Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಜೆಟ್ ನಲ್ಲಿ ಬಿಲ್ಲವ ಸಮುದಾಯ ಕಡೆಗಣನೆ ; ಅಕ್ಷಿತ್ ಸುವರ್ಣ ಆಕ್ರೋಶ.!!!
    ಇತ್ತೀಚಿನ ಸುದ್ದಿ

    ಬಜೆಟ್ ನಲ್ಲಿ ಬಿಲ್ಲವ ಸಮುದಾಯ ಕಡೆಗಣನೆ ; ಅಕ್ಷಿತ್ ಸುವರ್ಣ ಆಕ್ರೋಶ.!!!

    February 18, 2023
    Share

    ಮಂಗಳೂರು: ರಾಜ್ಯ ಬಜೆಟ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಹೇಳಿ ಬಿಲ್ಲವ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸವನ್ನು ಮುಖ್ಯಮಂತ್ರಿ ಸಹಿತ ರಾಜ್ಯದ ಬಿಲ್ಲವ ಸಚಿವರು ಮಾಡಿದ್ದಾರೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.

    ಇತ್ತೀಚೆಗೆ ಬಿಲ್ಲವ ಸಮುದಾಯದ ಮುಖಂಡರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ವೇಳೆ ಮುಂದಿನ ಬಜೆಟ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಘೋಷಣೆ ಮಾಡುವುದಾಗಿ ಹೇಳಿದ್ದರು ಇದಕ್ಕೆ ಜಿಲ್ಲೆಯ ಬಿಲ್ಲವ ಶಾಸಕರು, ಸಚಿವರೂ ಕೂಡ ಸಾಕ್ಷಿಯಾಗಿದ್ದರು ಆದರೆ ನಿನ್ನೆ ಮಂಡಿಸಿದ ಬಜೆಟ್ ನಲ್ಲಿ ಇದರ ಬಗ್ಗೆ ಚಕಾರವೆತ್ತದಿರುವುದು ಸಮುದಾಯಕ್ಕೆ ಬಿಜೆಪಿ ಸರಕಾರ ಮಾಡಿದ ದ್ರೋಹವಾಗಿದೆ.

    ರಾಜ್ಯ ಸರ್ಕಾರ ಮಾಡಿದ ಈ ಮೋಸಕ್ಕೆ ಮುಂದಿನ ದಿನಗಳಲ್ಲಿ ಬಿಲ್ಲವ ಸಮುದಾಯ ತಕ್ಕ ಉತ್ತರ ನೀಡುತ್ತದೆ. ಮುಖ್ಯಮಂತ್ರಿಯವರು ಮಂಡಿಸಿದ ಬಜೆಟ್ ನಲ್ಲಿ ಬಿಲ್ಲವ ಸಮುದಾಯ ಮಾತ್ರವಲ್ಲದೆ ಇತರ ಸಮುದಾಯಗಳಾದ ಮೊಗವೀರ ಹಾಗೂ ಹಿಂದುಳಿದ ಸಮುದಾಯಗಳಾಗಲಿ ಯಾರ ಅಭಿವೃದ್ಧಿಗೆ ಬೇಕಾಗುವ ಯಾವುದೇ ಯೋಜನೆಗಳನ್ನು ರೂಪಿಸುವಲ್ಲಿ ವಿಫಲರಾಗಿದ್ದಾರೆ.

    ಉದ್ಯೋಗದ ಅವಕಾಶಗಳು ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಉದ್ಯೋಗ ಖಾತರಿ ಯೋಜನೆಯನ್ನು ವಿಸ್ತರಿಸದೆ ಇರುವುದು ಖಂಡನೀಯ.

    ರೈತ ಸಮುದಾಯ, ಕಾರ್ಮಿಕ ವರ್ಗವನ್ನು ಬಜೆಟ್ ನಲ್ಲಿ ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದ್ದು ಚುನಾವಣೆಯನ್ನು ಮುಂದಿಟ್ಟುಕೊಂಡು ಕೇವಲ ಭರವಸೆಗಳಿಗಷ್ಟೇ ಬಜೆಟ್ ಘೋಷಣೆಯನ್ನು ಸೀಮಿತಗೊಳಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 215

    Related Posts

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.