Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ : ಸಿಎಂ ಬೊಮ್ಮಾಯಿ ಘೋಷಣೆ
    ಇತ್ತೀಚಿನ ಸುದ್ದಿ

    BIGG NEWS : ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ : ಸಿಎಂ ಬೊಮ್ಮಾಯಿ ಘೋಷಣೆ

    March 22, 2023
    Share

    ಬಾಗಲಕೋಟೆ : ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಪಿಯುಸಿ, ಪದವಿ ವಿದ್ಯಾರ್ಥಿಗ’ಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.

    ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಈ ಬಾರಿ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ .

    4 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುತ್ತೇವೆ ಎಂದು ಹೇಳಿದರು. ಸರ್ಕಾರಿ ಪಿಯು, ಡಿಗ್ರಿ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಇನ್ನು ಮುಂದೆ ಶುಲ್ಕವಿಲ್ಲದೇ ಪ್ರವೇಶ ಪಡೆಯಬಹುದು ಎಂದು ಸಿಎಂ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಿಸಿದ್ದರು.

    ಯಾವ ಮಕ್ಕಳು ಆರ್ಥಿಕ ಸ್ಥಿತಿಯಿಂದ ವಿದ್ಯಾಬ್ಯಾಸ ಸ್ಥಗಿತಗೊಳಿಸಬಾರದು ಎಂಬ ಹಿತದೃಷ್ಠಿಯಿಂದ ಈ ವರ್ಷದ ಬಜೆಟ್‍ನಲ್ಲಿ ಪಿಯುಸಿಯಿಂದ ಪದವಿವರೆಗೆ ಉಚಿತ ಶಿಕ್ಷಣ, ದುಡಿಯುವ ಹೆಣ್ಣು ಮಕ್ಕಳಿಗೆ ಉಚಿತ ಬಸ್‍ಪಾಸ್ ಸೌಲಭ್ಯ ಘೋಷಿಸಲಾಗಿದೆ. ದುಡಿಯುವ ವರ್ಗದಲ್ಲಿ, ಹೆಣ್ಣುಮಕ್ಕಳಲ್ಲಿ, ಯುವಕರಲ್ಲಿ ಶಕ್ತಿ ತುಂಬಿದಲ್ಲಿ ಅವರಲ್ಲಿರುವ ಕೊಳ್ಳುವ ಶಕ್ತಿ ಹೆಚ್ಚಾಗುತ್ತದೆ ಇದು ಬದಲಾವಣೆ ತರುವಂತಹ ಕೆಲಸವಾಗಿದೆ ಎಂದರು.

    ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ವಿವಿಧ ನೀರಾವರಿ ಯೋಜನೆಗಳಿಗೆ 28 ಸಾವಿರ ಕೋಟಿ ರೂ.ಗಳ ಅನುದಾನ ನೀಡಲಾಗಿದೆ. ಭೂಮಿ ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ದರ ನಿಗದಿ ಮಾಡಿ ಐತಿರ್ಪು ಹೊರಡಿಸಲಾಗಿದೆ. 10 ಸಾವಿರ ಸ್ತ್ರಿಶಕ್ತಿ ಸಂಘಗಳಿಗೆ 1 ಲಕ್ಷ ರೂ.ಗಳನ್ನು ನೀಡಿ 5 ಲಕ್ಷ ರೂ.ಗಳ ಯೋಜನೆ ರೂಪಿಸಿ ಉತ್ಪಾದನೆ ಮಾಡಿ ಮಾರುಕಟ್ಟೆ ಕಲ್ಪಿಸುವ ಮೂಲಕ ಸ್ವಾವಲಂಬಿಗಳನ್ನಾಗಿ ಮಾಡಲಾಗುತ್ತಿದೆ. ಅದೇ ರೀತಿ ಯುವಕರಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 2 ಯುವಕ ಸಂಘಕ್ಕೆ 5 ಲಕ್ಷ ರೂ.ಗಳನ್ನು ನೀಡಲಾಗುತ್ತಿದೆ. ಮಹಿಳೆ ಮತ್ತು ಯುವಕರು ರಾಜ್ಯದ ಎರಡು ಕನ್ಮಣಿಗಳಿದ್ದ ಹಾಗೆ ಎಂದರು

    Post Views: 250

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.