ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ಗೆ ಮಹಿಳೆಯೊಬ್ಬರು ಲವ್ ಲೆಟರ್ ಬರೆದಿದ್ದು, ಮಹಿಳೆ ಕಾಟಕ್ಕೆ ಬೇಸತ್ತ ಇನ್ಸ್ಪೆಕ್ಟರ್ ಎಫ್ಐಆರ್ ದಾಖಲು ಮಾಡಿದ್ದಾರೆ. ಇನ್ಸ್ಪೆಕ್ಟರ್ ಸತೀಶ್ ಅವರಿಗೆ ರಾಮಮೂರ್ತಿ ನಗರ ನಿವಾಸಿ ಮಹಿಳೆ ವನಜಾ ಎನ್ನುವವರು ಪದೇ ಪದೇ ಲವ್ ಲೆಟರ್ ಬರೆಯುತ್ತಿದ್ದರು. ಇನ್ಸ್ಪೆಕ್ಟರ್ ಠಾಣೆಯಲ್ಲಿ ಇಲ್ಲದ ವೇಳೆ ಠಾಣೆಗೆ ಬಂದು ಇನ್ಸ್ಪೆಕ್ಟರ್ ಟೇಬಲ್ ಮೇಲೆ ಲವ್ ಲೆಟರ್ ಜೊತೆಗೆ ಕಜ್ಜಾಯದ ಡಬ್ಬಿ, ಹೂ ಬೊಕ್ಕೆ ಹಾಗೂ ಅಲ್ಲದೇ ಇಪ್ಪತ್ತು ಮಾತ್ರೆಗಳನ್ನು ಇಟ್ಟು ಹೋಗಿದ್ದರು. ಪ್ರೇಮ ಪತ್ರದಲ್ಲಿ ನೀವು, ನನ್ನ ಪ್ರೀತಿಯನ್ನು ಒಪ್ಪುತ್ತಿಲ್ಲ, ನಿಮಗೆ ತೊಂದರೆ ಕೊಡಲು ನನಗೆ ಇಷ್ಟ ಇಲ್ಲ. ನೀವು ನನ್ನ ಪ್ರೀತಿ ಒಪ್ಪಿಕೊಳ್ಳದಿದ್ದರೆ, ನಾನು ಆತ್ಮಹತ್ಯೆ ಮಾಡಿಕೊಳ್ತುತ್ತೇನೆ. ನನ್ನ ಸಾವಿಗೆ ನೀವೆ ಕಾರಣ ಎಂದು ಹಾರ್ಟ್ ಚಿತ್ರ ಬರೆದು ಅದರಲ್ಲಿ ಚಿನ್ನಿ ಲವ್ ಯೂ, ಯೂ ಮಸ್ಟ್ ಲವ್ ಮೀ ಎಂದು ರಕ್ತದಲ್ಲಿ ಪತ್ರ ಬರೆದಿದ್ದಾಳೆ. ಮಹಿಳೆ ಪತ್ರ ಬರೆಯುವ ಮುನ್ನ ಮೊಬೈಲ್ಗೆ ಸಾಕಷ್ಟು ಬಾರಿ ಮೆಸೇಜ್…
Author: main-admin
ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ತಾಲೂಕು ಉಪ್ಪಳದ ಅಬ್ದುಲ್ ರವೂಫ್ ಅಲಿಯಾಸ್ ಮೀಸೆ ರವೂಫ್ (48) ಬಂಧಿತ ಆರೋಪಿ. ಈತನ ವಿರುದ್ಧ ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 19 ಪ್ರಕರಣಗಳು ದಾಖಲಾಗಿವೆ. ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಹಾಗೂ ಕೋಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು ಸೇರಿ ಒಟ್ಟು 25 ಪ್ರಕರಣಗಳು ದಾಖಲಾಗಿದ್ದು, ಕಾವೂರು ಠಾಣಾ ಪ್ರಕರಣದಲ್ಲಿ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿತ್ತು. ಕೋಣಾಜೆ ಠಾಣಾ 5 ಪ್ರಕರಣಗಳಲ್ಲಿ ಉದ್ಘೋಷಿತ ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿದೆ.
ಸುರತ್ಕಲ್ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ದೊಡ್ಡಪ್ಪನ ಮಗಳಾದ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಸೋದರನೇ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯಲ್ಲಿ ನಡೆದಿದೆ. ಕುಳಾಯಿ ನಿವಾಸಿ ವಿಠಲ ಕುಂಬಾರ ಎಂಬ ಆರೋಪಿಯು ದೊಡ್ಡಪ್ಪನ ಮಗಳನ್ನು ಬೆದರಿಸಿ ಮನೆಯಲ್ಲಿ ಯಾರೂ ಇಲ್ಲದಾಗ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ್ದಾನೆ. ಈ ವಿಚಾರವನ್ನು ಮನೆಯಲ್ಲಿ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಮತ್ತು ಭಾರತೀಯ ನ್ಯಾಯ ಸಂಹಿತೆ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ತಡೆಗೋಡೆ ನಿರ್ಮಾಣದ ಕಾಮಗಾರಿ ವೇಳೆ ಗುಡ್ಡ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಕಾರ್ಮಿಕನೋರ್ವ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲಾಪು ಸಮೀಪದ ಸೇವಂತಿಗುತ್ತು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಮೃತರನ್ನು ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕು ಹನುಮಕಟ್ಟೆ ನಿವಾಸಿ ಬಾಳಪ್ಪ ಎಂದು ಗುರುತಿಸಲಾಗಿದೆ. ಮನೆಯೊಂದರ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಈ ಘಟನೆ ನಡೆದಿದೆ. ಮಂಗಳವಾರ ಜೆಸಿಬಿ ಸಹಿತ ವಲಸೆ ಕಾರ್ಮಿಕರಾದ ಬಾಳಪ್ಪ, ಹನುಮಂತ, ಭೀಮಪ್ಪ, ಶಿವು ಎಂಬವರು ತಡೆಗೋಡೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದರು. ಈ ವೇಳೆ ಮನೆಯ ಹಿಂಭಾಗದ ಎತ್ತರದ ಗುಡ್ಡದ ಮಣ್ಣು ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕರಾದ ಬಾಳಪ್ಪ, ಹನುಮಂತ, ಭೀಮಪ್ಪ ಮಣ್ಣಿನಡಿ ಸಿಲುಕಿದ್ದಾರೆ. ಹನುಮಂತ ಮತ್ತು ಭೀಮಪ್ಪ ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪಾರಾಗಿದ್ದು, ಮಣ್ಣಿನಡಿ ಬಿದ್ದು ಗಂಭೀರ ಗಾಯಗೊಂಡಿದ್ದ ಬಾಳಪ್ಪನನ್ನ ಸ್ಥಳೀಯರು ಹರಸಾಹಸ ಪಟ್ಟು ಹೊರ ತೆಗೆದರೂ ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದಾರೆ.
ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಪರಂಪರೆ ಮತ್ತು ಗುರುತುಗಳನ್ನು ಚಿತ್ರಿಸುವ ದಿ ಎಕೋಸ್ ಆಫ್ ದ ಕಾರಿಡಾರ್ಸ್ – ಎ ಪೋರ್ಟ್ರೇಟ್ ಆಫ್ ಸೈಂಟ್ ಅಲೋಶಿಯಸ್ ಯುನಿವರ್ಸಿಟಿ ಹಾಗೂ ಫಾದರ್ ಮಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಷನ್ಸ್ನ ಪರಂಪರೆ ಮತ್ತು ಸೇವೆಯನ್ನು ದಾಖಲಿಸುವ ಟಚ್ಡ್ ಬೈ ಏಂಜಲ್ಸ್ – ಎ ಪೋರ್ಟ್ರೇಟ್ ಆಫ್ ಫಾದರ್ ಮಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಷನ್ಸ್ ಎಂಬ ಎರಡು ಕಾಫಿ ಟೇಬಲ್ ಪುಸ್ತಕಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂಸ್ಥೆಗಳ ಇತಿಹಾಸ ಮತ್ತು ಮೌಲ್ಯಗಳನ್ನು ಸಂರಕ್ಷಿಸುವಲ್ಲಿ ದೃಶ್ಯ ಕಥನದ ಮಹತ್ವವನ್ನು ಈ ಕಾರ್ಯಕ್ರಮದಲ್ಲಿ ವಿವರಿಸಲಾಗುವುದು.ಈ ಉಪನ್ಯಾಸವನ್ನು ಶ್ರೀಮತಿ ಜಿಸೆಲ್ ಮೆಹ್ತಾ ಅವರು ನೀಡಲಿದ್ದು, ಕಾಫಿ ಟೇಬಲ್ ಪುಸ್ತಕಗಳು ಹೇಗೆ ಪಾರಂಪರಿಕ ದಾಖಲೆಗಳಾಗಿ ಕಾರ್ಯನಿರ್ವಹಿಸುತ್ತವೆ ಎಂಬುದರ ಕುರಿತು ಮಾತನಾಡಲಿದ್ದಾರೆ. ಆರ್ಕೈವ್ ಛಾಯಾಚಿತ್ರಗಳು, ದಾಖಲೆಗಳು ಮತ್ತು ಕಥನಶೈಲಿಯನ್ನು ಸಂಯೋಜಿಸುವ ಮೂಲಕ ಇತಿಹಾಸವನ್ನು ಸುಲಭವಾಗಿ ಗ್ರಹಿಸಬಹುದಾದ ಹಾಗೂ ಆಕರ್ಷಕ ರೂಪದಲ್ಲಿ ಹೇಗೆ ಮಂಡಿಸಬಹುದು ಎಂಬುದರ ಮೇಲೆ ಅವರು ಬೆಳಕು ಚೆಲ್ಲಲಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸೈಂಟ್ ಅಲೋಶಿಯಸ್…
ಮಂಗಳೂರು : ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ನ ಇಡ್ಯಾ, ಕಾಟಿಪಳ್ಳ ನಿವಾಸಿ ಇಬ್ರಾಹಿಂ ಅಲಿಯಾಸ್ ಮೋನು ಬಂಧಿತ ಆರೋಪಿ.ಆರೋಪಿಯು ಡಿ. 8 ರಂದು ಪಂಪ್ವೆಲ್ ಪ್ರದೇಶದಲ್ಲಿ ಯಮಹಾ FZ ಬೈಕ್ ಕಳವು ಮಾಡಿದ್ದಾನೆ ಎಂದು ಹೇಳಲಾಗಿದೆ. ಈ ಬೈಕ್ ಎಕ್ಕೂರು ರಾಷ್ಟ್ರೀಯ ಹೆದ್ದಾರಿಯ ವಿ ಕೇರ್ ಗ್ಯಾರೇಜ್ ಬಳಿ ನಿಲ್ಲಿಸಲಾಗಿತ್ತು. ನೇರ ವೈರಿಂಗ್ ಮೂಲಕ ಬೈಕ್ ಕಳ್ಳತನ ಮಾಡಲಾಗಿದೆ ಎಂದು ತಿಳಿದುಬಂದಿದೆ.ದೂರಿನ ಆಧಾರದ ಮೇಲೆ, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 303(2) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದಂತೆ ಕ್ರೈಂ ನಂ. 178/2025 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಡಿ. 12 ರಂದು ಬಂಧಿಸಲಾಗಿದ್ದು, ಕಳುವಾದ ಬೈಕ್ ಮತ್ತು ಅಪರಾಧಕ್ಕೆ ಬಳಸಲಾದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಆಸ್ತಿಯ ಮೌಲ್ಯ ಸುಮಾರು ರೂ. 26,000 ಎಂದು ಅಂದಾಜಿಸಲಾಗಿದೆ.ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ…
ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಮಹಾದೇವಿ ಟೂರಿಸ್ಟ್ ಹೋಮ್ ಎಂಬ ಲಾಡ್ಜ್ ನಲ್ಲಿ ವೈಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಯತಿರಾಜ್ ಪೊಲ್ಯ ಶೆಟ್ಟಿ ಹಾಗೂ ನವೀನ್ ಪೂಜಾರಿ ಎಂದು ಗುರುತಿಸಲಾಗಿದೆ.ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ವಿವರ : ಪಡುಬಿದ್ರಿ ಪೊಲೀಸ್ ಠಾಣೆಗೆ ಬಾತ್ಮೀದಾರರಿಂದ ಬಂದ ಖಚಿತ ಮಾಹಿತಿಯಂತೆ ದಿನಾಂಕ: 14/12/2025 ರಂದು ನಡ್ಸಾಲು ಗ್ರಾಮದ ರಾ.ಹೆ 66 ರ ಪಕ್ಕದಲ್ಲಿರುವ ಮಹಾದೇವಿ ಟೂರಿಸ್ಟ್ ಹೋಮ್ ಎಂಬ ಕಟ್ಟಡದಲ್ಲಿ ಅಕ್ರಮವಾಗಿ ಹಣ ಗಳಿಸುವ ಉದ್ದೇಶದಿಂದ ಮಹಿಳೆಯರನ್ನು ಪುಸಲಾಯಿಸಿ ಕಳ್ಳಸಾಗಾಣಿಕೆ ಮಾಡಿ ವೈಶ್ಯಾವಾಟಿಕೆ ನಡೆಸುತ್ತಿರುವ ಸದ್ರಿ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ದಾಳಿ ನಡೆಸಿ ಸಂತೃಸ್ಥ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿರುತ್ತದೆ. ಆರೋಪಿ ಯತಿರಾಜ್ ಪೊಲ್ಯ ಶೆಟ್ಟಿ ಮತ್ತು ನವೀನ್ ಪೂಜಾರಿಯ ಎಂಬವರನ್ನು ದಸ್ತಗಿರಿಮಾಡಲಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ:…
ಕಾರ್ಕಳ: ಪೊಲೀಸರ ಎಚ್ಚರಿಕೆಯನ್ನು ಲೆಕ್ಕಿಸದೆ ಗೂಡ್ಸ್ ವಾಹನದಲ್ಲಿ ಸೆಂಟ್ರಿಂಗ್ ಮೆಷೀನ್ಗಳೊಂದಿಗೆ ಕೂಲಿ ಕಾರ್ಮಿಕರನ್ನು ಸಾಗಿಸುವ ಕೆಲಸ ನಿರಂತರ ಹಾಗೂ ನಿರಾತoಕವಾಗಿ ನಡೆಯುತ್ತಿದ್ದು, ಪೊಲೀಸರು ವಾಹನವನ್ನು ಬೆನ್ನಟ್ಟಿ ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾರ್ಕಳ ನ್ಯಾಯಾಲಯವು ವಾಹನದ ಮಾಲೀಕ ನಾಗಪ್ಪ ಎಂಬವರಿಗೆ 10 ಸಾವಿರ ರೂ. ದಂಡ ವಿದಿಸಿದೆ. ಕಾರ್ಕಳ ಪರಿಸರದಲ್ಲಿ ಮಾತ್ರವಲ್ಲದೆ, ಜಿಲ್ಲೆಯದ್ಯಂತ ಬೆಳಿಗ್ಗೆ ಹಾಗೂ ಸಾಯಂಕಾಲ ಕೂಲಿ ಕಾರ್ಮಿಕರನ್ನು ಸಿಮೆಂಟ್ ಕಾಂಕ್ರೀಟ್ ಮೆಷಿನ್ನೊಟ್ಟಿಗೆ ತುಂಬಿಕೊಂಡು ಹೋಗುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಪೊಲೀಸರು ಈ ಬಗ್ಗೆ ಹಲವಾರು ಬಾರಿ ಖಡಕ್ ಎಚ್ಚರಿಕೆ ನೀಡಿದ್ದರೂ ಕ್ಯಾರೇ ಎನ್ನದ ಕಾಂಟಾಕ್ಟ್ದಾರರು ಮತ್ತದೇ ಚಾಳಿಯನ್ನು ಮುಂದುವರಿಸುತಿದ್ದು, ವಾಹನದಲ್ಲಿ ಇಷ್ಟಬಂದಂತೆ ಕಾರ್ಮಿಕರನ್ನು ತುಂಬಿಸಿಕೊಂಡು, ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದಲ್ಲದೇ, ದಾರಿಯಲ್ಲಿ ಓಡಾಡುವ ಇತರ ವಾಹನಗಳಿಗೂ ತೊಂದರೆಯಾಗುವ ಬಗ್ಗೆ ಹಲವಾರು ದೂರುಗಳು ಕೇಳಿ ಬರುತ್ತಿತ್ತು. ಈ ಬಗ್ಗೆ ಕಾರ್ಯಪ್ರವೃತ್ತರಾದ ಕಾರ್ಕಳ ನಗರ ಪೊಲೀಸರು ವಾಹನವನ್ನು ಬೆನ್ನಟ್ಟಿ ಕಾರ್ಕಳ ಪುರಸಭಾ ವ್ಯಾಪ್ತಿಯ ಶಿವತಿಕೆರೆ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿ ಕಾರ್ಕಳ ನ್ಯಾಯಾಲಯಕ್ಕೆ…
ಮಂಗಳೂರು: ನೆಹರೂ ಮೈದಾನ ಬಳಿಯ ಆರ್ಟಿಒ ಕಚೇರಿಗೆ ಭಾನುವಾರ (ಡಿಸೆಂಬರ್ 14) ರಾತ್ರಿ ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ. ಈ ಮೇಲ್ನಲ್ಲಿ ಐದು ವಿಭಿನ್ನ ಸ್ಥಳಗಳಲ್ಲಿ ಸ್ಫೋಟಕ ವ್ಯವಸ್ಥೆ ಇಟ್ಟಿರುವಂತೆ ಕಿಡಿಗೇಡಿಗಳು ಬೆದರಿಕೆ ನೀಡಿದ್ದಾರೆ. ಕಚೇರಿಯ ಅಧಿಕಾರಿಗಳು ಸೋಮವಾರ ಮಧ್ಯಾಹ್ನ ಈ ಮೆಸೇಜ್ನ್ನು ಗಮನಿಸಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದೀಗ ಮಂಗಳೂರು ಪೊಲೀಸ್ ಎಎಸ್ಸಿ ಮತ್ತು ಬಿಡಿಡಿಎಸ್ ತಂಡ ಕಚೇರಿ ಹಾಗೂ ಅದರ ಸುತ್ತಲೂ ತಪಾಸಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ಪರಿಶೀಲನೆಯಿಂದ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ ಮತ್ತು ಸಾರ್ವಜನಿಕರಿಗೆ ಯಾವುದೇ ಆತಂಕ ಪಡಬಾರದೆಂದು ಸೂಚಿಸಿದ್ದಾರೆ. ತಪಾಸಣೆ ಪ್ರಕ್ರಿಯೆ ಮುಂದುವರಿಯುತ್ತಿದ್ದು, ಬೆದರಿಕೆಯ ಹಿನ್ನೆಲೆ ಹಾಗೂ ಕಿಡಿಗೇಡಿಗಳ ಗುರುತು ಹುಡುಕಲು ಕಾರ್ಯಾಚರಣೆ ಮುಂದಾಗಿದೆ.
ಬಂಟ್ವಾಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರು ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬOಧಿಸಿ ಜಾನುವಾರು ನೀಡಿದ ವ್ಯಕ್ತಿಯೊಬ್ಬರ ಮನೆ ಹಾಗೂ ಹಟ್ಟಿಯನ್ನು ಪುಂಜಾಲಕಟ್ಟೆ ಪೊಲೀಸರು ಜಪ್ತಿ ಮಾಡಿದ್ದಾರೆ. ಜಾನುವಾರು ನೀಡಿದ ಆರೋಪಿ ಭೋಜ ಮೂಲ್ಯ ಅವರ ಬಂಟ್ವಾಳ ತಾಲೂಕಿನ ಸರಪ್ಪಾಡಿ ಗ್ರಾಮದಲ್ಲಿರುವ ಮನೆ ಹಾಗೂ ಜಾನುವಾರುಹಟ್ಟಿಯನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿದೆ. ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಹಿಂಸಾತ್ಮಕವಾಗಿ ಜಾನುವಾರನ್ನು ಸಾಗಾಟ ಮಾಡಲಾಗುತ್ತಿತ್ತು. ಪುಂಜಾಲಕಟ್ಟೆ ಪೊಲೀಸರು ಗೂಡ್ಸ್ ಆಟೋವನ್ನು ತಡೆದು ಚಾಲಕ ಶೀಧರ ಪೂಜಾರಿಯನ್ನು ವಿಚಾರಿಸಿದಾಗ ಸರಪ್ಪಾಡಿಯ ಭೋಜ ಮೂಲ್ಯ ಅವರಿಂದ ಜಾನುವಾರು ಪಡೆದಿರುವುದಾಗಿ ಒಪ್ಪಿಕೊಂಡಿದ್ದರು. ಯಾವುದೇ ಪರವಾನಿಗೆ ಇಲ್ಲದೇ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಮಾರಾಟ ಮಾಡಿದ ಪ್ರಕರಣದಲ್ಲಿ ಭೋಜ ಮೂಲ್ಯ ಅವರ ಮನೆಯನ್ನು ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬOಧಿಸಿ ಜಾನುವಾರು, ಆಟೋ, ಹಾಗೂ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










