Author: main-admin

ಮೂಡುಬಿದಿರೆ: ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಯನ್ನು ಕುಕ್ಕಡೇಲು, ಕರಿಯನಂಗಡಿ, ಬೆಳವಾಯಿ ಗ್ರಾಮ ಮತ್ತು ಅಂಚೆ ಮೂಡಬಿದರೆ ರೆಹ್ಮಾನ( 60) ಎಂದು ಗುರುತಿಸಲಾಗಿದೆ. ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ಓರ್ವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುತ್ತದೆ. ವಿಡಿಯೋದಲ್ಲಿ ಯುವತಿಯ ಮುಖ ಚಹರೆ ಸರಿಯಾಗಿ ಕಂಡು ಬರದ ಕಾರಣ ಗುರುತಿಸಲು ಅಸಾಧ್ಯವಾಗಿರುತ್ತದೆ. ಈ ಬಗ್ಗೆ ಆರೋಪಿಯನ್ನು ಠಾಣೆಗೆ ಕರೆಯಿಸಿ ವಿಚಾರಿಸಲಾಗಿದ್ದು ಆತನಿಗೂ ಸಹ ಸಂತ್ರಸ್ತ ಯುವತಿಯ ಬಗ್ಗೆ ಮಾಹಿತಿ ಇರುವುದಿಲ್ಲ. ಆದುದರಿಂದ ಸಂತ್ರಸ್ತ ಯುವತಿ ಅಥವಾ ಘಟನೆಯ ಕುರಿತು ವಿಡಿಯೋ ಚಿತ್ರೀಕರಣ ಮಾಡಿರುವ ವ್ಯಕ್ತಿಗಳು ನೇರವಾಗಿ ಪೊಲೀಸ್ ಠಾಣೆಗೆ ಅಗಮಿಸಿ ದೂರು ನೀಡಬಹುದಾಗಿದೆ. ದೂರನ್ನು ನೀಡಬಹುದಾಗಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೂಡಬಿದಿರೆ ಪೊಲೀಸ್ ನೀರಿಕ್ಷಕ ಸಂದೇಶ್ ಪಿ.ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು : ನಗರದಲ್ಲಿ  ವ್ಯಕ್ತಿಯೊಬ್ಬರ ಬಳಿ ಕಸ್ಟಮ್ ಅಧಿಕಾರಿಗಳು ಎಂದು‌ ಹೇಳಿ ಅವರ ಹತ್ತಿರ ಇದ್ದ ಚಿನ್ನವನ್ನು ದರೋಡೆ ಮಾಡಿದ ಪ್ರಕರಣ ಸಂಭವಿಸಿದೆ. ಚಿನ್ನ ಕಳೆದುಕೊಂಡ ವ್ಯಕ್ತಿ ಶ್ರೀ ಹರ ಎಂದು ತಿಳಿದು ಬಂದಿದೆ. ದರೋಡೆಕೋರರು ಇನ್ನೋವಾ ಕಾರಿನಲ್ಲಿ ಬಂದು ದರೋಡೆ ಮಾಡಿ‌ ಹೋಗಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ. ಪ್ರಕರಣದ ಸಾರಾಂಶ : ಫಿರ್ಯಾದುದಾರರಾದ ಶ್ರೀ ಹರಿ, ವೃತ್ತಿ; ಜ್ಯುವೆಲ್ಲರಿ ಶಾಪ್, ಇವರನ್ನು ಯಾರೋ ಆರು ಜನ ಆಪಾದಿತರು ಫಿರ್ಯಾದುದಾರರ ಬಳಿ ಇರುವ 350 ಗ್ರಾಂ ತೂಕದ ಬಂಗಾರದ ಗಟ್ಟಿಯನ್ನು ದರೋಡೆ ಮಾಡುವ ಉದ್ದೇಶದಿಂದ ದಿನಾಂಕ; 13-08-2025 ರಂದು ಬೆಳಿಗ್ಗೆ 07-00 ಗಂಟೆಯ ಸುಮಾರಿಗೆ ಮಂಗಳೂರು ಸೆಂಟ್ರಲ ರೇಲ್ವೆ ನಿಲ್ದಾಣದ ಹತ್ತಿರದ ಕೈರಾಲಿ ಹೊಟೆಲ್ ಬಳಿ ಆಟೋ ಕಾಯುತ್ತಿದ್ದ ಫಿರ್ಯಾದುದಾರರಿಗೆ, ತಾವು ಕಸ್ಟಮ್ ಅಧಿಕಾರಿಗಳು, ನಿಮ್ಮನ್ನು ಪರಿಶೀಲನೆ ಮಾಡಬೇಕು ತಮ್ಮೊಂದಿಗೆ ಬನ್ನಿ ಅಂತಾ ಗದರಿಸಿ, ಫಿರ್ಯಾದುದಾರರನ್ನು ಹಿಡಿದುಕೊಂಡು ಬಲವಂತವಾಗಿ 24ಬಿಹೆಚ್8102ಜಿ ಎಂಬ ನಂಬರ್ ಬರೆದುಕೊಂಡಿರುವ ಬಿಳೆ ಬಣ್ಣದ ಇನ್ನೋವಾ ಕಾರಿನ ಮೇಲೆ…

Read More

ದೇಗುಲದ ವಾತಾವರಣವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕದ ಎಲ್ಲಾ ದೇವಸ್ಥಾನಗಳ ಒಳಾಂಗಣದಲ್ಲಿ ಪ್ಲಾಸ್ಟಿಕ್ ಬಳಕೆ ಬ್ಯಾನ್‌ ಮಾಡಲಾಗಿದೆ ಈ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ರಾಮನಗರದಲ್ಲಿ ಹೇಳಿದ್ದಾರೆ. ದೇವಸ್ಥಾನದ ಒಳಗೆ ಪ್ಲಾಸ್ಟಿಕ್ ನಿಷೇಧವಿದ್ದು, ಹೊರಭಾಗದಲ್ಲಿ ನಿಷೇಧ ಹೇರುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧರಿಸಲಿವೆ. ಇದರ ಜೊತೆಗೆ, ದೇವಸ್ಥಾನಗಳಲ್ಲಿ ಪೂಜೆ ಮಾಡುವಾಗ ಸಂಸ್ಕೃತದ ಬದಲಿಗೆ ಕನ್ನಡದಲ್ಲಿ ಶ್ಲೋಕಗಳನ್ನು ಹೇಳುವಂತೆ ಸೂಚನೆ ನೀಡುವ ಬಗ್ಗೆ ಸರ್ಕಾರವು ಚಿಂತನೆ ನಡೆಸಲಾಗುತ್ತಿದೆ ಎನ್ನಲಾಗುತ್ತಿದೆ. ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ರಾಮನಗರದಲ್ಲಿ ಈ ವಿಷಯ ತಿಳಿಸಿದರು. ದೇವಸ್ಥಾನದ ಒಳಾಂಗಣದಲ್ಲಿ ಪ್ಲಾಸ್ಟಿಕ್ ಬಳಸುವುದನ್ನು ನಿಷೇಧಿಸಲಾಗಿದೆ. ದೇವಸ್ಥಾನದ ಹೊರಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧಾರ ಮಾಡುತ್ತವೆ. ಈ ನಿರ್ಧಾರವನ್ನು ಪರಿಸರದ ಸ್ವಚ್ಛತೆಯನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಳ್ಳಲಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ವಿವರಿಸಿದರು. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಜಾರಿಗೊಳಿಸಲಾಗುತ್ತಿದೆ. ಇದನ್ನು…

Read More

ಬಂಟ್ವಾಳ: ಧೈರ್ಯವಂತ ಮತ್ತು ಪ್ರಾಮಾಣಿಕ ಹಾಗೂ ದಕ್ಷ ಪೊಲೀಸ್ ಅಧಿಕಾರಿಯಾಗಿರುವ ಬಂಟ್ವಾಳದ ವಗ್ಗ ನಿವಾಸಿ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರಿಗೆ ರಾಷ್ಟ್ರಪತಿ ಪ್ರಶಸ್ತಿ ಲಭಿಸಿದೆ. ವೃತ್ತಿ ಜೀವನದಲ್ಲಿ ಸಾರ್ವಜನಿಕ ಸೇವೆಯಲ್ಲಿ ಇವರ ಅಪಾರವಾದ ಸಮರ್ಪಣೆ, ಶಿಸ್ತು, ನಿಷ್ಠೆ ಹಾಗೂ ಸೇವಾ ಮನೋಭಾವವನ್ನು ಗುರುತಿಸಿ ನೀಡಲ್ಪಟ್ಟ ರಾಷ್ಟ್ರಪತಿಯವರ ಮೆರಿಟೋರಿಯಸ್ ಸರ್ವೀಸ್ ಅವಾರ್ಡ್ ಗೌರವ ಪಡೆದಿರುವುದು ಕರ್ನಾಟಕಕ್ಕೆ ಸಂದ ಗೌರವ.   ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ, ಅಪರಾಧ ತಡೆಗಟ್ಟುವಲ್ಲಿ, ಸಮುದಾಯದೊಂದಿಗೆ ಸಕ್ರಿಯವಾಗಿ ಬೆರೆತು ಇವರು ಕಾರ್ಯ ನಿರ್ವಹಿಸಿದ್ದಾರೆ. 2016 ರಲ್ಲಿ ಅತ್ಯುತ್ತಮ ಸೇವೆಗಾಗಿ ಮುಖ್ಯಮಂತ್ರಿಗಳಿಂದ ಚಿನ್ನದ ಪದಕವೂ ಅವರಿಗೆ ಲಭಿಸಿತ್ತು. ಇಂತಹ ನಿಸ್ವಾರ್ಥ ಸೇವಾ ಮನೋಭಾವದ ಶಾಂತಾರಾಮ್ ಕುಂದರ್ ರವರಿಗೆ ರಾಷ್ಟ್ರಪತಿಗಳಿಂದ ಅತ್ಯುನ್ನತ ಗೌರವ ಪ್ರಶಸ್ತಿ ಲಭಿಸಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಶಾಂತಾರಾಮ್ ಕುಂದರ್ ಅವರು ತಮ್ಮ ವೃತ್ತಿ ಜೀವನದಲ್ಲಿ ನೈತಿಕತೆ, ವೃತ್ತಿಪರತೆ, ಪ್ರಾಮಾಣಿಕತೆ, ಧೈರ್ಯ ಮತ್ತು ಜನ ಸ್ನೇಹಿ ಕಾರ್ಯಶೈಲಿಗಾಗಿ ಈಗಾಗಲೇ ಹಲವು ಕಡೆ ಗೌರವಿಸಲ್ಪಟ್ಟಿದ್ದಾರೆ.

Read More

ಬಳ್ಳಾರಿಯಲ್ಲಿ ಘೋರವಾದ ದುರಂತವೊಂದು ಆಭವಿಸಿದ್ದು, ಪಿಎಸ್ಐ ಪತ್ನಿ ಒಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊಕ ಪಿಎಸ್ಐ ಕೆ. ಕಾಳಿಂಗ ಪತ್ನಿ ಚೈತ್ರ ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು ಮೊಕ ಠಾಣೆಯಲ್ಲಿ PSI ಆಗಿರುವ ಕೆ.ಕಾಳಿಂಗ ಅವರ ಪತ್ನಿ ಚೈತ್ರ ನೇಣಿಗೆ ಶರಣಾಗಿದ್ದಾರೆ. ಇಂದು ಆಗಸ್ಟ್ 15 ಹಿಂನ್ನೇಲೇ ಮಕ್ಕಳು ಪತಿಯನ್ನು ಧ್ವಜಾರೋಹಣಕ್ಕೆ ಕಳುಹಿಸಿದ್ದಾರೆ. ಮಕ್ಕಳು ಮತ್ತು ಪತಿ ಧ್ವಜಾರೋಹಣಕ್ಕೆ ಹೋದ ಬಳಿಕ ಚೈತ್ರ ನೇಣು ಬಗೆದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ.ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಬೆಳ್ತಂಗಡಿ: ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರಿಂದ ತುಂಬಾ ಸಮಯದಿಂದ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಆ.14 ರಂದು ಕಾರ್ಕಳದಲ್ಲಿ ಬಂಧಿಸಿ, ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಮಹಮ್ಮದ್ ರಫೀಕ್ ಅಲಿಯಾಸ್ ಮದ್ದಡ್ಕ ರಫೀಕ್ (39) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಾಪುರ್ ಮರ್ ನೇತೃತ್ವದ ಪೊಲೀಸರ ತಂಡ ಆರೋಪಿಯನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದೆ. ಆರೋಪಿಯ ವಿರುದ್ಧ ಈಗಾಗಲೇ ಬೆಳ್ತಂಗಡಿ ಪೊಲೀಸ್ ಠಾಣೆ, ವೇಣೂರು ಪೊಲೀಸ್ ಠಾಣೆ, ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆ, ಬಣಕಲ್ ಪೊಲೀಸ್ ಠಾಣೆ, ದ.ಕ ಜಿಲ್ಲಾ ಸೆನ್ ಪೊಲೀಸ್ ಠಾಣೆ, ಹಾಗೂ ಬಂಟ್ವಾಳ ಅಬಕಾರಿ ಠಾಣೆ, ಬೆಳ್ತಂಗಡಿ ಅಬಕಾರಿ ಠಾಣೆಯಲ್ಲಿ ಗಾಂಜಾ ಪ್ರಕರಣಗಳು ದಾಖಲಾಗಿರುತ್ತದೆ.

Read More

ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ರೋಶನ್ ಸಲ್ದಾನನ ವಿರುದ್ಧ ದಾಖಲಾಗಿದ್ದ ನಾಲ್ಕು ಪ್ರಕರಣಗಳನ್ನು ಮತ್ತೆ ಸಿಐಡಿಗೆ ಹಸ್ತಾಂತರಿಸಿ ಡೈರೆಕ್ಟರ್ ಜನರಲ್ ಆ್ಯಂಡ್ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಜಿ-ಐಜಿಪಿ) ಪಿ. ಹರಿಶೇಖರನ್ ಬುಧವಾರ ಆದೇಶ ಹೊರಡಿಸಿದ್ದಾರೆ. ಉದ್ಯಮಿಗಳಿಗೆ ಸಾಲ ಕೊಡುವುದಾಗಿ ಹೇಳಿ ಬಳಿಕ ವಂಚಿಸುತ್ತಿದ್ದ ರೋಶನ್ ಸಲ್ದಾನನನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು. ಆ ಬಳಿಕ ಆತನ ವಿರುದ್ಧ ವಂಚನೆಗೊಳಗಾದವರು ದೂರು ನೀಡಿದ್ದರು. ಇದೀಗ ಈತನ ವಿರುದ್ಧ ಮಂಗಳೂರಿನ ಸೆನ್ ಮತ್ತು ಕಂಕನಾಡಿ ನಗರ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ಈಗಾಗಲೆ ಈತನ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದನ್ನು ಸಿಐಡಿಗೆ ಹಸ್ತಾಂತರಿಸಲಾ ಗಿತ್ತು. ಇದೀಗ ಮತ್ತೆ ನಾಲ್ಕು ಪ್ರಕರಣ ಸಿಐಡಿಗೆ ಹಸ್ತಾಂತರಿಸಲಾಗಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವ ನೆಪದಲ್ಲಿ ಅನೇಕ ಉದ್ಯಮಿಗಳಿಂದ ಸ್ಟಾಂಪ್ ಟ್ಯೂಟಿಗಾಗಿ ಹಣ ವಸೂಲಿ ಮಾಡಿ, ಭರವಸೆ ನೀಡಿದ ಸಾಲಗಳನ್ನು ನೀಡದೆ ವಂಚನೆ ಮಾಡಿದ ರೋಶನ್ ಸಲ್ದಾನ, ಆತನ ಪತ್ನಿ ಡಫ್ನಿ ನೀತು ಡಿಸೋಜ ಮತ್ತಿತರರ ವಿರುದ್ಧ ಕಾನೂನು…

Read More

ಮಂಗಳೂರು: ಭಾರತದ 79ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಇಂದು ಪಂಪ್ ವೆಲ್‌ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮವು ಬೆಳಿಗ್ಗೆ 8ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಸಂಸ್ಥೆಯ ಸಿಬ್ಬಂದಿಗಳು, ಕಾರ್ಮಿಕರು ಹಾಗೂ ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ರವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ರೋಹನ್ ಕಾರ್ಪೊರೇಷನ್ ಸಂಸ್ಥೆಯ ಸ್ಥಾಪಕರಾದ ರೋಹನ್ ಮೊಂತೆರೋರವರು, “ಸ್ವಾತಂತ್ರ್ಯವು ಕೇವಲ ಒಂದು ದಿನದ ಆಚರಣೆಯಲ್ಲ; ಪ್ರತಿದಿನವೂ ಅದನ್ನು ಕಾಪಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಯುವ ಪೀಳಿಗೆ ದೇಶಾಭಿವೃದ್ಧಿಯಲ್ಲಿ ತೊಡಗಿಕೊಳ್ಳುವುದು ಅತ್ಯವಶ್ಯಕ ” ಎಂದು ಹೇಳಿದರು. ಈ ಸಂದರ್ಭದಲ್ಲಿ ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ಅವರು ರಾಷ್ಟ್ರಸೇವೆಗೆ ಸಲ್ಲಿಸಿದ ಮಹತ್ತರ ಕೊಡುಗೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಧನ್ಯವಾದ ಸ್ವೀಕರಿಸಿ ಮಾತನಾಡಿನ ಅವರು “ದೇಶ ಸೇವೆ ನನ್ನ ಜೀವನದ ಅತ್ಯಂತ ಹೆಮ್ಮೆಯ ಕ್ಷಣ. ಈ ಗೌರವ ನನ್ನ ನಿವೃತ್ತ ಜೀವನದಲ್ಲೂ…

Read More

ಬೆಂಗಳೂರು: 2025ರ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಕೆಳಕಂಡ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ರಾಷ್ಟ್ರಪತಿಯವರ ಪೊಲೀಸ್ ವಿಶಿಷ್ಟ ಸೇವಾ ಪದಕ ಮತ್ತು ಪೊಲೀಸ್ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿರುತ್ತಾರೆ. ಹೀಗಿದೆ ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕ ಪುರಸ್ಕೃತರ ಪಟ್ಟಿ 1.ಎಸ್ ಬದರಿನಾಥ್ ಎಸ್‌ಪಿ, ಕೆಎಲ್‌ಎ, ಬೆಂಗಳೂರು ಹೀಗಿದೆ ಅತ್ಯುತ್ತಮ ಸೇವಾ ಪದಕ ಪ್ರಶಸ್ತಿ ಪುರಸ್ಕೃತರ ಪಟ್ಟಿ 1.ಡಾ.ಚಂದ್ರಗುಪ್ತ, ಐಪಿಎಸ್, ಐಜಿಪಿ, ಜಾಯಿಂಟ್ ಡೈರೆಕ್ಟರ್, ರಾಜ್ಯ ಗುಪ್ತದಳ, ಬೆಂಗಳೂರು 2.ಕೆ.ಎಂ ಶಾಂತರಾಜು, ಐಪಿಎಸ್, ಎಸ್ಪಿ, ಐಎಸ್ ಡಿ ಬೆಂಗಳೂರು 3.ಕಲಾ ಕೃಷ್ಣಸ್ವಾಮಿ, ಐಪಿಎಸ್, ಎಐಜಿಪಿ, ಕ್ರೈಂ, ಬೆಂಗಳೂರು ಹೀಗಿದೆ ಶ್ರೇಷ್ಠ ಸೇವೆಗೆ ಪೊಲೀಸ್ ಪದಕ ಪುರಸ್ಕೃತರ ಪಟ್ಟಿ ಎನ್ ವೆಂಕಟೇಶ್ಎಸ್‌ಪಿ, ಸಿಐಡಿ ಬೆಂಗಳೂರುಡಾ. ರಾಮಕೃಷ್ಣ ಮುದ್ದೇಪಾಲಕಮಾಂಡೆAಟ್, 9ನೇ ಪಡೆ, ಕೆ.ಎಸ್.ಆರ್.ಪಿ, ಬೆಂಗಳೂರುಪ್ರಕಾಶ ರಾಠೋಡ ಎಸಿಪಿ,, ಕೆ.ಜಿ.ಹಳ್ಳಿ ಉಪ-ವಿಭಾಗ ಬೆಂಗಳೂರು ನಗರಜಿ ಪ್ರವೀಣ್ ಬಾಬುಪೊಲೀಸ್ ಇನ್ಸ್ಪೆಕ್ಟರ್, ಮಹದೇವಪುರ ಪೊಲೀಸ್ ಠಾಣೆ, ಬೆಂಗಳೂರು ನಗರಬಿ.ಎಸ್. ಸತೀಶ್. ಪೊಲೀಸ್ ಇನ್ಸ್ಪೆಕ್ಟರ್, ಪರಪ್ಪನ ಅಗ್ರಹಾರ…

Read More

ಬೆಂಗಳೂರು : ಕನ್ನಡ ಚಲನಚಿತ್ರ ನಟ ದರ್ಶನ್ ತೂಗುದೀಪ ಅವರು ಗುರುವಾರ (ಆಗಸ್ಟ್ 14, 2025) ಹೊಸಕೆರೆಹಳ್ಳಿಯಲ್ಲಿರುವ ತಮ್ಮ ಪತ್ನಿಯ ಅಪಾರ್ಟ್‌ಮೆಂಟ್‌ಗೆ ಬಂದಿಳಿದ ಕೂಡಲೇ ಅವರನ್ನು ಬಂಧಿಸಲಾಯಿತು. ಸುಪ್ರೀಂ ಕೋರ್ಟ್ ಜಾಮೀನು ರದ್ದತಿಯ ಬಗ್ಗೆ ಪೊಲೀಸರು ಸಂದೇಶ ಕಳುಹಿಸಿ ಪೊಲೀಸರ ಮುಂದೆ ಹಾಜರಾಗುವಂತೆ ಹೇಳಿದ ಕೂಡಲೇ, ಠಾಣೆಯಿಂದ ಹೊರಗೆ ಹೋಗಿದ್ದ ಕನ್ನಡ ನಟ ದರ್ಶನ್ ನಗರಕ್ಕೆ ಮರಳಿದರು. ತಮ್ಮ ಅತ್ಯಾಧುನಿಕ ಎಸ್‌ಯುವಿಯಲ್ಲಿ ಬಂದ ದರ್ಶನ್, ಅಪಾರ್ಟ್‌ಮೆಂಟ್ ಹೊರಗೆ ತನಗಾಗಿ ಕಾಯುತ್ತಿದ್ದ ಮಾಧ್ಯಮದವರನ್ನು ಮೋಸಗೊಳಿಸಲು ಕಾರನ್ನು ಬದಲಾಯಿಸಿದರು ಮತ್ತು ಹಿಂಬಾಗಿಲಿನ ಮೂಲಕ ಬೇರೆ ಕಾರಿನಲ್ಲಿ ಫ್ಲಾಟ್ ತಲುಪಿದರು. ಇದಕ್ಕೂ ಮೊದಲು, ಪೊಲೀಸರು ಆತನ ಮಹಿಳಾ ಸ್ನೇಹಿತೆ ಮತ್ತು ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮತ್ತು ಇತರ ಆರು ಜನರನ್ನು ಬಂಧಿಸಿ, ಔಪಚಾರಿಕತೆಗಳನ್ನು ಪೂರ್ಣಗೊಳಿಸಲು ಎಪಿ ನಗರ ಪೊಲೀಸ್ ಠಾಣೆಗೆ ಕರೆದೊಯ್ದರು.ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಹಾಜರುಪಡಿಸಿದ್ದಾರೆ.

Read More