ಬಂಟ್ವಾಳ: ಇನ್ನೋವಾ ಕಾರು ಅಪಘಾತಕ್ಕೀಡಾದ ಬಂಟ್ವಾಳದ ನಾರಾಯಣ ಗುರು ವೃತ್ತಕ್ಕೆ ಎಸ್ಪಿ ಡಾ. ಅರುಣ್ ಅವರು ಭೇಟಿ ನೀಡಿದರು.
ಈ ವೇಳೆ ಘಟನಾಸ್ಥಳದಲ್ಲಿ ಪರಿಶೀಲನೆ ನಡೆಸಿದ ಎಸ್ಪಿ ಅವರು, ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡರು. ಬಳಿಕ ಪೊಲೀಸರಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಇಂದು ಮುಂಜಾನೆ ನಾರಾಯಣ ಗುರು ವೃತ್ತಕ್ಕೆ ಇನ್ನೋವಾ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದರು. ನಾಲ್ವರು ಗಂಭೀರ ಗಾಯಗೊಂಡಿದ್ದು, ಮತ್ತಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರು.




