ಮಂಗಳೂರು: ಜಿಲ್ಲಾಧಿಕಾರಿಯ ಬಳಿಯೇ ಭಿಕ್ಷುಕನೊಬ್ಬ ಭಿಕ್ಷೆ ಬೇಡಿದ ಪ್ರಸಂಗವೊಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಸಭೆಯ ಹಿನ್ನೆಲೆಯಲ್ಲಿ ಮೇ.16ರಂದು ದ.ಕ ಜಿಲ್ಲಾಧಿಕಾರಿ ಮುಗಿಲನ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು. ಆದಿಶೇಷ ವಸತಿ ಗೃಹದ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಹೊರಬರುವ ವೇಳೆ ಆದಿ ಸುಬ್ರಹ್ಮಣ್ಯದ ಬಳಿ ಭಿಕ್ಷುಕ ಎದುರುಗೊಂಡಿದ್ದಾನೆ. ಜಿಲ್ಲಾಧಿಕಾರಿಯವರು ಕಾರಿನತ್ತ ಬರುತ್ತಿದ್ದಂತೆ ಭಿಕ್ಷುಕ ಕೈ ಚಾಚಿದರೂ ಗಮನಿಸಲಿರಲಿಲ್ಲ. ಹೀಗಾಗಿ, ಕಾರಲ್ಲಿ ಕುಳಿತ ಬಳಿಕವೂ ಮತ್ತೆ ಶಾಲು ಒಡ್ಡಿದ್ದಾನೆ. ಈ ವೇಳೆ ಡಿಸಿಯವರು ಕೈಸನ್ನೆಮೂಲಕವೇ ಇಲ್ಲವೆಂದು ಸೂಚಿಸಿದಾಗ ಮತ್ತೆ ಕೈಚಾಚಿದ್ದು ಈ ವೇಳೆ ಎರಡು ಕೈ ಜೋಡಿಸಿ ನಮಸ್ಕರಿಸಿದ್ದಾನೆ. ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)