Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ- ಮೂವರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ- ಮೂವರು ಆರೋಪಿಗಳ ಬಂಧನ

    January 21, 2025
    Share

    ಮಂಗಳೂರು: ಕೋಟೆಕಾರು ವ್ಯವಸಾಯ ಸಹಕಾರಿ ಸಂಘದ ಕೆ.ಸಿ.ರೋಡ್ ತಲಪಾಡಿ ಶಾಖೆ ಕಚೇರಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ.

    ಬಂಧಿತರನ್ನು ತಮಿಳುನಾಡಿನ ತಿರುನಲ್ವೇಲಿಯ ಪದ್ಮನೇರಿ ಎಂಬಲ್ಲಿ ಮುರುಗಂಡಿ ದೇವರ್, ಯೋಶುವಾ ರಾಜೇಂದ್ರನ್ ಮತ್ತು ಕಣ್ಣನ್ ಮಣಿ(36) ಎಂದು ಗುರುತಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಸಹಕಾರಿ ಸಂಘದಿಂದ ಸುಮಾರು 4 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ದರೋಡೆ ಮಾಡಿ ಕೇರಳ ಮೂಲಕ ತಮಿಳುನಾಡಿಗೆ ಆರೋಪಿಗಳು ಪರಾರಿಯಾಗಿದ್ದರು. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿ ದರೋಡೆಗೆ ಬಳಸಿದ ಕಾರು, ಮಾರಕಾಯುಧಗಳನ್ನು ವಶ ಪಡಿಸಿಕೊಂಡಿದ್ದಾರೆ.

    ದರೋಡೆ ಪ್ರಕರಣ ಸಂಬಂಧಿಸಿ ಒಟ್ಟು ಎಂಟು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಮುಂಬೈ, ಕೇರಳ, ತಮಿಳುನಾಡಿಗೆ ಪೊಲೀಸರು ತೆರಳಿದ್ದು, ಮಾಹಿತಿ ಆಧರಿಸಿ ಕಾರನ್ನು ಬೆನ್ನಟ್ಟಿ ಹೋಗಿದ್ದರು. ಈ ವೇಳೆ, ತಿರುನಲ್ವೇಲಿಯನಲ್ಲಿ ಮೂವರು ಸಿಕ್ಕಿಬಿದ್ದಿದ್ದಾರೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ. ಆರೋಪಿಗಳಿಗೆ ಸ್ಥಳೀಯರು ಸಹಕಾರ ನೀಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

    ಮುಂಬೈಯಿಂದ ಮಾಹಿತಿ ಕಲೆ ಹಾಕಿ ತಮಿಳುನಾಡಿಗೆ ತೆರಳಿ ಬಂಧನ ಮಾಡಿದ್ದೇವೆ. ಮುರುಗಂಡಿ ದೇವರ್ ಈ ಪ್ರಕರಣದ ಮುಖ್ಯ ಕಿಂಗ್‌ಪಿನ್, ಬಂಧಿತರಿಂದ ಫಿಯೆಟ್ ಕಾರ್ ವಶಪಡಿಸಿಕೊಂಡಿದ್ದೇವೆ. ದರೋಡೆಗೆ ಮಹಾರಾಷ್ಟ್ರ ಮೂಲದ ಫಿಯೆಟ್ ಕಾರ್ ಬಳಸಿದ್ದರು.

    Post Views: 274

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.