Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಳೆಯಿಂದ ಶಬರಿಮಲೆಯಲ್ಲಿ ಅಯ್ಯಪ್ಪಸ್ವಾಮಿ ದರ್ಶನ : ಯಾತ್ರಿಗಳಿಗೆ ʼಕ್ಯೂ ಮೂಲಕ ಮಾತ್ರವೇ ಪ್ರವೇಶ
    ಇತ್ತೀಚಿನ ಸುದ್ದಿ

    ನಾಳೆಯಿಂದ ಶಬರಿಮಲೆಯಲ್ಲಿ ಅಯ್ಯಪ್ಪಸ್ವಾಮಿ ದರ್ಶನ : ಯಾತ್ರಿಗಳಿಗೆ ʼಕ್ಯೂ ಮೂಲಕ ಮಾತ್ರವೇ ಪ್ರವೇಶ

    November 16, 2022
    Share

    ತಿರುವನಂತಪುರ: ಶಬರಿಮಲೆಯ ಅಯ್ಯಪ್ಪ ದೇಗುಲವು ಬುಧವಾರದಿಂದ (ನ 16) ತೆರೆಯಲಿದ್ದು, ಗುರುವಾರದಿಂದ (ನ 17) ಎರಡು ತಿಂಗಳ ಅವಧಿಗೆ ಭಕ್ತರ ದರ್ಶನಕ್ಕೆ ಅವಕಾಶ ಇರಲಿದೆ.

    ವಾರ್ಷಿಕ ಮಂಡಲಂ-ಮಕರವಿಳುಕ್ಕು ಯಾತ್ರೆಗೂ ನಾಳೆಯಿಂದಲೇ ಚಾಲನೆ ಸಿಗಲಿದೆ. ದೇಗುಲದ ಹಾಲಿ ಪ್ರಧಾನ ಅರ್ಚಕರಾದ (ತಂತ್ರಿ) ಕಂಡರಾರು ರಾಜೀವರು ಮತ್ತು ಹಿಂದ ಪ್ರಧಾನ ಅರ್ಚಕರಾದ ಎನ್.ಪರಮೇಶ್ವರನ್ ನಂಬೂದಿರಿ ಅವರ ಸಮಕ್ಷಮದಲ್ಲಿ ದೇಗುಲದ ಗರ್ಭಗೃಹವನ್ನು ಇಂದು ಸಂಜೆ 5 ಗಂಟೆಗೆ ತೆರೆಯಲಾಗುವುದು. ನಂತರ ಅಯ್ಯಪ್ಪ ಮತ್ತು ಮಲಿಕಾಪುರಮ್ ದೇಗುಲಗಳ ಮುಖ್ಯ ಅರ್ಚಕರು ಪೂಜಾ ವಿಧಿಗಳನ್ನು ಆರಂಭಿಸುವ ಮೂಲಕ ಜವಾಬ್ದಾರಿಯನ್ನು ಸ್ವೀಕರಿಸಲಿದ್ದಾರೆ. 41 ದಿನಗಳ ಮಂಡಲ ಪೂಜಾ ವಿಧಿಗಳು ಡಿ 27ಕ್ಕೆ ಮುಕ್ತಾಯವಾಗಲಿದೆ.

    ನಂತರ ಮೂರು ದಿನಗಳ ಕಾಲ ದೇಗುಲದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಡಿ 30ರಿಂದ ಮಕರವಿಳುಕ್ಕು ಯಾತ್ರೆಗಾಗಿ ದೇಗುಲವನ್ನು ಮತ್ತೆ ತೆರೆಯಲಾಗುವುದು.

    ಜನವರಿ 14ರಂದು ಮಕರವಿಳಕ್ಕು ಕಾರ್ಯಕ್ರಮವಿದೆ. ಸಂಕ್ರಾಂತಿ ಜ್ಯೋತಿಯ ದರ್ಶನ ಮತ್ತಿತರರ ಪೂಜಾ ವಿಧಿಗಳ ನಂತರ ಜನವರಿ 20ರಂದು ದೇಗುಲವನ್ನು ಮುಚ್ಚಲಾಗುವುದು. ಅಲ್ಲಿಗೆ ಈ ವರ್ಷದ ಶಬರಿಮಲೆ ಯಾತ್ರೆ ಋತುಮಾನ ಮುಕ್ತಾಯವಾದಂತೆ ಆಗುತ್ತದೆ.

    ಕೊವಿಡ್-19ರ ನಿರ್ಬಂಧದ ಕಾರಣ ಕಳೆದ ಎರಡು ವರ್ಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿತ್ತು.

    ಈ ಬಾರಿ ನಿರ್ಬಂಧ ಸಡಿಲಿಸಿರುವುದರಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆ ಯಾತ್ರೆ ಕೈಗೊಳ್ಳಬಹುದು ಎಂಬ ನಿರೀಕ್ಷೆಯಿದೆ. ಶಬರಿಮಲೆ ಮಾರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು, ಸುಮಾರು 13,000 ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

    Post Views: 294

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.