಿ ಹೇಳಲಾಗುತ್ತಿದೆ. ಮೃತರಲ್ಲಿ ನಾಲ್ವರು ಮಹಿಳೆಯರು, ಮಗು ಕೂಡ ಸೇರಿದೆ. ಆಟೋ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

2025ರ ಆಗಸ್ಟ್ 26ರಂದು, ಕೋಲ್ಕತ್ತಾದ ಸಂತ ಮದರ್ ತೆರೆಸಾ ಅವರ ಜನ್ಮದಿನದ ಸುದಿನದಂದೇ, ಸ್ನೇಹಾಲಯ ಚಾರಿಟಬಲ್ ಟ್ರಸ್ಟ್ ಇವರ ಮಾನವಸೇವೆಯ ಹದಿನಾರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಸಂತೋಷವನ್ನು ಭಾವಪೂರ್ಣವಾಗಿ ಹಾಗೂ ಅತ್ಯಂತ ಸಡಗರದಿಂದ ಆಚರಿಸಿತು. ಕಾರ್ಯಕ್ರಮವು ದಿವ್ಯ ಬಲಿಪೂಜೆಯೊಂದಿಗೆ ಪ್ರಾರಂಭವಾಯಿತು. ಮಂಗಳೂರು ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಕುಲಪತಿಗಳಾದ ವಂದನೀಯ ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ. ಪ್ರಧಾನ ಗುರುಗಳಾಗಿ ದಿವ್ಯ ಬಲಿಪೂಜೆಯನ್ನು ನೆರವೇರಿಸಿದರು. ವಂ. ಫಾ. ಪೀಟರ್ ರೆಜಿನಾಲ್ಡ್ ಡಿ’ಸೋಜ, ವಂ. ಫಾ. ಲೀಗೊರಿ ಕ್ರಾಸ್ಟಾ ಓಸಿಡಿ (ನಿರ್ವಹಣಾಧಿಕಾರಿ, ರಿಷಿವನ–ಆಧ್ಯಾತ್ಮಿಕ ಕೇಂದ್ರ, ರಾಣಿಪುರ), ವಂ. ಫಾ. ಸಿರಿಲ್ ಡಿ’ಸೋಜ (ಸ್ನೇಹಾಲಯದ ಚಾಪ್ಲೇನ್), ಹಾಗೂ ವಂ. ಫಾ. ಡೊಮಿನಿಕ್ ಸೆಕ್ವೇರಾ ಎಸ್ಡಿಬಿ (ಹೋಲಿ ಕ್ರಾಸ್ ಚರ್ಚ್, ಪಾವೂರು) ದಿವ್ಯ ಬಲಿ ಪೂಜೆಯಲ್ಲಿ ಸಹಭಾಗಿಯಾಗಿದ್ದರು. ಈ ಧನ್ಯಾತಾ ಬಲಿಪೂಜೆಯನ್ನು ಕಳೆದ ಹದಿನಾರು ವರ್ಷಗಳಲ್ಲಿ ಸ್ನೇಹಾಲಯಕ್ಕೆ ಸಹಕಾರ, ದಾನ, ಪ್ರೀತಿ ಮತ್ತು ಪ್ರೋತ್ಸಾಹವನ್ನು ನೀಡಿದ ಎಲ್ಲಾ, ಶುಭಚಿಂತಕರು ಹಾಗೂ ಹಿತೈಷಿಗಳಿಗಾಗಿ ಅರ್ಪಿಸಲಾಯಿತು. ಸಾಹಿತ್ಯ ಕೃತಿಗಳ ಬಿಡುಗಡೆಃಬಲಿಪೂಜೆಯ ನಂತರ,…

Read More

ಬಂಟ್ವಾಳ: ರಾತ್ರಿ ನಿಗದಿತ ಸಮಯದ ನಂತರವೂ ಧ್ವನಿವರ್ಧಕಗಳನ್ನು ಬಳಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣ, ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಪುಂಜಾಲಕಟ್ಟೆ, ಅವರ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 27, 2025 ರಂದು ರಾತ್ರಿ 10.45 ರ ಸುಮಾರಿಗೆ ಬಂಗ್ಲೆ ಮೈದಾನದಲ್ಲಿ ಧ್ವನಿವರ್ಧಕಗಳನ್ನು ಬಳಸಿಕೊಂಡು ಕಾರ್ಯಕ್ರಮ ನಡೆಸುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿಎಸ್‌ಐ ಅವರು ಸ್ಥಳಕ್ಕೆ ಭೇಟಿ ನೀಡಿ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳಿಗೆ ಧ್ವನಿವರ್ಧಕಗಳ ಬಳಕೆಯ ಕಾನೂನು ನಿಯಮಗಳ ಬಗ್ಗೆ ಮಾಹಿತಿ ನೀಡಿ, ತಕ್ಷಣವೇ ಅವುಗಳನ್ನು ಸ್ಥಗಿತಗೊಳಿಸುವಂತೆ ಸೂಚಿಸಿದ್ದಾರೆ. ಪೊಲೀಸರ ಮನವಿಯ ಮೇರೆಗೆ ಸಂಘಟಕರು ಧ್ವನಿವರ್ಧಕಗಳನ್ನು ಸ್ಥಗಿತಗೊಳಿಸಿದ್ದಾರೆ. ಆದರೆ, ರಾತ್ರಿ 11.50 ರ ಸುಮಾರಿಗೆ ಪೊಲೀಸರು ಮತ್ತೊಮ್ಮೆ ಸ್ಥಳಕ್ಕೆ ಬಂದಾಗ, ಅವರ ನಿರ್ದೇಶನವನ್ನು ಉಲ್ಲಂಘಿಸಿ ಧ್ವನಿವರ್ಧಕಗಳನ್ನು ಬಳಸುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಪೊಲೀಸರು ಪ್ರಶ್ನಿಸಿದಾಗ, ಸಮಿತಿಯ ಅಧ್ಯಕ್ಷ ಕೌಶಿಕ್ ಶೆಟ್ಟಿ, ಪುನೀತ್ ಮಡಂತ್ಯಾರು, ತಾರನಾಥ ಕಜೆಕ್ಕಾರು, ಗುರು…

Read More

ನಿವೃತ್ತಿಗೆ ಮೂರು ದಿನ ಬಾಕಿ ಇರುವಾಗಲೇ ಐಪಿಎಸ್ ಅಧಿಕಾರಿಯೊಬ್ಬರು ಮೃತಪಟ್ಟ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ.  1997ನೇ ಬ್ಯಾಚ್ ನ ಐಪಿಎಸ್ ಅಧಿಕಾರಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮಹಿಪಾಲ್ ಯಾದವ್ ಮೃತಪಟ್ಟ ದುರ್ದೈವಿ. ಆಗಸ್ಟ್ 30ರಂದು ಕೇರಳ ರಾಜ್ಯ ಸರಕಾರವು ಆನ್‌ಲೈನ್ ನಲ್ಲಿ ಅಧಿಕೃತ ವಿದಾಯ ಕಾರ್ಯಕ್ರಮ ಏರ್ಪಡಿಸುವುದಕ್ಕೂ ಮುನ್ನವೇ ಮಹಿಪಾಲ್ ಯಾದವ್ ನಿಧನರಾಗಿದ್ದಾರೆ. ಅವರು ರಾಜಸ್ಥಾನದ ಜೈಪುರದಲ್ಲಿ ನಿಧನರಾಗಿದ್ದು, ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ವಿಷಮಿಸಿದ್ದರಿಂದ, ಅವರ ಕುಟುಂಬದ ಸದಸ್ಯರು ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ದಿದ್ದರು.  ತಮ್ಮ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕಕ್ಕೆ ಭಾಜನರಾಗಿದ್ದ ಮಹಿಪಾಲ್ ಯಾದವ್, ಕೇರಳ ಅಬಕಾರಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಅವರು ವೈದ್ಯಕೀಯ ರಜೆಯ ಮೇಲೆ ಕರ್ತವ್ಯದಿಂದ ತೆರಳುವುದಕ್ಕೂ ಮುನ್ನ, ಅವರನ್ನು ಇತ್ತೀಚೆಗಷ್ಟೇ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿತ್ತು.   ರಾಜಸ್ಥಾನದ ಅಲ್ವಾರ್ ನ ನಿವಾಸಿಯಾದ ಮಹಿಪಾಲ್ ಯಾದವ್, ನಿಯೋಜನೆಯ ಮೇಲೆ ಗಡಿ ಭದ್ರತಾ ಪಡೆ ಹಾಗೂ ಕೇಂದ್ರೀಯ ತನಿಖಾ ತಂಡ (CBI) ಗಳಲ್ಲಿ…

Read More

ಬಂಟ್ವಾಳ : ಸಜೀಪ ನಡು ಗ್ರಾಮದ ನಿವಾಸಿ ಉಮರ್ ಪಾರೂಕ್ (48) ಎಂಬವರು, ದಿನಾಂಕ 11.06.2025 ರಂದು ಮುಂಜಾನೆ, ಜೀಪ್ ನಲ್ಲಿ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ, ಸಜೀಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಇಬ್ಬರು ಅಪರಿಚಿತರು, ತನ್ನ ಮೇಲೆ ತಲವಾರು ಬೀಸಿ ತನ್ನನ್ನು ಕೊಲೆ ಮಾಡಲು ಯತ್ನಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ .68/2025 ಕಲಂ: 109, 324(4) ಜೊತೆ 3(5) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣವನ್ನು ತನಿಖೆ ನಡೆಸಿದಾಗ, ಇದೊಂದು ಸುಳ್ಳು ಪ್ರಕರಣವೆಂದು ಸಾಬೀತಾಗಿದ್ದು, ಈ ಬಗ್ಗೆ ಮಾನ್ಯ ನ್ಯಾಯಾಲಯಕ್ಕೆ ವರದಿ ನೀಡಲಾಗಿರುತ್ತದೆ. ಮುಂದುವರಿದಂತೆ, ಸದ್ರಿ ಉಮರ್ ಪಾರೂಕ್ (48) ರವರು ಸಾರ್ವಜನಿಕರನ್ನು ಪ್ರಚೋದಿಸಿ, ಗಲಭೆ ಉಂಟಾಗುವಂತೆ ಪ್ರಚೋದಿಸಿದ್ದು, ಸಾರ್ವಜನಿಕ ವಲಯದಲ್ಲಿ ಭಯಭೀತಿಯನ್ನು ಸೃಷ್ಟಿಸಿರುವುದಲ್ಲದೇ, ಉದ್ದೇಶಪೂರ್ವಕವಾಗಿ ಸುಳ್ಳು ಆಪಾದನೆ ಮಾಡಿ, ಸುಳ್ಳು ದೂರು ನೀಡಿರುವ ಹಿನ್ನೆಲೆಯಲ್ಲಿ, ಆತನ‌ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ ಕ್ರ : 128/2025, ಕಲಂ:192,…

Read More

ಕಾರ್ಕಳ: ಮಹಾರಾಷ್ಟ್ರದ ಪುಣೆಯಲ್ಲಿ ಮಂಗಳವಾರ (ಆ.26) ರಾತ್ರಿ ನಡೆದ ಭೀಕರ ಘಟನೆಗೆ ಕಾರ್ಕಳ ಮೂಲದ ಹೋಟೆಲ್ ಮಾಲೀಕನ ಹತ್ಯೆ ಮಾಡಿದ ಘಟನೆ ನಡೆದಿದೆ. ಹೋಟೆಲ್ ಸಿಬ್ಬಂದಿಯೊರ್ವ ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಮಾಲೀಕ ಗದರಿಸಿದ್ದು ಇದೇ ಕಾರಣಕ್ಕೆ ಸಿಟ್ಟಿಗೆದ್ದ ಸಿಬ್ಬಂದಿ ಮಾಲೀಕನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಹತ್ಯೆಯಾದವರು ಕಾರ್ಕಳ ತಾಲೂಕಿನ ಎಣ್ಣೆಹೊಳೆ ಕುಮೇರುಮನೆ ನಿವಾಸಿ ಸಂತೋಷ್ ಶೆಟ್ಟಿ (46) ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶ ಮೂಲದ ಹೋಟೆಲ್ ಸಿಬ್ಬಂದಿ ಕೆಲಸದ ಸಮಯದಲ್ಲಿ ಮದ್ಯಪಾನ ಮಾಡಿದ್ದಕ್ಕೆ ಸಂತೋಷ್ ಶೆಟ್ಟಿ ಬುದ್ಧಿವಾದ ಹೇಳಿದ್ದಾರೆ, ಇದರಿಂದ ಆಕ್ರೋಶಗೊಂಡ ಸಿಬ್ಬಂದಿ ಅಡುಗೆ ಕೋಣೆಯಿಂದ ಕತ್ತಿ ತಂದು ಶೆಟ್ಟಿಯವರ ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಘಟನೆ ಮಂಗಳವಾರ ರಾತ್ರಿ ಸುಮಾರು 10 ಗಂಟೆಗೆ ನಡೆದಿದೆ. ಸಂತೋಷ್ ಶೆಟ್ಟಿ ಅವರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಹುಟ್ಟೂರು ಎಣ್ಣೆಹೊಳೆಗೆ ತರಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಬೆಳ್ತಂಗಡಿ : ಎಸ್.ಐ.ಟಿ ಅಧಿಕಾರಿಗಳ ಮುಂದೆ ಎರಡನೇ ದಿನದ ವಿಚಾರಣೆಗೆ ಸುಜಾತ ಭಟ್ ಆ.27 ರಂದು 10 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ.

Read More