Author: main-admin

ಬೆಳ್ತಂಗಡಿ : ಎಸ್.ಐ.ಟಿ ಅಧಿಕಾರಿಗಳ ಮುಂದೆ ಎರಡನೇ ದಿನದ ವಿಚಾರಣೆಗೆ ಸುಜಾತ ಭಟ್ ಆ.27 ರಂದು 10 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ.

Read More

ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ತನಿಖೆಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಸತ್ಯ ಹೊರಗೆ ಬರಬೇಕು ಎಂದು ಕೋಟ್ಯಂತರ ಭಕ್ತರು ಕಾಯುತ್ತಿದ್ದಾರೆ. ಆರೋಪಿ ಚಿನ್ನಯ್ಯನನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ. ಎಸ್‌ಐಟಿಯವರು ವರದಿ ನೀಡಲಿ. ಮುಂದಿನ ಚರ್ಚೆ ಆನಂತರ ಎಂದು ಹೇಳಿದರು. ಈ ವಿಚಾರದಲ್ಲಿ ಸರ್ಕಾರ ತಪ್ಪೆಸಗಿದೆ ಎಂದು ಬಿಜೆಪಿಯವರು ಯಾವ ಆಧಾರದಲ್ಲಿ ಹೇಳುತ್ತಿದ್ದಾರೆ. ಎಸ್‌ಐಟಿ ರಚಿಸಿದ್ದೇ ತಪ್ಪು ಮತ್ತು ಷಡ್ಯಂತ್ರ ಎಂದು ಹೇಳುತ್ತಿರುವುದು ವಿಪರ್ಯಾಸ. ಮಹೇಶ್ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧ ನಡೆಸಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪ ಇಲ್ಲ. ಮಾಹಿತಿ ಮತ್ತು ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸುತ್ತಿದೆಯೇ ಹೊರತು, ಸರ್ಕಾರದ ನಿರ್ದೇಶನದಂತೆ ಅಲ್ಲ. ಪ್ರಕರಣದಲ್ಲಿ ಎಸ್‌ಐಟಿ ದೊಡ್ಡ ಜವಾಬ್ದಾರಿಯನ್ನು ಹೊಂದಿದ್ದು, ತನಿಖೆಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದೆ. ತನಿಖೆ ಬೇಗ ಮುಗಿಯುವುದು ಉತ್ತಮ ಎಂದು ಸರ್ಕಾರ ಕೂಡ…

Read More

ಉಳ್ಳಾಲ : ಅಸೈಗೋಳಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) ಹೆಡ್ ಕಾನ್‌ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ಮೂಲತಃ ಉತ್ತರ ಕರ್ನಾಟಕದ ಸಂಜೀವ (38) ಎಂದು ಗುರುತಿಸಲಾಗಿದೆ. ಇವರ ಪತ್ನಿ ಮತ್ತು ಮಕ್ಕಳು ಊರಿಗೆ ಹೋಗಿದ್ದಾಗ ಸೋಮವಾರ ತಾವು ವಾಸವಾಗಿದ್ದ ಕ್ವಾರ್ಟಸ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ.

Read More

ಮಂಗಳೂರು : ಮಂಗಳೂರಿನ ಬೆಂದೂರ್‌ವೆಲ್ ಇಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾ ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ. ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿಯ ನೊರೊನ ಕಾಂಪ್ಲೆಕ್ಸ್ ಚರ್ಚ್ ರೋಡ್ ಹತ್ತಿರ ಬೆಳ್ತಂಗಡಿ ಇಲ್ಲಿ ತೆರೆಯಲು ಸಜ್ಜಾಗಿದೆ. 30 ವರ್ಷಗಳ ವಿಶ್ವಾಸಾರ್ಹ ಸೇವೆ ಮಾಡುತ್ತಾ ಬಂದಿರುವ ಸೊಸೈಟಿಯು ಸತತ ಲಾಭ ಗಳಿಕೆಯೊಂದಿಗೆ, ಸದಸ್ಯರಿಗೆ ಸತತ 20% ಡಿವಿಡೆಂಡ್ ನೀಡುತ್ತಾ ಬರುತ್ತಿದೆ. ಸರ್ಕಾರದ ಅಡಿಟ್ ವರ್ಗೀಕರಣದಲ್ಲಿ ಸತತ ‘ಎ’ ವರ್ಗ ಪಡೆಯುವುದರೊಂದಿಗೆ ಉತ್ತಮ ಅಭಿವೃದ್ಧಿಗೆ ಎಸ್ ಡಿ ಸಿ ಸಿ ಬ್ಯಾಂಕ್ ಸಾಧನ ಪ್ರಶಸ್ತಿಯನ್ನು ಸತತ ಪಡೆಯುತ್ತಾ ಬರುತ್ತಿದೆ.ಎಲ್ಲಾ ಶಾಖೆಗಳು ಕಂಪ್ಯೂಟರಿಕೃತ ಲೆಕ್ಕಪತ್ರವ್ಯವಸ್ಥೆ ಎಲ್ಲಾ ಭದ್ರತಾ ವ್ಯವಸೆಗಳೊಂದಿಗೆ ಗ್ರಾಹಕರಿಗೆ ಉತ್ತಮ ಬ್ಯಾಂಕಿAಗ್ ಸೇವೆ ನೀಡುತ್ತಾ ಬರುತ್ತಿದೆ. ಬೆಳ್ತಂಗಡಿ ಶಾಖೆಯು ಆರಂಭದ ಕೊಡುಗೆಯಾಗಿ ಸಾಮಾನ್ಯ ಠೇವಣಿ…

Read More

ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಿಸಿರೋಡ್ ಸಮೀಪದ ತಲಪಾಡಿ ಜೋಡು ಮಾರ್ಗ ನಿವಾಸಿ ನಿಜಾಮ್ (33) ಬಂಧಿತ ಆರೋಪಿ. ಈತನ ಮೇಲೆ 2023 ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 01/2023 ಕಲಂ 489 (ಬಿ) ಮತ್ತು (ಸಿ) ಜೊತೆಗೆ 34 ಭಾ.ದಂ.ಸಂ. ರಂತೆ ಪ್ರಕರಣ ದಾಖಲಾಗಿದ್ದು, ನ್ಯಾಯಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಈ ಮಧ್ಯೆ ಆರೋಪಿಯು ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದ ಬಳಿಕ, ಪ್ರಕರಣದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ. ನ್ಯಾಯಾಲಯವು ಈತನ ಮೇಲೆ 8 ಬಾರಿ ಬಂಧನ ವಾರಂಟ್ ಹೊರಡಿಸಿದ್ದರೂ ತಲೆಮರೆಸಿಕೊಂಡಿದ್ದ ಈತನನ್ನು, ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ವಾರಂಟ್ ಜಾರಿ ಸಿಬ್ಬಂದಿಗಳು ಆ. 25 ಸೋಮವಾರ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ ವಲಾಲು ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ…

Read More

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ಬುರುಡೆ ಚಿನ್ನಯ್ಯನಿಗೆ ಆಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಆ.26 ರಂದು ಬೆಳಗ್ಗೆ 9:20 ಗಂಟೆಗೆ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಧೀಶರಿಂದ ಆ.25 ರಂದು ಸರ್ಚ್ ವಾರಂಟ್ ಪಡೆದುಕೊಂಡು ಆರೋಪಿ ಚಿನ್ನಯ್ಯನ ಜೊತೆಯಲ್ಲಿ ಕರೆದುಕೊಂಡು ಬಂದು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಉಜಿರೆಯ ನಿವಾಸದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಎರಡು ತಿಂಗಳಿಂದ ಅಶ್ರಯ ನೀಡಿದ್ದರಿಂದ ಚಿನ್ನಯ್ಯನಿಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಈ ದಾಳಿ ನಡೆಯುತ್ತಿದೆ ಎನ್ನಲಾಗಿದೆ.

Read More

ಮಂಗಳೂರು : ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ ‘ನೆತ್ತೆರೆಕೆರೆ’ ತುಳು ಸಿನಿಮಾ ಆಗೋಸ್ಟ್ 29 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ನೆತ್ತರಕೆರೆ ಸಿನಿಮಾ ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಲಿದೆ ನೆತ್ತರಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪಾತ್ರಗಳು ಭಿನ್ನವಾಗಿದೆ. ಸಿನಿಮಾದ ಬಗ್ಗೆ, ಪ್ರೇಕ್ಷಕರಲ್ಲಿ ಕಾತರ. ಕುತೂಹಲ ಹೆಚ್ಚಿದೆ ಸಿನಿಮಾಕ್ಕೆ ಚೇಳಾರ್, ಮುಲ್ಕಿ, ಕಿನ್ನಿಗೋಳಿಯಲ್ಲಿ ಚಿತ್ರೀಕರಣಗೊಂಡಿದೆ. ಸ್ವರಾಜ್ ಶೆಟ್ಟಿ ಸಿನಿಮಾಕ್ಕೆ ಚಿತ್ರಕತೆ, ಸಂಭಾಷಣೆಯೊಂದಿಗೆ ನಿರ್ದೇಶನದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರಲ್ಲದೆ ನಾಯಕ ನಟನಾಗಿಯೂ ಅಭಿನಯಿಸಿದ್ದಾರೆ. ನಾಯಕಿಯಾಗಿ ದಿಶಾಲಿ ಪೂಜಾರಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಬಹುಭಾಷಾ ತಾರಾ ನಟ ಸುಮನ್ ತಲ್ಮಾರ್. ಲಂಚುಲಾಲ್ ಕೆ ಎಸ್ ಅಭಿನಯಿಸಿದ್ದಾರೆ. ಸಿನಿಮಾದಲ್ಲಿ ಯುವ ಶೆಟ್ಟಿ, ಪುಷ್ಪರಾಜ್ ಬೊಳೂರು, ಅನಿಲ್ ಉಪ್ಪಳ, ಭವ್ಯಾ ಪೂಜಾರಿ, ಪ್ರಥ್ವಿನ್ ಪೊಳಲಿ, ಉತ್ಸವ್ ವಾಮಂಜೂರು, ನೀತ್ ಪೂಜಾರಿ, ವಿಜಯ ಮಯ್ಯ ಚಂದ್ರಶೇಖರ ಸಿದ್ಧಕಟ್ಟೆ, ಮನೀಶ್ ಶೆಟ್ಟಿ ಉಪ್ಪಿರ, ನಮಿತ ಕಿರಣ್, ಸುನೀತಾ, ವಿನಾಯಕ್ ಜಪ್ಪು, ಭಗವಾನ್, ಕೀರ್ತನ್…

Read More

ಕಾರ್ಕಳ: ಇಲ್ಲಿನ ಕುಂಟಲಪಾಡಿ ರಸ್ತೆಯ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂಬವರನ್ನು ಇರಿದು ಕೊ*ಲೆ ಮಾಡಲಾಗಿದೆ. ಮಂಗಳವಾರ (ಆ.26) ಘಟನೆ ಬೆಳಕಿಗೆ ಬಂದಿದ್ದು, ಕಾರ್ಕಳ ನಗರ ಠಾಣೆ ಪೊಲೀಸರು ದೌಡಾಯಿಸಿದ್ದಾರೆ. ಮೂಲಗಳ ಪ್ರಕಾರ, ನವೀನ್ ಪೂಜಾರಿ ಕಾರ್ಕಳದಲ್ಲಿ ನೆಲೆಸಿ ಹಣಕಾಸು ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಕೊ*ಲೆಯ ನಿಖರ ಕಾರಣ ಮತ್ತು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.

Read More

 ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿರುವ ದೂರಿನ ಆಧಾರದ ಮೇಲೆ ಉಡುಪಿ ನಗರದಲ್ಲಿರುವ ಲಾಡ್ಜ್ ಒಂದಕ್ಕೆ ಪೊಲೀಸರು ದಾಳಿ ನಡೆಸಿ ಮಹಿಳೆಯನ್ನು ರಕ್ಷಣೆ ಮಾಡಿರುವ ಘಟನೆ ರವಿವಾರ ನಡೆದಿದೆ. ಉಡುಪಿ ನಗರದ ಸಮ್ಮರ್ ಪಾರ್ಕ್ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಕುರಿತು ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇ‌ರ್ ಅವರಿಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರ ತಂಡ ಲಾಡ್ಜ್ ನ ಎರಡನೇ ಮಹಡಿಯಲ್ಲಿರುವ 308 ಕೊಠಡಿಯಲ್ಲಿ ಮಹಿಳೆಯೊಬ್ಬರು ಪತ್ತೆಯಾಗಿದ್ದು ಈ ವೇಳೆ ವಿಚಾರಣೆ ನಡೆಸಿದ ವೇಳೆ ಮಹಿಳೆ ತನಗೆ ಕೆಲಸ ಕೊಡಿಸುವ ನೆಪದಲ್ಲಿ ಶರತ್ ಅಲಿಯಾಸ್‌ ಮೊಹಮ್ಮದ್ ಫಯಾಜ್ ಎಂಬ ವ್ಯಕ್ತಿ ಆ.19 ರಂದು ಉಡುಪಿಗೆ ಕರೆದುಕೊಂಡು ಬಂದು ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಮಹಿಳೆ ಮಾಹಿತಿ ನೀಡಿದ್ದಾರೆ. ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ ಪೊಲೀಸರು, ಆರೋಪಿ ವಿರುದ್ಧ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Read More

ಉಡುಪಿ: ನಗರದ ಸಮೀಪ ಮಹಿಳೆಯೊಬ್ಬರಿಗೆ ಆನ್ ಲೈನ್ ಶಾಪಿಂಗ್ ಹೆಸರಿನಲ್ಲಿ ಕರೆ ಮಾಡಿ ಸಾವಿರಾರು ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ. ವಂಚನೆಗೊಳಾಗದ ಮಹಿಳೆ ಜಹೀನ್ ಆಯೇಶಾ ಜಾಕೀರ್ ಎಂದು ತಿಳಿದು ಬಂದಿದೆ. ಪ್ರಕರಣ ವಿವರ : ಪಿರ್ಯಾದಿದಾರರಾದ ಜಹೀನ್ ಆಯೇಶಾ ಜಾಕೀರ್(27) ಇವರು ದಿನಾಂಕ 21/08/2025 ರಂದು ಸಂಜೆ 4:30 ಗಂಟೆಗೆ ಪಿರ್ಯಾದಿದಾರರು ಮನೆಯಲ್ಲಿರುವಾಗ ಯಾರೋ ಅಪರಿಚಿತ ವ್ಯಕ್ತಿಯು ಫೋನ್‌ ಕರೆ ಮಾಡಿ ತಾನು ನೈಕಾ ಎಂಬ ಆನ್‌ ಲೈನ್‌ ಶಾಪಿಂಗ್‌ ಕಂಪನಿಯಿಂದ ಮಾತನಾಡುತ್ತಿದ್ದು, ನೀವು ಪಿನ್‌ ಕೋಡ್‌ ನಂಬರ್‌ ನ್ನು ಸರಿಯಾಗಿ ನಮೂದಿಸದೇ ಇರುವುದರಿಂದ ನಿಮ್ಮ ಆರ್ಡರ್‌ ಸ್ಥಗಿತಗೊಂಡಿದೆ ಅದನ್ನು ಚಾಲ್ತಿಗೊಳಿಸಬೇಕಾದರೆ ನೀವು ಮೊದಲು ಹಣವನ್ನು ಪಾವತಿಸಬೇಕು ನಂತರ ಆ ಹಣ ನಿಮಗೆ ಮರುಪಾವತಿ ಆಗುತ್ತದೆ ಎಂದು ಹೇಳಿದ್ದು, ಅಪರಿಚಿತ ವ್ಯಕ್ತಿಯ ಮಾತುಗಳನ್ನು ನಂಬಿದ ಪಿರ್ಯಾದಿದಾರರು ಅಪರಿಚಿತ ವ್ಯಕ್ತಿಯು ನೀಡಿದ ಬ್ಯಾಂಕ್‌ ಖಾತೆಗೆ ಒಟ್ಟಾರೆಯಾಗಿ 47,191.50/- ರೂಪಾಯಿ ಹಣವನ್ನು ವರ್ಗಾವಣೆ ಮಾಡಿದ್ದು, ನಂತರ ಆರೋಪಿಯು ಪಿರ್ಯಾದಿದಾರರಿಗೆ ಯಾವುದೇ ಹಣವನ್ನು…

Read More