Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಟ್ಯಾಂಕ್ ನಲ್ಲಿ ಶವ ಪತ್ತೆ ಪ್ರಕರಣ- ಕೊಲೆ ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಟ್ಯಾಂಕ್ ನಲ್ಲಿ ಶವ ಪತ್ತೆ ಪ್ರಕರಣ- ಕೊಲೆ ಆರೋಪಿ ಅರೆಸ್ಟ್

    September 6, 2025
    Share

    ಮಂಗಳೂರು: ಸುರತ್ಕಲ್‌ ಬಳಿಯ ಮುಕ್ಕದ ಲೇಔಟ್‌ ಒಂದರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ರತುವಾ ಪರಂಪುರ್‌ ನಿವಾಸಿ ಮುಖೇಶ್‌ ಮಂಡಲ್‌ (27) ಎಂಬವರನ್ನು ಕೊಲೆ ಮಾಡಿ ಎಸ್‌ಟಿಪಿ ಟ್ಯಾಂಕ್ ನಲ್ಲಿ ಹಾಕಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ ಆರೋಪಿಯನ್ನು ಸುರತ್ಕಲ್‌ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ರತುವಾ ಬಾದೋ ಗ್ರಾಮದ ನಿವಾಸಿ ಲಕ್ಷ್ಮಣ್‌ ಮಂಡಲ್‌ ಯಾನೇ ಲಖನ್‌ (30) ಎಂದು ಗುರುತಿಸಲಾಗಿದೆ.

    ಮುಖೇಶ್‌ ಮಂಡಲ್‌ ಲೇ ಔಟ್‌ನಿಂದ ಜೂ.24ರಂದು ದಿಢೀರ್‌ ಕಣ್ಮರೆಯಾಗಿದ್ದು, ಈ ಬಗ್ಗೆ ಆತನ ಜತಗೆ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ ನಿವಾಸಿ ದೀಪಾಂಕರ್‌ ಜು.2ರಂದು ಸುರತ್ಕಲ್‌ ಠಾಣೆಗೆ ದೂರು ನೀಡಿದ್ದರು. ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

    ಈ ನಡುವೆ ಆ.21ರಂದು ಬೆಳಗ್ಗೆ 10 ಗಂಟೆಗೆ ಲೇಔಟ್‌ ಎಸ್‌ಟಿಪಿ ಟ್ಯಾಂಕ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಮುಖೇಶ್‌ ಮಂಡಲ್‌ನ ಮೃತ ದೇಹ ಪತ್ತೆಯಾಗಿತ್ತು. ಮುಖೇಶ್‌ನನ್ನು ಲಕ್ಷ್ಮಣ್‌ ಮಂಡಲ್‌ ಕೊಲೆ ಮಾಡಿ ಟ್ಯಾಂಕ್‌ಗೆ ಹಾಕಿ ಅದರ ಮುಚ್ಚಳವಾಗಿ ಫ್ಲೈ ವುಡ್‌ ಶೀಟನ್ನು ಮುಚ್ಚಿ ಕೊಲೆಯನ್ನು ಮರೆ ಮಾಚಲು ಯತ್ನಿಸಿದ್ದ. ಈ ಬಗ್ಗೆ ಚೇತನ್‌ ಎಂಬವರು ನೀಡಿದ ದೂರಿನಂತೆ ಸುರತ್ಕಲ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.

    ಎರಡು ತಂಡ ರಚನೆ ಆರೋಪಿ ಪತ್ತೆಗಾಗಿ ಠಾಣಾ ಪಿಎಸ್‌ಐ ಶಶಿಧರ ಶೆಟ್ಟಿ ಹಾಗೂ ಎಎಸ್‌ಐ ರಾಜೇಶ್‌ ಆಳ್ವಾ ಅವರ ತಂಡವನ್ನು ರಚಿಸಿ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿಗೆ ಕಳುಹಿಸಿಕೊಡಲಾಗಿತ್ತು. ಪಶ್ಚಿಮ ಬಂಗಾಳಕ್ಕೆ ತೆರಳಿದ್ದ ಶಶಿಧರ ಶೆಟ್ಟಿ ಅವರ ತಂಡ ಲಕ್ಷ್ಮಣ್‌ ಮಂಡಲ್‌ನನ್ನು ಬಂಧಿಸಿ ಠಾಣೆಗೆ ಕರೆತಂದಿತ್ತು. ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಮಾಡಿರುವ ಬಗ್ಗೆ ಬಾಯಿ ಬಿಟ್ಟಿದ್ದಾನೆ.

    ಜೂ.24ರಂದು ರಾತ್ರಿ 9 ಗಂಟೆಗೆ ಲೇಔಟ್‌ ನಲ್ಲಿ ನಿರ್ಮಾಣ ಹಂತದ ಕಟ್ಟಡದೊಳಗೆ ತಾನು ಮುಖೇಶ್‌ ಮಂಡಲ್‌ ಮದ್ಯಪಾನ ಮಾಡುತ್ತಿದ್ದೆವು. ಈ ವೇಳೆ ಆತ ನನ್ನ ಪತ್ನಿಯ ಅಶ್ಲೀಲ ವೀಡಿಯೋಗಳನ್ನು ಮೊಬೈಲ್‌ನಲ್ಲಿ ಸಂಗ್ರಹಿಸಿ ಇಟ್ಟಿರುವುದನ್ನು ತೋರಿಸಿದ್ದಾನೆ. ಇದರಿಂದ ಕೋಪಗೊಂಡು ಪಕ್ಕದ ರೂಮಿನಲ್ಲಿದ್ದ ಕಬ್ಬಿಣದ ಸರಳನ್ನು ತೆಗೆದುಕೊಂಡು ಬಂದು ಆತನ ತಲೆಗೆ ಹೊಡೆದು ಕೊಲೆ ಮಾಡಿದ್ದೇನೆ. ಬಳಿಕ ಪ್ರಕರಣವನ್ನು ಮುಚ್ಚಿ ಹಾಕುವ ಉದ್ದೇಶದಿಂದ ಅಲ್ಲೇ ಇದ್ದ ಎಸ್‌ಟಿಪಿ ಟ್ಯಾಂಕ್‌ ಒಳಗೆ ಹಾಕಿದ್ದೇನೆ ಎಂದು ತಪ್ಪು ಒಪ್ಪಿಕೊಂಡಿದ್ದಾನೆ.

    ಸೆ.4ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, 5 ದಿನ ಪೊಲೀಸ್‌ ಕಸ್ಟಡಿಗೆ ಪಡೆಯಲಾಗಿದೆ. ಆರೋಪಿ ಲಕ್ಷ್ಮಣ್‌ ಮಂಡಲ್‌ ಮೇಲೆ ಪಶ್ಚಿಮ ಬಂಗಾಳ ರಾಜ್ಯದ ರತುವಾ ಪೊಲೀಸ್‌ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ದಾಖಲಾಗಿವೆ.

    ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತ ಶ್ರೀಕಾಂತ್‌ ಕೆ. ಅವರ ಮಾರ್ಗದರ್ಶನದಲ್ಲಿ, ಸುರತ್ಕಲ್‌ ಪೊಲೀಸ್‌ ಠಾಣಾ ಪೊಲೀಸ್‌ ನಿರೀಕ್ಷಕ ಪ್ರಮೋದ್‌ ಕುಮಾರ್‌ ಪಿ. ನೇತೃತ್ವದಲ್ಲಿ ಪಿಎಸ್‌ಐಗಳಾದ ರಘುನಾಯಕ, ರಾಘವೇಂದ್ರ ನಾಯ್ಕ, ಜನಾರ್ದನ ನಾಯ್ಕ, ಶಶಿಧರ ಶೆಟ್ಟಿ, ಎಎಸ್‌ಐ ರಾಜೇಶ್‌ ಆಳ್ವಾ, ತಾರನಾಥ, ಹಾಗೂ ಸಿಬಂದಿ ಅಣ್ಣಪ್ಪ, ಉಮೇಶ್‌ ಕುಮಾರ್‌, ರಾಜೇಂದ್ರ ಪ್ರಸಾದ್‌, ಕಾರ್ತಿಕ್‌, ಮೋಹನ್‌ ಮತ್ತು ನಾಗರಾಜ್‌ ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

    Post Views: 122

    Related Posts

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.