Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಿಕಾಂ ವಿದ್ಯಾರ್ಥಿ ಗಾಯ, ಆರ್ಸಿಬಿ, ಕೆಎಸ್ಸಿಎ ವಿರುದ್ಧ ಪ್ರಕರಣ ದಾಖಲು
    ರಾಜ್ಯ ಸುದ್ದಿ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಿಕಾಂ ವಿದ್ಯಾರ್ಥಿ ಗಾಯ, ಆರ್ಸಿಬಿ, ಕೆಎಸ್ಸಿಎ ವಿರುದ್ಧ ಪ್ರಕರಣ ದಾಖಲು

    June 7, 2025
    Share

    ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ಸಿಬಿ, ಕೆಎಸ್ಸಿಎ, ಡಿಎನ್ಎ ಕಂಪನಿ ವಿರುದ್ಧ ಮೂರನೇ ಎಫ್ಐಆರ್ ದಾಖಲಾಗಿದೆ. ಗಾಯಾಳು ಬಿಕಾಂ ವಿದ್ಯಾರ್ಥಿ ಸಿ.ವೇಣು ಅವರು ನೀಡಿದ ದೂರು ಆಧಾರಸಿ, ಎಫ್ಐಆರ್ ದಾಖಲಾಗಿದೆ.

    ಆರ್ಸಿಬಿಯ ಉಚಿತ ಟಿಕೆಟ್‌ ಜಾಹೀರಾತು ನೋಡಿ ಕ್ರೀಡಾಂಗಣಕ್ಕೆ ಬಂದಿದ್ದೆ. ಕ್ರೀಡಾಂಗಣದ ಗೇಟ್ ನಂಬರ್ 6ರ ಬಳಿ ನೂಕುನುಗ್ಗಲು ಉಂಟಾಗಿತ್ತು. ನೂಕುನುಗ್ಗಲಿನಲ್ಲಿ ಬಲಗಾಲಿನ ಮೇಲೆ ಬ್ಯಾರಿಕೇಡ್‌ ಬಿದ್ದಿತ್ತು. ಇದರಿಂದ ಗಾಯಗೊಂಡು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಈ ಹಿಂದೆ ಎರಡು ಕೇಸ್ ದಾಖಲು

    ಕಾಲ್ತುಳಿತದಲ್ಲಿ ಗಾಯಗೊಂಡ ರೋಲನ್ ಗೊಮೆಸ್ ಎಂಬುವರು ಶುಕ್ರವಾರ ಸಂಜೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಆರ್ಸಿಬಿ ಫ್ರಾಂಚೈಸಿ, ಕೆಎಸ್ಸಿಎ ಮತ್ತು ಡಿಎನ್ಎ ಕಂಪನಿ ವಿರುದ್ಧ ಬಿಎನ್ಎಸ್ ಕಾಯ್ದೆ 2023 (U/s-125(a)) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

    ಜಾಲತಾಣದಲ್ಲಿ ಆರ್ಸಿಬಿ ಪೋಸ್ಟ್ ನೋಡಿ ನನ್ನ ಗೆಳೆಯರ ಜೊತೆ ಸಂಭ್ರಮಾಚರಣೆ ವೀಕ್ಷಿಸಲು ಬಂದಿದ್ದೆ. ತೆರದ ಬಸ್ ಮೂಲಕ ಮೆರಬಣಿಗೆ ಇದೆ ಎಂದು ತಿಳಿಸಲಾಗಿತ್ತು. ಗೇಟ್ ನಂಬರ್ 17ರಲ್ಲಿ ನಾನು ಹೋಗುವಾಗ ನೂಕುನುಗ್ಗಲು‌ ಆಯ್ತು. ಈ ವೇಳೆ ನನ್ನ ತೋಳಿಗೆ ಪೆಟ್ಟಾಗಿದೆ ಎಂದು ಗಾಯಾಳು ರೋಲನ್ ಗೊಮೆಸ್ ದೂರು ನೀಡಿದ್ದರು.

    ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ಗಿರೀಶ್ ದೂರು ನೀಡಿದ್ದ ದೂರಿನ ಆಧಾರದ ಮೇಲೆ ಬಿಎನ್ಎಸ್ ಸೆಕ್ಷನ್ 105, 115, 118ರಡಿ ಮೊಕದ್ದಮೆ ದಾಖಲಾಗಿತ್ತು. ಆರ್ಸಿಬಿ ಮ್ಯಾನೇಜ್ಮೆಂಟ್ A-1 ಆಗಿದ್ದರೆ, ಕಾರ್ಯಕ್ರಮ ಆಯೋಜನೆ ಮಾಡಿದ್ದ DNA ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ A-2 ಆಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನ A3 ಯನ್ನಾಗಿ ಮಾಡಿ ಎಫ್ಐಆರ್ ದಾಖಲಿಸಲಾಗಿತ್ತು. ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ಸೇರಿ ನಾಲ್ವರನ್ನು ಬಂಧಿಸಲಾಗಿತ್ತು.

    Post Views: 302

    BComStudent ChinnaswamyStampede CrowdControl EventManagement FIR Injury KSCA LegalAction PublicSafety RCB

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026

    FIR ದಾಖಲಿಸುವುದಲ್ಲ, ಕೊಲೆಗಡುಕರನ್ನು ಪತ್ತೆಹಚ್ಚಿ ಜೈಲಿಗಟ್ಟಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

    July 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.