Author: main-admin

ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತನ್ನ ತೀರ್ಪು ನೀಡಲಿದೆ. ಮೇ ತಿಂಗಳಲ್ಲಿ ವಿಚಾರಣೆಗೆ ಬರಬೇಕಿದ್ದ ಅರ್ಜಿಗಳ ಕುರಿತು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠವು ತೀರ್ಪು ನೀಡಲಿದೆ. ಬಳಕೆ ಅಥವಾ ನೋಂದಣಿ ಮೂಲಕ ವಕ್ಫ್ ಆಗಿರುವ ಭೂಮಿಯಲ್ಲಿ ಯಥಾಸ್ಥಿತಿ ಮುಂದುವರಿಯುತ್ತದೆಯೇ ಎಂಬ ನಿರ್ಣಾಯಕ ಪ್ರಶ್ನೆಗೆ ಸುಪ್ರೀಂ ಕೋರ್ಟ್ ಇಂದು ಉತ್ತರಿಸಲಿದೆ. ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೆ ವಕ್ಫ್ ಕೌನ್ಸಿಲ್ ಮತ್ತು ಮಂಡಳಿಗಳಿಗೆ ಹೊಸ ನೇಮಕಾತಿಗಳನ್ನು ಸುಪ್ರೀಂ ಕೋರ್ಟ್ ಈ ಹಿಂದೆ ಸ್ಥಗಿತಗೊಳಿಸಿತ್ತು. ಹಿಂದಿನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮಂಡಳಿಗಳು ಮತ್ತು ಮಂಡಳಿಗಳಲ್ಲಿ ಮುಸ್ಲಿಮೇತರರನ್ನು ಸೇರಿಸಬೇಕೆಂಬ ಕಾನೂನಿಗೆ ತಡೆ ನೀಡಿದ್ದರು. ಆದರೆ ಈ ಆದೇಶವು ಅರ್ಜಿಯ ಮರುಪರಿಶೀಲನೆಗೆ ಬಾಕಿ ಇತ್ತು. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಅರ್ಜಿಗಳನ್ನು ಪರಿಗಣಿಸಲು ಪ್ರಾರಂಭಿಸಿದಾಗ, ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಆದೇಶ ಮುಂದುವರಿಯುತ್ತದೆ ಎಂದು ಘೋಷಿಸಲಾಗಿಲ್ಲ. ಆದ್ದರಿಂದ, ಒಂದೆಡೆ, ದೇಶದಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಸಿಬ್ಬಂದಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕ್ಯಾನ್ಸರ್ ಚಿಕಿತ್ಸೆಗೆ 2 ಲಕ್ಷ ರೂ.ವರೆಗೆ ವೈದ್ಯಕೀಯ ಚಿಕಿತ್ಸೆ ಕಲ್ಪಿಸಲು ಸರ್ಕಾರ ಮುಂದಾಗಿದೆ. ಹೌದು, ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಜತೆಗೆ ನಿವೃತ್ತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಮತ್ತು ಅವರ ಪತಿ/ಪತ್ನಿಗೆ 1 ಲಕ್ಷದಿಂದ 2 ಲಕ್ಷ ರೂ.ವರೆಗಿನ ಸೌಲಭ್ಯವನ್ನು ಆರೋಗ್ಯ ಸೇವೆಯಡಿ ಸೇರ್ಪಡೆಗೊಳಿಸಿದೆ. ಆರೋಗ್ಯ ಭಾಗ್ಯ ಯೋಜನೆಯಡಿ ಸಿಜಿಎಚ್ಎಸ್ ದರದಲ್ಲಿ ಚಿಕಿತ್ಸೆ ಒದಗಿಸಲು ಸರ್ಕಾರ ಸಾಮಾನ್ಯ ವೈದ್ಯಕೀಯ ಚಿಕಿತ್ಸೆಗೆ ಗರಿಷ್ಠ ಮಿತಿ 1 ವರ್ಷಕ್ಕೆ ಓರ್ವ ಸದಸ್ಯನ ಕುಟುಂಬಕ್ಕೆ 1 ಲಕ್ಷ ರೂ. ಸಿಗಲಿದೆ.

Read More

ಎಂಸಿಸಿ ಬ್ಯಾಂಕ್, ಮಂಗಳೂರು ತನ್ನ 12 ನೇ ಎಟಿಎಂ ಅನ್ನು ಸೆಪ್ಟೆಂಬರ್ 13, 2025 ರ ಶನಿವಾರ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟಿಸಿತು.ಈ ಎಟಿಎಂ ಅನ್ನು ಎಂಆರ್‌ಪಿಎಲ್‌ನ ಕಾರ್ಪೊರೇಟ್ ಬ್ರ‍್ಯಾಂಡಿAಗ್ ಮತ್ತು ಕಾರ್ಪೊರೇಟ್ ಕಮ್ಯುನಿಕೇಷನ್ಸ್ನ ಚೀಫ್ ಜನರಲ್ ಮ್ಯಾನೇಜರ್ ಡಾ| ರುಡಾಲ್ಫ್ ಜೋಯರ್ ನೊರೊನ್ಹಾ ಅವರು ಉದ್ಘಾಟಿಸಿದರು. ಕಿನ್ನಿಗೋಳಿಯ ಇಮ್ಯಾಕ್ಯುಲೇಟ್ ಕಾನ್ಸೆಪ್ಷನ್ ಚರ್ಚ್ನ ಧರ್ಮಗುರು ರೆವರೆಂಡ್ ಫಾದರ್ ಜೋಕಿಮ್ ಫೆರ್ನಾಂಡಿಸ್ ಅವರು ಎಟಿಎಂ ಅನ್ನು ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂನಿAದ ಮೊದಲ ನಗದು ಹಿಂಪಡೆಯುವಿಕೆಯನ್ನು ಬಳ್ಕುಂಜೆಯ ಸೇಂಟ್ ಪೌಲ್ಸ್ ಚರ್ಚ್ನ ಧರ್ಮಗುರು ರೆವರೆಂಡ್ ಫಾದರ್ ಪೌಲ್ ಸಿಕ್ವೇರಾ ಮಾಡಿದರು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಎನ್‌ಅರ್‌ಐ, ಕಥೋಲಿಕ್ ಸಭಾ ಕಿನ್ನಿಗೋಳಿಯ ಕಾರ್ಯದರ್ಶಿ ಹಾಗೂ ವಿನ್ಸೆಂಟ್ ಡಿ ಪಾಲ್ ಲೆಕ್ಕಪರಿಶೋಧಕ ಶ್ರೀ ಜೆರೋಮ್ ಡಿ’ಅಲ್ಮೇಡಾ ಮತ್ತು ಕಿನ್ನಿಗೋಳಿಯ ಮೆಸ್ಸರ್ಸ್ ಚೈತನ್ಯ ಮೆಡಿಕಲ್ಸ್ ಮತ್ತು ಸಾಗರಿಕಾ ಅರೇಂಜರ್ಸ್ನ ಮಾಲೀಕ ಶ್ರೀ ಧನಂಜಯ ಪಿ. ಶೆಟ್ಟಿಗಾರ್ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಜನರಲ್ ಮ್ಯಾನೇಜರ್ ಶ್ರೀ ಸುನಿಲ್ ಮಿನೇಜಸ್ ಮತ್ತು…

Read More

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ಕೊಲೆಯಾದ ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿ ಹೇಳಿಕೆ ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ಎಂಬವರು ದೂರು ನೀಡಿದ್ದಾರೆ.ವೆಂಕಪ್ಪ ಕೋಟ್ಯಾನ್ ನೀಡಿದ ದೂರಿನಲ್ಲಿ ಸ್ನೇಹಮಯಿ ಕೃಷ್ಣ ಅವರು ವಿಠಲ ಗೌಡ ವಿರುದ್ಧ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಇದು ಸೌಜನ್ಯ ಕೊಲೆಗಾರರನ್ನು ಪತ್ತೆ ಹಚ್ಚಬೇಕು ಎಂದು ನಡೆಯುತ್ತಿರುವ ಹೋರಾಟವನ್ನು ದಾರಿ ತಪ್ಪಿಸುವ ದುರುದ್ದೇಶದಿಂದ ಮಾಡಿರುವುದಾಗಿದೆ. ಈತನನ್ನು ಮೈಸೂರಿನಿಂದ ಕರೆಸಿ ಈ ರೀತಿ ಹೇಳಿಕೆ ನೀಡಿರುವುದರ ಹಿಂದೆ ಯಾರೋ ಇರುವ ಅನುಮಾನವಿದೆ. ಆದ್ದರಿಂದ ಸ್ನೇಹಮಯಿ ಕೃಷ್ಣಯನ್ನು ಠಾಣೆಗೆ ಕರೆಸಿ ಕುಲಂಕುಷವಾಗಿ ವಿಚಾರಣೆ ನಡೆಸಬೇಕು ಹಾಗೂ ದೂರು ನೀಡಲು ಪ್ರೇರೇಪಿಸಿದವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

Read More

ಬೆಂಗಳೂರು: ರಾಜ್ಯದಲ್ಲಿ ಸೈಬರ್ ವಂಚನೆ ಕಡಿವಾಣಕ್ಕೆ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ದೇಶದಲ್ಲೇ ಮೊದಲು ಎನ್ನುವಂತೆ ಸೈಬರ್ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲಾಗಿದೆ. 16,000ಕ್ಕೂ ಹೆಚ್ಚು ಸೈಬರ್ ಕೇಸ್ ಗಳು ಬಾಕಿ ಇವೆ. ಹೀಗಾಗಿ ಸೈಬರ್ ಅಪರಾಧ ತಡೆಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಸೈಬರ್ ವೈಚನೆ ಕಡಿವಾಣಕ್ಕೆ ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ದೇಶದಲ್ಲೇ ಮೊದಲು ಎನ್ನುವಂತೆ ಸೈಬರ್ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಿದೆ. ಈ ಸೈಬರ್ ಕಮಾಂಡ್ ಸೆಂಟರ್ ನಲ್ಲಿ ನಾಲ್ಕು ವಿಂಗ್ ಗಳನ್ನು ರಚನೆ ಮಾಡಲಾಗಿದೆ. ಮೊದಲೆಯ ವಿಂಗ್ ಸೈಬರ್ ಕ್ರೈಂ ವಿಂಗ್ ಆಗಿದೆ. ಇದು ಸೈಬರ್ ಅಪರಾಧಗಳನ್ನು ಪತ್ತೆ ಮಾಡಿ, ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತದೆ. ಇನ್ನೂ 2ನೇ ಕಮಾಂಡ್ ಸೆಂಟರ್ ಸೈಬರ್ ಸೆಕ್ಯೂರಿಟಿ ವಿಂಗ್, ಬ್ಯಾಂಕ್ ಖಾತೆ, ಸಾಮಜಿಕ ಜಾಲತಾಣ, ಸಾಫ್ಟ್ ವೇರ್ ಹ್ಯಾಕ್ ಮಾಡುವವರನ್ನ ಪತ್ತೆ ಮಾಡುತ್ತೆ. ಮೂರನೇ ಕಮಾಂಡ್ ಸೆಂಟರ್ ವಿಂಗ್ ಐಡಿಟಿಯು ವಿಂಗ್ ಆಗಿದೆ. ಇದು ಸೈಬರ್ ಅಪರಾಧಗಳ ಸ್ಥಳ…

Read More

ಬೆಂಗಳೂರು: ಪೊಲೀಸರೇ ಡ್ರಗ್‌ ಪೆಡ್ಲರ್​ಗಳೊಂದಿಗೆ ಕೈಜೋಡಿಸಿರುವ ಆಘಾತಕಾರಿ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಓರ್ವ ಇನ್‌ಸ್ಪೆಕ್ಟರ್‌ ಸಹಿತ 10 ಪೊಲೀಸರನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಲಾಗಿದೆ. ಆರೋಪಿಗಳ ಜೊತೆ ಸೇರಿ ಡ್ರಗ್ಸ್​ ಮಾಫಿಯಾದಲ್ಲಿ ಭಾಗಿಯಾಗಿದ್ದ, ಡ್ರಗ್‌ ಪೆಡ್ಲರ್ಸ್ ಜೊತೆಗೆ ನಂಟು ಆರೋಪದ ಮೇಲೆ ಬೆಂಗಳೂರಿನ ಚಾಮರಾಜಪೇಟೆ ಠಾಣೆಯ ಇನ್‌ಸ್ಪೆಕ್ಟರ್‌ ಟಿ.ಮಂಜಣ್ಣ ಸೇರಿ ಚಾಮರಾಜಪೇಟೆ ಮತ್ತು ಜೆಜೆ ನಗರ ಠಾಣೆಯ 10 ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಇತ್ತೀಚೆಗೆ ಆರ್​ಆರ್ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ಮಾಡಿ ಟೈಡಲ್ ಟ್ಯಾಬ್ಲೆಟ್ ಪೆಡ್ಲಿಂಗ್ ಕೇಸ್​ನಲ್ಲಿ ಸಲ್ಮಾನ್ ಅಲಿಯಾಸ್​ ಪಾಪ, ಸಲ್ಮಾನ್​ ಅಲಿಯಾಸ್​​ ಪುಟಾಟ್, ನಯಾಜ್, ನವಾಜ್ ರೇಷ್ಮಾ ಎಂಬುವರು ಸೇರಿ ಆರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತರಿಂದ 4 ಲಕ್ಷ ರೂ. ನಗದು ಹಾಗೂ ನಾಲ್ಕು ಲಕ್ಷ ರೂ. ಮೌಲ್ಯ 1000 ಟೈಡಾಲ್ ಮಾತ್ರೆಗಳನ್ನು ಸೀಜ್ ಮಾಡಿದ್ದರು. ಪೊಲೀಸರೇ ಇವರಿಗೆ ಶ್ರೀರಕ್ಷೆ ಆಗಿದ್ದರು ಎನ್ನುವ ಶಾಕಿಂಗ್ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಆರೋಪಿಗಳು…

Read More

ಮಂಗಳೂರು: ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಿಕ್ಷೆಗೆ ಗುರಿಯಾದ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಫಕ್ಕೀರಪ್ಪ ಹಣಮಪ್ಪ ಮಾದರ(51) ಎಂದು ಗುರುತಿಸಲಾಗಿದೆ. ದಿನಾಂಕ 06-08-2024 ರಂದು ಜೋಕಟ್ಟೆ ಬಾಡಿಗೆ ಮನೆಯೊಂದರಲ್ಲಿ ತನ್ನ ಚಿಕ್ಕಪ್ಪನೊಂದಿಗೆ ವಾಸವಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಲೈಂಗಿಕ ಹಲ್ಲೆ ನಡೆಸಿ, ಕೊಲೆ ಮಾಡಿದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಫಕ್ಕೀರಪ್ಪ ಹಣಮಪ್ಪ ಮಾದರ(51) ನನ್ನು ಬಂಧಿಸಿದ್ದರು. ಇದೀಗ ಆತನ ಆರೋಪ ಸಾಬೀತಾಗಿದ್ದು ಆತನಿಗೆ ನ್ಯಾಯಾಲಯವು ಕಲಂ: 103(1) {ಕೊಲೆ} ಬಿ ಎನ್ ಎಸ್ ಕಾಯ್ದೆ ಅಡಿಯಲ್ಲಿ ಮರಣದಂಡನೆ ಶಿಕ್ಷೆ,, ಕಲಂ: 4(2) { ಲೈಂಗಿಕ ಹಲ್ಲೆ} ಪೊಕ್ಸ್ ಕಾಯ್ದೆ ಅಡಿಯಲ್ಲಿ ಅಜೀವ ಕಾರಾವಾಸ ಮತ್ತು 50 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿ…

Read More

ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕರ್ಣೆಯ ಪುತ್ತನಕಟ್ಟೆ ಬಳಿ ನಿನ್ನೆ ಬೆಳಗ್ಗೆ ನಡೆದ ಯುವತಿಗೆ ಯುವಕ ಚೂರಿ ಇರಿತ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ರಕ್ಷಿತಾ ಪೂಜಾರಿ (24) ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟರೆ ಚಾಕುವಿನಿಂದ ಇರಿದ ಆರೋಪಿ ಕಾರ್ತಿಕ್ ಪೂಜಾರಿ (26) ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕಾರ್ತಿಕ್ ಮತ್ತು ರಕ್ಷಿತಾ ಅಕ್ಕ ಪಕ್ಕದ ಮನೆಯವರು ಬಾಲ್ಯದಿಂದಲೂ ಒಟ್ಟಿಗೆ ಬೆಳೆದವರು. ಒಂದೇ ಜಾತಿ ಪರಸ್ಪರ ಸಂಬಂಧಿಕರೂ ಆಗಿದ್ದರು. ಕಳೆದ ಐದು ವರ್ಷಗಳಿಂದ ಇವರ ನಡುವೆ ಪ್ರೀತಿ ಇತ್ತು. ಆತ ಆಕೆಯನ್ನು ಮದುವೆಯಾಗುವ ಇಚ್ಛೆ ವ್ಯಕ್ತಪಡಿಸಿದ್ದನು. ಆದರೆ ಕಾರ್ತಿಕ್‌ಗೆ ಸರಿಯಾದ ಉದ್ಯೋಗ ಇಲ್ಲದ ಕಾರಣ ರಕ್ಷಿತಾ ಮನೆಯಲ್ಲಿ ಈ ಮದುವೆಗೆ ಒಪ್ಪಿಗೆ ಇರಲಿಲ್ಲ. ಹದಿನೈದು ದಿನಗಳ ಹಿಂದೆ ಮಾತುಕತೆ ನಡೆದು ಆತನಿಂದ ಪ್ರಮಾಣ ಮಾಡಿಸಲಾಗಿತ್ತು. ಯಾವುದೇ ಕಾರಣಕ್ಕೂ ಆಕೆಯ ಬದುಕಿನಲ್ಲಿ ನಾನು ಬರಲ್ಲ, ಆಹ್ವಾನ ಕೊಟ್ಟರೆ ಮದುವೆಗೆ ಬಂದು ಊಟ ಮಾಡಿ ಹೋಗುತ್ತೇನೆ…

Read More

ಮಂಗಳೂರು: ಯಾವುದೇ ಹಬ್ಬ ಆಚರಣೆಗೆ ಪೊಲೀಸರು ಎಲ್ಲೂ ತೊಂದರೆ ಕೊಟ್ಟಿಲ್ಲ. ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ಮೈಕ್‌ ಅಳವಡಿಸುತ್ತಿರುವುದಕ್ಕಷ್ಟೇ ನಮ್ಮ ನಿರ್ಬಂಧ ಇರುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮತ್ತೆ ಸ್ಪಷ್ಟ ಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೆಹರೂ ಮೈದಾನದಲ್ಲಿ ಗಣೇಶೋತ್ಸವದ ಹಬ್ಬ ಭಾರೀ ಸಂಭ್ರಮದಿಂದ ನಡೆದಿದೆ. ರಾತ್ರಿ 2.30ರವರೆಗೆ ನಡೆದಿದೆ. ಆದರೆ ಪೊಲೀಸರು ಎಲ್ಲೂ ಅಡ್ಡಿ ಪಡಿಸಿಲ್ಲ. ನಾವು ಮಾಡುವ ಸೆಲಬ್ರೇಷನ್‌ನಿಂದ ನಮಗೆ ಸಂಭ್ರಮ ಇರಬೇಕು. ಆದರೆ ಬೇರೆಯವರಿಗೆ ಅದರಿಂದ ತೊಂದರೆ ಆಗಬಾರದು. ಮೈದಾನದಲ್ಲಿ ಕಾರ್ಯಕ್ರಮ ಮಾಡುವಾಗ 50 ಮೀಟರ್ ಇದ್ದರೆ ಶಬ್ದ 50 ಮೀಟರ್‌ಗಷ್ಟೇ ಇರಲಿ. ಶಾಂತಿ ಸಭೆ ಮಾಡಿದ್ದಾಗ ಸ್ಥಳೀಯರೇ ಬಂದು ನಮಗೆ ಮೈಕ್‌ ಬೇಡ ಎಂದು ಹೇಳಿದ್ದಾರೆ. ಮತ್ತೆ ಈಗ ಪೊಲೀಸರಿಂದ ತೊಂದರೆ ಆಗುತ್ತಿದೆ ಎಂದು ಹೇಳಿದರೆ ಹೇಗೆ..? ಸ್ಥಳೀಯ ಠಾಣಾ ಇನ್‌ಸ್ಪೆಕ್ಟರ್ ಮೈಕಿಗೆ ಅನುಮತಿ ಕೊಡುತ್ತಾರೆ. ಅವರು ಸೂಕ್ತ ಕ್ರಮ ವಹಿಸುತ್ತಾರೆ ಎಂದರು. ಇನ್ನು ಯಕ್ಷಗಾನವೊಂದನ್ನು…

Read More

ಮಂಗಳೂರು: ಮುಖ್ಯಮಂತ್ರಿಗಳನ್ನು ಗುರಿಯಾಗಿಸಿ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಪ್ರಕಟಿಸಿದ ಆರೋಪದ ಮೇಲೆ ಟಿವಿ ವಿಕ್ರಮದ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ (45) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೆಗ್ಡೆ ಅವರು ತಮ್ಮ “ಪೋಸ್ಟ್ ಕಾರ್ಡ್” ಎಂಬ ಫೇಸ್‌ಬುಕ್ ಖಾತೆಯಲ್ಲಿ, “ಮಾನ್ಯ ಮುಖ್ಯಮಂತ್ರಿಗಳೇ, ಗಣೇಶನ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ ಮಸೀದಿಗಳ ಮೇಲೆ ಒಮ್ಮೆ ಬುಲ್ಡೋಜರ್ ಕಳುಹಿಸುವ ಧೈರ್ಯವನ್ನು ನೀವು ಮಾಡಿದರೆ, ಮುಂದಿನ ವರ್ಷ ರಾಜ್ಯದಲ್ಲಿ ಇಂತಹ ಘಟನೆಗಳು ಎಲ್ಲಿಯೂ ಮರುಕಳಿಸುವುದಿಲ್ಲ” ಎಂದು ಹೇಳಿಕೆಯನ್ನು ಪ್ರಕಟಿಸಿದ್ದರು.ಇದಕ್ಕೆ ಸಂಬಂಧಿಸಿದಂತೆ, ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆಯ ಸೆಕ್ಷನ್ 353(2)ರ ಅಡಿಯಲ್ಲಿ ಪ್ರಕರಣ (ಕ್ರೈಮ್ ನಂ. 143/2025) ದಾಖಲಾಗಿದೆ. ತನಿಖೆ ಕೈಗೊಂಡ ಮೂಡಬಿದರೆ ಪೊಲೀಸರು ಬೆಂಗಳೂರಿನಲ್ಲಿ ಅವರನ್ನು ಬಂಧಿಸಿ, ಸೆಪ್ಟೆಂಬರ್ 12ರಂದು ಮೂಡಬಿದರೆ ಸಿಜೆ ಮತ್ತು ಕೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.ನ್ಯಾಯಾಲಯವು ಅವರನ್ನು ಸೆಪ್ಟೆಂಬರ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Read More