Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ ಕೊಲೆ ಪ್ರಕರಣ: ಮನೋರೋಗದಿಂದ ಬಳಲುತ್ತಿದ್ದ ಆರೋಪಿಗೆ ಜೈಲುವಾಸವಿಲ್ಲ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ ಕೊಲೆ ಪ್ರಕರಣ: ಮನೋರೋಗದಿಂದ ಬಳಲುತ್ತಿದ್ದ ಆರೋಪಿಗೆ ಜೈಲುವಾಸವಿಲ್ಲ

    December 24, 2025
    Share

    ಬೆಳ್ತಂಗಡಿ: ಪತಿಯನ್ನೇ ಕೊಂದ ಪತ್ನಿಯ ಪ್ರಕರಣದ ಆರೋಪಿ ಎಲಿಯಮ್ಮ ನ ಕೃತ್ಯ ಸಾಬೀತಾದರೂ, ಆಕೆ ‘Delusional Disorder’ ನಿಂದ ಬಳಲುತ್ತಿದ್ದ ಕಾರಣ ಅಪರಾಧ ಮುಕ್ತಗೊಳಿಸಿದ ಘಟನೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ -1 (ಪೋಕ್ಸೋ) ದಲ್ಲಿ ನಡೆದಿದೆ. ನ್ಯಾಯಾಧೀಶರಾದ  ಮೋಹನ ಜೆ.ಎಸ್. ಅವರು ತೀರ್ಪು ನೀಡಿದ್ದಾರೆ.

    2022 ರ ಜುಲೈ 5 ರಂದು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ ಬೆಳಗಿನ ಜಾವ 5:30 ಕ್ಕೆ ಯೋಹಾನನ್ ಎಂಬುವರನ್ನು ಅವರ ಪತ್ನಿ ಎಲಿಯಮ್ಮ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದರು. ಬೆಳ್ತಂಗಡಿ ಪೊಲೀಸರು ದಾಖಲಿಸಿದ ಈ ಪ್ರಕರಣದ ವಿಚಾರಣೆ ವೇಳೆ, ಆರೋಪಿ ಎಲಿಯಮ್ಮ “ತಾನು ಕೊಂದಿರುವುದು ಹೌದು” ಎಂದು ಒಪ್ಪಿಕೊಂಡಿದ್ದರು.

    ಆದರೆ, ಕೃತ್ಯದ ಗಂಭೀರತೆಯನ್ನು ಪರಿಗಣಿಸಿ ನ್ಯಾಯಾಲಯ ಸಾಕ್ಷಿ ವಿಚಾರಣೆಯನ್ನು ಮುಂದುವರೆಸಿತ್ತು. ಸಾಕ್ಷಿದಾರರು ಆಕೆಯ ವಿರುದ್ಧ ಸಾಕ್ಷಿ ನುಡಿದಿದ್ದರು. ವಿಚಾರಣೆಯ ಕ್ರಾಸ್ ಎಕ್ಸಾಮಿನೇಷನ್ ಹಂತದಲ್ಲಿ, ಆರೋಪಿ ಪರ ವಕೀಲರಾದ ವಿಕ್ರಮ್ ರಾಜ್ ಎ. ಅವರು ಆರೋಪಿಯ ವೈದ್ಯಕೀಯ ಹಿನ್ನೆಲೆಯನ್ನು ಅನಾವರಣಗೊಳಿಸಿದರು. ಎಲಿಯಮ್ಮ ಅವರು ದೀರ್ಘಕಾಲದಿಂದ ಮಾನಸಿಕ ಅಸ್ವಸ್ಥತೆ ಮತ್ತು ಭ್ರಮೆಗಳಿಂದ (Delusional Disorder) ಬಳಲುತ್ತಿದ್ದರು ಎಂಬುದು ಸಾಬೀತಾಯಿತು.

    “ಮಾನಸಿಕ ಅಸ್ವಸ್ಥತೆಯ ಕಾರಣದಿಂದಾಗಿ, ತಾನು ಮಾಡುತ್ತಿರುವ ಕೃತ್ಯವು ತಪ್ಪು ಅಥವಾ ಕಾನೂನು ಬಾಹಿರ ಎಂದು ತಿಳಿಯುವ ಸ್ಥಿತಿಯಲ್ಲಿ ಆರೋಪಿ ಇರಲಿಲ್ಲ. ಆದ್ದರಿಂದ ಆಕೆ ಅಪರಾಧ ಎಸಗಿಲ್ಲ,” ಎಂದು ವಕೀಲರು ವಾದ ಮಂಡಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಧೀಶರಾದ ಮೋಹನ ಜೆ.ಎಸ್. ಇಂದು ತೀರ್ಪನ್ನು ಪ್ರಕಟಿಸಿದ್ದಾರೆ. ಕೊಲೆ ಕೃತ್ಯ ಸಾಬೀತಾಗಿದೆ: ಆದರೆ ಆರೋಪಿ ಅಪರಾಧಿಕ ಹೊಣೆಯಿಂದ ಮುಕ್ತವಾಗಿದ್ದಾರೆ.

    ನ್ಯಾಯಾಲಯವು ಜೈಲು ಅಧೀಕ್ಷಕರಿಗೆ ಆದೇಶ ನೀಡಿ, ಆರೋಪಿಯನ್ನು ನಿಮ್ಹಾನ್ಸ್‌ಗೆ (NIMHANS) ಕಳುಹಿಸಿ, ಆಕೆ ಬಿಡುಗಡೆಗೆ ಯೋಗ್ಯಳೇ ಮತ್ತು ಆಕೆಯಿಂದ ಸಮಾಜಕ್ಕೆ ಅಥವಾ ಆಕೆಗೆ ಅಪಾಯವಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.  ಆರೋಪಿ ಪರ ನ್ಯಾಯವಾದಿಗಳಾದ ವಿಕ್ರಮ್ ರಾಜ್ ಎ ಮತ್ತು ಜೀವನ್ ಎ.ಎಂ. ವಾದ ಮಂಡಿಸಿದ್ದರು.

    Post Views: 353

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.