Author: main-admin

ಉಡುಪಿ: ಬೈಂದೂರು ಹಾಗೂ ಪಡುಬಿದ್ರಿ ಠಾಣೆಯಲ್ಲಿ 2024ನೇ ಸಾಲಿನಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾದ ಎರಡು ಪ್ರಕರಣಗಳ ಆರೋಪಿಗಳಿಗೆ ಉಡುಪಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಶಿಕ್ಷೆಗೆ ಗುರಿಯಾದವರನ್ನು ಬೈಂದೂರು ಠಾಣೆಯ ಪ್ರಕರಣದ ಆರೋಪಿ ಬೈಂದೂರು ಗಂಗನಾಡು ನಿವಾಸಿ ರಾಘವೇಂದ್ರ ಗೊಂಡ (35) ಹಾಗೂ ಪಡುಬಿದ್ರಿ ಠಾಣೆಯ ಪ್ರಕರಣದ ಆರೋಪಿ ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಮಂಜುನಾಥ ಪಾತ್ರೋಟ (23) ಎಂದು ಗುರುತಿಸಲಾಗಿದೆ. 2025ನೇ ಜುಲೈ ತಿಂಗಳಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 320 ಪ್ರಕರಣಗಳು ಇತ್ಯರ್ಥವಾಗಿದ್ದು, ಅವುಗಳಲ್ಲಿ 188 ಪ್ರಕರಣಗಳು ಸಜೆ /ದಂಡ ರೂಪದಲ್ಲಿ ಇತ್ಯರ್ಥವಾಗಿದೆ. ಕುಂದಾಪುರ ಸಂಚಾರ ಠಾಣೆಯಲ್ಲಿ 2019ನೇ ಸಾಲಿನಲ್ಲಿ ದಾಖಲಾದ ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತನಿಗೆ 18 ತಿಂಗಳ ಜೈಲುವಾಸ ಹಾಗೂ 9,000 ರೂ. ದಂಡವನ್ನು ನ್ಯಾಯಾಲಯವು ವಿಧಿಸಿದೆ.

Read More

ಉಡುಪಿ: ಕಾರನ್ನು ಅಪಾಯಕಾರಿಯಾಗಿ ಅಡ್ಡಾದಿಡ್ಡಿ ಚಲಾಯಿಸಿಕೊಂಡು ಹೋಗುತ್ತಿದ್ದ ಆರೋಪದಲ್ಲಿ ಕೇರಳದ ಯುವಕನೋರ್ವನನ್ನು ಮಣಿಪಾಲ ಪೊಲೀಸರು ಕಾರು ಸಹಿತ ವಶಕ್ಕೆ ಪಡೆದುಕೊಂಡ ಘಟನೆ ಆ.11ರಂದು ಬೆಳಗ್ಗೆ ಮಣಿಪಾಲ ಎಂಐಟಿ ಜಂಕ್ಷನ್ ಬಳಿ ನಡೆದಿದೆ. ಮಣಿಪಾಲ ಅಂಚೆ ಕಚೇರಿ ಎದುರು ಕೇರಳ ಕಣ್ಣೂರಿನ ಕಂಡಗನ್ ನಿವಾಸಿ ಶೋಹೈಲ್ ನೀಲಾಕತ್(26) ಎಂಬಾತ ತನ್ನ ಕಾರಿಗೆ ಸಂಪೂರ್ಣ ಟಿಂಟ್ ಅಳವಡಿಸಿಕೊಂಡು ಉಡುಪಿ ಕಡೆಯಿಂದ ಹಿರಿಯಡ್ಕ ಕಡೆಗೆ ಅಜಾಗರೂಕತೆಯಿಂದ ಮಾನವ ಜೀವಕ್ಕೆ ಅಪಾಯಕಾರಿಯಾಗುವ ರೀತಿಯಲ್ಲಿ ದ್ವಿಚಕ್ರ ವಾಹನಗಳು ಹಾಗೂ ಇತರ ವಾಹನಗಳಿಗೆ ಅಪಘಾತ ಉಂಟು ಮಾಡುವ ರೀತಿಯಲ್ಲಿ, ವಿಪರೀತ ಕರ್ಕಶ ಶಬ್ದ ಮಾಡಿ ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಹೋಗುತ್ತಿದ್ದನೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸರು ಕಾರನ್ನು ಹಿಂಬಾಲಿಸಿ, ಮಣಿಪಾಲ ಎಂಐಟಿ ಜಂಕ್ಷನ್ ಬಳಿ ಚಾಲಕ ಸಹಿತ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪುತ್ತೂರು: ಪುತ್ತೂರು ಬಿಜೆಪಿ ನಾಯಕ ಪಿ.ಜಿ. ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ಅವರಿಂದ ಅತ್ಯಾಚಾರ ಮತ್ತು ವಂಚನೆಗೊಳಗಾಗಿ ತಾಯಿಯಾಗಿರುವ ವಿದ್ಯಾರ್ಥಿನಿಯೊಬ್ಬಳು, ತನಗೆ ಬೆದರಿಕೆ ಇದೆ ಎಂದು ಪೊಲೀಸ್ ರಕ್ಷಣೆ ಕೋರಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರನ್ನು ಭೇಟಿ ಮಾಡಿ ಮಾನವಿ ನೀಡಿದ್ದಾರೆ. ಆಗಸ್ಟ್ 11 ರಂದು, ಸಂತ್ರಸ್ತೆ ಮಂಗಳೂರಿನಲ್ಲಿರುವ ಪಶ್ಚಿಮ ವಲಯ ಐಜಿಪಿ ಕಚೇರಿಗೆ ಭೇಟಿ ನೀಡಿ ಮನವಿ ಪತ್ರವನ್ನು ಸಲ್ಲಿಸಿದರು.ಇತ್ತೀಚೆಗೆ, ಕೆಲವು ಅಪರಿಚಿತ ವ್ಯಕ್ತಿಗಳು ನನ್ನ ಮನೆಯ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದಾರೆ. ನನ್ನ ತಾಯಿ ಮತ್ತು ನಾನು ಅಪರಿಚಿತರು ವಿಶೇಷವಾಗಿ ರಾತ್ರಿಯ ಸಮಯದಲ್ಲಿ ಓಡಾಡುವುದನ್ನು ಗಮನಿಸಿದ್ದೇವೆ. ನಾನು ದಾಖಲಿಸಿದ ವಂಚನೆ ಪ್ರಕರಣದಲ್ಲಿ, ನ್ಯಾಯಾಲಯದಲ್ಲಿ  ನನಗೆ ನ್ಯಾಯ ಸಿಗುವುದು ನನ್ನ ಮಗುವಿನ ಮೂಲಕ ಮಾತ್ರ. ಆದ್ದರಿಂದ, ನನ್ನ ಮಗುವಿನ ಜೀವಕ್ಕೆ ಜೀವಕ್ಕೆ  ಯಾರಿಂದಲಾದರೂ ಅಪಾಯವಿರಬಹುದು ಎಂದು ನನಗೆ ಭಯವಿದೆ. ನನಗೆ ಮತ್ತು ನನ್ನ ಮಗುವಿಗೆ ಪೊಲೀಸ್ ರಕ್ಷಣೆ ಒದಗಿಸಬೇಕೆಂದು ನಾನು ವಿನಂತಿಸುತ್ತೇನೆ ಎಂದು ಅವರು ಹೇಳಿದರು.

Read More

ಬೆಳ್ತಂಗಡಿ: ತನ್ನನ್ನು ಕೆಲವರು ಹಿಂಬಾಲಿಸಿಕೊಂಡು ಬಂದು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು 17 ಮಂದಿಯ ವಿರುದ್ಧ ಧರ್ಮಸ್ಥಳ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಯುವತಿಯ ಮೃತದೇಹವನ್ನು ಹೂತು ಹಾಕಿರುವುದನ್ನು ನೋಡಿದ್ದೇನೆ ಎಂದು ಎಸ್ಐಟಿ ಗೆ ಮಾಹಿತಿ ನೀಡಿರುವ ಎರಡನೇ ದೂರುದಾರ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ಎಸ್ಐಟಿಗೆ ದೂರು ನೀಡಿದ ದಿನದಿಂದ ತನ್ನ ಮೇಲೆ ಹಲ್ಲೆ ಮಾಡಲು ಮಾಧ್ಯಮಗಳ ಮೂಲಕ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ವಸಂತ್ ಗಿಳಿಯಾರು, ಕಿರಿಕ್ ಕೀರ್ತಿ, ವಿಕಾಸ್ ಶಾಸ್ತ್ರಿ ಮತ್ತು ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಎಂಬವರನ್ನು ದೂರಿನಲ್ಲಿ ಉಲ್ಲೇಖಿಸಿರುವ ಜಯಂತ್ ಟಿ. ಅವರು, ತಂಡವೊಂದು ತನ್ನನ್ನು ಹಿಂಬಾಲಿಸಿಕೊಂಡು ಬಂದು ಕೊಲೆಗೆ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಬಗ್ಗೆ ಪರಿಶೀಲಿಸಲಾಗುತ್ತಿದ್ದು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ತಿಳಿಸಿದ್ದಾರೆ.

Read More

ಆಗಸ್ಟ್ 10, 2025 ರ ಭಾನುವಾರದಂದು ಸುರತ್ಕಲ್ ಶಾಖೆಯಲ್ಲಿ ತನ್ನ 10 ನೇ ಎಟಿಎಂ ಅನ್ನು ಉದ್ಘಾಟಿಸುವ ಮೂಲಕ ಎಂ.ಸಿ.ಸಿ. ಬ್ಯಾಂಕ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸಮಾರಂಭವು ಸುರತ್ಕಲ್‌ನ ಸೇಕ್ರೆಡ್ ಹಾರ್ಟ್ ಚರ್ಚ್’ನ ಧರ್ಮಗುರುಗಳಾದ ವಂದನೀಯ ಆಸ್ಟಿನ್ ಪೀಟರ್ ಪೆರಿಸ್ ಅವರ ಆಶೀರ್ವಾದದೊಂದಿಗೆ ಪ್ರಾರಂಭವಾಯಿತು, ಉಪಯೋಗಿಸಿದ ವಾಹನ ಮಾರಾಟ ಸಲಹೆಗಾರರಾದ ಶ್ರೀ ಮೊಹಮ್ಮದ್ ಹನೀಫ್ ಅವರು ಎಟಿಎಂ ಅನ್ನು ಅಧಿಕೃತವಾಗಿ ಉದ್ಘಾಟಿಸಿದರು. ಮುಕ್ಕಾದ ಹೋಲಿ ಸ್ಪಿರಿಟ್ ಚರ್ಚ್’ನ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ಪಿಂಟೊ ಅವರ ಉಪಸ್ಥಿತರಿದ್ದರು. ಎಟಿಎಂ ನಿಂದ ಮೊದಲ ನಗದು ಹಿಂಪಡೆಯುವಿಕೆಯನ್ನು ಶ್ರೀ ದುರ್ಗಾ ಫೈನಾನ್ಷಿಯಲ್ ಕಾರ್ಪೊರೇಷನ್‌ನ ಮಾಲೀಕ ಶ್ರೀ ಮೆಬೈಲ್ ಸದಾಶಿವ ಶೆಟ್ಟಿ ಮಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು, ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಕಳೆದ ಎಂಟು ವರ್ಷಗಳಲ್ಲಿ ₹500 ಕೋಟಿ ವ್ಯವಹಾರದಿಂದ ₹1,300 ಕೋಟಿಗೆ ತಲುಪಿದ ಬ್ಯಾಂಕಿನ ಪ್ರಗತಿಯನ್ನು ವಿವರಿಸಿದರು. ಈ…

Read More

ಧರ್ಮಸ್ಥಳದಲ್ಲಿ ಈಗಾಗಲೇ ನೂರಾರು ಅಪರಿಚಿತ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ತೀವ್ರ ಶೋಧಕಾರ್ಯ ಮುಂದುವರಿಸಿದ್ದಾರೆ. ಇದೀಗ 1986 ರಲ್ಲಿ ಪದ್ಮಲತಾ ಎಂಬ ಮಹಿಳೆ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರ ಸಹೋದರಿ ಎಸ್ಐಟಿಗೆ ದೂರು ಸಲ್ಲಿಸಿದ್ದು ಮರುತನಿಕೆಗೆ ಆಗ್ರಹಿಸಿ ದೂರು ಸಲ್ಲಿಸಿದ್ದಾರೆ. ಹೌದು ಪದ್ಮಲತಾ ಅಸಹಜ ಸಾವು ಕೇಸ್ ಮರು ತನಿಖೆಗೆ ಒತ್ತಾಯ ಕೇಳಿಬಂದಿದ್ದು, 1986 ರಲ್ಲಿ ಕೋಲಾರದಿಂದ ಧರ್ಮಸ್ಥಳಕ್ಕೆ ಬಂದಿದ್ದರು ಆದರೆ ಈ ವೇಳೆ ಪದ್ಮಲತಾ ಏಕಾಏಕಿ ನಾಪತ್ತೆಯಾಗಿದ್ದರು ಬಳಿಕ 58 ದಿನಗಳ ನಂತರ ಪದ್ಮಲತಾ ನೇತ್ರಾವತಿ ನದಿ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಅವರ ಶವ ಪತಿಯಾಗಿತ್ತು. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬೋಳಿಯರು ನಿವಾಸಿಯಾಗಿರುವ ಪದ್ಮಲತಾ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಇದೀಗ ಅವರ ಸಹೋದರಿ ಇಂದ್ರಾವತಿ ಪ್ರಕರಣದ ಮರುತನಿಕೆ ಆಗಬೇಕು ಎಂದು SIT ಗೆ ದೂರು ನೀಡಿದ್ದಾರೆ.

Read More

ಬೆಳ್ತಂಗಡಿ: ಬೈಕ್ ಸವಾರನನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಮೂವರು ಯೂಟ್ಯೂಬರ್ ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆ 6ರಂದು ಘಟನೆ ನಡೆದಿದ್ದು, ಈ ಬಗ್ಗೆ ಹರೀಶ್ ನಾಯ್ಕ ಎಂಬವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ತಾನು ಬೈಕ್ ನಲ್ಲಿ ಹೋಗುತ್ತಿದ್ದ‌ ವೇಳೆ ಪಾಂಗಳ ಕ್ರಾಸ್ ಬಳಿ ತಡೆದು ನಿಲ್ಲಿಸಿದ ಯುಟ್ಯೂಬರ್ ಗಳು ತಾವು ಕುಡ್ಲ ರಾಂಪೇಜ್ ನವರು ಎಂದು ಹೇಳಿದ್ದು, ಈ ರಸ್ತೆಯ ಪಕ್ಕದಲ್ಲಿ ಹೆಣಗಳನ್ನು ಹೂತು ಹಾಕಿದ್ದೀರಾ ? ಇದರ ಬಗ್ಗೆ ನಿಮಗೆ ಗೊತ್ತಿದೆಯಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಅವರು ಹೆಸರನ್ನು ಕೇಳಿದ್ದು ಈ ವೇಳೆ ನಾವು ಹರೀಶ್ ನಾಯ್ಕ ಎಂದಾಗ ಅವರು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ಹರೀಶ್ ನಾಯ್ಕ ದೂರು ನೀಡಿದ್ದಾರೆ. ಅದರಂತೆ ಧರ್ಮಸ್ಥಳ ಠಾಣೆಯಲ್ಲಿ ಅಪರಾಧ ಕ್ರಮ ಸಂಖ್ಯೆ 50/2025 ಕಲಂ126(2)115(2) 352 ಜೊತೆಗೆ 3(5) ಬಿಎನ್.ಎಸ್. ನಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಪುತ್ತೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂತಹ ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ‘ಭಾರತೀಯ ಸೇನೆ’ ಎಂಬ ಹೆಸರಿನ ಫೇಸ್‌ಬುಕ್ ಪುಟದ ನಿರ್ವಾಹಕನ ವಿರುದ್ಧ ಪುತ್ತೂರು ನಗರ ಠಾಣೆ ಪೊಲೀಸರು ಗುರುವಾರ (ಆ. 10) ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಭಾರತೀಯ ಸೇನೆ’ ಹೆಸರಿನ ಫೇಸ್‌ಬುಕ್ ಪುಟದಲ್ಲಿ ಧರ್ಮಗಳು ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಪ್ರಚೋದಿಸುವ, ಕೋಮು ಸೌಹಾರ್ದವನ್ನು ಕದಡುವ ಮತ್ತು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸುವಂತಹ ಸುಳ್ಳು ಸುದ್ದಿಗಳನ್ನು ವ್ಯವಸ್ಥಿತವಾಗಿ ಪ್ರಸಾರ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಈ ಪೋಸ್ಟ್‌ಗಳು ಸಮಾಜದ ಶಾಂತಿಗೆ ಭಂಗ ತರುತ್ತಿರುವುದನ್ನು ಗಮನಿಸಿದ ಪೊಲೀಸರು, ಸ್ವಯಂಪ್ರೇರಿತವಾಗಿ (ಸುಮೋಟೊ) ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅಪರಾಧ ಸಂಖ್ಯೆ 70/2025 ರ ಅಡಿಯಲ್ಲಿ, ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 196(1)(ಎ) (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 353(2) (ಸಾರ್ವಜನಿಕ ಶಾಂತಿ ಕದಡುವ ಹೇಳಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು. ಫೇಸ್‌ಬುಕ್…

Read More

ಮಂಗಳೂರು: ಮಾದಕವಸ್ತು ಮುಕ್ತ ಮಂಗಳೂರು’ ಅಭಿಯಾನದಡಿಯಲ್ಲಿ ವ್ಯಾಪಕ ಮಾದಕವಸ್ತು ವಿರೋಧಿ ಕಾರ್ಯಾಚರಣೆಯಲ್ಲಿ, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆಗಸ್ಟ್ 8 ರಂದು ನಗರದ ವಿವಿಧ ಭಾಗಗಳಲ್ಲಿ 7 ಮಂದಿಯನ್ನು ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳು, ಯುವಕರು ಮತ್ತು ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಅಕ್ರಮ ಮಾದಕವಸ್ತು ಮಾರಾಟದ ಮೇಲೆ ದಾಳಿ ನಡೆಸಿ ದ ಪೊಲೀಸರು 5 ಕಿಲೋಗ್ರಾಂಗಳಷ್ಟು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಶೈಕ್ಷಣಿಕ ಮತ್ತು ವಸತಿ ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತ ಗಾಂಜಾ ಮಾರಾಟ ಮಾಡುತ್ತಿರುವ ವ್ಯಕ್ತಿಗಳ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಪೊಲೀಸ್ ತಂಡಗಳು ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕುದ್ರೋಳಿಯಲ್ಲಿ ಗಾಂಜಾ ಮಾರಾಟಗಾರ ಬಂಧನ ಮೊದಲ ಕಾರ್ಯಾಚರಣೆಯಲ್ಲಿ, ಕುದ್ರೋಳಿ-ಕಂಡತ್‌ಪಳ್ಳಿ ಪ್ರದೇಶದಲ್ಲಿ ಹಲವು ದಿನಗಳಿಂದ ರಹಸ್ಯವಾಗಿ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಅಬ್ದುಲ್ ಸಮದ್ ಅಲಿಯಾಸ್ ಚಮ್ಮುನನ್ನು ಪೊಲೀಸರು ಬಂಧಿಸಿದ್ದಾರೆ. ಶಂಕಿತ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಜನರನ್ನು ಗುರಿಯಾಗಿಸಿಕೊಂಡಿದ್ದ ಎಂದು ವರದಿಯಾಗಿದೆ. “ಸಮದ್ ವಸತಿ ಪ್ರದೇಶಗಳಲ್ಲಿ ರಹಸ್ಯವಾಗಿ ಮಾದಕ…

Read More

ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ ಗ್ರಾಹಕ ಸೇವೆ ಮತ್ತು ಬ್ಯಾಂಕಿ0ಗ್ ಶ್ರೇಷ್ಟತೆಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲಾಗಿ ಆಗಸ್ಟ್ 9, 2025 ರಂದು ಬೆಳ್ಮಣ್ ಶಾಖೆಯಲ್ಲಿ ತನ್ನ 9 ನೇ ಎಟಿಎಂ ಅನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಎಟಿಎಂ ಅನ್ನು ಬೆಳ್ಮನ್‌ನ ಮಾನ್ಯ ಡೆವಲಪರ್ಸ್ ಮತ್ತು ಹೋಟೆಲ್ ಸೂರಜ್ ಇನ್‌ನ ಮಾಲೀಕ ಶ್ರೀ ಶೋಧನ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಬೆಳ್ಮಣ್ ನ ಸೇಂಟ್ ಜೋಸೆಫ್ ಚರ್ಚ್ನನ ಧರ್ಮಗುರುಗಳಾದ ರೆವೆರೆಂಡ್ ಫಾದರ್ ಫ್ರೆಡ್ರಿಕ್ ಮಸ್ಕರೇನ್ಹಸ್ ಅವರು ಎಟಿಎಂ ಅನ್ನು ಆಶಿರ್ವಚಿಸಿ ಶಾಖೆ ಮತ್ತು ಅದರ ಗ್ರಾಹಕರಿಗೆ ಅನುಗ್ರಹ ಮತ್ತು ಸಮೃದ್ಧಿಯನ್ನು ಕೋರಿದರು. ಎಟಿಎಂನಿoದ ಮೊದಲ ನಗದು ಹಿಂಪಡೆಯುವಿಕೆಯನ್ನು ಶ್ರೀ ಫ್ರೆಡ್ರಿಕ್ ವಿನ್ಸೆಂಟ್ ಅಂದ್ರಾದೆಮಾಡಿದರು.ಈ ಸಮಾರಂಭದಲ್ಲಿ ಮುಖ್ಯ ಅತಿಥಿ ಶ್ರೀ ಫ್ರಾನ್ಸಿಸ್ ಡಿ’ಸೋಜಾ, ಸೇಂಟ್ ಜೋಸೆಫ್ ಅರ್ಥ್ ಮೂವರ್ಸ್ ಮತ್ತು ಸೇಂಟ್ ಜೋಸೆಫ್ ಪ್ಯೂಯೆಲ್ಸ್ಮಾಲೀಕ ಶ್ರೀ ಡೊಮಿನಿಕ್ ಆಂದ್ರಾದೆ ಮತ್ತು ಬೆಳ್ಮನ್‌ನ ಸೇಂಟ್ಜೋ…

Read More