Author: main-admin

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಗಂಗಾ ಮತ್ತು ಯಮುನಾ ನದಿಗಳು ಉಕ್ಕಿ ಹರಿಯುತ್ತಿವೆ. ಗಂಗಾ ಮತ್ತು ಯಮುನಾ ನದಿಗಳು ಅಪಾಯದ ಮಟ್ಟವನ್ನು ದಾಟಿವೆ. ಹಲವು ಪ್ರದೇಶಗಳು ಪ್ರವಾಹಕ್ಕೆ ಸಿಲುಕಿವೆ. ಎದೆ ಮಟ್ಟಕ್ಕೆ ನೀರು ಬಂದಿದ್ದರೂ ಇನ್ಸ್ ಪೆಕ್ಟರ್ ಒಬ್ಬರು ಗಂಗೆಗೆ ಪೂಜೆ ಸಲ್ಲಿಸಿರುವ ವಿಡಿಯೋ ವೈರಲ್ ಆಗಿದೆ. ಯುಪಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರು ಮನೆಗೆ ನುಗ್ಗಿದ ಗಂಗೆಗೆ ಪೂಜೆ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ವೈರಲ್ ಆಗಿರುವ ವೀಡಿಯೊದಲ್ಲಿ, ಯುಪಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಯಾಗ್ರಾಜ್ನ ದರಗಂಜ್ ಪ್ರದೇಶದಲ್ಲಿ ತಮ್ಮ ಮನೆಯ ಮುಂದೆ ಮಾ ಗಂಗೆಗೆ ಹೂವು ಮತ್ತು ಹಾಲನ್ನು ಅರ್ಪಿಸುತ್ತಿರುವುದು ಕಂಡುಬರುತ್ತದೆ. ಅವರು ನೀರಿನಲ್ಲಿ ಸ್ನಾನ ಮಾಡುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಇದಷ್ಟೇ ಅಲ್ಲ, ಈ ಇನ್ಸ್ಪೆಕ್ಟರ್ ಜಿ ಅವರ ಮನೆಯ ಅರ್ಧಕ್ಕೂ ಹೆಚ್ಚು ಜನರು ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ ಹೋಗಿದ್ದಾರೆ. ಇನ್ಸ್ಪೆಕ್ಟರ್ ಗಂಗೆಯನ್ನು ಪೂಜಿಸುತ್ತಿರುವ ವಿಡಿಯೋ ಜೊತೆಗೆ, ಅವರು ಪ್ರವಾಹದ ನೀರಿನಲ್ಲಿ ಸ್ನಾನ ಮಾಡುತ್ತಿರುವ…

Read More

ಉಡುಪಿ: ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಗ್ರಾಮದ ಕೊಡಂಕೂರು ನ್ಯೂ ಕಾಲೋನಿಯಲ್ಲಿ ಒಂದು ತಿಂಗಳ ಹಿಂದೆ ನಡೆದ ಸರಣಿ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಂತರಾಜ್ಯ ಕಳವು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿ ಮೊಹಮ್ಮದ್ ಆಸೀಫ್ ಬೆಟಗೇರಿ (28) ಎಂದು ಗುರುತಿಸಲಾಗಿದೆ. ಜುಲೈ 5ರಂದು ಕೊಡಂಕೂರು ನ್ಯೂ ಕಾಲೋನಿಯ ಮೂರು ಮನೆಗಳಲ್ಲಿ ರಾತ್ರಿ ವೇಳೆ ಕಳ್ಳತನ ನಡೆದಿದ್ದು, ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ಆಸೀಫ್, ತನ್ನ ಸಹಚರರೊಂದಿಗೆ ವಾಹನದಲ್ಲಿ ಬಂದು ಮಧ್ಯರಾತ್ರಿ ಕೊಡಂಕೂರಿನ ಮೂರು ಮನೆಗಳ ಬೀಗ ಒಡೆದು ಒಳ ನುಗ್ಗಿದ್ದಾಗಿ ಒಪ್ಪಿಕೊಂಡಿದ್ದಾನೆ. ಕಳವು ಮಾಡಿದ ಚಿನ್ನಾಭರಣ ಮತ್ತು ಹಣವನ್ನು ಭಟ್ಕಳ ಮತ್ತು ಶಿರಸಿಯಲ್ಲಿ ಮಾರಾಟ ಮಾಡಿ ಹಣ ಗಳಿಸಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ ನೀಡಿದ ಮಾಹಿತಿ ಆಧರಿಸಿ, ಪೊಲೀಸರು ಭಟ್ಕಳ ಮತ್ತು ಶಿರಸಿಯಲ್ಲಿ ಮಾರಾಟ ಮಾಡಿದ್ದ…

Read More

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಭಾನುವಾರದ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆ ನಿಲ್ಲಿಸಲಾಗಿದ್ದು, ಇದೀಗ ಧರ್ಮಸ್ಥಳದಲ್ಲಿ ಹೆಣ ಹೂತ ಜಾಗ, ಶೋಧ ಕಾರ್ಯ ನಡೆದ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಧರ್ಮಸ್ಥಳದಲ್ಲಿ ದೂರುದಾರ ತೋರಿಸಿದ ಸ್ಥಳಗಳ ಪೈಕಿ ಶೋಧ ಆದ 10 ಪಾಯಿಂಟ್ ಗಳಲ್ಲೂ ಭದ್ರತೆ ಹೆಚ್ಚಿಸಲಾಗಿದೆ. 10 ಪಾಯಿಂಟ್ ಗಳ ಪೈಕಿ ಮೂರು ಪಾಯಿಂಟ್ ಗಳಲ್ಲಿ ಗನ್ ಮ್ಯಾನ್ ನಿಯೋಜಿಸಲಾಗಿದೆ. ಅನಾಮಿಕ ಶವಗಳನ್ನು ಹೂಳಿದ್ದರ ಬಗ್ಗೆ ತಪ್ಪೊಪ್ಪಿಕೊಂಡ ನಂತ್ರ, ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ಎಸ್ಐಟಿಯಿಂದ ಅಸ್ಥಿ ಪಂಜರಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಎಸ್ಐಟಿ ಧರ್ಮಸ್ಥಳದ 6ನೇ ಪಾಯಿಂಟ್ ಶೋಧ ಕಾರ್ಯದ ಸಂದರ್ಭದಲ್ಲಿ 12 ಮೂಳೆಗಳು ದೊರೆತಿದ್ದವು. ತಲೆ ಬುರುಡೆ ಚೂರುಗಳು, ಕೈ ಮೂಳೆಗಳು ಸೇರಿದಂತೆ 12 ಮೂಳೆಗಳ ಪೀಸ್ ಗಳು ಸಿಕ್ಕಿದ್ದವು. ಇವುಗಳನ್ನು ಎಸ್ಐಟಿ ತಂಡವು ಪರಿಶೀಲನೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ದೊರೆತಂತ ಮೂಳೆಗಳು ಯಾರವು ಎನ್ನುವ ಕುರಿತಂತೆ ಸಂಶೋಧನೆಯನ್ನು ವೈದ್ಯರ ತಂಡವು ನಡೆಸಲಿದೆ.

Read More

ವಿಟ್ಲ: ಧಾರ್ಮಿಕ ಕೇಂದ್ರದ ಕಾಣಿಕೆ ಹುಂಡಿಯನ್ನು ಒಡೆದು ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ‌. ಬಂಧಿತರನ್ನು ವಿಟ್ಲ ಕಸಬಾ ಗ್ರಾಮದ ತ್ವಾಹಿದ್‌ (19), ಉಮ್ಮರ್‌ ಫಾರೂಕ್‌ (18), ನಬೀಲ್‌( 18) ಎಂದು ಗುರುತಿಸಲಾಗಿದೆ. ಕನ್ಯಾನ ಗ್ರಾಮದ ದೇಲಂತಬೆಟ್ಟು ನಿವಾಸಿ ಡಿ.ನಾರಾಯಣ ರಾವ್ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾರಾಯಣ ಅವರು ಅಧ್ಯಕ್ಷರಾಗಿದ್ದ ಧಾರ್ಮಿಕ ಶ್ರಧ್ದಾ ಕೇಂದ್ರಕ್ಕೆ ಸಂಬಂಧಿಸಿದ ಕಾಣಿಕೆ ಕಟ್ಟೆಯನ್ನು ಕನ್ಯಾನ ಗ್ರಾಮದ ದೇಲಂತ ಬೆಟ್ಟು ಶಾಲಾ ಪಕ್ಕದ ರಸ್ತೆಯ ಬದಿಯಲ್ಲಿ ಹಾಗೂ ದೇಲಂತಬೆಟ್ಟು ಚರ್ಚಿನ ಕೆಳಗಡೆ ರಸ್ತೆಯ ಬದಿಯಲ್ಲಿ ಅಳವಡಿಸಿದ್ದರು. ಕಾಣಿಕೆ ಕಟ್ಟೆಗಳಲ್ಲಿ ಸಂಗ್ರಹವಾಗುವ ಹಣವನ್ನು ತೆಗೆಯಲು ಜುಲೈ 26 ರಂದು ಸ್ಥಳಗಳಿಗೆ ತೆರಳಿದಾಗ, ಎರಡೂ ಕಾಣಿಕೆ ಕಟ್ಟೆಗಳ ಬೀಗವನ್ನು ಒಡೆದು ಸುಮಾರು 12,000/- ರೂ ನಿಂದ 15,000/-ರೂ ಹಣವನ್ನು ಕಳವು ಮಾಡಿರುವುದು ಕಂಡುಬಂದಿರುತ್ತದೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಆ.1: ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್ ಸಂಸ್ಥೆ ಅವರ ಸಾಧನೆಯನ್ನು ಗುರುತಿಸಿ ಶುಕ್ರವಾರ ವಿಶೇಷವಾಗಿ ಸನ್ಮಾನಿಸಿದೆ. ಈ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ಬಿಜೈ ಮುಖ್ಯ ರಸ್ತೆಯ ರೋಹನ್ ಸಿಟಿಯಲ್ಲಿರುವ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕರಾದ ಡಾ.ರೋಹನ್ ಮೊಂತೇರೊರವರು ರೆಮೋನಾ ಪಿರೇರಾ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಹಾಗೂ ಮಂಗಳೂರಿನ ಕಲೆ, ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಬೆಳಕಿಗೆ ತರುವ ಉದ್ದೇಶದಿಂದ ಈ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. “ರೆಮೋನಾ ಅವರ ಸಾಧನೆ ಮಂಗಳೂರು ಮಾತ್ರವಲ್ಲ, ಇಡೀ ದೇಶಕ್ಕೆ ಹೆಮ್ಮೆ ತಂದಿದೆ. ಇವರು ಇಂದಿನ ಯುವ ಸಮುದಾಯಕ್ಕೆ ಸ್ಪೂರ್ತಿ” ಎಂದು ಡಾ.ರೋಹನ್ ಮೊಂತೇರೊ ಹೇಳಿದರು. ಅದ್ವಿತೀಯ ಸಾಧನೆಗಾಗಿ ಸಂಸ್ಥೆಯ ವತಿಯಿಂದ ಭವಿಷ್ಯದಲ್ಲಿಯೂ ಇಂತಹ ಪ್ರತಿಭೆಗಳಿಗೆ ವೇದಿಕೆ ನೀಡಲಾಗುವುದು ಎಂದು…

Read More

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ 2015 ರ ನಡುವೆ ದಾಖಲಾದ ಅಪರಿಚಿತ ಸಾವಿನ ಪ್ರಕರಣಗಳ ಪ್ರಮುಖ ದಾಖಲೆಗಳನ್ನು (UDR) ಡಿಲೀಟ್ ಆಗಿರುವ ಪ್ರತಿಕ್ರಿಯೆ ಕೇಳಿಬಂದ ನಂತರ ಬೆಳ್ತಂಗಡಿ ಪೊಲೀಸರು ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಇದೇ ಅವಧಿಯಲ್ಲಿ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಆರೋಪಿಸಿದ್ದಾನೆ. 1998 ಮತ್ತು 2014ರ ನಡುವೆ ಲೈಂಗಿಕ ಅತ್ಯಾಚಾರಕ್ಕೊಳಗಾದ ಮಹಿಳೆಯರು, ಅಪ್ರಾಪ್ತ ಬಾಲಕಿಯರು ಸೇರಿದಂತೆ ಹಲವು ಶವಗಳನ್ನು ನನಗೆ ಹೂಳಿಸಲಾಗಿದೆಎಂದು ಆರೋಪಿ ಹೇಳಿರುವುದರಿಂದ ಈಗ ದಾಖಲೆಗಳ ನಾಶಪಡಿಸುವಿಕೆ ತೀವ್ರ ಕಳವಳಕ್ಕೆ ಕಾರಣವಾಗಿದೆ. ಮರಣೋತ್ತರ ಪರೀಕ್ಷೆಯ ವರದಿಗಳು, ನೋಟಿಸ್‌ಗಳು ಮತ್ತು ಮೃತ ವ್ಯಕ್ತಿಗಳ ಗುರುತನ್ನು ಪತ್ತೆಹಚ್ಚುವ ಪ್ರಯತ್ನಗಳಲ್ಲಿ ಬಳಸಲಾದ ಫೋಟೋಗಳನ್ನು ಆಡಳಿತಾತ್ಮಕ ಆದೇಶಗಳಿಗೆ ಅನುಗುಣವಾಗಿ ನಾಶಪಡಿಸಲಾಗಿದೆ ಎಂದು ಪೊಲೀಸರು ಆರ್ ಟಿಐ ಅರ್ಜಿಗೆ ಪ್ರತಿಕ್ರಿಯಿಸಿದ್ದಾರೆ. ನಿರ್ದಿಷ್ಟವಾಗಿ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ (ಸಿಆರ್‌ಪಿಸಿ) ಸೆಕ್ಷನ್ 174(ಎ) ಅಡಿಯಲ್ಲಿ 15…

Read More

ಮಂಗಳೂರು : ಕಳೆದ ಕೆಲವು ತಿಂಗಳ ಹಿಂದೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಲ್ಲಿ ಇಂದು NIA ಅಧಿಕಾರಿಗಳು 14 ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಹೌದು ಸುಹಾಸ್ ಶೆಟ್ಟಿ, ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮಂಗಳೂರಿನ 14 ಕಡೆ ಎನ್ಐಎ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಮಂಗಳೂರಿನ 14 ಕಡೆ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ಹಲವರ ಮನೆ ಮತ್ತು ಕಚೇರಿಯ ಮೇಲೆ ಎನ್ಐಎ ತಂಡ ದಾಳಿ ಮಾಡಿದೆ ಈ ವೇಳೆ ಕೆಲವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

Read More

ಬೆಂಗಳೂರು : ಮೈಸೂರಿನ ಕೆ.ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಯ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಸಂತೋಷ್ ಗಜಾನನ ಭಟ್ ಅವರು, ಪ್ರಕರಣದ ಆದೇಶವನ್ನು ಕಾಯ್ದಿರಿಸಿ 2:45 ಕ್ಕೆ ಆದೇಶ ನೀಡುವುದಾಗಿ ತಿಳಿಸಿದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶಿಕ್ಷ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ಮೊದಲಿಗೆ ಪ್ರಾಸಿಕ್ಯೂಷನ್ ಪರ ವಾದಿಸಲು ಕೋರ್ಟ್ ಸೂಚನೆ ನೀಡಿತು ಪ್ರಾಸಿಕ್ಯೂಷನ್ ಪರವಾಗಿ ಎಸ್ಪಿಪಿ ಬಿ.ಎನ್ ಜಗದೀಶ್ ವಾದ ಆರಂಭ ಮಾಡಿದರು. ಗರಿಷ್ಠ ಶಿಕ್ಷಕನಿಷ್ಠ ಶಿಕ್ಷೆ ಎಷ್ಟು ಎಂದು ಸ್ಪಷ್ಟವಾಗಿದೆ ಕೇವಲ ಅತ್ಯಾಚಾರ ಆಗಿದ್ದರೆ 10 ವರ್ಷದಿಂದ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿತ್ತು. ಆದರೆ ಇಲ್ಲಿ ಪದೇ ಪದೇ ಅತ್ಯಾಚಾರವಾಗಿದೆ. ಕನಿಷ್ಠ 10 ವರ್ಷ ಗರಿಷ್ಠ ಜೀವನ ಪರ್ಯಂತ ಸೆರೆವಾಸದ ಅವಕಾಶ ಇದೆ, ಮಹಿಳೆ ಶಿಕ್ಷಿತಳಲ್ಲ, ಬಡ ಕೂಲಿ…

Read More

ಬಂಟ್ವಾಳ: ಅಕ್ರಮ ಮರಳು ಅಡ್ಡೆಗೆ ವಿಟ್ಲ ಠಾಣಾ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳ, ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಎಂಬಲ್ಲಿಆಗಸ್ಟ್ 1ರಂದು ನಡೆದಿದೆ. ಆರೋಪಿ ಅಬ್ದುಲ್ ಸಮದ್ ಎಂಬಾತನು ಹೊಳೆಯಿಂದ ಯಂತ್ರದ ಮೂಲಕ ಮರಳನ್ನು ಅಕ್ರಮವಾಗಿ ತೆಗೆದು ಸಂಗ್ರಹಿಸಿಟ್ಟಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಹೊರೆತಿದೆ. ಈ ಹಿನ್ನೆಲೆ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರತ್ನಕುಮಾರ್ ರವರು ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದ್ದಾರೆ.ಈ ವೇಳೆ ಕೇರಳ ಗಡಿಭಾಗದಿಂದ ಅಂದಾಜು ಒಂದು ಕಿ.ಮೀ ದೂರದ ಸಾಲೆತ್ತೂರು ಕಟ್ಟತ್ತಿಲ ಹೊಳೆಯ ಸೇತುವೆ ಬಳಿ, ಸುಮಾರು 2 ರಿಂದ 3 ಪಿಕಪ್ ನಷ್ಟು ಮರಳು ಮತ್ತು ಹೊಳೆಯಿಂದ ಮರಳನ್ನು ತೆಗೆಯಲು ಉಪಯೋಗಿಸುತ್ತಿದ್ದ ಯಂತ್ರ, ಕಬ್ಬಿನದ ಜಾಲರಿ, ಪೈಬರ್ ಬುಟ್ಟಿಗಳು, ಕಬ್ಬಿಣದ ಹಾರೆ ಹಾಗೂ ಕೃತ್ಯಕ್ಕೆ ಬಳಸಿದ ಇತರೆ ಸೊತ್ತುಗಳು ಕಂಡುಬಂದಿದೆ. ಈ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ:93/2025 ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Read More

ಬೆಂಗಳೂರು : ಮದ್ಯಪಾನ ಮಾಡಿ ವಾಹನ ಚಾಲನೆ ಪ್ರಕರಣಗಳಲ್ಲಿ ವಿಮಾದಾರರ ಹೊಣೆಗಾರಿಕೆಯನ್ನು ಮುಕ್ತಗೊಳಿಸಲು 1988 ರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರುವುದನ್ನು ಪರಿಗಣಿಸಬೇಕೆಂದು ಕರ್ನಾಟಕ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸಮಯದಲ್ಲಿ ಅಪಘಾತವಾದಲ್ಲಿ ಮೂರನೇ ವ್ಯಕ್ತಿಗೆ ವಿಮಾ ಕಂಪನಿಗಳಿಂದ ಪರಿಹಾರ ಮೊತ್ತ ಪಡೆಯುವುದನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮೋಟಾರ್ ವಾಹನಗಳ ಕಾಯ್ದೆ -1988ಕ್ಕೆ ತಿದ್ದುಪಡಿ ತರಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಮದ್ಯಪಾನ ಮಾಡಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದಾಗ ಅಪಘಾತಕ್ಕೆ ಒಳಗಾದ ಪ್ರಕರಣದಲ್ಲಿ ಬೆಂಗಳೂರಿನ ಪ್ರತೀಕ್ ಕುಮಾರ್ ತ್ರಿಪಾಠಿಗೆ 2.59 ಲಕ್ಷ ರೂ. ಪರಿಹಾರ ಪಾವತಿಸಲು ಆದೇಶಿಸಿದ ಮೋಟಾರ್ ವಾಹನಗಳ ಅಪಘಾತ ಪರಿಹಾರ ನ್ಯಾಯಾಧೀಕರಣದ ಆದೇಶ ಪ್ರಶ್ನಿಸಿ ಓರಿಯಂಟಲ್ ಇನ್ಸೂರೆನ್ಸ್ ಕಂಪನಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.ಈ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ಉಮೇಶ್ ಅಡಿಗ ಅವರ ಪೀಠ ಈ ಪ್ರಕರಣದಲ್ಲಿ ಮೋಟಾರ್ ವಾಹನ ಚಾಲಕ…

Read More