Facebook Twitter Instagram
    Sunday, June 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ರಾಮ ಮಂದಿರ ದೇಣಿಗೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎಸ್‌ಐಟಿ ತನಿಖೆಯಲ್ಲಿ ಹೊಸ ಮಾಹಿತಿ ಬಹಿರಂಗ
    ಕ್ರೈಂ ಸ್ಟೋರಿ

    ರಾಮ ಮಂದಿರ ದೇಣಿಗೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎಸ್‌ಐಟಿ ತನಿಖೆಯಲ್ಲಿ ಹೊಸ ಮಾಹಿತಿ ಬಹಿರಂಗ

    June 28, 2026
    Share

    ಬೆಂಗಳೂರು: ರಾಮಂದಿರದ  ದೇಣಿಗೆಯಲ್ಲಿ ಕೋಟಿ ಕೋಟಿ ಲೂಟಿ ಕೇಸ್​ನ ತನಿಖೆ ಚುರುಕುಗೊಂಡಿದೆ. ಎಸ್​ಐಟಿ (SIT) ಅಧಿಕಾರಿಗಳು ಎರಡು ಹಂತಗಳಲ್ಲಿ ಇಡೀ ಘಟನೆಯ ಬಗ್ಗೆ ಕೂಲಂಕಷ ತನಿಖೆ ಮುಂದುವರಿಸಿದ್ದಾರೆ. ಎಸ್​ಐಟಿ ಪ್ರಾಥಮಿಕ ವರದಿಯ ಇನ್​ಸೈಡ್ ಮಾಹಿತಿ ಟಿವಿ9ಗೆ ಲಭ್ಯವಾಗಿದೆ. ಭದ್ರತಾ ವ್ಯವಸ್ಥೆಯಲ್ಲಿ ಗಂಭೀರ ದೋಷಗಳಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಎಸ್​​ಐಟಿ ವರದಿಯಲ್ಲಿ ಸ್ಫೋಟಕ ಅಂಶ ಬೆಳಕಿಗೆ

    ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣದ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ಎಸ್​​ಐಟಿ ವರದಿಯಲ್ಲಿ ಭದ್ರತಾ ವ್ಯವಸ್ಥೆ ಬಗ್ಗೆ ಗಂಭೀರ ಆರೋಪ ಮಾಡಲಾಗಿದೆ. ನಿಯಂತ್ರಣ ಕೊಠಡಿಯ ಉಸ್ತುವಾರಿ ಸೇರಿದಂತೆ 40 ಜನರು ತಪ್ಪಿತಸ್ಥರೆಂದು ಎಸ್‌ಐಟಿ ತನಿಖೆಯಲ್ಲಿ ಕಂಡುಬಂದಿದೆ.

    ನಿಯಂತ್ರಣ ಕೊಠಡಿಯ ಉಸ್ತುವಾರಿ, ನಿಯಂತ್ರಣ ಕೊಠಡಿಯೊಳಗೆ ನಿಯೋಜಿಸಲಾದ ಸಿಬ್ಬಂದಿ, ಎಣಿಕೆ ಕೊಠಡಿಯ ಹೊರಗೆ ನಿಯೋಜಿಸಲಾದ ಖಾಸಗಿ ಭದ್ರತಾ ಸಿಬ್ಬಂದಿ, ಪೊಲೀಸ್ ಮತ್ತು ಪಿಎಸಿ ಸಿಬ್ಬಂದಿ ಸೇರಿದ್ದಾರೆ. ಜವಾಬ್ದಾರಿಗಳನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಲಾಗಿದೆ. ಸಿಸಿಟಿವಿ ಮತ್ತು ಭದ್ರತಾ ವ್ಯವಸ್ಥೆಯಲ್ಲಿ ಬಹು ಹಂತಗಳಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಲೋಪವಾದ ಹಿನ್ನೆಲೆ ಭಾರೀ ಅಕ್ರಮ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಪ್ರತಿಯೊಬ್ಬ ವ್ಯಕ್ತಿಯನ್ನು ಇದೀಗ ಎಸ್​ಐಟಿ ಪ್ರತ್ಯೇಕವಾಗಿ ತನಿಖೆ ಮಾಡುತ್ತಿದೆ.

    ಶಾಸಕ ಪ್ರಭು ಚೌಹಾಣ್, ಆರ್​ಎಸ್​​ಎಸ್​ನ ಗೋಪಾಲ್ ವಿರುದ್ಧ ದೂರು

    ಇನ್ನು ಎಸ್​ಐಟಿ ತನಿಖೆ ಮಧ್ಯೆ ಬೀದರ್‌ ಜಿಲ್ಲೆಯ ಔರಾದ್‌ನ ದೀಪಕ್ ಪಾಟೀಲ್‌ ಎಂಬುವವರಿಂದ ಎಸ್ಐಟಿ ಮುಖ್ಯಸ್ಥ ವಿಜಯ್ ವಿಶ್ವಾಸ್ ಪಂತ್‌ಗೆ ದೂರು ಸಲ್ಲಿಸಿದ್ದಾರೆ. ಮಂದಿರ ಹೆಸರಲ್ಲಿ ಲಕ್ಷಾಂತರ ದೇಣಿಗೆ ಸಂಗ್ರಹಿಸಿದ್ದಾರೆ ಎಂದು ಶಾಸಕ ಪ್ರಭು ಚೌಹಾಣ್, ಆರ್​ಎಸ್​​ಎಸ್​ನ ಗೋಪಾಲ್ ವಿರುದ್ಧ ದೂರು ನೀಡಿದ್ದಾರೆ.

    ಈ ಹಣವನ್ನು ರಾಮ ಮಂದಿರಕ್ಕೆ ತಲುಪಿಸಿದ ಬಗ್ಗೆ ಖಾತರಿಯಿಲ್ಲ. ಗುತ್ತಿಗೆದಾರರಿಂದ 5 ಲಕ್ಷದಿಂದ ದೊಡ್ಡ ಮೊತ್ತದವರೆಗೆ ಸಂಗ್ರಹಿಸಲಾಗಿದ್ದ ಹಣಕ್ಕೆ ಯಾವುದೇ ದಾಖಲಾತಿ ಕೂಡ ನೀಡಿಲ್ಲ ಎಂದಿದ್ದಾರೆ. ಅಯೋಧ್ಯೆ ರಾಮಮಂದಿರ ಹೆಸರಿನಲ್ಲಿ ಸಂಗ್ರಹಿಸಿದ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿರುವ ಬಗ್ಗೆ ದಾಖಲೆಗಳಿವೆ. ಎಸ್ಐಟಿ ಮುಂದೆ ದಾಖಲೆಗಳನ್ನು ಸಲ್ಲಿಸಲು ಸಿದ್ಧರಿದ್ದೇವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    Post Views: 1

    karnataka PoliceInvestigation

    Related Posts

    ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣ; ರಾತ್ರೋರಾತ್ರಿ ನಾಲ್ವರು ಆರೋಪಿಗಳ ಬಂಧನ

    June 28, 2026

    ನಕಲಿ ನಂಬರ್ ಪ್ಲೇಟ್ ಜಾಲ ಪತ್ತೆ; ಬೆಂಗಳೂರಿನಲ್ಲಿ 12 ಮಿನಿಬಸ್‌ಗಳು ಜಪ್ತಿ, ಇಬ್ಬರ ಬಂಧನ

    June 28, 2026

    2005ರ ಕಳ್ಳತನ ಪ್ರಕರಣ: 16 ವರ್ಷಗಳ ಬಳಿಕ ಆರೋಪಿಯ ಬಂಧನ

    June 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ರಾಮ ಮಂದಿರ ದೇಣಿಗೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎಸ್‌ಐಟಿ ತನಿಖೆಯಲ್ಲಿ ಹೊಸ ಮಾಹಿತಿ ಬಹಿರಂಗ

    June 28, 2026

    ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣ; ರಾತ್ರೋರಾತ್ರಿ ನಾಲ್ವರು ಆರೋಪಿಗಳ ಬಂಧನ

    June 28, 2026

    ನಕಲಿ ನಂಬರ್ ಪ್ಲೇಟ್ ಜಾಲ ಪತ್ತೆ; ಬೆಂಗಳೂರಿನಲ್ಲಿ 12 ಮಿನಿಬಸ್‌ಗಳು ಜಪ್ತಿ, ಇಬ್ಬರ ಬಂಧನ

    June 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.