Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬ್ಯಾಂಕ್ ಆಫ್ ಬರೋಡಾ ವಲಯ ಕಛೇರಿ ಮಂಗಳೂರಿನಲ್ಲಿ 20 ನೇ ಕನ್ನಡ ರಾಜ್ಯೋತ್ಸವ
    ಇತ್ತೀಚಿನ ಸುದ್ದಿ

    ಬ್ಯಾಂಕ್ ಆಫ್ ಬರೋಡಾ ವಲಯ ಕಛೇರಿ ಮಂಗಳೂರಿನಲ್ಲಿ 20 ನೇ ಕನ್ನಡ ರಾಜ್ಯೋತ್ಸವ

    November 11, 2025
    Share

    20 ನೇ ಕನ್ನಡ ರಾಜ್ಯೋತ್ಸವವನ್ನು, ಬ್ಯಾಂಕ್ ಆಫ್ ಬರೋಡಾ ವಲಯ ಕಛೇರಿ, ಮಂಗಳೂರಿನಲ್ಲಿ ದಿನಾಂಕ 02.11.2025
    ರಂದು ಆಚರಿಸಲಾಯಿತು.

    ಕಾರ್ಯಕ್ರಮಕ್ಕೆ ಅಧ್ಯಕ್ಷರಾಗಿ ವಲಯ ಕಛೇರಿಯ ಮಹಾಪ್ರಬಂಧಕರಾದ ಶ್ರೀ ರಾಜೇಶ್ ಖನ್ನಾರವರು ಹಾಗೂ ಉಪಾಧ್ಯಕ್ಷರಾಗಿ ವಲಯ ಕಚೇರಿಯ ಉಪಮಹಾಪ್ರಬಂಧಕರಾದ ಶ್ರೀ ರಮೇಶ್ ಕನ್ನಾಡೆ ರವರು ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಡಾ. ವಸಂತ್ ಕುಮಾರ್ ಪೆರ್ಲರವರು ಹಾಗೂ ಹರೇಕಳ ಹಾಜಬ್ಬರವರು ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಿದರು. ಕವಿ, ಸಾಹಿತಿ ವಿದ್ವಾಂಸರು, ಸಾಹಿತ್ಯ ಸಂಘಟಕರು ಹಾಗೂ ಮಂಗಳೂರು ಆಕಾಶವಾಣಿಯ ನಿರ್ದೇಶಕರಾಗಿ ನಿವೃತ್ತರಾಗಿರುವ ಡಾ. ವಸಂತ್ ಕುಮಾರ್ ಪೆರ್ಲರವರು ಕರ್ನಾಟಕದ ಇತಿಹಾಸವನ್ನು ಚೊಕ್ಕವಾಗಿ ಪ್ರಸ್ತಾಪಿಸಿದರು. ಅವರು ಆಂಗ್ಲ ಭಾಷೆಯನ್ನು ಹೋಲಿಸಿದರೆ ಕನ್ನಡ ಬಳಕೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ, ಆದ್ದರಿಂದ ಕನ್ನಡವನ್ನು ಹೆಚ್ಚಾಗಿ ಬೆಳೆಸಬೇಕು ಎಂದು ಎಲ್ಲರಿಗೂ ಮನವಿ ಮಾಡಿದರು.

    ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಶ್ರೀ ಹರೇಕಳ ಹಾಜಬ್ಬರವರು ಬೆಳೆದುಬಂದ ಮಾರ್ಗ, ಅವರು ಎದುರಿಸಿದ ಸವಾಲಿನ ಬಗ್ಗೆ ಸಭೆಯೊಂದಿಗೆ ಹಂಚಿಕೊಂಡರು. ಅವರು ತಮ್ಮ ಗ್ರಾಮದಲ್ಲಿ ಕಿತ್ತಳೆ ಹಣ್ಣು ಮಾರಾಟದಿಂದ ಬಂದ ಹಣದ ಜೊತೆಗೆ ದಾನದ ಮೂಲಕ ಧನ ಸಂಗ್ರಹಿಸಿ ಸರಕಾರಿ ಶಾಲೆ ಕಟ್ಟಲು 1.22 ಎಕರೆ ಜಮೀನು ನೀಡಿದ್ದಾರೆ. ಅವರ ಈ ಸಾಧನೆಯನ್ನು ಕಂಡು ಕೇಂದ್ರ ಸರಕಾರ 2020ರ ಪದ್ಮಶ್ರೀ ನೀಡಿ ಗೌರವಿಸಿದೆ. ಈ ಸಾಧನೆಯ ಹಿಂದೆ ಹಲವು ರಾಷ್ಟ್ರೀಕೃತ ಬ್ಯಾಂಕ್ಗಳು ಸಹಾಯ ಮಾಡಿವೆ ಎಂದು ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

    ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಈ ಸಂದರ್ಭದಲ್ಲಿ ಕರ್ನಾಟಕ ಹಾಗೂ ಕನ್ನಡದ ಮಹತ್ವದ ಬಗ್ಗೆ ಮಾತನಾಡಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ. ವಸಂತ್ ಕುಮಾರ್ ಪೆರ್ಲ ಹಾಗೂ ಹರೇಕಳ ಹಾಜಬ್ಬರವರಿಗೆ ಸನ್ಮಾನ ಮಾಡಿದರು.
    ಸಂಸ್ಥೆಯ ಸಾಮಾಜಿಕ ಹೊಣೆಗಾರಿಕೆ (CSR) ಅಡಿಯಲ್ಲಿ ಬ್ಯಾಂಕ್ ಆಫ್ ಬರೋಡಾ ಗಣಕಯಂತ್ರಗಳನ್ನು (ಕಂಪ್ಯೂಟರ್ ಗಳನ್ನು ) ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹೈಸ್ಕೂಲ್, ಹರೇಕಳಕ್ಕೆ ಕಿರು ಕಾಣಿಕೆಯಾಗಿ ಹಾಜಬ್ಬರವರಿಗೆ ನೀಡಿದೆ.

    Post Views: 94

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.