Author: main-admin

ಪಡುಬಿದ್ರೆ: ಪಡುಬಿದ್ರೆ ಪಾದಬೆಟ್ಟು ಗ್ರಾಮದ ಕಾಮತ್ ಪೆಟ್ರೋಲ್ ಬಳಿ ಜೂ.22ರಂದು ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ನೌಷಾದ್ ಬಿ.ಎ.(38) ಬಂಧಿತ ಆರೋಪಿ. ಗಣೇಶ್ ಪ್ರಸಾದ್ ಶೆಟ್ಟಿ ಎಂಬವರ ಮನೆಗೆ ನುಗ್ಗಿದ ಕಳ್ಳರು, 1,45,000 ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಇಬ್ರಾಹಿಂ ಕಲಂದರ್(42) ಹಾಗೂ ರಿಯಾಜ್(32) ಎಂಬವರನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಕಾರು ಹಾಗೂ 24,000ರೂ. ನಗದು ವಶ ಪಡಿಸಿಕೊಂಡಿದ್ದರು. ತನಿಖೆ ಮುಂದುವರೆಸಿದ ಪೊಲೀಸರು ಆ.22ರಂದು ನೌಷದ್‌ನನ್ನು ಮಂಗಳೂರಿನಲ್ಲಿ ಬಂಧಿಸಿ, 80000ರೂ. ಮೌಲ್ಯದ ಚಿನ್ನವನ್ನು ಹಾಗೂ 32000ರೂ. ನಗದು ವಶಪಡಿಸಿಕೊಂಡಿದ್ದಾರೆ. ಒಟ್ಟಾರೆ ಈ ಪ್ರಕರಣದಲ್ಲಿ ಆರೋಪಿತರಿಂದ 8 ಗ್ರಾಂ ಚಿನ್ನ ಹಾಗೂ 56000 ನಗದನ್ನು ವಶಪಡಿಸಿಕೊಳ್ಳಲಾಗಿದೆ. ನೌಷಾಧ್ ವಿರುದ್ಧ ಕೇರಳ ರಾಜ್ಯದ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 1 ಸುಲಿಗೆ ಪ್ರಕರಣ, ದಕ್ಷಿಣ…

Read More

ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕ್ರಮಕೈಗೊಳ್ಳಲು ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ /ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು. ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸುವುದು. ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು…

Read More

ಮಂಗಳೂರು: ಇಲ್ಲಿನ ಸಸಿಹಿತ್ಲು ಮೂಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ 4 ಮಂದಿಯ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತ ಯುವಕ ಪಡುಪಣಂಬೂರು ಕಜಕತೋಟ ನಿವಾಸಿ ದಿ.ಅನ್ವರ್ ಎಂಬವರ ಪುತ್ರ ಮುಹಮ್ಮದ್ ಸಮೀರ್ (23) ಎಂದು ತಿಳಿದು ಬಂದಿದೆ. ಪಡುಪಣಂಬೂರು ಕಜಕತೋಟ ನಿವಾಸಿ ಅಬೂಬಕರ್ ಎಂಬವರ ಪುತ್ರ ಐಮಾನ್ (23), ಕಜಕತೋಟ ನಿವಾಸಿ ರಯೀಸ್ (22), ಹಳೆಯಂಗಡಿ ಬೊಳ್ಳೂರು ನಿವಾಸಿ ಹನೀಫ್ ಎಂಬವರ ಪುತ್ರ ಫಾಝಿಲ್ ಎಂಬವರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಒಂದೇ ಕುಟುಂಬದ ಆರು ಮಂದಿ ಸಹೋದರರ ಮಕ್ಕಳು ರವಿವಾರ ಸಂಜೆ ಸಸಿಹಿತ್ಲು ಮೂಂಡಾ ಬೀಚ್‌ಗೆ ವಿಹಾರಕ್ಕೆಂದು ತೆರಳಿದ್ದರು. ಅವರು ನೀರಿನ‌ಲ್ಲಿ ಆಡುತ್ತಿದ್ದ ಸಂದರ್ಭ ಬೃಹತ್ ಅಲೆಯ ಸೆಳೆತಕ್ಕೆ‌ ಸಿಲುಕಿ ಮುಹಮ್ಮದ್ ಸಮೀರ್,‌ ಐಮಾನ್, ಫಾಝಿಲ್ ಸಮುದ್ರ ಪಾಲಾಗುತ್ತಿದ್ದರು. ಈ ವೇಳೆ ದಡದಲ್ಲಿದ್ದವರು ಬೊಬ್ಬೆ‌ ಹಾಕಿದ್ದು, ಬೊಬ್ಬೆ‌ಕೇಳಿ ಸ್ಥಳಕ್ಕೆ ಬಂದ ಸ್ಥಳೀಯ ಮೀನುಗಾರ ನಿವಾಸಿಗಳು ಮೂವರನ್ನೂ ರಕ್ಷಿಸಿ ಮುಕ್ಕದ ಖಾಸಗಿ…

Read More

ಮಂಗಳೂರು :‌ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ವ್ಯಕ್ತಿಯೋರ್ವನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್‌ ಹಪೀಜ್ ಎಂದು ಗುರುತಿಸಲಾಗಿದೆ. ಪ್ರಕರಣದ ಸಾರಾಂಶ : ದಿನಾಂಕ 22-08-2025 ರಂದು ಮದ್ಯಾಹ್ನ 13-00 ಗಂಟೆಗೆ ಪಿರ್ಯಾದಿದಾರರಾದ ಸಾಗರ್ ದೇವಕತ್ತಿ ಪಿಸಿ ಮತ್ತು ಪಿಸಿ ಸ್ವಾಮಿ ರವರು ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಮಂಗಳೂರು ನಗರದ ಪಾಂಡೇಶ್ವರ ರೈಲ್ವೇ ಹಳಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಆರೋಪಿ ಮೊಹಮ್ಮದ್ ಹಪೀಜ್ ಪ್ರಾಯ 20 ವರ್ಷ ವಾಸ: ಎಂ ಆರ್ ಭಟ್ ಲೇನ್ ಮಾರ್ನಮಿಕಟ್ಟೆ ಮಂಗಳೂರು ಎಂಬವರನ್ನು ಮದ್ಯಾಹ್ನ 13-20 ಗಂಟೆಗೆ ವಶಕ್ಕೆ ಪಡೆದುಕೊಂಡು ಸದ್ರಿ ವ್ಯಕ್ತಿಯು ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ತಪಾಸಣೆಗಾಗಿ ಮಂಗಳೂರು ನಗರದ ಎ.ಜೆ ಆಸ್ಪತ್ರೆಯ ವೈಧ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿ ಪರೀಕ್ಷೆಗೊಳಪಡಿಸಿದಾಗ, ಗಾಂಜಾ ಸೇವನೆ ಮಾಡಿರುವುದು ಧೃಡಪಟ್ಟಿರುವುದರಿಂದ ಆರೋಪಿಯ ವಿರುದ್ದ ಕಲಂ 27(a),…

Read More

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಠಾಣೆಯ ಶೌಚಾಲಯದಲ್ಲಿ ಬಂಧಿತ ಆರೋಪಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್​​ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಕರ್ತವ್ಯ ಲೋಪ ಹಿನ್ನಲೆ ಎಂ.ಕೆ.ದೊಡ್ಡಿ ಠಾಣೆಯ ಎಎಸ್ಐ ನಾಗರಾಜು, ಕಾನ್ಸ್‌ಟೇಬಲ್‌ಗಳಾದ ಪ್ರತಾಪ್‌, ಲಕ್ಷ್ಮೀನಾರಾಯಣ ಹಾಗೂ ಸೋಮನಾಥ್‌ ಅಮಾನತುಗೊಳಿಸಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಆದೇಶಿಸಿದ್ದಾರೆ. ಕಳ್ಳತನ ಕೇಸ್‌ನಲ್ಲಿ ಆರೋಪಿ ರಮೇಶ್​ ಅರೆಸ್ಟ್‌ ಆಗಿದ್ದ. ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದುಂಡನಹಳ್ಳಿ ನಿವಾಸಿ ರಮೇಶ್​, ಆಗಸ್ಟ್ 20ರಂದು ಠಾಣೆಯ ಶೌಚಾಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಹೀಗಾಗಿ ಕರ್ತವ್ಯ ಲೋಪ ಕಂಡುಬಂದ ಹಿನ್ನಲೆ ಎಎಸ್​​ಐ ಸೇರಿ ಮೂವರು ಪೊಲೀಸ್ ಸಿಬ್ಬಂದಿಯನ್ನ ಅಮಾನತು ಮಾಡಲಾಗಿದೆ. ನಡೆದದ್ದೇನು? ಎರಡು ತಿಂಗಳ ಹಿಂದೆ ಚನ್ನಪಟ್ಟಣ ತಾಲ್ಲೂಕಿನ ಬೊಮ್ಮನಾಯಕನಹಳ್ಳಿ ಗ್ರಾಮದ ದೇವಸ್ಥಾನವೊಂದರಲ್ಲಿ ದೇವಸ್ಥಾನದ ಬಾಗಿಲು ಒಡೆದು ಹುಂಡಿ ಕಳ್ಳತನ ಮಾಡಿದ್ದರು. ಪ್ರಕರಣ ಸಂಬಂಧ ಆರೋಪಿ ರಮೇಶ್, ಮಂಜು ಹಾಗೂ ಮಂಜುನ ಸ್ನೇಹಿತ ಶ್ರೀನಿವಾಸ್ ಎಂಬಾತನನ್ನ ಪೊಲೀಸರು ಬಂಧಿಸಿದ್ದರು. ಆಗಸ್ಟ್ 18ರಂದು ಚನ್ನಪಟ್ಟಣದ…

Read More

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ರ ವಯಸ್ಸಿನ ಯುವತಿಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಸಮೀರ್ (20) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 55 ಸಾವಿರ ರೂ. ದಂಡ ವಿಧಿಸಿದೆ. ನ್ಯಾಯಾಧೀಶ ಮಾನು ಕೆ.ಎಸ್. ಶನಿವಾರ ಈ ತೀರ್ಪು ನೀಡಿದ್ದಾರೆ. ಮೂಲ್ಕಿ ಕಾರ್ನಾಡು ಲಿಂಗಪ್ಪಯ್ಯ ಕಾಡಿನ ಬಿಜಾಪುರ ಕಾಲನಿ ನಿವಾಸಿ ಸಮೀರ್ ಎಂಬಾತ ಅಪ್ರಾಪ್ತ ಯುವತಿಯ ತಾಯಿ ನಡೆಸುತ್ತಿದ್ದ ಹೊಟೇಲ್‌ಗೆ ಕೋಳಿ ಮಾಂಸದ ಲೈನ್‌ಸೇಲ್ ಮಾಡುತ್ತಿದ್ದ. ಯುವತಿ ಶಿಕ್ಷಣ ಮೊಟಕುಗೊಳಿಸಿ ಮನೆಯಲ್ಲಿದ್ದು, ಆಕೆಯ ಪರಿಚಯ ಮಾಡಿಕೊಂಡ ಆರೋಪಿ ಮದುವೆಯಾಗುವುದಾಗಿ ನಂಬಿಸಿದ್ದ. 2024ರ ಜೂ.24ರಂದು ಬಾಲಕಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರದ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಳಿಕ ಅಲ್ಲಿಂದ ಕಾರಿನಲ್ಲಿ ಆಕೆಯನ್ನು ಚಿತ್ರದುರ್ಗಕ್ಕೆ ಮತ್ತು ಬಸ್ಸಿನಲ್ಲಿ ಬೆಂಗಳೂರಿಗೆ ಕರೆದು ಕೊಂಡುಹೋಗಿದ್ದ. ನಂತರ ಖಾಸಗಿ ಬಸ್ಸಿನಲ್ಲಿ ಮುಂಬೈಗೆ ಕರೆದೊಯ್ದಿದ್ದ. ಅಲ್ಲಿ ಬಾಡಿಗೆ ಮನೆ ಹುಡುಕಾಟ ನಡೆಸಿ ಸಿಗದಿದ್ದಾಗ…

Read More

ಬೆಂಗಳೂರು: ಗಣೇಶ ಚತುರ್ಥಿ ಮತ್ತು ಈದ್-ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮೆರವಣಿಗೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಡಿಜೆ ಬಳಕೆ ನಿಷೇಧಿಸಿ ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸ್ ಜಂಟಿ ಆಯುಕ್ತರು ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರ ವಿಭಾಗೀಯ ಪೀಠವು ಅರ್ಜಿ ವಿಚಾರಣೆ ನಡೆಸಿತು. ಅರ್ಜಿದಾರ ಶಂಕರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಮೆರವಣಿಗೆ ಮತ್ತು ಸಾರ್ವಜನಿಕ ಮಂಟಪಗಳಲ್ಲಿ ಡಿಜೆ ನಿಷೇಧದ ಪೊಲೀಸರ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದೆ. ಕರ್ನಾಟಕ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘದ ಪದಾಧಿಕಾರಿಯಾಗಿದ್ದ ಶಂಕರ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿದಾರ ಶಂಕರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಗೌರಿ-ಗಣೇಶ ಹಬ್ಬ ಹಾಗೂ ಈದ್-ಮಿಲಾದ್ ಹಬ್ಬಕ್ಕೆ ಡಿಜೆ ನಿಷೇಧ ವಿಚಾರದಲ್ಲಿ ಪೊಲೀಸರ ನಿರ್ಧಾರಕ್ಕೆ ಅಸ್ತು ಅಂದಿದೆ.

Read More

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಅಣ್ಣ ತಾನಾಸಿಯನ್ನು ಇದೀಗ ಪೊಲೀಸರು ವಶಕ್ಕೆ‌‌ ಪಡೆದಿದ್ದಾರೆ. ಇಂದು ಬೆಳಗ್ಗೆ ತಾನಾಸಿ ಕೆಲಸಕ್ಕೆ ಹೋಗಿದ್ದರು. ಕೆಲಸ ಮಾಡುತ್ತಿದ್ದ ಜಾಗಕ್ಕೆ ಹೋಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಸ್‌ಐಟಿ (SIT) ವಿಚಾರಣೆಯ ಸಂದರ್ಭದಲ್ಲಿ ಚಿನ್ನಯ್ಯ ಅಣ್ಣ ತಾನಾಸಿಯ ಬಗ್ಗೆ ಕೆಲ ಮಾಹಿತಿ ತಿಳಿಸಿದ್ದ ಹಿನ್ನೆಲೆಯಲ್ಲಿ ಈಗ ಅಣ್ಣನನ್ನು ವಶಕ್ಕೆ ಪಡೆದಿದೆ. ಎಸ್‌ಐಟಿ ಚಿನ್ನಯ್ಯನ ವಿಚಾರಣೆ ನಡೆಸುತ್ತಿದ್ದ ವೇಳೆ ತಾನು ಹೆಣ ಹೂಳುತ್ತಿರುವ ವಿಚಾರ ಅಣ್ಣ ತಾನಾಸಿಗೂ ತಿಳಿದಿತ್ತು ಎಂದು ಹೇಳಿದ್ದ. ಈ ಕಾರಣಕ್ಕೆ ತಾನಾಸಿಯನ್ನು ಎಸ್‌ಐಟಿ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಬೆಳ್ತಂಗಡಿ ಕೋರ್ಟ್‌ ಈಗ ಚಿನ್ನಯ್ಯನನ್ನು 10 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿದೆ. ಶುಕ್ರವಾರ ವಿಚಾರಣೆಗೆ ಬಂದಿದ್ದ ಚಿನ್ನಯ್ಯನಿಗೆ ಎಸ್‌ಐಟಿ ಪೊಲೀಸರು ನಿರಂತರ ಪ್ರಶ್ನೆ ಕೇಳಿದ್ದರು. ರಾತ್ರಿಯೂ ಬೆಳ್ತಂಗಡಿ ಠಾಣೆಯಲ್ಲೇ ಇದ್ದ ಚಿನ್ನಯ್ಯನನ್ನು ಇಂದು ಬೆಳಗ್ಗೆ ಬಂಧಿಸಿದ್ದರು.

Read More

ಬೆಳ್ತಂಗಡಿ: ಕಳೆದೆರಡು ತಿಂಗಳಿನಿಂದ ದೇಶದೆಲ್ಲೆಡೆ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣ ಇದೀಗ ಮಹತ್ವದ ತಿರುವು ಪಡೆದಿದೆ. ಬುರುಡೆ ಹಿಡಿದುಕೊಂಡು ಬಂದು ದೂರು ನೀಡಿದ್ದ ಅನಾಮಿಕ ದೂರುದಾರನನ್ನು ಇದೀಗ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಶನಿವಾರ (ಆ.23) ದೂರುದಾರ ಮಾಸ್ಕ್‌ಮ್ಯಾನ್ (ಸಿ.ಎನ್.ಚಿನ್ನಯ್ಯ) ನನ್ನು ಎಸ್‌ಐಟಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ. ಬೆಳಗ್ಗೆ ವೈದ್ಯಕೀಯ ತಪಾಸಣೆಯ ಬಳಿಕ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಜೆಎಂಎಫ್‌ಎಸ್‌ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಅಲ್ಲಿ ಆತನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ಅಧಿಕಾರಿಗಳು ಶುಕ್ರವಾರ (ಆ.22) ದೂರುದಾರ ಮತ್ತು ಈ ಹಿಂದೆ ಅನಾಥ ಶವಗಳ ಪೋಸ್ಟ್ ಮಾರ್ಟಂ ಮಾಡಿದ್ದ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದರು. ಇದರ ಮುಂದುವರಿದ ಭಾಗವಾಗಿ ಶನಿವಾರ ಪ್ರಮುಖ ದೂರುದಾರ ಮಾಸ್ಕ್ ಮ್ಯಾನ್ ನನ್ನು ಬಂಧಿಸಿದ್ದಾರೆ. ಇದೀಗ ಈ ದೂರುದಾರನ ಗುರುತು ಬಹಿರಂಗವಾಗಿದೆ. ಮಂಡ್ಯ ಜಿಲ್ಲೆಯ ಸಿ.ಎನ್.ಚಿನ್ನಯ್ಯ ಎಂಬ ಹೆಸರಿನ ಈ ವ್ಯಕ್ತಿ ದೂರು ನೀಡಿದಾತ…

Read More

ಕಾಪು: ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದ ವೇಳೆ ಕಾರು ಪಲ್ಟಿಯಾದ ಪರಿಣಾಮ ಓರ್ವ ಸಾವನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮೂಳೂರು ಸಮೀಪದ ಹಳ್ಳಿ ಮನೆ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ ನಡೆದಿದೆ. ಮೃತರನ್ನು ಬೆಳ್ಮಣ್ ನ ಮಾರ್ವಿನ್ ಮೆಂಡೊನ್ಸಾ ಎಂದು ಗುರುತಿಸಲಾಗಿದೆ. ಸಿನಿಮಾಟೋಗ್ರಾಫರ್ ಆಗಿದ್ದ ಮರ್ವಿನ್ ಡಿ ಜೆ ವೃತ್ತಿಯನ್ನು ಮಾಡುತ್ತಿದ್ದರು. ಗಾಯಾಳುಗಳಾದ ಕಾರು ಚಾಲಕ ಅಂಬಲಪಾಡಿಯ ಪ್ರಜ್ವಲ್, ಕಾರ್ಕಳದ ಪ್ರಸಾದ್ ಮತ್ತು ವಿಘ್ನೇಶ್ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕಾರಿನಲ್ಲಿ ಅಂಬಲಪಾಡಿಯಿಂದ ಬೆಳ್ಮಣ್ ಗೆ ಹೋಗುತ್ತಿದ್ದಾಗ ನಾಯಿಯೊಂದು ಕಾರಿಗೆ ಅಡ್ಡ ಬಂದಿದೆ ಎನ್ನಲಾಗಿದೆ. ಇದರ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದೆ ಎಂದು ತಿಳಿದು ಬಂದಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಚ್ಚಿಲ ಹಾಗೂ ಮೂಳೂರಿನ ಎಸ್‌ಡಿಪಿಐ ಆಂಬುಲೆನ್ಸ್ ಗಳು ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಖಲಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಾರ್ವೀನ್…

Read More