Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಜ್ಪೆ: ಜಾನುವಾರು ಕಳ್ಳತನ ಪ್ರಕರಣ- 8 ಮಂದಿ ದನಗಳ್ಳರ ಬಂಧನ
    ಇತ್ತೀಚಿನ ಸುದ್ದಿ

    ಬಜ್ಪೆ: ಜಾನುವಾರು ಕಳ್ಳತನ ಪ್ರಕರಣ- 8 ಮಂದಿ ದನಗಳ್ಳರ ಬಂಧನ

    December 25, 2025
    Share

    ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು, ಕರಂಬಾರು, ಭಟ್ರಕೆರೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

    ಇತ್ತೀಚೆಗೆ ಬಜ್ಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಜಾನುವಾರು ಕಳ್ಳತನ ಹಾಗೂ ಮಾಂಸ ಮಾರಾಟ-ಸಾಗಾಟಕ್ಕೆ ಸಂಬOಧಿಸಿದ ಮೂರು ಪ್ರತ್ಯೇಕ ಪ್ರಕರಣಗಳ ಕುರಿತು ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಜುಲೈ ತಿಂಗಳಲ್ಲಿ ಬಜ್ಪೆ ಸಮೀಪದ ಭಟ್ರಕೆರೆ ಮಸೀದಿಯ ಬಳಿ ಸುಮಾರು 50 ಸಾವಿರ ರೂ. ಮೌಲ್ಯದ ಜೆರ್ಸಿ ದನವನ್ನು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬAಧಿಸಿ ಆದ್ಯಪಾಡಿ ಸೈಟ್ ನಿವಾಸಿ ಮನ್ಸೂರು ಆದ್ಯಪಾಡಿ (42), ತೊಕ್ಕೊಟ್ಟು-ಪೆರ್ಮನ್ನೂರು ಗ್ರಾಮದ ಮಹಮ್ಮದ್ ಅಶ್ವದ್ (25) ಹಾಗೂ ಉಲ್ಲಾಳ ತಾಲೂಕಿನ ಕೋಟೆಪುರ ನಿವಾಸಿ ರಿಲ್ವಾನ್ ಅಹ್ಮದ್ ಅಲಿಯಾಸ್ ರಿಲ್ಲು (26) ಎಂಬವರನ್ನು ಬಂಧಿಸಲಾಗಿದೆ.

    ಆರೋಪಿಗಳಿಂದ ಸುಮಾರು 5 ಲಕ್ಷ ರೂ. ಮೌಲ್ಯದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಡಿ.12ರಂದು ಕೆಂಜಾರು ಗ್ರಾಮದ ಕಪಿಲಾ ಗೋ ಶಾಲೆಯ ಬಳಿ ಮೇಯಲು ಬಿಟ್ಟಿದ್ದ 8 ದನಗಳನ್ನು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬOಧಿಸಿ ಜೋಕಟ್ಟೆ-ತೋಕೂರು ಗ್ರಾಮದ ಹಸನಬ್ಬ (40) ಹಾಗೂ ಜೋಕಟ್ಟೆ ನಿವಾಸಿ ಮೊಹಮ್ಮದ್ ರಫೀಕ್ (56) ಎಂಬವರನ್ನು ಬಂಧಿಸಲಾಗಿದೆ.

    ಇವರಿಂದ ಸುಮಾರು ಸಾವಿರ ರೂ. ಮೌಲ್ಯದ ಪಲ್ಸರ್ ಬೈಕ್ ವಶಪಡಿಸಿಕೊಳ್ಳಲಾಗಿದೆ. ಡಿ.20ರಂದು ಕರಂಬಾರಿನಲ್ಲಿ 6 ದನಗಳನ್ನು ಕಳ್ಳತನ ಮಾಡಿ ವಾಹನದಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿಗಳಾದ ಕೆಂಜಾರು ಗ್ರಾಮದ ಕರಂಬಾರು ನಿವಾಸಿ ಅಬ್ದುಲ್ ರಹಿಮಾನ್ ಶಫೀರ್ (21), ಪೇಜಾವರ ನಿವಾಸಿ ಹಸನ್ ಸಜಾದ್ (18) ಹಾಗೂ ಕೆಂಜಾರು ಗ್ರಾಮದ ನಿವಾಸಿಯಾಗಿದ್ದು ಪ್ರಸ್ತುತ ಕಿನ್ನಿಪದವು ನಿವಾಸಿಯಾಗಿರುವ ಎ.ಕೆ. ಅಹಮ್ಮದ್ ಆದಿಲ್ (20) ಎಂಬವರನ್ನು ಡಿ.21ರಂದು ಬಂಧಿಸಲಾಗಿದೆ. ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 293

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.