ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಮತ್ತು ಸಜೀವ ಗುಂಡುಗಳನ್ನು ಹೊಂದಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ನಗರದ ಪಂಪ್ವೆಲ್ನ ತೌಸಿಫ್ ಅಹ್ಮದ್ (38) ಮತ್ತು ಕೆ.ಸಿ.ರೋಡ್ನ ಅಬ್ದುಲ್ ಖಾದರ್(41) ಬಂಧಿತ ಆರೋಪಿಗಳಾಗಿದ್ದಾರೆ. ಕಂಕನಾಡಿ ನಗರ ಠಾಣೆಯ ಎಸ್ಸೈ ಶಿವಕುಮಾರ್ ಸಿಬ್ಬಂದಿಯ ಜೊತೆಗೂಡಿ ಸೋಮವಾರ ಅಪರಾಹ್ನ ರೌಂಡ್ಸ್ ಕರ್ತವ್ಯ ನಡೆಸುತ್ತಾ ಜೆಪ್ಪಿನಮೊಗರಿನಿಂದ ಕಲ್ಲಾಪು ಕಡೆಗೆ ಹೋಗುತ್ತಿದ್ದಾಗ ಕಡೆಕಾರ್ ಕ್ರಾಸ್ ಬಳಿ ನಿಂತಿದ್ದ ಇಬ್ಬರು ಪೊಲೀಸ್ ವಾಹನವನ್ನು ಕಂಡು ಓಡಿ ಹೋಗಲೆತ್ನಿಸಿದರು ಎನ್ನಲಾಗಿದೆ. ತಕ್ಷಣ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಪಿಸ್ತೂಲ್ ಹಾಗೂ 6 ಸಜೀವ ಗುಂಡುಗಳನ್ನು ಹೊಂದಿರುವುದು ಕಂಡುಬಂದಿದೆ. ಈ ವೇಳೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Author: main-admin
ಪಾವಂಜೆ ಬ್ರಿಡ್ಜ್ನಿಂದ ನದಿಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ವ್ಯಕ್ತಿಯನ್ನು ಕ್ಷಿಪ್ರ ಕಾರ್ಯಾಚರಣೆಯಲ್ಲಿ ಪೊಲೀಸರು ರಕ್ಷಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಪಿ.ವಿ.ಎಸ್ ಕಲಾಕುಂಜದ ಬಳಿಯ ನಿವಾಸಿ ವಿಶ್ವನಾಥ ಶೆಟ್ಟಿ (75) ಎಂದು ಗುರುತಿಸಲಾಗಿದೆ. ಆ.4ರಂದು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಬರ್ಕೆ ಪೊಲೀಸ್ ಠಾಣೆ ಸರಹದ್ದಿಗೆ ಒಳಪಟ್ಟು ಪಿ.ವಿ.ಎಸ್ ಕಲಾಕುಂಜದ ಬಳಿಯ ನಿವಾಸಿ ವಿಶ್ವನಾಥ ಶೆಟ್ಟಿ (75) ಮಣ್ಣಗುಡ್ಡ ರವರು ಬೆಳಿಗ್ಗೆ ಕುದ್ರೋಳಿ ದೇವಸ್ಥಾನಕ್ಕೆಂದು ಹೋದವರು ಮರಳಿ ಮನೆಗೆ ಬಂದಿಲ್ಲವೆಂಬುದಾಗಿ ನಿತಿನ್ ಎಂಬವರು ಬರ್ಕೆ ಪೊಲೀಸ್ ಠಾಣೆಗೆ ತಿಳಿಸಿರುತ್ತಾರೆ. ಆ ಕೂಡಲೇ ಈ ಮಾಹಿತಿಯನ್ನು ಬರ್ಕೆ ಪೊಲೀಸ್ ಠಾಣೆಯ ಎ.ಎಸ್.ಐ ಸುಧಾಕರ್ ರವರು ERSS-112 ಗೆ ಮಾಹಿತಿಯನ್ನು ಹಂಚಿಕೊಂಡಿರುತ್ತಾರೆ. ಈ ಸಮಯದಲ್ಲಿ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ERSS-112 ಕರ್ತವ್ಯದಲ್ಲಿದ್ದ ಪೊಲೀಸರಾದ ಹೆಡ್ ಕಾನ್ಸ್ಟೇಬಲ್ಗಳಾದ ಯೊಗೀಶ್, ಕಿಶೋರ್ ಕುಮಾರ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮಧುಕರ್ ರವರು ಮಾಹಿತಿಯನ್ನು ಸ್ವೀಕರಿಸಿ ಶೀಘ್ರ ಕಾರ್ಯಚಕಿತರಾಗಿ ಮಾಹಿತಿಯ ಮೇರೆಗೆ ಪಾವಂಜೆ…
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ, ಅಬ್ದುಲ್ ಕೆ. ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯು, ಕೋಮು ಸೌಹಾರ್ಧತೆಗೆ ದಕ್ಕೆಯಾಗುವಂತಹ ಹಾಗೂ ಅನ್ಯ ಸಮುದಾಯದ ವಿರುದ್ಧ ಅವಹೇಳನಕಾರಿ ಸಂದೇಶವನ್ನು ಸದ್ರಿ ಫೇಸ್ಬುಕ್ ಖಾತೆಯಲ್ಲಿ ಪ್ರಸಾರ ಮಾಡಿರುವುದು ದಿನಾಂಕ: 04-08-2025 ರಂದು ಕಂಡುಬಂದಿರುತ್ತದೆ. ಸದ್ರಿ ಫೆಸ್ಬುಕ್ ಸಂದೇಶದಿಂದ ವಿಭಿನ್ನ ಕೋಮುಗಳ ನಡುವೆ ದ್ವೇಷ ಮೂಡಿ, ಸಾರ್ವಜನಿಕ ಶಾಂತಿ ನೆಮ್ಮದಿಗೆ ದಕ್ಕೆಯಾಗುವ ಸಾದ್ಯತೆ ಇರುವುದರಿಂದ, ಈ ಫೇಸ್ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 67/2025, ಕಲಂ: 196(1) (a) 353(2)BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ
ಉಪ್ಪಿನಂಗಡಿ : ಹಲವು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಸನ ಮೂಲದ ಆರೋಪಿ ಸೊಹೈಲ್ ಅಲಿಯಾಸ್ ಸೊಹಿಬ್ನನ್ನು (24) ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಒಟ್ಟು ಎಂಟು ಕಳ್ಳತನ ಪ್ರಕರಣಗಳಲ್ಲಿ ಸೊಹೈಲ್ ಭಾಗಿಯಾಗಿರುವುದನ್ನು ಪತ್ತೆಹಚ್ಚಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 2020 ಮತ್ತು 2022ರಲ್ಲಿ ಅವನ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. 2020ರಲ್ಲಿ ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. 2022ರಲ್ಲಿ ಕೇರಳದ ಕಣ್ಣಾಪುರ ಪೊಲೀಸ್ ಠಾಣೆಯಲ್ಲಿ ಅವನ ವಿರುದ್ಧ ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ಆತ ಮಂಗಳೂರಿನ ಸಮೀಪ ತಲಪಾಡಿಯಲ್ಲಿ ವಾಸಿಸುತ್ತಿದ್ದ. ಆದರೆ ನಂತರ ಬೇರಡೆಗೆ ಹೋಗಿದ್ದ. ಪೊಲೀಸರು ಅವನನ್ನು ಹಾಸನ ಜಿಲ್ಲೆಯ ಬಿಟ್ಟಗೌಡನಹಳ್ಳಿಯಲ್ಲಿ ಪತ್ತೆಹಚ್ಚಿ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಉಪ್ಪಿನಂಗಡಿ ಎಸ್ಐ ಕೌಶಿಕ್ ನೇತೃತ್ವದಲ್ಲಿ, ಸಿಬ್ಬಂದಿಗಳಾದ ಶಿವರಾಮ್, ಶ್ರೀಶೈಲ ಮತ್ತು ಮೊಹಮ್ಮದ್ ಮೌಲಾನಾ ಅವರ ನೆರವಿನೊಂದಿಗೆ ಬಂಧನ ಕಾರ್ಯಾಚರಣೆ ನಡೆಸಲಾಯಿತು.
ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿ.ಕೆ. ಫರ್ನಿಚರ್ & ಎಲೆಕ್ಟ್ರಾನಿಕ್ಸ್ ವತಿಯಿಂದ ಆನ್ಲೈನ್ ಫ್ಯಾನ್ಸಿ ಡ್ರೆಸ್ ಸ್ಪರ್ಧೆ – 2025 ಏರ್ಪಡಿಸಲಾಗಿದೆ. ಈ ವೇದಿಕೆ ಮಕ್ಕಳ ಪ್ರತಿಭೆ, ಸೃಜನಶೀಲತೆ ಮತ್ತು ದೇಶಾಭಿಮಾನವನ್ನು ಪ್ರದರ್ಶಿಸಲು ಒಂದು ಸುವರ್ಣಾವಕಾಶವಾಗಿದೆ.ಥೀಮ್: ನಿಮ್ಮ ಮಗುವನ್ನು ಸ್ವಾತಂತ್ರ್ಯ ಹೋರಾಟಗಾರರ ವೇಷದಲ್ಲಿ ಸಿಂಗರಿಸಿ, ಇತ್ತೀಚಿನ ಫೋಟೋ / ವೀಡಿಯೊ ಕಳುಹಿಸಿ. ವಯೋಮಿತಿ/ವಿಭಾಗಗಳು:• ಕಿಡ್ಸ್ (2 – 5 ವರ್ಷ): ಕೇವಲ ಫೋಟೊ• ಸಬ್ ಜೂನಿಯರ್ (6 – 10 ವರ್ಷ): ದೇಶಭಕ್ತಿ ಹಾಡಿನೊಂದಿಗೆ ವೀಡಿಯೊ• ಜೂನಿಯರ್ (11 – 14 ವರ್ಷ): ದೇಶಭಕ್ತಿ ಭಾಷಣದೊಂದಿಗೆ ವೀಡಿಯೊ ಪ್ರತಿ ವಿಭಾಗದ ಬಹುಮಾನಗಳು:1ನೇ ಬಹುಮಾನ – ಬೈಸಿಕಲ್ / ಸ್ಟಡಿ ಟೇಬಲ್2ನೇ ಬಹುಮಾನ – ಸ್ಟಡಿ ಟೇಬಲ್ ವಿತ್ ಬುಕ್ ಶೆಲ್ಫ್ / ಪಿಯಾನೊ ಕೀಬೋರ್ಡ್3ನೇ ಬಹುಮಾನ** – ಬುಕ್ ಶೆಲ್ಫ್ಪ್ರತಿ ವಿಭಾಗದಲ್ಲೂ 5 ಉತ್ತಮ ಪ್ರದರ್ಶನಕ್ಕೆ ಬಹುಮಾನಗಳು ಲಭ್ಯವಿವೆ. ಎಲ್ಲಾ ವಿಜೇತರಿಗೆ ಪ್ರಮಾಣಪತ್ರ ಮತ್ತು ಪದಕ. ಆನ್ಲೈನ್ ಭಾಗವಹಸಿದ ಎಲ್ಲರಿಗೂ ಪ್ರಮಾಣಪತ್ರ…
ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎಂ.ಸಿ.ಸಿ. ಬ್ಯಾಂಕ್ ತನ್ನ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3, 2025ರ ಭಾನುವಾರದಂದು ಉದ್ಘಾಟಿಸಿತು.ಈ ಶಾಖೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳು, ಸಮುದಾಯದ ಸದಸ್ಯರು ಮತ್ತು ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿದರು. ಬೈಂದೂರಿನ ಹೋಲಿ ಕ್ರಾಸ್ ಚರ್ಚ್’ನ ಧರ್ಮಗುರುಗಳಾದ ರೆವರೆಂಡ್ ಫಾದರ್ ವಿನ್ಸೆಂಟ್ ಕುವೆಲ್ಲೊ ಅವರು ಆಶೀರ್ವದಿಸಿ, ಹೊಸ ಶಾಖೆಯ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು.ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಬಾಬು ಶೆಟ್ಟಿ ಸೇಫ್ ಡೆಪಾಸಿಟ್ ಲಾಕರ್ ಉದ್ಘಾಟಿಸಿದರು ಇ-ಸ್ಟ್ಯಾಂಪಿಂಗ್ ಸೌಲಭ್ಯವನ್ನು ಬೈಂದೂರಿನ ಸೈಂಟ್ ಥಾಮಸ್ ವಸತಿ ಶಾಲೆಯ ಪ್ರಾಂಶುಪಾಲ ರೆವರೆಂಡ್ ಫಾದರ್ ಫಿಲಿಪ್ ನೆಲಿವಿಲ್ಲಾ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ರಾಜು ಪೂಜಾರಿ, ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಿತ…
ಹೆಬ್ರಿ : ತಂದೆಯ ಜೊತೆ ತೋಟದಲ್ಲಿದ್ದ ವೇಳೆ, ವಿಷಕಾರಿ ಹಾವು ಕಚ್ಚಿ ಎಂಟು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಹೆಬ್ರಿಯ ಶೇಡಿಮನೆ ಗ್ರಾಮದಲ್ಲಿ ನಡೆದಿದೆ. ಶೇಡಿಮನೆಯ ಶ್ರೀಧರ ಎಂಬವರ ಪುತ್ರಿ ಸನ್ನಿಧಿ(8) ಮೃತ ಬಾಲಕಿ. ಶಾಲೆಗೆ ರಜೆಯಿದ್ದ ಕಾರಣ, ತಂದೆಯ ಜೊತೆ ತೋಟದಲ್ಲಿದ್ದಾಗ ಯಾವುದೋ ವಿಷಕಾರಿ ಹಾವು ಕಚ್ಚಿದ್ದಾಗಿ ತಿಳಿಸಿದ್ದಾಳೆ. ತಕ್ಷಣ ಕಾಲಿನಲ್ಲಿ ಗಾಯ ಗಮನಿಸಿದ ಬಾಲಕಿಯ ತಂದೆ ಕೂಡಲೇ ಹೆಬ್ರಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು,ಆದರೆ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಬೆಳ್ತಂಗಡಿ: ಕಟ್ಟಡವೊಂದರಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿದ್ದ ಗಾಂಜಾವನ್ನು ಪುಂಜಾಲಕಟ್ಟೆ ಪೊಲೀಸರು ಪತ್ತೆಹಚ್ಚಿದ್ದು, ಆರೋಪಿ ಪರಾರಿಯಾಗಿದ್ದಾನೆ. ಈ ಪ್ರಕರಣವನ್ನು ಸದ್ಯ ಬೆಳ್ತಂಗಡಿ ಪೊಲೀಸರಿಗೆ ವರ್ಗಾವಣೆ ಮಾಡಲಾಗಿದೆ. ಆರೋಪಿಯನ್ನು ಮದಡ್ಕದ ಚಿಲಿಂಬಿ ನಿವಾಸಿ ರಫೀಕ್ ಎಂಬಾತ ಪರಾರಿಯಾಗಿದ್ದಾನೆ. ಆತನ ಮನೆಯಲ್ಲಿ 160 ಗ್ರಾಂ ಗಾಂಜಾ ಶೇಖರಿಸಿ ಇಡಲಾಗಿತ್ತು. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸರಿಗೆ ಖಚಿತ ಮಾಹಿತಿ ಬಂದಿದ್ದು ದಾಳಿ ನಡೆಸಿದ್ದಾರೆ. ಆರೋಪಿ ರಫೀಕ್ ವಿರುದ್ಧ ಈ ಹಿಂದೆಯೂ ಹಲವಾರು ಗಾಂಜಾ ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ಇದೆ.
ಮಂಗಳೂರು: ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಕೃಷ್ಣವೇಣಿ ಅವರ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮನೆ ಕಟ್ಟುವ ಸಂಬಂಧ ದೃಢೀಕರಣ ನೀಡಲು ಲಂಚ ಪಡೆದಿದ್ದರು ಎಂದು ಆರೋಪಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಕೃಷ್ಣವೇಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಮೇ 28 ರಂದು ಬಂಧಿಸಿದ್ದರು. ಇದರ ವಿರುದ್ಧ ಹೈಕೋರ್ಟ್ಗೆ ಸೂಕ್ತ ದಾಖಲೆಗಳೊಂದಿಗೆ ಕೃಷ್ಣವೇಣಿ ರಿಟ್ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿದ ನ್ಯಾಯಾಲಯ ಕೃಷ್ಣವೇಣಿ ಅವರ ಅಮಾನತು ಆದೇಶಕ್ಕೆ ತಡೆಯಾಜ್ಞೆ ನೀಡಿದೆ ಎಂದು ತಿಳಿದು ಬಂದಿದೆ. ಯಾರೋ ನೀಡಿದ ಸುಳ್ಳು ದೂರನ್ನು ಆಧರಿಸಿ ಲೋಕಾಯುಕ್ತ ದಾಳಿ ನಡೆಸಿ ನನ್ನನ್ನು ಬಂಧಿಸಿದ್ದಾಗಿ ಕೃಷ್ಣವೇಣಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಕೃಷ್ಣ ವೇಣಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
ಮಂಗಳೂರು; ವಾಹನಕ್ಕೆ ಸೈಡ್ ಕೋಡೋ ವಿಚಾರದಲ್ಲಿ ಆಟೋ ಚಾಲಕ ಹಾಗೂ ಕಾರಿನ ಪ್ರಯಾಣಿಕರ ಮಧ್ಯೆ ಹೊಡದಾಟ ನಡೆದಿರುವ ಘಟನೆ ಮಂಗಳೂರಿನ ಪಂಪ್ವೆಲ್ ನಿಂದ ಕಂಕನಾಡಿ ಸಂಪರ್ಕಿಸುವ ರಸ್ತೆಯಲ್ಲಿ ನಡೆದಿದೆ. ವಾಹನಕ್ಕೆ ಸೈಡ್ ಕೊಡುವ ವಿಚಾರಕ್ಕೆ ಆಟೋ ಚಾಲಕ ಮತ್ತು ಕಾರು ಪ್ರಯಾಣಿಕರ ಮಧ್ಯೆ ಹೊಡೆದಾಟ ನಡೆದಿದೆ. ಇದೇ ವೇಳೆ ಅದೇ ಮಾರ್ಗವಾಗಿ ಬಂದ ಅಂಬ್ಯುಲೆನ್ಸ್ ಗೂ ದಾರಿ ನೀಡದೆ ಗುಂಪು ಹೊಡೆದಾಡಿಕೊಂಡಿದೆ ಎನ್ನಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಪೊಲೀಸರು ಅಗಸ್ಟ್ 1 ರಂದು ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಳಿಕ ಗಲಾಟೆ ಮಾಡಿದವರೇ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ ಎಂದಿದ್ದಾರೆ.









