Author: main-admin

ಬಂಟ್ವಾಳ: ಪೋಲಿಸ್ ಉಪನೀರಿಕ್ಷರುಗಳ ವರ್ಗಾವಣೆ ಆದೇಶವನ್ನು ಸರಕಾರ ಹೊರಡಿಸಿದ್ದು ಬಂಟ್ವಾಳ ನಗರ ಪೋಲಿಸ್ ಠಾಣೆಯ ಎಸೈ ಆಗಿ ಕಾರ್ಕಳ ಮೂಲದ ದಕ್ಷ ಪ್ರಾಮಣಿಕ ಜನಸ್ನೇಹಿ ಅಧಿಕಾರಿ ಸಂದೀಪ್ ಶೆಟ್ಟಿ ಅವರನ್ನು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ  ಸಂದೀಪ್ ಶೆಟ್ಟಿಯವರು ಈ ಹಿಂದೆ ವಿಟ್ಲ ಪೋಲಿಸ್ ಠಾಣೆಯ ಎಸೈ ಆಗಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ವಿಟ್ಲದಲ್ಲಿ ಕಾರ್ಯನಿರ್ವಹಿಸಿ ಜನರ ಪ್ರಶಂಸನೀಯಗೆ ಪಾತ್ರರಾಗಿದ್ದರು..

Read More

ಮಂಗಳೂರು: ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ, ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉಡುಪಿಯ ಬಡಗುಬೆಟ್ಟುವಿನ ಬಸ್ ಕಂಡಕ್ಟರ್ ದೀಪಕ್ (19) ಮತ್ತು ಆತನ ಸ್ನೇಹಿತ, ಪರ್ಕಳ, ಅತ್ರಾಡಿ ನಿವಾಸಿ ನವೀನ್ ಶೆಟ್ಟಿ (21) ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಆರೋಪಿಗಳು ಜುಲೈ 19 ರಂದು ಬಪ್ಪನಾಡು ಬಳಿಯಿಂದ ಸ್ಕೂಟರ್‌ನಲ್ಲಿ ಬಾಲಕಿಯನ್ನು ಅಪಹರಿಸಿ ಉಡುಪಿಗೆ ಕರೆದುಕೊಂಡು ಹೋಗಿ ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read More

ಮಂಗಳೂರು : ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮಿಲಾಗ್ರಿಸ್ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ನೆರವೇರಿತು. ಮಿಲಾಗ್ರಿಸ್ ವಿದ್ಯಾ ಸಂಸ್ಥೆಯ ಸಂಚಾಲಕರು ವಂದನೀಯ ಗುರು ಬೊನವೆಂಚರ್ ನಜರೆತ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವೃಧ್ದಿಸಿಕೊಳ್ಳುವುದು. ನಾಯಕನಾದವನು ಶಿಸ್ತುಬದ್ಧತೆ, ಸಮಯದ ಪಾಲನೆ ಉತ್ತಮ ನಡೆ ನುಡಿ ಹೊಂದಿ ಇತರರಿಗೆ ಮಾಧರಿಯಾಗಬೇಕೆಂದು ಹೇಳಿದರು. ಮುಖ್ಯ ಅತಿಥಿಯಾದ ಮಿಲಾಗ್ರಿಸ್ ಪದವಿ ಕಾಲೇಜಿನ ಪ್ರ‍್ರಾಂಶುಪಾಲರಾದ ವಂದನೀಯ ಗುರು ಮೈಕಲ್ ಸಾಂತುಮಾಯರ್ ಹಾಗೂ ಶ್ರೀ ಸಿಲ್ವೆಸ್ಟರ್ ಮಸ್ಕರೇನಸ್, ಉಪಾಧ್ಯಕ್ಷರು, ಪ್ಯಾರಿಷ್ ಪಾಸ್ಟೋರಲ್ ಕೌನ್ಸಿಲ್ ಮಿಲಾಗ್ರಿಸ್ ಚರ್ಚ್,್ಲ ಉಪಸ್ಥಿತರಿದ್ದರು.ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಶ್ರೀ ಮೇಲ್ವಿನ್ ವಾಸ್‌ವರು ನೂತನ ವಿದ್ಯಾರ್ಥಿ ಸಂಘದ ನಾಯಕರಿಗೆೆ ಪ್ರತಿಜ್ಞಾ ವಿಧಿ ಬೋಧಿಸಿದರು. ಶ್ರೀಮತಿ ಜ್ಯೋತಿ ರತ್ನ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಪುಲ್ ಶೆಟ್ಟಿ ವಂದಿಸಿದರು. ಶ್ರೀಮತಿ ಶೆರೆಲ್ ಡಿಸೋಜ ನಿರೂಪಿಸಿದರು. ಈ ಕಾರ್ಯಕ್ರಮ ಕಾಲೇಜು ಗೀತೆಯೊಂದಿಗೆ ಮುಕ್ತಾಯಗೊಂಡಿತು.

Read More

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ ಎಂಬವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಖೀರಪ್ಪ ಕಳೆದ ನಾಲ್ಕು ತಿಂಗಳಿನಿಂದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಉತ್ತರ ಕನ್ನಡದ ಕಾರವಾರ ಮೂಲದವರಾಗಿದ್ದು, ದಿನಾಂಕ 19.07.2025 ರಂದು ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸಿದ್ದರು, ರವಿವಾರ ಬೆಳಿಗ್ಗೆ ಠಾಣೆಯಿಂದ ಕರೆ ಮಾಡಿದಾಗ ಸ್ವೀಕರಿಸದ ಹಿನ್ನಲೆ ಠಾಣಾ ಸಿಬ್ಬಂದಿ ಮನೆಗೆ ತೆರಳಿ ಪರಿಶೀಲಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈಯುಕ್ತಿಕ ಹಾಗೂ ಹಣಕಾಸಿನ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Read More

‘ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣ’ವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಶನಿವಾರ (ಜು.19) ಆದೇಶಿಸಿದೆ ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ಎಂದು ತಿಳಿಸಿದ್ದಾರೆ. ಠಾಣಾ ಅ.ಕ್ರ 39/2025ಕ್ಕೆ ಸಂಬಂಧಿಸಿದಂತೆ, ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ದಿನಾಂಕ 19.07.2025 ರಂದು ಮಾನ್ಯ ಕರ್ನಾಟಕ ಸರ್ಕಾರವು ಅದೇಶಿಸಿರುತ್ತದೆ. ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ” ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಶೇಷ ತನಿಖಾ ಸಂಸ್ಥೆ (SIT) ಯ ಮುಖ್ಯಸ್ಥರಾಗಿ ಐಪಿಎಸ್ ಪ್ರಣವ ಮೋಹಾಂತಿ ಹಾಗೂ ಸದಸ್ಯರಾಗಿ ಐಪಿಎಸಸ್‌ಗಳಾದ ಎಂ.ಎನ್.ಅನುಚೇತ್, ಸೌಮ್ಯಲತ, ಜಿತೇಂದ್ರ ಕುಮಾರ್ ದಯಾಮ ರವರನ್ನು ಸರಕಾರ ನೇಮಿಸಿದೆ.

Read More

ತನಗೆ ಹೆಣ್ಣು ಸಿಗುತ್ತಿಲ್ಲ ಎಂಬುದಾಗಿ ಮನನೊಂದು ಹೋಂಗಾರ್ಡ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಜೆಬಿ ಹಳ್ಳಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಜೆ.ಬಿ ಹಳ್ಳಿಯಲ್ಲಿ ಹೋಂಗಾರ್ಡ್ ತಿರುಮಲ(31) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ನೇಣಿಗೆ ಹೋಂಗಾರ್ಡ್ ತಿರುಮಲ ಶರಣಾಗಿದ್ದಾರೆ. ಇತ್ತೀಚೆಗೆ ಮೂರು ಕಡೆಯಲ್ಲಿ ತಿರುಮಲ ಹೆಣ್ಣು ನೋಡಿಕೊಂಡು ಬಂದಿದ್ದರು. ಅವರಲ್ಲಿ ಯಾರೂ ಒಪ್ಪದ ಹಿನ್ನಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

Read More

ಮಂಗಳೂರು : ಹಲವರಿಗೆ ಕೋಟ್ಯಂತರ ಹಣ ವಂಚಿದ ಆರೋಪಿ ಕಂಕನಾಡಿ ಬೊಳ್ಳಗುಡ್ಡೆ ನಿವಾಸಿ ರೋಶನ್ ಸಲ್ದಾನ (43) ಎಂಬಾತನಿಂದ ವಂಚನೆಗೊಳಗಾದ ಮಹಾರಾಷ್ಟ್ರ ಮತ್ತು ಅಸ್ಸಾಂನ ಇಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮಹಾರಾಷ್ಟ್ರದ ಉದ್ಯಮಿಯೊಬ್ಬರು 5 ಕೋಟಿ ರೂ. ಹಣವನ್ನು ಜು.16ರಂದು ಮತ್ತು ಅಸ್ಸಾಂ ರಾಜ್ಯದ ವ್ಯಕ್ತಿಯೊಬ್ಬರು 20 ಲಕ್ಷ ರೂ. ಹಣವನ್ನು ಜು.17 ಬ್ಯಾಂಕ್ ಮೂಲಕ ಆರೋಪಿಯ ಖಾತೆಗೆ ವರ್ಗಾಯಿಸಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿ ವಿರುದ್ಧ ಇವರು ನೀಡಿದ ದೂರಿನಂತೆ ಇನ್ನೊಂದು ಎಫ್‌ಐಆರ್ ದಾಖಲಾಗಿದೆ. ಮಹಾರಾಷ್ಟ್ರದ ಉದ್ಯಮಿ ಮತ್ತು ಅಸ್ಸಾಂನ ವ್ಯಕ್ತಿ ಹಣ ವರ್ಗಾಯಿಸಿರುವುದನ್ನು ಪೊಲೀಸರು ಬ್ಯಾಂಕ್‌ಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಯ ಹೆಚ್ಚಿನ ವಿಚಾರಣೆಗೆ ಸೋಮವಾರ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಗುರುವಾರ ತಡರಾತ್ರಿ ನಡೆಸಲಾದ ಮಹತ್ವದ ಕಾರ್ಯಾಚರಣೆಯಲ್ಲಿ ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ 200ಕೋಟಿ ರೂ.ಗೂ…

Read More

ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್‌ (92) ಅವರು ತಮ್ಮ ಉಪ್ಪಿನಂಗಡಿಯ ತಮ್ಮ ಸ್ವಗೃಹದಲ್ಲಿ ಇಂದು (ಜು.19) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಹಿರಿಯ ಪುತ್ರ, ಯಕ್ಷಗಾನ ಕಲಾವಿದ ಅಂಬಾಪ್ರಸಾದ್‌ ಪಾತಾಳ, ಕಿರಿಯ ಪುತ್ರ ಉಪ್ಪನಂಗಡಿ ಸಿ.ಎ.ಬ್ಯಾಂಕ್‌ ನಿರ್ದೇಶಕ ಶ್ರೀರಾಮ ಭಟ್‌ ಪಾತಾಳ ಸಹಿತ ನಾಲ್ವರು ಪುತ್ರಿಯರು ಹಾಗೂ ಮೊಮ್ಮಕ್ಕಳು, ಅಪಾರ ಬಂಧುಗಳನ್ನು, ಅಭಿಮಾನಿಗಳನ್ನು ಅಗಲಿದ್ದಾರೆ. 1951 ರಲ್ಲಿ ಜೀವನೋಪಾಯಕ್ಕೆಂದು ಕಾಂಚನ ನಾಟಕ ಕಂಪನಿಯಲ್ಲಿ ಅಡುಗೆಯವರಾಗಿ ಸೇರಿ ನಂತರ ಪ್ರಧಾನ ಸ್ತ್ರೀ ವೇಷಧಾರಿಯಾಗಿ ಅವಕಾಶ ಪಡೆದು ವೈವಿಧ್ಯಮಯ ವೇಷಗಳಲ್ಲಿ ಮೆರೆಯ ಹಿರಿಯ ಕಲಾವಿದ ಪಾತಾಳ ವೆಂಕಟರಮಣ ಭಟ್ಟರು

Read More

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು. ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾ. ಬಖ್ರು ಅವರು 1966ರಲ್ಲಿ ನಾಗಪುರದಲ್ಲಿ ಜನಿಸಿದರು. ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್‌ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1989ರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿಯೂ ಅರ್ಹತೆ ಪಡೆದಿದ್ದರು. ಆನಂತರ 1990ರಲ್ಲಿ ಎಲ್‌ಎಲ್‌ಬಿ ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್‌ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿದ್ದರು. ನ್ಯಾ.ವಿಭೂ ಭಕ್ರು ಅವರು ವಕೀಲರಾಗಿದ್ದ ಅವಧಿಯಲ್ಲಿ ಸುಪ್ರೀಂ ಕೋರ್ಟ್‌, ದೆಹಲಿ ಹೈಕೋರ್ಟ್‌, ಕಂಪನಿ ಕಾನೂನು ಮಂಡಳಿ ಮತ್ತು ಇತರೆ ನ್ಯಾಯ ಮಂಡಳಿಗಳಲ್ಲಿ ವಕೀಲಿಕೆ ಮಾಡಿದ್ದಾರೆ. 2011ರಲ್ಲಿ ಹಿರಿಯ…

Read More

ಧರ್ಮಸ್ಥಳದಲ್ಲಿ ಶವಗಳನ್ನು ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಮತ್ತು ಹೆಗ್ಗಡೆಯವರ ಬಗ್ಗೆ ಮಾನಹಾನಿ ವರದಿಗಳನ್ನು ಪ್ರಕಟಿಸದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿಜಯ್ ಕುಮಾರ್‌ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ ಶೀಕ್ಷೇತ್ರ ಧರ್ಮಸ್ಥಳ ದೇವಾಲಯ ಸುತ್ತಮುತ್ತ ಅಪರಿಚಿತ ಮೃತ ದೇಹಗಳನ್ನು ಹೂತುಹಾಕಲಾಗಿದೆ ಎನ್ನಲಾದ ವಿಚಾರ ಸಂಬಂಧ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವಿರೇಂದ್ರ ಹೆಗ್ಗಡೆ ಮತ್ತು ಅವರ ಸಹೋದರ ಕುಟುಂಬದವರ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆ ನೀಡದಂತೆ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ನಿರ್ಬಂಧಕಾಜ್ಞೆ ಹೊರಡಿಸಿದೆ. ಪ್ರಕರಣದ ಕುರಿತು ತಮ್ಮ ಕುಟುಂಬದವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡದಂತೆ ಮತ್ತು ಅವಹೇಳನಕಾರಿ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವ‌ರ್, ಯೂಟ್ಯೂಬರ್ ಎಂ.ಡಿ. ಸಮೀರ್ ಮತ್ತು ಮಾಧ್ಯಮದವರ ನಿರ್ದೇಶಿಸಿ ನಿರ್ಬಂಧಕಾಜ್ಞೆ ಹೊರಡಿಸಬೇಕು ಎಂದು ಕೋರಿ ಡಿ.ಹರ್ಷೇಂದ್ರ ಕುಮಾರ್ ಅಸಲು ದಾವೆ ದಾಖಲಿಸಿದ್ದಾರೆ.…

Read More