ಬೆಳ್ತಂಗಡಿ: ಪತಿಯನ್ನೇ ಕೊಂದ ಪತ್ನಿಯ ಪ್ರಕರಣದ ಆರೋಪಿ ಎಲಿಯಮ್ಮ ನ ಕೃತ್ಯ ಸಾಬೀತಾದರೂ, ಆಕೆ ‘Delusional Disorder’ ನಿಂದ ಬಳಲುತ್ತಿದ್ದ ಕಾರಣ ಅಪರಾಧ ಮುಕ್ತಗೊಳಿಸಿದ ಘಟನೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ -1 (ಪೋಕ್ಸೋ) ದಲ್ಲಿ ನಡೆದಿದೆ. ನ್ಯಾಯಾಧೀಶರಾದ ಮೋಹನ ಜೆ.ಎಸ್. ಅವರು ತೀರ್ಪು ನೀಡಿದ್ದಾರೆ. 2022 ರ ಜುಲೈ 5 ರಂದು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ ಬೆಳಗಿನ ಜಾವ 5:30 ಕ್ಕೆ ಯೋಹಾನನ್ ಎಂಬುವರನ್ನು ಅವರ ಪತ್ನಿ ಎಲಿಯಮ್ಮ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದರು. ಬೆಳ್ತಂಗಡಿ ಪೊಲೀಸರು ದಾಖಲಿಸಿದ ಈ ಪ್ರಕರಣದ ವಿಚಾರಣೆ ವೇಳೆ, ಆರೋಪಿ ಎಲಿಯಮ್ಮ “ತಾನು ಕೊಂದಿರುವುದು ಹೌದು” ಎಂದು ಒಪ್ಪಿಕೊಂಡಿದ್ದರು. ಆದರೆ, ಕೃತ್ಯದ ಗಂಭೀರತೆಯನ್ನು ಪರಿಗಣಿಸಿ ನ್ಯಾಯಾಲಯ ಸಾಕ್ಷಿ ವಿಚಾರಣೆಯನ್ನು ಮುಂದುವರೆಸಿತ್ತು. ಸಾಕ್ಷಿದಾರರು ಆಕೆಯ ವಿರುದ್ಧ ಸಾಕ್ಷಿ ನುಡಿದಿದ್ದರು. ವಿಚಾರಣೆಯ ಕ್ರಾಸ್ ಎಕ್ಸಾಮಿನೇಷನ್ ಹಂತದಲ್ಲಿ, ಆರೋಪಿ ಪರ ವಕೀಲರಾದ ವಿಕ್ರಮ್ ರಾಜ್ ಎ. ಅವರು ಆರೋಪಿಯ ವೈದ್ಯಕೀಯ ಹಿನ್ನೆಲೆಯನ್ನು ಅನಾವರಣಗೊಳಿಸಿದರು.…
Author: main-admin
ಮಂಗಳೂರು: ಪಾಸ್ಪೋರ್ಟ್ ಅರ್ಜಿಯ ಪೊಲೀಸ್ ಪರಿಶೀಲನಾ ವರದಿಯಲ್ಲಿ ವಂಚನೆ ಎಸಗಿ, ಸಹಿ ಫೋರ್ಜರಿ ಮಾಡಿದ ಆರೋಪದಡಿ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರದೀಪ್ ಹಾಗೂ ಸುಳ್ಳು ದಾಖಲೆ ನೀಡಿ ಪಾಸ್ಪೋರ್ಟ್ ಪಡೆದ ಶಕ್ತಿ ದಾಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಕ್ತಿ ದಾಸ್ ಎಂಬಾತ ಫೆಬ್ರವರಿ 2025ರಲ್ಲಿ ಪಾಸ್ಪೋರ್ಟ್ಗಾಗಿ ಅರ್ಜಿ ಸಲ್ಲಿಸಿದ್ದನು. ಆದರೆ ಪೊಲೀಸ್ ವೆರಿಫಿಕೇಶನ್ ವೇಳೆ ಆತ ನೀಡಿದ್ದ ವಿಳಾಸವು ದಾಖಲಾತಿಗಳಿಗೆ ತಾಳೆಯಾಗದ ಕಾರಣ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ತದನಂತರ ಜೂನ್ನಲ್ಲಿ ಆತ ಮತ್ತೆ ಮರು ಅರ್ಜಿ ಸಲ್ಲಿಸಿದ್ದನು. ಈ ಮರು ಅರ್ಜಿಯ ಪರಿಶೀಲನೆಯ ಹೊಣೆ ಹೊತ್ತಿದ್ದ ಠಾಣಾ ಸಿಬ್ಬಂದಿ ಪ್ರದೀಪ್, ಸಂಬಂಧಪಟ್ಟ ಬೀಟ್ ಸಿಬ್ಬಂದಿ ಸಾಬು ಮಿರ್ಜಿ ಎಂಬವರ ಗಮನಕ್ಕೆ ಬಾರದಂತೆ ಅವರ ಹೆಸರಿನಲ್ಲೇ ನಕಲಿ ವರದಿ ಸಿದ್ಧಪಡಿಸಿದ್ದರು. ಅಷ್ಟೇ ಅಲ್ಲದೆ, ಸಾಬು ಮಿರ್ಜಿ ಅವರ ಸಹಿಯನ್ನು ಫೋರ್ಜರಿ ಮಾಡಿ ಮೇಲಾಧಿಕಾರಿಗಳಿಂದ ಶಿಫಾರಸ್ಸು ಮಾಡಿಸಿ ಪಾಸ್ಪೋರ್ಟ್ ಹಾಗೂ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಸಿಗುವಂತೆ ಮಾಡಿದ್ದರು. ಬಳಿಕ ಈ ಅಕ್ರಮ ಯಾರಿಗೂ ತಿಳಿಯಬಾರದೆಂದು…
ರಾಜ್ಯ ಕಾರಾಗೃಹ ಇಲಾಖೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅಲೋಕ್ ಕುಮಾರ್, ರಾಜ್ಯದ ಎಲ್ಲಾ ಜೈಲುಗಳನ್ನು ಹಂತ ಹಂತವಾಗಿ ಪರಿಶೀಲಿಸಲಾಗುವುದು ಎಂದು ಹೇಳಿದರು. ಮಂಗಳೂರು ಜೈಲು ಸೂಕ್ಷ್ಮ ಪ್ರದೇಶದಲ್ಲಿದೆ ಮತ್ತು ಆದ್ದರಿಂದ ಅದರ ಭದ್ರತಾ ವ್ಯವಸ್ಥೆಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಜೈಲಿನೊಳಗೆ ಶಿಸ್ತು ಉಲ್ಲಂಘಿಸುವ ಮತ್ತು ಗಲಭೆಯಲ್ಲಿ ತೊಡಗಿರುವ ಕೈದಿಗಳನ್ನು ಈಗಾಗಲೇ ಗುರುತಿಸಿ ಇತರ ಜಿಲ್ಲೆಗಳ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದರು. ಜೈಲಿನೊಳಗೆ ಮೊಬೈಲ್ ಫೋನ್ಗಳನ್ನು ಹೇಗೆ ಪೂರೈಸಲಾಗುತ್ತಿದೆ ಎಂಬುದರ ಕುರಿತು ವಿವರವಾದ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಪಿ ಹೇಳಿದರು. ಮೊಬೈಲ್ ಜಾಮರ್ಗಳ ಸಮಸ್ಯೆಗಳ ಕುರಿತು ದೂರುಗಳನ್ನು ಉಲ್ಲೇಖಿಸಿದ ಅವರು, ಸಮಸ್ಯೆಯನ್ನು ಪರಿಹರಿಸಲು ಮತ್ತು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದು ಹೇಳಿದರು. ಬೆಂಗಳೂರು ಮತ್ತು ಮೈಸೂರು ಜೈಲುಗಳಲ್ಲಿ ಈಗಾಗಲೇ ಪ್ರಾಯೋಗಿಕವಾಗಿ AI ಆಧಾರಿತ…
ಮಂಗಳೂರು: ಎಂ.ಆರ್.ಜಿ. ಗ್ರೂಪ್ನ ಆಶಾ–ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ ‘ನೆರವು–2025’ ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಸುಮಾರು 4 ಸಾವಿರ ಕುಟುಂಬಗಳು ಹಾಗೂ 100ಕ್ಕೂ ಅಧಿಕ ಸಂಘ–ಸಂಸ್ಥೆಗಳಿಗೆ ಒಟ್ಟು ₹9.5 ಕೋಟಿ ಮೊತ್ತದ ನೆರವು ವಿತರಿಸಲಾಗುವುದು ಎಂದು ಯೋಜನೆಯ ಪ್ರವರ್ತಕರಾದ ಎಂ.ಆರ್.ಜಿ. ಗ್ರೂಪ್ನ ಚೇರ್ಮನ್ ಡಾ. ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೆರವು’ ಯೋಜನೆ ಈ ವರ್ಷ ಏಳನೇ ವರ್ಷವನ್ನು ಪೂರೈಸುತ್ತಿದೆ ಎಂದು ಹೇಳಿದರು. ಯೋಜನೆ ಇನ್ನೂ ಮೂರು ವರ್ಷಗಳ ಕಾಲ ಮುಂದುವರಿಯಲಿದ್ದು, ದಶಮಾನೋತ್ಸವದ ಬಳಿಕ ಫಲಾನುಭವಿಗಳನ್ನು ಒಗ್ಗೂಡಿಸಿ ಯೋಜನೆಗೆ ಸಾಮೂಹಿಕ ಸ್ವರೂಪ ನೀಡುವ ಚಿಂತನೆ ಇದೆ. ಈ ವಿಸ್ತರಣೆಯಿಂದ ಮುಂದಿನ ದಿನಗಳಲ್ಲಿ ಪ್ರತಿವರ್ಷ ಕನಿಷ್ಠ 14 ಸಾವಿರ ಕುಟುಂಬಗಳಿಗೆ ನೆರವು ನೀಡುವ ಸಾಧ್ಯತೆ ಉಂಟಾಗಲಿದೆ ಎಂದು ಅವರು ಹೇಳಿದರು. ಆಧುನಿಕ ತಂತ್ರಜ್ಞಾನ ಯುಗದಲ್ಲಿಯೂ ವೈದ್ಯಕೀಯ ಚಿಕಿತ್ಸೆ ಎಲ್ಲರಿಗೂ ಸುಲಭವಾಗಿ ಲಭ್ಯವಾಗುತ್ತಿಲ್ಲ ಎಂಬ ವಾಸ್ತವವನ್ನು…
ಉಳ್ಳಾಲ : ತಲಪಾಡಿ ಗ್ರಾಮದ ಕೆ.ಸಿ ರೋಡ್ ಫಲಾಹ್ ಶಾಲಾ ಬಸ್ಸು ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಎಮ್ ಡಿಎಮ್ಎ ಕ್ರಿಸ್ಟಲ್ ಎಂಬ ಮಾದಕ ವಸ್ತುವನ್ನು ಮಾರಾಟದಲ್ಲಿ ತೊಡಗಿದ್ದ ಕೇರಳದ ಉಪ್ಪಳ, ಮಂಗಲ್ಪಾಡಿ ನಿವಾಸಿ ಶೇಖ್ ಮೊಹಮ್ಮದ್ ಕೈಫ್ (22)ಎಂಬಾತನನ್ನು ಉಳ್ಳಾಲ ಪೊಲೀಸರು ಸೋಮವಾರದಂದು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದು ,ಕೃತ್ಯದಲ್ಲಿ ತೊಡಗಿದ್ದ ಮತ್ತಿಬ್ಬರು ಪೆಡ್ಲರ್ ಗಳು ಪರಾರಿಯಾಗಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಕೈಫ್ ನಿಂದ 55,000/- ರೂಪಾಯಿ ಬೆಲೆ ಬಾಳುವ ನಿಷೇಧಿತ 11 ಗ್ರಾಂ ಎಮ್ ಡಿಎಮ್ಎ ಕ್ರಿಸ್ಟಲ್ ಮತ್ತು ಕೃತ್ಯಕ್ಕೆ ಬಳಸಿದ್ದ 1 ತೂಕ ಮಾಪನ,500 ರೂ.ನಗದು ಮತ್ತು 1 ಮೊಬೈಲ್ ಫೋನನ್ನು ಪೊಲೀಸರು ಜಪ್ತಿಗೊಳಿಸಿದ್ದಾರೆ.ಸ್ಥಳದಲ್ಲಿದ್ದ ಮತ್ತಿಬ್ಬರು ಡ್ರಗ್ ಪೆಡ್ಲರ್ ಗಳಾದ ಶಮೀರ್ ಕಾಂಬ್ಳೆ ಮತ್ತು ಜಾವೀದ್ ಎಂಬವರು ಪರಾರಿಯಾಗಿದ್ದಾರೆ.ಮೊಹಮ್ಮದ್ ಕೈಫ್ ಎಂಬಾತನು ವಿಲಾಸಿ ಜೀವನ ನಡೆಸಲು ಉಪ್ಪಳದ ಶಮೀರ್ ಕಾಂಬ್ಳೆ ಮತ್ತು ಜಾವೀದ್ ಎಂಬವರೊಂದಿಗೆ ಸೇರಿ ಕೆಸಿ ರೋಡ್ ಫಲಾಹ್ ಶಾಲಾ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಪರಿಚಯಸ್ಥ ಗಿರಾಕಿಗಳಿಗೆ…
ಉಪ್ಪಿನಂಗಡಿ: ಗುಂಡ್ಯ ಚೆಕ್ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಕಾರ್ಕಳ ನಿವಾಸಿ ಶೋದನ್ (22) ಬಂಧಿತ ಆರೋಪಿ. ಕಡಬ ತಾಲೂಕು ಶಿರಾಡಿ ನಿವಾಸಿ ಸುರೇಶ್ (46) ಎಂಬವರ ದೂರಿನಂತೆ, ಅವರು ಅಂಬ್ಯುಲೆನ್ಸ್ ವಾಹನ ಸಂಖ್ಯೆ KA-19-C-7557ರ ಚಾಲಕರಾಗಿದ್ದು, ಪ್ರತಿದಿನದಂತೆ ದಿನಾಂಕ ಡಿ.19ರಂದು ರಾತ್ರಿ ಗುಂಡ್ಯ ಚೆಕ್ಪೋಸ್ಟ್ ಬಳಿ ಅಂಬ್ಯುಲೆನ್ಸ್ ನಿಲ್ಲಿಸಿ ಲಾಕ್ ಮಾಡಿ ಮನೆಗೆ ತೆರಳಿದ್ದರು. ತುರ್ತು ಸಂದರ್ಭಗಳಲ್ಲಿ ಬದಲಿ ಚಾಲಕರಿಗೆ ಅನುಕೂಲವಾಗುವಂತೆ ಅಂಬ್ಯುಲೆನ್ಸ್ ಕೀಯನ್ನು ವಾಹನದಲ್ಲೇ ಇಟ್ಟು ಹೋಗಿದ್ದರೆಂದು ದೂರಿನಲ್ಲಿ ತಿಳಿಸಿದ್ದಾರೆ. ಮರುದಿನ ಡಿ.20ರಂದು ಬೆಳಿಗ್ಗೆ ಮನೆಯಿದ ವಾಪಸ್ಸಾಗಿ ಅಂಬ್ಯುಲೆನ್ಸ್ ನಿಲ್ಲಿಸಿದ್ದ ಸ್ಥಳಕ್ಕೆ ಬಂದಾಗ ವಾಹನ ಕಾಣೆಯಾಗಿರುವುದು ತಿಳಿದುಬಂದಿದೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 117/2025, ಕಲಂ 303(2) ಬಿಎನ್ಎಸ್ 2023ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಯಿತು. ತನಿಖೆಯ ವೇಳೆ ಹಾಸನ ಜಿಲ್ಲಾ ಪೊಲೀಸರ ಸಹಕಾರದೊಂದಿಗೆ ಶೋದನ್ನನ್ನು ಹಾಸನದಲ್ಲಿ ವಶಕ್ಕೆ ಪಡೆದು ವಿಚಾರಣೆ…
ಮಂಜೇಶ್ವರದಲ್ಲಿರುವ ಸ್ನೇಹಾಲಯ ಮನೋ-ಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ “ಕ್ರಿಸ್ಮಸ್ ಸಂಭ್ರಮ – 2025” ಅನ್ನು ಅತ್ಯಂತ ಭಕ್ತಿಭಾವ ಮತ್ತು ಹಬ್ಬದ ಉಲ್ಲಾಸದೊಂದಿಗೆ ಆಚರಿಸಲಾಯಿತು.ಕ್ರಿಸ್ಮಸ್ ಅದರ ನಿಜವಾದ ಅರ್ಥದಲ್ಲಿ ಹೊಸತನದ ಜನನ, ಸಂತೋಷ, ಮಾನವಕುಲಕ್ಕೆ ಸೇವಾ ಮನೋಭಾವವನ್ನು ಈ ಸಮಾರಂಭ ಸಾರಿತು. ಕ್ರಿಸ್ಮಸ್ ಸಂಭ್ರಮ – 2025.” ವು ಸಾಂಸ್ಕೃತಿಕ ಹಬ್ಬ, ವಿಶ್ವ ದಾಖಲೆ ಹೊಂದಿರುವ ರೆಮೋನಾ ಇವೆಟ್ ಪಿರೇರಾ ಅವರಿಂದ ಯೇಸುವಿನ ಜನನದ ಕಥೆಯನ್ನು ಅಭಿನಯಿಸುವ ಭರತನಾಟ್ಯ ಪ್ರದರ್ಶನ ಮತ್ತು ಪ್ರಸಿದ್ಧ ಗಾಯಕರಾದ ಜೋಶಲ್ ಮತ್ತು ಜೇಸನ್ ಅವರ ಸುಮಧುರ ಕ್ಯಾರೋಲ್ ಗಾಯನ, ಮಾಸ್ಟರ್ ಸಂಗೀತಗಾರ ಸಂಜಯ್ ರೊಡ್ರಿಗಸ್ ನಿರ್ದೇಶನ, ಹೊರಿಝೊನ್ ತಂಡ ಮತ್ತು ಅರ್ಬನ್ ಗ್ರೂವ್ ತಂಡಗಳಿಂದ ವೈವಿಧ್ಯಮಯ ನೃತ್ಯ ಪ್ರದರ್ಶನಗಳ ಸೂಪರ್ ಕಾಂಬೊ ಆಗಿತ್ತು.ಅತೀ ವಂದನೀಯ ಬಿಷಪ್ ಹೇಮಚಂದ್ರ ಕುಮಾರ್ ಇವರು ಮುಖ್ಯ ಅತಿಥಿಯಾಗಿ ಆಗಮಿಸಿ, ಆಚರಣೆಗೆ ಮುನ್ನ ಕ್ಯಾಂಪಸ್ಗೆ ಭೇಟಿ ನೀಡಿದರು, ಅವರು ನಿವಾಸಿಗಳನ್ನು ಆಶೀರ್ವದಿಸಿದರು ಮತ್ತು ಪ್ರೀತಿ, ಕರುಣೆ ಮತ್ತು ಮಾನವೀಯ ಕಾರ್ಯಗಳ ಅದ್ಭುತ ಸಂದೇಶವನ್ನು ನೀಡಿದರು…
ಮಂಗಳೂರು: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ತನಿಖಾ ಸಂಸ್ಥೆಗಳ ದುರುಪಯೋಗವನ್ನು ಖಂಡಿಸಿ ಮಂಗಳೂರಿನ ಬಿಜೆಪಿ ಕಚೇರಿಗೆ ಘೇರಾವ್ ಹಾಕಲು ಮುಂದಾದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಇಂದು ವಶಕ್ಕೆ ಪಡೆದರು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (MGNREGA) ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ವಿರೋಧಿಸಿದರು. ಅಲ್ಲದೆ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ಸೇಡಿನ ರಾಜಕಾರಣ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಕದ್ರಿ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಮುಂಭಾಗ ನೂರಾರು ಕಾರ್ಯಕರ್ತರು ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮಲ್ಲಿಕಟ್ಟೆಯಿಂದ ಬಿಜೆಪಿ ಕಚೇರಿಯತ್ತ ಮೆರವಣಿಗೆಯ ಮೂಲಕ ತೆರಳಲು ಯತ್ನಿಸಿದ ಪ್ರತಿಭಟನಾಕಾರರು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಿಡಿಕಾರಿದರು. ಪ್ರತಿಭಟನಾಕಾರರು ಮಲ್ಲಿಕಟ್ಟೆ…
ಕರಾವಳಿ ಉತ್ಸವ ಅಂಗವಾಗಿ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಜನಿಸಿದ ಹುಲಿ ಮರಿಗಳನ್ನು ಮೊದಲ ಬಾರಿಗೆ ಸಾರ್ವಜನಿಕ ವೀಕ್ಷಣೆಗೆ ಬಿಡುಗಡೆ ಮಾಡುವ ಹಾಗೂ ದತ್ತು ಯೋಜನೆಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಶೃಂಗೇರಿ ಮತ್ತು ಹರಿಹರಪುರದಲ್ಲಿ ಕಳೆದ ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದರು. ಆ ಸಮಯದಲ್ಲಿ ಹಳೆಯ ನಂಬಿಕೆಗಳು ಹೆಚ್ಚಾಗಿ ಪ್ರಾಬಲ್ಯ ಹೊಂದಿದ್ದವು ಎಂದು ಅವರು ನೆನಪಿಸಿಕೊಂಡರು. ಹುಲಿಗಳು ಹಿಂದಿನಿOದಲೇ ದಾಳಿ ಮಾಡುತ್ತವೆ ಎಂಬ ನಂಬಿಕೆ ಇದ್ದುದಾಗಿ ಹೇಳಿದರು. ವಿದ್ಯುತ್ ಹಾಗೂ ಇತರ ಮೂಲಭೂತ ಸೌಲಭ್ಯಗಳ ಕೊರತೆಯಿದ್ದ ಅಲ್ಪವಿಕಸಿತ ಗ್ರಾಮಗಳಲ್ಲಿ ಆಗ ಹುಲಿ ದಾಳಿಗಳು ಹೆಚ್ಚಾಗುತ್ತಿದ್ದವು. ಈ ದಿನಗಳಲ್ಲಿ ಕಾಡಿನಲ್ಲಿ ಹುಲಿಯನ್ನು ನೋಡುವುದಕ್ಕೂ ಸಹ ಭಾಗ್ಯ ಬೇಕಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಡಿಜಿಟಲೀಕರಣದ ಯುಗದಲ್ಲಿ ‘ಹುಲಿಯನ್ನು ಉಳಿಸಿ’ ಉಪಕ್ರಮಕ್ಕೆ ಮುಂದಿನ ದಿನಗಳಲ್ಲಿ ಇನ್ನಷ್ಟು ವೇಗ ಸಿಗಲಿದೆ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು. ಜೊತೆಗೆ ಉದ್ಯಾನವನದ ಮುಂದಿನ ಹುಲಿಯನ್ನು ದತ್ತು ಪಡೆಯುವಲ್ಲಿ ತಾವೇ ಮೊದಲಿಗರಾಗುವುದಾಗಿ ತಿಳಿಸಿದರು. ಒಂದು…
ಉಡುಪಿ: ಭಾರತೀಯ ನೌಕಾಪಡೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಅನಧಿಕೃತವಾಗಿ ಹಂಚಿಕೊಂಡ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಲ್ಪೆ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಉಡುಪಿ ಕೊಚ್ಚಿನ್ ಶಿಪ್ಯಾರ್ಡ್, ಮಲ್ಪೆ, ಮೆಸರ್ಸ್ ಶುಷ್ಮಾ ಮೆರೈನ್ ಪ್ರೈವೇಟ್ ಲಿಮಿಟೆಡ್ ಅನ್ನು ಉಪಗುತ್ತಿಗೆದಾರರಾಗಿ ನೇಮಿಸಿಕೊಂಡಿತ್ತು. ಕಂಪನಿಯ ಇಬ್ಬರು ಉದ್ಯೋಗಿಗಳಾದ ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಾಂತ್ರಿ, ಭಾರತೀಯ ನೌಕಾಪಡೆಯ ಹಡಗು ಸಂಖ್ಯೆಗಳ ಪಟ್ಟಿ ಮತ್ತು ಇತರ ಸೂಕ್ಷ್ಮ ಮಾಹಿತಿ ಸೇರಿದಂತೆ ಗೌಪ್ಯ ವಿವರಗಳನ್ನು ವಾಟ್ಸಾಪ್ ಮೂಲಕ ಅನಧಿಕೃತವಾಗಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳು ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಅಕ್ರಮ ಆರ್ಥಿಕ ಲಾಭಗಳನ್ನು ಗಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪಗಳ ಆಧಾರದ ಮೇಲೆ, ಮಲ್ಪೆ ಪೊಲೀಸ್ ಠಾಣೆಯು ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 152 ಮತ್ತು 1923 ರ ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್ 3 ಮತ್ತು 5 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ಅಪರಾಧ ಸಂಖ್ಯೆ 128/2025 ರ ಅಡಿಯಲ್ಲಿ ಪ್ರಕರಣವನ್ನು…









