Author: main-admin

ಮಂಗಳೂರು: ಪ್ರಕರಣವೊಂದರ ಆರೋಪಿತನಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಪೊಲೀಸ್ ಠಾಣಾ ಅಕ್ರ 115/2018 ಕಲಂ 504, 354(a) ಐಪಿಸಿ ಪ್ರಕರಣದಲ್ಲಿನ ಆರೋಪಿ ರವಿಂದ್ರ ಬಿ.ಎನ್.(40) ಎಂಬಾತ ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆದ್ದರಿಂದ ನ್ಯಾಯಾಲಯವು LPC No 04/2023 ರಂತೆ ವಾರೆಂಟ್ ಹೊರಡಿಸಿತ್ತು. ಇದೀಗ ಪೊಲೀಸರು ರವೀಂದ್ರನನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವೇದಾವತಿ ನಗರ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

ಮಣಿಪಾಲ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತ ಯುವಕನನ್ನು ಹರಿಕೇಶ್‌ (20) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಹರಿಕೇಶ್ ಸ್ನೇಹಿತರಾದ ರಮೊನ್‌ ಜಾರ್ಜ್‌, ಯು.ಕೆ. ಅಶ್ವಿ‌ನಿ ಮತ್ತು ನೋಯಲ್‌ ಜೆ. ವರ್ಗೀಸ್‌ ಅವರೊಂದಿಗೆ ಅಪಾಟ್‌ರ್ಮೆಂಟ್‌ನಲ್ಲಿ ವಾಸ ಮಾಡಿಕೊಂಡಿದ್ದರು. ಸೆ. 6ರಂದು ರಾತ್ರಿ ಹರಿಕೇಶ್‌ ತನ್ನ ಕೊಠಡಿಯ ಬಾಗಿಲು ತೆಗೆಯದೆ ಬಗ್ಗೆ ಮಾಹಿತಿ ಬಂದ ಮೇರೆಗೆ ವಸತಿಗೃಹದ ಮಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಪೊಲೀಸರು ಬಾಗಿಲು ಒಡೆದು ನೋಡಿದಾಗ ಹರಿಕೇಶ್‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಬಂಟ್ವಾಳ : ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ ಪರವಾನಿಗೆ ಪಡೆಯದೆ ಧ್ವನಿವರ್ಧಕ ಬಳಸಿರುವ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಸಾಕ್‌ ಎಂಬವರ ಅಧ್ಯಕ್ಷತೆಯಲ್ಲಿ ಕಾರ್ಯಾಚರಿಸುತ್ತಿರುವ ಧಾರ್ಮಿಕ ಶಿಕ್ಷಣದ ಕಟ್ಟಡ ಇದಾಗಿದ್ದು, ನಿಗಧಿತ ಪ್ರಮಾಣಕ್ಕಿಂತ ಹೆಚ್ಚಿನ ಧ್ವನಿಯಲ್ಲಿ ದಿನಕ್ಕೆ 5 ಬಾರಿ ಅಝಾನ್ ಕೂಗುವುದರಿಂದ ಸುತ್ತಮುತ್ತಲಿನ ಪರಿಸರದ ಜನರಿಗೆ ತೊಂದರೆಯಾಗುತ್ತಿದ್ದು, ಈ ಮೂಲಕ ಧ್ವನಿವರ್ಧಕ ಬಳಕೆಯ ಬಗೆಗಿನ ಕಾನೂನನ್ನು ಉಲ್ಲಂಘಿಸಿರುತ್ತಾರೆ ಎಂಬುದಾಗಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ಬಂದ ದೂರಿನಂತೆ ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಮಂಗಳೂರು: ಆನ್‌ಲೈನ್‌ ಮೂಲಕ ಹೂಡಿಕೆ ಮಾಡಿದರೆ ಭಾರಿ ಲಾಭ ಗಳಿಸಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 1.14 ಕೋ. ರೂ. ವಂಚಿಸಿದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ದೂರುದಾರ ತನ್ನ ಜೀವಮಾನದ ಉಳಿತಾಯವನ್ನೆಲ್ಲ ವಂಚಕರ ಕೈಗಿತ್ತು ಈಗ ಪರಿತಪಿಸುತ್ತಿದ್ದಾರೆ. ಜು.14ರಂದು ಅಪರಿಚಿತ ವ್ಯಕ್ತಿಯೊಬ್ಬ ಅವರನ್ನು ಸ್ಟಾಕ್‌ ಎಕ್ಸ್‌ಚೇಂಜ್‌ ಎಂಬ ವಾಟ್ಸಪ್‌ ಗ್ರೂಪ್‌ಗೆ ಸೇರಿಸಿ ಷೇರುಗಳಲ್ಲಿ ಆನ್‌ಲೈನ್‌ ಮೂಲಕ ಹೂಡಿಕೆ ಮಾಡಿದೆ ಭಾರಿ ಲಾಭ ಗಳಿಸಬಹುದು ಎಂದು ಹೇಳಿದ್ದ. ನಂತರ ದೂರುದಾರ ಆ.11ರಂದು ಈ ಗ್ರೂಪ್‌ನಲ್ಲಿ ಕ್ರಿಸ್ಟಿನ್‌ ಎಂಬ ಮಹಿಳೆಯನ್ನು ಸಂಪರ್ಕಿಸಿ ಹೂಡಿಕೆ ಬಗ್ಗೆ ವಿಚಾರಿಸಿದ್ದರು. ಕ್ರಿಸ್ಟಿನ್‌ ಮತ್ತು ಗ್ರೂಪ್‌ನ ಅಡ್ಮಿನ್‌ ವೀರೇಂದರ್‌ ಸಿಂಗ್‌ ಎಂಬಾತ ಹೇಳಿದಂತೆ ಅವರು ಕೊಟ್ಟ ಬ್ಯಾಂಕ್‌ ಖಾತೆಗಳಿಗೆ ಆರ್‌ಟಿಜಿಎಸ್‌ ಮತ್ತು ನೆಫ್ಟ್‌ ಮೂಲಕ ಹಂತಹಂತವಾಗಿ 1.14 ಕೋಟಿ ರೂಪಾಯಿ ವರ್ಗಾಯಿಸಿದ್ದರು. ಬಳಿಕ ವಂಚಕರು ತಮ್ಮ ವರಸೆ ಪ್ರಾರಂಭಿಸಿದ್ದು, ಹೆಚ್ಚಿನ ತೆರಿಗೆ ಪಾವತಿಸಬೇಕು, ಇನ್ನಷ್ಟು ಹೂಡಿಕೆ ಮಾಡದಿದ್ದರೆ ಹಣ ವಾಪಸು ಪಡೆಯಲು ಆಗುವುದಿಲ್ಲ ಎಂದೆಲ್ಲ ಹೇಳಿದ್ದರು. ಮೋಸ ಹೋದದ್ದು ಅರಿವಾದ…

Read More

ಮಂಗಳೂರು; ಅಪ್ರಾಪ್ತನಿಗೆ ಸ್ಕೂಟರ್ ಚಲಾಯಿಸಲು ನೀಡಿದ ಪೋಷಕರಿಗೆ ದಂಡ ವಿಧಿಸಿದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಿನಾಂಕ: 25-08-2025 ರಂದು ಬಜಪೆ ಪೊಲೀಸ್ ಠಾಣೆಯ ಪಿಎಸ್‌ಐ ರವರು ಸಿಬ್ಬಂದಿಯೊಂದಿಗೆ ಸಾಯಂಕಾಲ 6-35 ಗಂಟೆಯ ಸಮಯಕ್ಕೆ ಬಜಪೆ ಪೇಟೆ ಎಂಬಲ್ಲಿ ವಾಹನ ತಪಾಸಣೆಯ ಮಾಡುತ್ತಿದ್ದಾಗ ಟ್ರಿಪಲ್ ರೈಡ್ ಮಾಡಿಕೊಂಡು ಬಂದ ಸ್ಕೂಟರನ್ನು ನಿಲ್ಲಿಸಿ ವಿಚಾರಿಸಿ ದಾಖಲಾತಿಗಳನ್ನು ಪರಿಶೀಲಿಸಿದಾಗ ಸ್ಕೂಟರನ್ನು ಅಪ್ರಾಪ್ತ ವಯಸ್ಸಿನ ಬಾಲಕನು ಚಲಾಯಿಸಿಕೊಂಡು ಬಂದಿದ್ದು, ಹಿಂಬದಿ ಸೀಟಿನಲ್ಲಿ ಇಬ್ಬರು ಸವಾರರು ಇದ್ದದ್ದು ಗೊತ್ತಾಗಿದೆ. ಅಲ್ಲದೇ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಸ್ಕೂಟರನ್ನು ಚಲಾಯಿಸಲು ಪೋಷಕರು ವಾಹನವನ್ನು ನೀಡಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಬಜಪೆ ಪೊಲೀಸರು ಕಲಂ 199ಎ, 194ಸಿ, 194ಡಿ, 130 ಜೊತೆಗೆ 177 ಐಎಮ್‌ವಿ ಆಕ್ಟ್ ಅಡಿಯಲ್ಲಿ ದೋಷರೋಪಣ ಪಟ್ಟಿಯನ್ನು ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯವು ಸ್ಕೂಟರಿನ ಮಾಲಕರಿಗೆ 27500 /- ದಂಡವನ್ನು ವಿಧಿಸಿರುತ್ತದೆ.

Read More

ಮಂಗಳೂರು: ಕಳೆದ ಮೂರು ತಿಂಗಳಿನಿಂದ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿರುವ ನಕಲಿ ಸುದ್ದಿಗಳು, ದಾರಿತಪ್ಪಿಸುವ ಪೋಸ್ಟ್‌ಗಳು ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವುದರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ವಿದ್ಯಾವಂತ ವ್ಯಕ್ತಿಗಳು ಮತ್ತು ಸಂಘಟಕರು ಸೇರಿದಂತೆ ದುಷ್ಕರ್ಮಿಗಳು ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದು, ಜಿಲ್ಲೆಗೆ ಕಪ್ಪು ಚುಕ್ಕೆ ತರುತ್ತಿದ್ದಾರೆ ಎಂದು ಪೊಲೀಸರು ಗಮನಿಸಿದ್ದಾರೆ. “ಅಕ್ರಮ ಸಂಬಂಧಕ್ಕಾಗಿ ಕೊಲ್ಲಲ್ಪಟ್ಟ ವ್ಯಕ್ತಿಯನ್ನು ಇಡೀ ಸಮುದಾಯ ಬೆಂಬಲಿಸಿದೆ” ಎಂದು ಹೇಳುವ ಫೇಸ್‌ಬುಕ್ ಪೋಸ್ಟ್ ಸುಳ್ಳು ಮತ್ತು ಕೋಮು ದ್ವೇಷವನ್ನು ಪ್ರಚೋದಿಸುವ ಉದ್ದೇಶವನ್ನು ಹೊಂದಿದೆ ಎಂದು ಕಂಡುಬಂದಿದೆ. ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ತನಿಖೆಯ ಸಮಯದಲ್ಲಿ, ಈ ಹೇಳಿಕೆಗಳು ಆಧಾರರಹಿತವೆಂದು ಸಾಬೀತಾಯಿತು. ಜೂನ್ 11, 2025 ರಂದು, ದೇರಾಜೆ ಬಸ್ ನಿಲ್ದಾಣದ ಬಳಿ ಇಬ್ಬರು ವ್ಯಕ್ತಿಗಳು ಕತ್ತಿಯಿಂದ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಉಮರ್ ಫಾರೂಕ್ ದೂರು ದಾಖಲಿಸಿದರು. ತನಿಖೆಯಿಂದ ದೂರು ಕಟ್ಟುಕಥೆ…

Read More

ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ ದೂರಿನ ಮೇರೆಗೆ ಮಂಗಳೂರಿನ ಪೊಲೀಸ್ ಕಾನ್ಸ್ ಟೇಬಲ್ ಸಿದ್ದೇಗೌಡ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ನಾಲ್ಕು ತಿಂಗಳ ಹಿಂದೆ ರಚನೆಯಾಗಿರುವ ಕೋಮು ಸಂಘರ್ಷ ವಿರೋಧಿ ದಳದಲ್ಲಿ (ಎಸ್‌ಎಎಫ್) ಕಾನ್ಸ್‌ಟೇಬಲ್ ಆಗಿರುವ ಸಿದ್ದೇಗೌಡ ಎಂಬವರ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ. ವೃತ್ತಿಯಲ್ಲಿ ವಕೀಲೆಯಾಗಿರುವ ಯುವತಿಯನ್ನು ಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿದ್ದರು ಎನ್ನಲಾಗ್ತಿದೆ. ಯುವತಿ ದೂರಿನ ಮೇಲೆ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಪೊಲೀಸರು ಆರೋಪಿ ಸಿದ್ದೇಗೌಡನನ್ನು ಬಂಧಿಸಿದ್ದಾರೆ. ಸಿದ್ದೇಗೌಡ ನಂಬಿಸಿ ಅತ್ಯಾಚಾರಗೈದು ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಯುವತಿ ಆರೋಪ ಮಾಡಿದ್ದಾರೆ. ಆರೋಪಿ ಸಿದ್ದೇಗೌಡನನ್ನು ಪೊಲೀಸರು ಬಂಧಿಸಿ ಕೋರ್ಟಿಗೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ನೀಡಿದೆ.

Read More

ಕಾರ್ಕಳ: ಕಾರ್ಕಳ ರಥಬೀದಿಯಲ್ಲಿರುವ ಎರಡು ಜ್ಯುವೆಲ್ಲರಿಗೆ ನುಗ್ಗಿ ಕಳವಿಗೆ ಯತ್ನಿಸಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಹರ್ಷವರ್ಧನ ಆಚಾರ್ಯ ಎಂಬವರ ಕರ್ನಾಟಕ ಜ್ಯುವೆಲ್ಲರಿ ಹಾಗೂ ಪ್ರಕಾಶ್ ಎಂಬವರ ಪ್ರಣವ್ ಜ್ಯುವೆಲ್ಲರಿ ಅಂಗಡಿಗಳಿಗೆ ಅಳವಡಿಸಿದ್ದ ಶಟರ್‌ನ್ನು ಗ್ಯಾಸ್ ಕಟರ್‌ನಿಂದ ಮುರಿದು ಕಳವು ಮಾಡಲು ಯತ್ನಿಸಿರುವುದು ಕಂಡುಬಂದಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಂಟ್ವಾಳ: ಲಂಚ ಸ್ವೀಕರಿಸುವ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶನಿವಾರ (ಸೆ.6) ನಡೆದಿದೆ. ಪೆರುವಾಯಿ ಗ್ರಾಮಪಂಚಾಯತ್ ಅಧ್ಯಕ್ಷೆ ನಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದಾರೆ. ಪೆರುವಾಯಿ ಗ್ರಾಮಕ್ಕೆ ಸಂಬಂಧ ಪಟ್ಟ ದೂರುದಾರರು ತಮ್ಮ ಜಾಗಕ್ಕೆ ಕೊಳವೆಬಾವಿ ಮಂಜೂರಾತಿಗಾಗಿ 2024ರಲ್ಲಿ ಪೆರುವಾಯಿ ಗ್ರಾಮ ಪಂಚಾಯತ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಬಳಿಕ ಪೆರುವಾಯಿ ಗ್ರಾಮ ಪಂಚಾಯತ್ ಕಚೇರಿಗೆ ಎರಡು ಮೂರು ಬಾರಿ ಹೋಗಿ ವಿಚಾರಿಸಿದರೂ ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ ಎನ್ನಲಾಗಿದೆ. ದೂರುದಾರ ಮಾವನಿಗೆ ಸುಮಾರು 75 ವರ್ಷ ವಯಸ್ಸಾಗಿದ್ದು, ಅವರಿಗೆ ಅಸೌಖ್ಯ ಇದ್ದುದರಿಂದ ಫಿರ್ಯಾದಿದಾರರನ್ನು ಕರೆದು ಕೊಳವೆ ಬಾವಿ ಬಗ್ಗೆ ಪಂಚಾಯತ್ ಗೆ ಹೋಗಿ ವಿಚಾರಿಸಿಕೊಂಡು ತಿಳಿಸಿದ್ದಾರೆ. ಈ ಹಿನ್ನಲೆ ಸೆ. 2 ರಂದು ಪೆರುವಾಯಿ ಗ್ರಾಮ ಪಂಚಾಯತ್ ಗೆ ಹೋಗಿ ಗ್ರಾಮ ಪಂಚಾಯತ್ ನ ಅಧ್ಯಕ್ಷೆಯಾದ ನಫೀಸಾ ರವರಲ್ಲಿ ತನ್ನ ಮಾವನವರ ಹೆಸರಿಗೆ ಕೊಳವೆ ಬಾವಿ ಮಂಜೂರು ಆಗಿದೆಯೇ…

Read More

ಉಡುಪಿ: ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಲ್ಪೆ ಪೊಲೀಸರು ಸೆ.5ರಂದು ಸಂಜೆ ವೇಳೆ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಕೆಎಂಪಿ ರಸ್ತೆಯಲ್ಲಿರುವ ಶ್ರೀಬೊಬ್ಬರ್ಯ ದೈವಸ್ಥಾನದ ಬಳಿ ಬಂಧಿಸಿದ್ದಾರೆ. ಮಂಗಳೂರು ಉರ್ವ ಬೋಳೂರು ನಿವಾಸಿ ಅಚ್ಚುತ ಎನ್. ಯಾನೆ ಕಿರಣ್ ಮೆಂಡನ್(45), ಗುಜ್ಜರಬೆಟ್ಟುವಿನ ಪುನೀತ್ ಯಾನೆ ಪುನೀತ್ ರಾಜ್(24), ಒಡಿಸ್ಸಾ ಮೂಲದ ಪ್ರಸ್ತುತ ಪಡುತೋನ್ಸೆ ನಿವಾಸಿ ಚಂದ್ರಕಾಂತ ಕಟ್ವ ಬಂಧಿತ ಆರೋಪಿಗಳು. ಪೊಲೀಸ್ ದಾಳಿ ವೇಳೆ ಕೊಳಲಗಿರಿಯ ಕಿಶೋರ ಎಂಬಾತ ಪರಾರಿಯಾಗಿದ್ದಾನೆ. ಆರೋಪಿಗಳು ಬೈಕಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಪೊಲೀಸರನ್ನು ಕಂಡು ಓರ್ವ ಆರೋಪಿ ಓಡಿ ಹೋಗಿದ್ದು, ಉಳಿದ ಮೂವರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಬಂಧಿತರಿಂದ 3‌ ಗ್ರಾಂ 480 ಮಿಲ್ಲಿ ಗ್ರಾಂ ತೂಕದ ಗಾಂಜಾ ಅಂದಾಜು ಮೌಲ್ಯ 3,000ರೂ. ಹಾಗೂ MDMAನ ಅಂದಾಜು ಮೌಲ್ಯ 10,000 ರೂ. ಎಂದು ಅಂದಾಜಿಸಲಾಗಿದೆ. ಎಂಡಿಎಎ ಮತ್ತು ಕೃತ್ಯಕ್ಕೆ ಬಳಸಿದ 1,50,000…

Read More