Facebook Twitter Instagram
    Tuesday, May 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬ್ಯಾಂಕ್ ಖಾತೆ ಹ್ಯಾಕ್ ಮಾಡಿ ಹಣ ದೋಚಿದ ಖದೀಮರು – ತನಿಖೆಗೆ ಸೈಬರ್ ಪೊಲೀಸರ ಎಂಟ್ರಿ
    ಇತ್ತೀಚಿನ ಸುದ್ದಿ

    ಬ್ಯಾಂಕ್ ಖಾತೆ ಹ್ಯಾಕ್ ಮಾಡಿ ಹಣ ದೋಚಿದ ಖದೀಮರು – ತನಿಖೆಗೆ ಸೈಬರ್ ಪೊಲೀಸರ ಎಂಟ್ರಿ

    May 26, 2026
    Share

    ಬೆಂಗಳೂರು: ಸೈಬರ್​​ ವಂಚಕರ ಕೈಚಳಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೊದಲು ಸಾಮಾನ್ಯ ಜನರೇ ಇವರ ಟಾರ್ಗೆಟ್​ ಆಗಿತ್ತು. ಆದರೆ ಇದೀಗ ಸೆಲೆಬ್ರಿಟಿಗಳನ್ನು ಬಿಡುತ್ತಿಲ್ಲ. ಈಗ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪುರಸ್ಕೃತರನ್ನೂ ಬಿಡದೆ ವಂಚಿಸಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಪ್ಯಾರಾ ಅಥ್ಲೀಟ್ ಕೆ. ವೈ. ವೆಂಕಟೇಶ್ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಸೈಬರ್ ಖದೀಮರು, ಸುಮಾರು 90 ಸಾವಿರ ರೂಪಾಯಿ ಹಣವನ್ನು ಲೂಟಿ ಮಾಡಿದ್ದಾರೆ.ಹುಟ್ಟಿನಿಂದಲೇ ಅಕೊಂಡ್ರೋಪ್ಲಾಸಿಯಾ ( ಕುಬ್ಜತೆ) ಸಮಸ್ಯೆಯಿಂದ ಬಳಲುತ್ತಿದ್ದರೂ, ಅದನ್ನೇ ಸವಾಲಾಗಿ ಸ್ವೀಕರಿಸಿದ ಕೆ. ವೈ. ವೆಂಕಟೇಶ್ ಅವರು ದೇಶ ಕಂಡ ಅಪರೂಪದ ಪ್ಯಾರಾ ಅಥ್ಲೀಟ್ ಆಗಿದ್ದಾರೆ. 50ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತಂದಿರುವ ಇವರ ಸಾಧನೆಯನ್ನು ಗುರುತಿಸಿ ಕೇಂದ್ರ ಸರ್ಕಾರವು 2021ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.ಇದೀಗ ಅವರ ಮೇಲೆಯೂ ಈ ವಂಚಕರ ಜಾಲದ ದೃಷ್ಟಿ ಬಿದ್ದಿದೆ. ಕಳೆದ ಕೆಲವು ದಿನಗಳ ಹಿಂದೆ ಮಧ್ಯರಾತ್ರಿ ಸುಮಾರು 12 ಗಂಟೆಯ ಅವಧಿಯಲ್ಲಿ ಕೆ. ವೈ. ವೆಂಕಟೇಶ್ ಅವರ ಮೊಬೈಲ್ ಸಂಖ್ಯೆಗೆ ನಿರಂತರವಾಗಿ ಒಟಿಪಿ (OTP) ಸಂದೇಶಗಳು ಬರತೊಡಗಿವೆ. ಅಸಮಯದಲ್ಲಿ ಸತತವಾಗಿ ಒಟಿಪಿ ಬರುತ್ತಿರುವುದನ್ನು ಕಂಡು ಅನುಮಾನಗೊಂಡ ವೆಂಕಟೇಶ್ ಅವರು, ಮಾರನೇ ದಿನ ಬೆಳಗ್ಗೆ ತಕ್ಷಣವೇ ತಮ್ಮ ಬ್ಯಾಂಕ್ ಶಾಖೆಗೆ ಭೇಟಿ ನೀಡಿದ್ದಾರೆ.ಬ್ಯಾಂಕ್‌ಗೆ ತೆರಳಿ ತಮ್ಮ ಖಾತೆಯ ವಿವರಗಳನ್ನು (Account Statement) ಪರಿಶೀಲಿಸಿದಾಗ ವೆಂಕಟೇಶ್ ಅವರಿಗೆ ತೀವ್ರ ಆಘಾತ ಕಾದಿತ್ತು. ಅವರ ಗಮನಕ್ಕೆ ಬಾರದೆಯೇ ಖಾತೆಯಿಂದ ಹಂತ ಹಂತವಾಗಿ ಒಟ್ಟು 90 ಸಾವಿರ ರೂಪಾಯಿ ಹಣ ಕಟ್ ಆಗಿರುವುದು ಪತ್ತೆಯಾಗಿದೆ. ಯಾವುದೇ ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳದಿದ್ದರೂ ಸಹ ಸೈಬರ್ ಕಳ್ಳರು ಕೆಲವೊಂದು ತಂತ್ರಗಳನ್ನು ಬಳಸಿಕೊಂಡು ಖಾತೆಯಿಂದ ಹಣ ವರ್ಗಾವಣೆ ಮಾಡಿಕೊಂಡಿರುವುದು ಗೊತ್ತಾಗಿದೆ.ಈ ಸೈಬರ್ ದರೋಡೆಗೆ ಸಂಬಂಧಿಸಿದಂತೆ ಕೆ. ವೈ. ವೆಂಕಟೇಶ್ ಅವರು ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಂಚಕರ ಬ್ಯಾಂಕ್ ಖಾತೆ ಹಾಗೂ ಐಪಿ ಅಡ್ರೆಸ್ ಪತ್ತೆಹಚ್ಚಲು ಸೈಬರ್ ಕ್ರೈಮ್ ವಿಭಾಗದ ನೆರವು ಪಡೆದು ತನಿಖೆ ಚುರುಕುಗೊಳಿಸಿದ್ದಾರೆ.

    Post Views: 16

    karnataka PoliceInvestigation

    Related Posts

    ಡಬಲ್ ಡೆಕ್ಕರ್ ಬಸ್ ಪಲ್ಟಿ: ಪೊಲೀಸ್ ಸಿಬ್ಬಂದಿ ಸೇರಿ ಹಲವರು ಆಸ್ಪತ್ರೆಗೆ ದಾಖಲು

    May 26, 2026

    ಕರಾವಳಿಯನ್ನೇ ಬೆಚ್ಚಿಬೀಳಿಸಿದ ಭೀಕರ ಪೋಕ್ಸೋ ಪ್ರಕರಣ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ – ತೆಕ್ಕಟ್ಟೆಯ ಇಬ್ಬರು ಕಾಮುಕರ ಬಂಧನ

    May 26, 2026

    ‘ಇದು ನಗುವ ವಿಷಯವೇ?’ – ಬಾಲಕಿ ಕೊಲೆ ಕೇಸ್‌ನಲ್ಲಿ ಅಧಿಕಾರಿಗಳ ವರ್ತನೆಗೆ ತೀವ್ರ ಟೀಕೆ

    May 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.