ಬೆಂಗಳೂರು: ಧರ್ಮಸ್ಥಳದಲ್ಲಿನ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣ ಸಂಬಂಧ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ರದ್ದುಗೊಳಿಸಿ ಆದೇಶಿಸಿದೆ. ಧರ್ಮಸ್ಥಳದಲ್ಲಿ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್.ಡಿ ಅವರು ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ ತಂದಿದ್ದರು. ಇಂದು ಈ ಪ್ರತಿಬಂಧಕಾದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ದಕ್ಷಿಣ ಕನ್ನಡದ ಕುಡ್ಲ ರ್ಯಾಂಪೇಜ್ ಪ್ರಧಾನ ಸಂಪಾದಕ ಅಜಯ್ ಅವರು ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನು ಒಳದೊಂಡಂತ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು. ಈ ಅರ್ಜಿಯನ್ನು ಪುರಸ್ಕರಿಸಿದಂತ ಹೈಕೋರ್ಟ್ ನ್ಯಾಯಪೀಠವು ದಿನಾಂಕ 8-7-2025ರಂದು ವಿಚಾರಣಾಧೀನ ನ್ಯಾಯಾಲಯವು ಮಾಡಿರುವ ಆಕ್ಷೇಪಾರ್ಹವಾದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ರದ್ದುಪಡಿಸಿದೆ. ಇದಲ್ಲದೇ ಮಧ್ಯಂತರ ಅರ್ಜಿಯನ್ನು ಹೊಸದಾಗಿ ಪರಿಗಣಿಸಲು ಪ್ರಕರಣವನ್ನು ಸಕ್ಷಮ ನ್ಯಾಯಾಲಯಕ್ಕೆ ವಾಪಾಸ್ ಕಳುಹಿಸಿದೆ. ಇನ್ನೂ ವಿಚಾರಣಾಧೀನ ನ್ಯಾಯಾಲಯವು ಈ ಆದೇಶವನ್ನು ಮಾಡಿರುವ ಅಂಶಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು.…
Author: main-admin
ಮಂಗಳೂರು: ನಗರದ ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಂಕನಾಡಿಯ ಅಪಾರ್ಟ್ಮೆಂಟ್ವೊಂದರ ನಿವಾಸಿ ಉಬೇದುಲ್ಲಾ ಮತ್ತು ಹೊಯಿಗೆ ಬಜಾರ್ ನಿವಾಸಿ ದಾಮೋದರ ಎಂದು ಗುರುತಿಸಲಾಗಿದೆ. 2011ರ ಮಾರ್ಚ್ 14ರಂದು ನಗರದ ಹಂಪನಕಟ್ಟೆಯ ಲಾಡ್ಜ್ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಹಿಳಾ ಪೊಲೀಸರು ದಾಳಿ ನಡೆಸಿ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಪೈಕಿ ಮೂವರ ವಿಚಾರಣೆಯಾಗಿದ್ದು, ಅವರು ಪ್ರಕರಣದಿಂದ ಖುಲಾಸೆಗೊಂಡಿದ್ದರು. ಆದರೆ 4ನೇ ಆರೋಪಿ ಪಿ. ದಾಮೋದರ ಎಂಬಾತನು 14 ವರ್ಷದಿಂದ ತಲೆಮರೆಸಿಕೊಂಡಿದ್ದ. ಹಾಗಾಗಿ ನ್ಯಾಯಾಲಯವು ಆತನ ಬಂಧನಕ್ಕೆ ವಾರಂಟ್ ಹೊರಡಿಸಿತ್ತು. ಅದರಂತೆ ಮಹಿಳಾ ಠಾಣೆಯ ಪೊಲೀಸರು ದಾಮೋದರನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಉಬೇದುಲ್ಲಾ ಎಂಬಾತನು ಹೆಚ್ಚುವರಿ ವರದಕ್ಷಿಣೆಗಾಗಿ ತನ್ನ ಹೆಂಡತಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಬಗ್ಗೆ 2018ರಲ್ಲಿ ಮಹಿಳಾ ಠಾಣೆಯಲ್ಲಿ ಪ್ರಕರಣ…
ಕಿನ್ನಿಗೋಳಿ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸಹಿತ ಮೂವರು ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ನಡೆದಿದೆ. ಗಾಯಗೊಂಡವರನ್ನು ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ ನಿತಿಲ್ (25), ಅವಿನಾಶ್(23), ಮಗು ಮೃತ್ತಿನ್ (2) ಎಂದು ಗುರುತಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದ ಮುಲ್ಕಿ ಮೂಲದ ಮೂವರು ಯುವಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟೀಲು ಕಡೆಯಿಂದ ಕುಂದಾಪುರದ ಕಡೆಗೆ ಹೊರಟಿದ್ದ ಕಾರು ಕಿನ್ನಿಗೋಳಿ ಮೂಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ತಲುಪುತ್ತಿದ್ದಂತೆ ಮೂಲ್ಕಿ ಕಡೆಯಿಂದ ಅತಿ ವೇಗದಿಂದ ಬಂದ ಕಾರು ಹೆದ್ದಾರಿಯ ಹೊಂಡ ತಪ್ಪಿಸುವ ಭರದಲ್ಲಿ ಎದುರಿನಿಂದ ಬಂದ ಕಾರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಎರಡೂ ಕಾರುಗಳು ಪಲ್ಟಿಯಾಗಿದ್ದು ಕಾರಿನಲ್ಲಿ ಸಿಲುಕಿಕೊಂಡವರನ್ನು ಸ್ಥಳೀಯರು ರಕ್ಷಿಸಿ ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಎರಡೂ ಕಾರುಗಳು ಜಖಂಗೊಂಡಿವೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಭೇಟಿ ನೀಡಿ ಪರಿಶೀಲನೆ…
ಬಂಟ್ವಾಳ: ಅಡಿಕೆ ಕಳ್ಳತನ ಪ್ರಕರಣದ ಆರೋಪಿಯನ್ನು ವಸ್ತು ಸಹಿತ ಪೊಲೀಸರು ಬಂಧಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಪ್ರಚಾರು ನಿವಾಸಿ ಸತೀಶ್ (29) ಬಂಧಿತ ಆರೋಪಿ. ಮಣಿನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ಜುಲೈ 3 ರಿಂದ 22 ರ ಅವಧಿಯಲ್ಲಿ ಸುಮಾರು 45 ಪ್ಲಾಸ್ಟಿಕ್ ಚೀಲದಲ್ಲಿದ್ದ 2.20 ಲಕ್ಷ ರೂ. ಮೌಲ್ಯದ ಒಣ ಅಡಿಕೆ ಕಳವಾಗಿರುವ ಬಗ್ಗೆ ಜುಲೈ, 23 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆ ಕಾರ್ಯಕ್ಕಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಶಿವಕುಮಾರ ಬಿ ಅವರ ನೇತೃತ್ವದಲ್ಲಿ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಜುಲೈ 28 ರಂದು ಆರೋಪಿ ಸತೀಶ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಕಳವುಗೈದ 74 ಸಾವಿರ ರೂ. ಮೌಲ್ಯದ 15 ಚೀಲ ಒಣ ಅಡಿಕೆ, ಕಳವುಗೈದ ಅಡಿಕೆಯನ್ನು ಮಾರಾಟ ಮಾಡಿದ 70 ಸಾವಿರ ರೂ. ನಗದು ಹಣ, ಕೃತ್ಯಕ್ಕೆ ಬಳಸಿದ 80 ಸಾವಿರ…
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 4 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ
ಕಾಸರಗೋಡು: ಸ್ಕೂಟರ್ ಪ್ರಯಾಣಿಕನೋರ್ವನಿಂದ 1.800 ಕಿಲೋ ಗಾಂಜಾವನ್ನು ಕುಂಬಳೆ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಬಂದ್ಯೋಡಿನ ಮುಹಮ್ಮದ್ ಅಲಿ (51) ಎಂದು ಗುರುತಿಸಲಾಗಗಿದೆ. ಮಂಗಳವಾರ ರಾತ್ರಿ ಕುಂಬಳೆ ಶಿರಿಯ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಸ್ಕೂಟರ್ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಗಾಂಜಾ ಸಾಗಾಟ ಪತ್ತೆಯಾಗಿದೆ.
ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಇದೀಗ ಎರಡು ಎಲಬುಗಳು ಸಿಕ್ಕಿವೆ. ಇಂದು ಅಧಿಕಾರಿಗಳು ದೂರುದಾರ ತೋರಿಸಿದ ಜಾಗದಲ್ಲಿ 6ನೇ ಪಾಯಿಂಟ್ ನಲ್ಲಿ ಎರಡು ಎಲುಬುಗಳು ಸಿಕ್ಕಿವೆ ಎಂದು ಮಾಹಿತಿ ತಿಳಿದು ಬಂದಿದೆ. ಹೌದು 6ನೇ ಪಾಯಿಂಟ್ ನಲ್ಲಿ ಅಸ್ತಿಪಂಜರದ ಮೂಳೆಗಳು ಪತ್ತೆಯಾಗಿವೆ. ಮೂಳೆಗಳು ಎಸ್ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 6ನೇ ಪಾಯಿಂಟ್ ನಲ್ಲಿ ಎರಡು ಎಲುಬುಗಳು ಸಿಕ್ಕ ಮಾಹಿತಿಯನ್ನು ಎಸ್ಐಟಿ ಹಂಚಿಕೊಂಡಿದೆ. ಸಂಪೂರ್ಣವಾದ ಅಸ್ಥಿಪಂಜರ ಇನ್ನು ಸಿಕ್ಕಿಲ್ಲ ಆದರೆ ಎರಡು ಮೂಳೆಗಳು ಮಾತ್ರ ಸಿಕ್ಕಿವೆ. ಇದೀಗ ಈ ಒಂದು ಪ್ರಕರಣ ಮತ್ತಷ್ಟು ಕುತೂಹಲಕ್ಕೆ ತೆಗೆದುಕೊಂಡು ಹೋಗುತ್ತದೆ. ಮೂಳೆ ಸಿಕ್ಕ ಬಗ್ಗೆ ಅಧಿಕಾರಿಗಳು ಲ್ಯಾಪ್ಟಾಪ್ ನಲ್ಲಿ ದಾಖಲು ಮಾಡಿಕೊಂಡಿದ್ದಾರೆ ಮೂಳೆ ಸಿಕ್ಕ ಕುರಿತು ಅಧಿಕಾರಿಗಳು ಈ ಒಂದು ಮಾಹಿತಿಯನ್ನು ಲ್ಯಾಪ್ಟಾಪ್ ನಲ್ಲಿ ದಾಖಲು ಮಾಡಿಕೊಂಡಿದ್ದಾರೆ. ಜಿಪಿಎಸ್ ಆನ್ ಮಾಡಿಕೊಂಡು ರಿಪೋರ್ಟ್ ದಾಖಲು ಮಾಡಿದ್ದಾರೆ ಎಲ್ಲ ಮಾಹಿತಿಯನ್ನು ನಿಖರವಾಗಿ ಲ್ಯಾಪ್ಟಾಪ್ ನಲ್ಲಿ ಅಧಿಕಾರಿಗಳು ದಾಖಲಿಸಿದ್ದಾರೆ.
ಮಂಗಳೂರು: ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ರಾಜು ಕೆ. ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಈ ಮೊದಲು ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ.ಜಿ. ಸಂತೋಷ್ ಕುಮಾರ್ ಅವರ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ರಾಜು ಕೆ. ಅವರು ಸ್ಮಾರ್ಟ್ ಸಿಟಿ ಎಂಡಿ ಆಗಿದ್ದರು. ಉಡುಪಿ ಕಾಪು, ಬ್ರಹ್ಮಾವರ ಸಹಾಯಕ ಆಯುಕ್ತರಾಗಿ ಅವರು ಹೆಚ್ಚಿನ ಜವಾಬ್ದಾರಿ ನಿರ್ವಹಿಸಿದ್ದರು. ಮಂಗಳೂರು ಹಾಗೂ ಕುಂದಾಪುರ ಸಹಾಯಕ ಆಯುಕ್ತರಾಗಿದ್ದರು. ಅಲ್ಲದೆ ಇವರು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಸೇರಿದಂತೆ ಇತರ ಹುದ್ದೆಗಳನ್ನೂ ನಿಭಾಯಿಸಿದ್ದಾರೆ.
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಸಹಾಯವಾಣಿ ಆರಂಭಿಸಿದ್ದು, ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ಇದ್ದರೆ 0824-2005301ಕ್ಕೆ ಕರೆ ಮಾಡಿ ತಿಳಿಸುವಂತೆ ಮನವಿ ಮಾಡಿದ್ದಾರೆ. ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ತಂಡ ದೂರುದಾರ ಗುರುತಿಸಿದ 13 ಸ್ಥಳಗಳಲ್ಲಿ ಒಂದೊಂದೇ ಜಾಗಗಳನ್ನು ಅಗೆದು ಶೋಧ ನಡೆಸುತ್ತಿದೆ. ದೂರುದಾರ ಸೂಚಿಸಿದ 5 ಸ್ಪಾಟ್ಗಳಲ್ಲಿ ಈಗಾಗಲೇ ಕಳೇಬರ ಹುಡುಕಾಟ ಮುಕ್ತಾಯವಾಗಿದೆ. ಆದರೆ ಇಲ್ಲಿ ಯಾವುದೇ ಕಳೇಬರ ಪತ್ತೆಯಾಗಿಲ್ಲ. ಈ ನಡುವೆ ಎಸ್ಐಟಿ ತಂಡ ಮಂಗಳೂರಿನ ಎಸ್ಐಟಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಿ 0824-2005301ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದೆ. ಮಾಸ್ಕ್ ಧರಿಸಿರುವ ಅನಾಮಿಕ ವ್ಯಕ್ತಿ ತಾನು ಈಗಾಗಲೇ ನೂರಾರು ಶವಗಳನ್ನು ನೇತ್ರಾವತಿ ನದಿ ತೀರದಲ್ಲಿ ಹೂತು ಹಾಕಿದ್ದೇನೆ ಎಂದು ಹೇಳಿಕೊಂಡಿದ್ದ. ಅದರಂತೆ ನಿನ್ನೆ ಎಸ್ಐಟಿ ಆತ ತೋರಿಸಿದ್ದ ಜಾಗದಲ್ಲಿ ಉತ್ಖನನ ನಡೆಸಿತ್ತು. ಭಾರಿ ಮಳೆಯ ನಡುವೆಯೇ ತೀವ್ರ ಬಂದೋಬಸ್ತ್ನಲ್ಲಿ ಹುಡುಕಾಟ ನಡೆಸಲಾಗಿತ್ತು. ಆದರೆ…
ವೇಗವಾಗಿ ಬದಲಾಗುತ್ತಿರುವ ಶಿಕ್ಷಣ ಮತ್ತು ಉದ್ಯೋಗ ಮಾರುಕಟ್ಟೆಯ ಬೇಡಿಕೆಗಳನ್ನು ಪೂರೈಸಲು, ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾನಿಲಯವು 2025 ರ ಜುಲೈನಲ್ಲಿ ಫಲಿತಾಂಶ ಆಧಾರಿತ ಶಿಕ್ಷಣ (OBE) ಕುರಿತು ಕಾರ್ಯಾಗಾರ ಸರಣಿಯನ್ನು ಆಯೋಜಿಸಿತು. ಈ ಕಾರ್ಯಾಗಾರಗಳು ಸ್ಪಷ್ಟ ಕಲಿಕಾ ಫಲಿತಾಂಶಗಳನ್ನು ವ್ಯಾಖ್ಯಾನಿಸಲು ಮತ್ತು ಅವುಗಳನ್ನು ಪಠ್ಯಕ್ರಮ, ಬೋಧನೆ ಮತ್ತು ಮೌಲ್ಯಮಾಪನದೊಂದಿಗೆ ಜೋಡಿಸಲು ಬೋಧಕರಿಗೆ ಸಹಾಯ ಮಾಡಲು ಉದ್ದೇಶಿಸಲಾಗಿತ್ತು. ಪ್ರೊ. ಡಾ. ರೊನಾಲ್ಡ್ ಜೆ. ಮಸ್ಕರೇನ್ಹಸ್ ಅವರ ನಾಯಕತ್ವದಲ್ಲಿ ಮತ್ತು ಡಾ. ಡಬ್ಲ್ಯೂ. ಜ್ಯೋತಿ ಅವರ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಡಾ. ಎನ್. ಜಯಶಂಕರನ್, ಡಾ. ಸುರೇಶ್ ಮೋನಿ ಮತ್ತು ಡಾ. ಮೀನಾ ಚಿಂತಾಮಣಿ ಅವರು ಪ್ರಮುಖ ಸಂಪನ್ಮೂಲ ವ್ಯಕ್ತಿಗಳಾಗಿ ಕೊಡುಗೆ ನೀಡಿದರು. ಜುಲೈ 11-12 ರಂದು ಭಾಷಾ ಮತ್ತು ಸಮಾಜ ವಿಜ್ಞಾನ ವಿಭಾಗಗಳಿಗೆ, ಜುಲೈ 18-19 ರಂದು ವಿಜ್ಞಾನ ವಿಭಾಗಗಳಿಗೆ, ಮತ್ತು ಜುಲೈ 25-26 ರಂದು ವಾಣಿಜ್ಯ, ಸಂವಹನ ಮತ್ತು ಐಟಿ ವಿಭಾಗಗಳಿಗೆ ಹೀಗೆ ಕಾರ್ಯಾಗಾರಗಳನ್ನು ವಿವಿಧ ವಿಭಾಗಗಳ ಬೋಧಕರಿಗಾಗಿ ಮೂರು ಹಂತಗಳಲ್ಲಿ…










