ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿನ ಬುರುಡೆ ಪ್ರಕರಣದ ಆರೋಪಿ ಮಂಡ್ಯದ ಚಿನ್ನಯ್ಯ ಸಿ.ಎನ್. ಮತ್ತು ಆತನ ಪತ್ನಿ ಮಲ್ಲಿಕಾ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ತಿಮರೋಡಿ ಮಹೇಶ್ ಶೆಟ್ಟಿಯ ಆಪ್ತರಲ್ಲಿ ಓರ್ವರಾದ ಗುತ್ತಿಗೆದಾರ ಉಜಿರೆ ನಿವಾಸಿ ನಿತಿನ್ ಯಾನೆ ನೀತು ಅವರನ್ನು ಎಸ್ಐಟಿ ನೋಟಿಸ್ ನೀಡಿ ವಿಚಾರಣೆ ಆರಂಭಿಸಿದೆ. ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿದ ಬಗ್ಗೆ ಎಸ್ಐಟಿ ದಾಖಲೆ ಮುಂದಿಟ್ಟು ವಿಚಾರಣೆ ಮಾಡಿದಾಗ ಹಣ ವರ್ಗಾವಣೆ ಮಾಡಿದ್ದನ್ನು ನಿತಿನ್ ಒಪ್ಪಿಕೊಂಡಿದ್ದಾನೆ. ಹೀಗಾಗಿ ಆತನ ಮೊಬೈಲನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹಣ ವರ್ಗಾವಣೆ ವಿಚಾರವಾಗಿ ಈಗಾಗಲೇ ಹಲವು ವದಂತಿಗಳು ಸೃಷ್ಟಿಯಾಗಿದ್ದು, ನಗದು ರೂಪದಲ್ಲಿ ಹಲವು ಲಕ್ಷ ರೂ. ಮತ್ತು 3 ಲಕ್ಷ ರೂ. ಹಂತಹಂತವಾಗಿ ಬ್ಯಾಂಕ್ ಮೂಲಕ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿತ್ತು. ಅದರಂತೆ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿದ ವಿಚಾರವಾಗಿ ದಾಖಲೆಗಳು ಎಸ್ಐಟಿಗೆ ಲಭಿಸಿದ್ದರಿಂದ ಮಹೇಶ್ ಶೆಟ್ಟಿ ತಿಮರೋಡಿಯ ಹಲವಾರು ಮಂದಿ…
Author: main-admin
ಮಂಗಳೂರು: ನಗರದಲ್ಲಿ ಮಾದಕ ವಸ್ತು ಮಾರಾಟ ಜಾಲವನ್ನು ಪತ್ತೆ ಹಚ್ಚಿದ ಸಿಸಿಬಿ ಘಟಕದ ಪೊಲೀಸರು ಭಾನುವಾರ (ಸೆಪ್ಟೆಂಬರ್ 21) ಮತ್ತು ಸೋಮವಾರ ನಡೆಸಿದ ದಾಳಿಯಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅವರಿಂದ ₹24 ಲಕ್ಷಕ್ಕೂ ಹೆಚ್ಚು ಮೌಲ್ಯದ ಎಂಡಿಎಂಎ ಹಾಗೂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಚಿರಾಗ್ ಸನಿಲ್ – ಗಾಂಧಿನಗರ, ಕಾವೂರು, ಆಲ್ವಿನ್ ಕ್ಲಿಂಟನ್ ಡಿ’ಸೋಜಾ – ಅಶೋಕನಗರ, ಅಬ್ದುಲ್ ಕರೀಂ ಇ.ಕೆ (52) – ಮಲ್ಲಾಪುರಂ ಜಿಲ್ಲೆ, ಕೇರಳ, ಜಾನನ್ ಜಗನ್ನಾಥ (28) – ಕುಲಶೇಖರ, ಮಂಗಳೂರು, ರಾಜೇಶ್ ಬಂಗೇರ (30) – ಬೋಳೂರು ಪರಪು, ಮಂಗಳೂರು, ವರುಣ್ ಗಾಣಿಗ (28) – ಅಶೋಕನಗರ, ಮಂಗಳೂರು ಎಂದು ಗುರುತಿಸಲಾಗಿದೆ ಕಾವೂರು ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿ ದಾಳಿ ನಡೆಸಿದ ವೇಳೆ, ಚಿರಾಗ್ ಸನಿಲ್ ಮತ್ತು ಆಲ್ವಿನ್ ಕ್ಲಿಂಟನ್ ಡಿ’ಸೋಜಾ ಎಂಬ ಇಬ್ಬರನ್ನು ವಶಕ್ಕೆ ಪಡೆದು, ಅವರ ಬಳಿ ಇದ್ದ 111.83 ಗ್ರಾಂ ಎಂಡಿಎಂಎ (ಮೌಲ್ಯ ₹22.3 ಲಕ್ಷ)ವನ್ನು ಪೊಲೀಸರು ಸ್ವಾಧೀನಪಡಿಸಿಕೊಂಡರು. ಪ್ರಾಥಮಿಕ ವಿಚಾರಣೆಯಲ್ಲಿ,…
ಬೆಂಗಳೂರು : ಕರ್ತವ್ಯದ ಲೋಪದ ಆರೋಪದ ಮೇರೆಗೆ ನಗರದ ಮತ್ತಿಬ್ಬರು ಪೊಲೀಸ್ ಅಧಿಕಾರಿಗಳು ಅಮಾನತುಗೊಂಡಿದ್ದಾರೆ. ಡಿಸಿಪಿ ಅವರ ಆದೇಶ ಆಧರಿಸಿ ಆಯುಕ್ತ ಸೀಮಂತ್ ಕುಮಾರ್ಸಿಂಗ್ ಶಿಸ್ತು ಕ್ರಮ ಜರುಗಿಸಿದ್ದಾರೆ ಎಂದು ತಿಳಿದು ಬಂದಿದೆ. ಹಲಸೂರು ಗೇಟ್ ಠಾಣೆ ಪಿಐ ಹನುಮಂತ ಭಂಜತ್ರಿ ಹಾಗೂ ಕೋರಮಂಗಲ ಠಾಣೆಯ ಪಿಐ ಎಸ್.ಎಲ್.ಆರ್.ರೆಡ್ಡಿ ಅಮಾನತುಗೊಂಡಿವರು. ಕೆಲ ದಿನಗಳ ಹಿಂದಷ್ಟೇ ಡ್ರಗ್ಸ್ ಪೆಡ್ಲರ್ಗಳ ಜೊತೆ ಸ್ನೇಹ ಹೊಂದಿದ್ದ ಆರೋಪದ ಮೇರೆಗೆ 11 ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿತ್ತು. ಕಾನೂನು ಸುವ್ಯವಸ್ಥೆ ಅಸಮರ್ಪಕ ನಿರ್ವಹಣೆ ಹಾಗೂ ಅಪರಾಧ ಪ್ರಕರಣಗಳ ಪತ್ತೆದಾರಿಕೆಯಲ್ಲಿ ದೋಷ ಮಾಡಿದ್ದರು ಎಂದು ಹಲಸೂರು ಗೇಟ್ ಠಾಣೆ ಪಿಐ ಹನುಮಂತ ಮೇಲೆ ಆರೋಪ ಬಂದಿತ್ತು. ಹಾಗೆ ತಮ್ಮ ಠಾಣಾ ಸರಹದ್ದಿನಲ್ಲಿ ಪಬ್ಗಳು ಅವಧಿ ಮೀರಿ ವಹಿವಾಟು ನಡೆಸಿದ ಹಾಗೂ ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ ಮಾಡಿದರು ನಿಯಂತ್ರಿಸದೆ ನಿರ್ಲಕ್ಷ್ಯ ತೋರಿದರು ಎಂಬ ಆಪಾದನೆಗೆ ಕೋರಮಂಗಲ ಠಾಣೆ ಪಿಐ ರೆಡ್ಡಿ ತುತ್ತಾಗಿದ್ದರು ಎನ್ನಲಾಗಿದೆ. ಈ ಸಂಬಂಧ ಆಯುಕ್ತರಿಗೆ ಭಜಂತ್ರಿ ವಿರುದ್ಧ…
ಮಂಗಳೂರು: ಓಲಾ ಎಲೆಕ್ಟ್ರಿಕ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ದೋಷಯುಕ್ತ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಮಾಡಿದ್ದ ಪ್ರಕರಣದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯವು ಕಂಪೆನಿಗೆ ಗ್ರಾಹಕನ ಪರ ತೀರ್ಪು ನೀಡಿದೆ. ಮಂಗಳೂರಿನ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದರ ಉದ್ಯೋಗಿ ಉದಯ್ ಕುಮಾರ್ ಬಿ.ಸಿ. ಅವರು ಓಲಾ ಸಂಸ್ಥೆಯಿಂದ 1.17 ಲಕ್ಷ ರೂ. ಪಾವತಿಸಿ ಸ್ಕೂಟರ್ ಖರೀದಿಸಿದ್ದರು. ಆದರೆ ಖರೀದಿಸಿದ ಒಂದು ತಿಂಗಳಲ್ಲೇ ವಾಹನ ರಸ್ತೆ ಮಧ್ಯದಲ್ಲಿ ಹಠಾತ್ತನೆ ನಿಲ್ಲುತ್ತಿದ್ದು, ನಿರಂತರ ತೊಂದರೆ ಅನುಭವಿಸಿದರು. ಮೊದಲ ಬಾರಿಗೆ ದೂರು ನೀಡಿದಾಗ ಸಂಸ್ಥೆ ದುರಸ್ತಿ ಮಾಡಿದರೂ, ಸಮಸ್ಯೆ ಮುಂದುವರಿಯುತ್ತಲೇ ಇತ್ತು. ಅನೇಕ ಬಾರಿ ರಿಪೇರಿ ನೆಪದಲ್ಲಿ ವಾಹನವನ್ನು ತಮ್ಮ ಬಳಿ ಇಟ್ಟುಕೊಂಡರೂ, ಶಾಶ್ವತ ಪರಿಹಾರ ನೀಡಲು ಓಲಾ ವಿಫಲವಾಯಿತು. ಅಂತಿಮವಾಗಿ ಉದಯ್ ಕುಮಾರ್ ಕಾನೂನು ನೋಟೀಸ್ ನೀಡಿ, ನಂತರ ಗ್ರಾಹಕರ ಪರಿಹಾರ ಆಯೋಗವನ್ನು ಸಂಪರ್ಕಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ, ಓಲಾ ಸಂಸ್ಥೆ ಸೇವಾ ನ್ಯೂನ್ಯತೆ ತೋರಿದೆ ಹಾಗೂ ದೋಷಯುಕ್ತ ಉತ್ಪನ್ನ ಮಾರಾಟ ಮಾಡಿದೆ ಎಂದು ಸ್ಪಷ್ಟಪಡಿಸಿತು.…
ಬಂಟ್ವಾಳ: ಖಚಿತ ಮಾಹಿತಿ ಮೇರೆಗೆ ಮಂಚಿ ಗ್ರಾಮದ ಮನೆಯೊಂದರ ಮೇಲೆ ದಾಳಿ ನಡೆಸಿದ ಬಂಟ್ವಾಳ ಅಬಕಾರಿ ಇಲಾಖೆಯ ತಂಡ ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಗೋವಾ ಮದ್ಯ ಮತ್ತು ಮನೆಯಲ್ಲಿ ತಯಾರಿಸಿದ ವೈನ್ ವಶಪಡಿಸಿಕೊಂಡಿದೆ. ಬಂಟ್ವಾಳ ಅಬಕಾರಿ ಉಪ ಅಧೀಕ್ಷಕ ಸಂತೋಷ್ ಮೊಡಗಿ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಆರೋಪಿ ಅರುಣ್ ನೊರೊನ್ಹಾ ತಲೆಮರೆಸಿಕೊಂಡಿದ್ದಾನೆ ಎಂದು ವರದಿಯಾಗಿದೆ. ಅಧಿಕಾರಿಗಳು ಮನೆಯಿಂದ ಗೋವಾ ರಾಜ್ಯದಲ್ಲಿ ಮಾತ್ರ ಮಾರಾಟವಾಗುವ ಮದ್ಯದ ದಾಸ್ತಾನನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಒಂದು 750 ಮಿಲಿ ಬಕಾರ್ಡಿ ಲೆಮನ್ ರಮ್ ಬಾಟಲ್, 500 ಮಿಲಿ ಅಂಶವಿರುವ, ‘ರಕ್ಷಣಾ ಸಿಬ್ಬಂದಿಗೆ ಮಾತ್ರ’ ಎಂದು ಗುರುತಿಸಲಾದ 750 ಮಿಲಿ ಅಮೃತ್ ಅಮಲ್ಗಮ್ ವಿಸ್ಕಿ ಬಾಟಲ್, ಒಂದು 750 ಮಿಲಿ ವೈಟ್ ಡಿಮಿಸಿಕ್ ಗಕೋಬಾಜಿ ಎಂದು ಲೇಬಲ್ ಮಾಡಲಾದ ವಿದೇಶಿ ವೈನ್ ಬಾಟಲ್, ಮತ್ತು ವಿವಿಧ ಫ್ಲೇವರ್ಗಳ ಖಾಲಿ ಮ್ಯಾಕ್ಡೊವೆಲ್ಸ್ ವಿಸ್ಕಿ ಬಾಟಲಿಗಳಲ್ಲಿ ಸಂಗ್ರಹಿಸಲಾದ 4.25 ಲೀಟರ್ ಮನೆಯಲ್ಲಿ ತಯಾರಿಸಿದ ವೈನ್ನ 13 ಬಾಟಲಿಗಳು ಸೇರಿವೆ.…
2024–25ನೇ ಹಣಕಾಸು ವರ್ಷದಲ್ಲಿ ಎಂ.ಸಿ.ಸಿ. ಬ್ಯಾಂಕ್ ಎಲ್ಲಾ ಹಣಕಾಸು ನಿಯತಾಂಕಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಮತ್ತು ತನ್ನ ಷೇರುದಾರರಿಗೆ 10% ಲಾಭಾಂಶವನ್ನು ಘೋಷಿಸಿದೆ. 2024–25ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ₹9.51 ಕೋಟಿಗಳ ಅಭೂತಪೂರ್ವ ನಿವ್ವಳ ಲಾಭವನ್ನು ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಹೇಳೀದರು. ಅವರು 2025 ಸಪ್ಟಂಬರ್ 21ರಂದು ನಡೆದ ಬ್ಯಾಂಕಿನ 107ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಎಂ.ಸಿ.ಸಿ. ಬ್ಯಾಂಕಿನ 107ನೇ ವಾರ್ಷಿಕ ಸಾಮಾನ್ಯ ಸಭೆಯು ಸೆಪ್ಟೆಂಬರ್ 21, 2025 ರ ಭಾನುವಾರ ಬೆಳಿಗ್ಗೆ 11:00 ಗಂಟೆಗೆ ಮಂಗಳೂರಿನ ಕೊಡಿಯಾಲ್ಬೈಲ್ನ ಸೇಂಟ್ ಅಲೋಶಿಯಸ್ ಪಿ.ಯು. ಕಾಲೇಜಿನ ಲೊಯೊಲಾ ಹಾಲ್ನಲ್ಲಿ ನಡೆಸಲಾಯಿತು. ತಮ್ಮ ಭಾಷಣದಲ್ಲಿ, ಅಧ್ಯಕ್ಷರು ಬ್ಯಾಂಕಿನ ದಾಖಲೆಯ ಕಾರ್ಯಕ್ಷಮತೆಯನ್ನು ಸದಸ್ಯರ ಗಮನಕ್ಕೆ ತಂದರು. ₹9.51 ಕೋಟಿ ನಿವ್ವಳ ಲಾಭ, ₹705.40 ಕೋಟಿ ಠೇವಣಿಗಳು (10% ಹೆಚ್ಚಳ), ₹535.49 ಕೋಟಿ ಮುಂಗಡಗಳು (25.21% ಬೆಳವಣಿಗೆ), ₹830.30 ಕೋಟಿ ದುಡಿಯುವ ಬಂಡವಾಳ (10.03% ಹೆಚ್ಚಳ),…
ಪುತ್ತೂರು: ರಾಜ್ಯ ಸರ್ಕಾರದ ಯೋಜನೆಯಡಿ ಕೊಳವೆ ಬಾವಿ ಮಂಜೂರಿಗೆ ಲಂಚ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಗೊಂಡು ಜೈಲು ಸೇರಿದ್ದ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಅವರಿಗೆ ಸೆಪ್ಟೆಂಬರ್ 20ರಂದು ಮಂಗಳೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಹಿನ್ನೆಲೆ:ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದಲ್ಲಿ 1 ಎಕರೆ ಕೃಷಿ ಜಮೀನು ಹೊಂದಿರುವ ಕೃಷಕನಿಗೆ ನೀರಿನ ಸಮಸ್ಯೆ ಎದುರಾಗಿತ್ತು. ಈ ಕಾರಣದಿಂದ ಅವರು 2024ರಲ್ಲಿ ಪೆರುವಾಯಿ ಗ್ರಾಮ ಪಂಚಾಯತ್ ಕಚೇರಿಗೆ ಅರ್ಜಿ ಸಲ್ಲಿಸಿ, ಸರ್ಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ತಮ್ಮ ಜಾಗಕ್ಕೆ ಕೊಳವೆ ಬಾವಿ ಕೊರೆಯುವಂತೆ ಮನವಿ ಮಾಡಿದ್ದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸಲ್ಲಿಸಿದ್ದ ಈ ಅರ್ಜಿಯನ್ನು ಪಂಚಾಯತ್ ಸತಾಯಿಸಿದರೂ, ಕೊಳವೆ ಬಾವಿ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರಲಿಲ್ಲ. 2025ರಲ್ಲಿ ಸರ್ಕಾರಿ ಯೋಜನೆಯಡಿ ಕೃಷಕರಿಗೆ ಕೊಳವೆ ಬಾವಿ ಸೌಲಭ್ಯ ನೀಡಲಾಗುತ್ತಿರುವುದು ತಿಳಿದುಬಂದಾಗ, ಮೇ ತಿಂಗಳಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪತ್ನಿ ಎರಡು-ಮೂರು…
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳ ಮೂಲದ ಅಬ್ದುಲ್ ಹನೀಫ್ ಬಂಧಿತ ಆರೋಪಿ. ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಕ್ರ: 135/2016 ಕಲಂ 323 324,354& 149 ಐಪಿಸಿ ಪ್ರಕರಣದಲ್ಲಿ, ಮಾನ್ಯ 6ನೇ ಜೆಎಂಎಫ್ ಸಿ ನ್ಯಾಯಾಲಯ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಸಿ ಸಿ ನಂಬರ್ 1059/2018 ರಂತೆ ವಿಚಾರಣೆಯಲ್ಲಿರುವ ಪ್ರಕರಣದಲ್ಲಿ ನ್ಯಾಯಾಲಯವು ಕಳೆದ ಒಂದು ವರ್ಷದಿಂದ ಆರೋಪಿತನಿಗೆ 9 ಬಾರಿ ವಾರೆಂಟ್ ಹೊರಡಿಸಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಬಗ್ಗೆ ಕಲಂ 269 ಬಿಎನ್ಎಸ್ 2023 ರಂತೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ವಾರೆಂಟ್ ಸಿಬ್ಬಂದಿಗಳಾದ ಎಎಸ್ಐ ಮಚೇಂದ್ರನಾಥ್ ಜೋಗಿ HC 865 ನೇ ನಾರಪ್ಪ ಕೆಬಿ ರವರು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಬಂಧಿಸಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಈತನಿಗೆ 4…
ಮಂಗಳೂರು: ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ದೂರದ ಊರುಗಳಿಂದ ಬರುವವರ ಅನುಕೂಲಕ್ಕಾಗಿ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಮಿಸಿದ ಕರುಣೆಯ ತೊಟ್ಟಿಲು- ಕ್ಲೋತ್ ಬ್ಯಾಂಕನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿ, ಶುಭ ಹಾರೈಸಿದರು. ಎಂಫೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಚೈರ್ಮ್ಯಾನ್ ಝಕರಿಯಾ ಜೋಕಟ್ಟೆ ಮಾತನಾಡಿ, ಟ್ರಸ್ಟ್ ಸ್ಥಾಪನೆಯಾಗಿ ಸುಮಾರು 12 ವರ್ಷಗಳಾಗಿದ್ದು, ಎಂಟು ವರ್ಷಗಳಿಂದ ನಿರಂತರ ವೆನ್ಲಾಕ್ ಆಸ್ಪತ್ರೆ ಒಳರೋಗಿಗಳ ಜೊತೆಗಾರರಿಗೆ ರಾತ್ರಿಯ ಊಟ ವಿತರಿಸುತ್ತಿದೆ. ದಾನಿಗಳ ನೆರವು ಮತ್ತು ಟ್ರಸ್ಟಿಗಳ ಸಹಾಯದಿಂದ ನಡೆಯುವ ‘ಕಾರುಣ್ಯ ಯೋಜನೆ’ಯನ್ನು ನ.1ರಿಂದ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೂ ವಿಸ್ತರಿಸಲಾಗುತ್ತಿದೆ ಎಂದರು. ಇದೀಗ ವೆನ್ಲಾಕ್ ಆಸ್ಪತ್ರೆಯಲ್ಲಿ ಹೊಸ ಕಲ್ಪನೆಯಾಗಿ ಕ್ಲೋತ್ ಬ್ಯಾಂಕ್ ಆರಂಭಿಸಲಾಗಿದೆ. ಸಾರ್ವಜನಿಕರು ಹೊಸದಾಗಿ ಖರೀದಿಸಿದ ಅಥವಾ ಬಳಕೆ ಮಾಡಿದ ಶುಭ್ರ ಬಟ್ಟೆಗಳನ್ನು ಇಲ್ಲಿ ತಂದು ಇಡಬಹುದು. ಇದನ್ನು ಅಗತ್ಯವಿರುವ ರೋಗಿಗಳು ಅಥವಾ ಅವರ ಜತೆಗಾರರು ಕೊಂಡೊಯ್ಯಲಿದ್ದಾರೆ ಎಂದು ಅವರು ಹೇಳಿದರು. ಎಂಫ್ರೆಂಡ್ಸ್ ಸ್ಥಾಪಕ ರಶೀದ್ ವಿಟ್ಲ ಮಾತನಾಡಿ,…
ಉಡುಪಿ: ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ವಾಟ್ಸಾಪ್ ವಿಡಿಯೋ ಕಾಲ್ ಮಾಡಿ ಹಣ ವಂಚಿಸಿದ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಲಿನೆಟ್ ಮೆಂಡೋನ್ಸ (52) ಅವರಿಗೆ ಸೆಪ್ಟೆಂಬರ್ 18 ರಂದು ವಾಟ್ಸಾಪ್ನಲ್ಲಿ ವಿಡಿಯೋ ಕಾಲ್ ಬಂದಿದ್ದು, ಪೊಲೀಸ್ ಸಮವಸ್ತ್ರ ಧರಿಸಿದ ಅಪರಿಚಿತ ವ್ಯಕ್ತಿ ಮಾತನಾಡಿ, “ನಿಮ್ಮ ಮೇಲೆ ಕೇಸು ಇದೆ, ನಿಮ್ಮ ಮೊಬೈಲ್ ನಂಬರ್ ಬ್ಲಾಕ್ ಮಾಡಲಾಗುತ್ತದೆ. ಬ್ಯಾಂಕ್ ಖಾತೆಯಲ್ಲಿರುವ ಹಣ ಉಳಿಸಿಕೊಳ್ಳಬೇಕಾದರೆ ತಕ್ಷಣವೇ ನಾನು ಕಳುಹಿಸಿದ ಖಾತೆಗೆ ಹಣ ಹಾಕಬೇಕು,” ಎಂದು ಪಿಡಿಎಫ್ ಫೈಲ್ ಕಳುಹಿಸಿದ್ದಾನೆ. ಈ ಬೆದರಿಕೆಯಿಂದ ಭಯಭೀತಗೊಂಡ ಲಿನೆಟ್, ಆತ ನಿಜವಾದ ಪೊಲೀಸ್ ಅಧಿಕಾರಿ ಎಂದು ನಂಬಿ, ತನ್ನ ಖಾತೆಯಲ್ಲಿದ್ದ ಒಟ್ಟು ₹4,10,000ರನ್ನು ಸೂಚಿಸಿದ ಖಾತೆಗೆ ವರ್ಗಾವಣೆ ಮಾಡಿದರು. ನಂತರ ಮಹಿಳೆಗೆ ವಂಚನೆ ನಡೆದಿರುವುದು ತಿಳಿದು, ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.










