Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಷೇರು ವಿವಾದದಿಂದ ಕುಟುಂಬವನ್ನೇ ನಾಶ ಮಾಡಿದ ಕಿರಿಯ ಸಹೋದರ
    ಇತ್ತೀಚಿನ ಸುದ್ದಿ

    ಷೇರು ವಿವಾದದಿಂದ ಕುಟುಂಬವನ್ನೇ ನಾಶ ಮಾಡಿದ ಕಿರಿಯ ಸಹೋದರ

    May 18, 2026
    Share

    ಪಾಟ್ನಾ: ಹಣದ ವ್ಯಾಮೋಹ ಮತ್ತು ಕೌಟುಂಬಿಕ ಕಲಹಕ್ಕೆ ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಅತ್ಯಂತ ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕಿರಿಯ ಸಹೋದರನೇ ತನ್ನ ಅಣ್ಣ, ಅತ್ತಿಗೆ ಹಾಗೂ ಅವರ ಇಬ್ಬರು ಮುಗ್ಧ ಮಕ್ಕಳನ್ನು ಉಸಿರುಗಟ್ಟಿಸಿ, ಚಾಕುವಿನಿಂದ ಇರಿದು ಕೊಂದಿದ್ದಾನೆ. ಅಷ್ಟಕ್ಕೇ ನಿಲ್ಲದ ಈತನ ಕ್ರೌರ್ಯ, ಸಾಕ್ಷ್ಯ ನಾಶಪಡಿಸಲು ನಾಲ್ವರ ಶವಗಳನ್ನು ತುಂಡು ತುಂಡಾಗಿ ಕತ್ತರಿಸಿ ಸೂಟ್‌ಕೇಸ್‌ ಹಾಗೂ ಚೀಲಗಳಲ್ಲಿ ತುಂಬಿ ವಿವಿಧ ನದಿ, ಕಾಲುವೆಗಳಿಗೆ ಎಸೆದಿದ್ದಾನೆ.

    ರಹಸ್ಯ ಬಯಲಾಗಿದ್ದು ಹೇಗೆ?

     ಮೇ 10 ರಂದು ಕೈಮೂರ್ ಜಿಲ್ಲೆಯ ನದಿಯೊಂದರ ಕೆಳಗೆ ಎರಡು ಶಂಕಾಸ್ಪದ ಸೂಟ್‌ಕೇಸ್‌ಗಳು ತೇಲುತ್ತಿದ್ದವು. ಪೊಲೀಸರು ಇವುಗಳನ್ನು ವಶಕ್ಕೆ ಪಡೆದು ತೆರೆದಾಗ, ಅದರಲ್ಲಿ ಕತ್ತರಿಸಿದ ಮಾನವ ದೇಹದ ಭಾಗಗಳು ಪತ್ತೆಯಾಗಿದ್ದವು. ಆರಂಭದಲ್ಲಿ ಇವು 3 ರಿಂದ 4 ಜನರ ಶವದ ಅವಶೇಷಗಳಿರಬಹುದು ಎಂದು ಪೊಲೀಸರು ಶಂಕಿಸಿದ್ದರು. ನಂತರ ಮೇ 12 ರಂದು ರಾಮಗಢದ ಕಾಲುವೆಯ ಬಳಿ ಇನ್ನು ಎರಡು ಚೀಲಗಳಲ್ಲಿ ಹೆಚ್ಚಿನ ಭಾಗಗಳು ಪತ್ತೆಯಾಗಿದ್ದವು. ತನಿಖೆ ಆರಂಭಿಸಿದ ವಿಶೇಷ ತನಿಖಾ ತಂಡ (SIT), ಇವು ದಹರಕ್ ಗ್ರಾಮದ ಕೃಷ್ಣ ಮುರಾರಿ ಗುಪ್ತಾ ಅವರ ಕುಟುಂಬದ ಅವಶೇಷಗಳು ಎಂಬುದನ್ನು ಪತ್ತೆಹಚ್ಚಿತ್ತು.

    ಪೊಲೀಸರು ಕೃಷ್ಣ ಮುರಾರಿ ಅವರ ಮನೆಗೆ ಹೋದಾಗ ಮನೆಗೆ ಬೀಗ ಹಾಕಲಾಗಿತ್ತು. ತಾಂತ್ರಿಕ ಸಾಕ್ಷ್ಯ ಹಾಗೂ ಮೊಬೈಲ್ ಲೊಕೇಶನ್ ಆಧಾರದ ಮೇಲೆ ಕೃಷ್ಣ ಮುರಾರಿ ಅವರ ಕಿರಿಯ ಸಹೋದರ ವಿಕಾಸ್ ಗುಪ್ತಾ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಹೊರಬಂದಿದೆ. ವಿಕಾಸ್ ತನ್ನ ಇನ್ನೊಬ್ಬ ತಮ್ಮ ರಾಹುಲ್ ಮತ್ತು ಮಹಾರಾಷ್ಟ್ರದ ಗೆಳೆಯ ದೀಪಕ್ ಕುಮಾರ್ ರಜಪೂತ್ ಜೊತೆ ಸೇರಿ ಈ ಭೀಕರ ಹತ್ಯೆ ನಡೆಸಿದ್ದಾಗಿ ಒಪ್ಪಿಕೊಂಡಿದ್ದಾನೆ.

    ಷೇರು ಮಾರುಕಟ್ಟೆ ಹೂಡಿಕೆ ಹಾಗೂ ಕೌಟುಂಬಿಕ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿಕಾಸ್ ಈ ಕೊಲೆಗೆ ಸಂಚು ರೂಪಿಸಿದ್ದ. ಮೇ 7 ರಂದು ಪ್ಲಾನ್ ಮುಂಚಿತವಾಗಿಯೇ ಸಿದ್ಧವಾಗಿತ್ತು. ಅಂದು ಬೆಳಗ್ಗೆ ಕೋಣೆಯೊಂದರಲ್ಲಿ ಷೇರು ಮಾರುಕಟ್ಟೆಯ ಚರ್ಚೆ ನೆಪದಲ್ಲಿ ಅಣ್ಣ ಕೃಷ್ಣ ಮುರಾರಿಯನ್ನು ಕರೆಸಿಕೊಂಡ ವಿಕಾಸ್ ಮತ್ತು ಆತನ ಸಹಚರರು, ಏಕಾಏಕಿ ಆತನ ಮೇಲೆ ಮುಗಿಬಿದ್ದು ಚಾಕುವಿನಿಂದ ಇರಿದು ಕೊಂದರು. ಗದ್ದಲ ಕೇಳಿ ಓಡಿಬಂದ ಅತ್ತಿಗೆ ದುರ್ಗೇಶ್ ಕುಮಾರಿ ಪ್ರಾಣಭಯದಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಆಕೆಯನ್ನೂ ಹಿಡಿದು ಉಸಿರುಗಟ್ಟಿಸಿ ಕೊಲ್ಲಲಾಯಿತು.

    ಮಧ್ಯಾಹ್ನ ಶಾಲೆಯಿಂದ ಮನೆಗೆ ಮರಳಿದ ದಂಪತಿಯ ಇಬ್ಬರು ಮುಗ್ಧ ಮಕ್ಕಳಿಗೆ ಹೆತ್ತವರ ಹೆಣ ಕಾಣಿಸಬಾರದೆಂದು, ಆ ಕಟುಕರು ಮಕ್ಕಳನ್ನೂ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ.ಹತ್ಯೆಯ ನಂತರ ಕೋಣೆಯೊಳಗೆ ಶವಗಳನ್ನು ಕೈ, ಕಾಲು, ತಲೆ ಎಂದು ಪ್ರತ್ಯೇಕವಾಗಿ ಕತ್ತರಿಸಲಾಯಿತು.

    ಬಂಧಿತ ವಿಕಾಸ್ ನೀಡಿದ ಮಾಹಿತಿ ಮೇರೆಗೆ ಪೊಲೀಸರು ಹತ್ಯೆಗೆ ಬಳಸಿದ ಚಾಕು, ಪಿಸ್ತೂಲ್, ಜೀವಂತ ಗುಂಡುಗಳು, ಕಬ್ಬಿಣದ ರಾಡ್ ಮತ್ತು ಸ್ಕೂಟರ್ ವಶಪಡಿಸಿಕೊಂಡಿದ್ದಾರೆ. ನದಿಗೆ ಎಸೆಯಲಾಗಿರುವ ಎರಡು ಕತ್ತರಿಸಿದ ತಲೆಗಳನ್ನು ಪತ್ತೆಹಚ್ಚಲು ನದಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಕೊಲೆಗೆ ಒಂದು ದಿನ ಮುಂಚಿತವಾಗಿಯೇ ಮನೆಯ ಇತರ ಮಹಿಳೆಯರನ್ನು ತಾಯಿಯ ಮನೆಗೆ ಕಳುಹಿಸಿ ಈ ಪ್ಲಾನ್ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ತಲೆಮರೆಸಿಕೊಂಡಿರುವ ಉಳಿದ ಹಂತಕರ ಬಂಧನಕ್ಕೆ ತೀವ್ರ ಜಾಲ ಬೀಸಲಾಗಿದ್ದು, ಈ ಕೃತ್ಯ ಎಸಗಿದ ಆರೋಪಿಗಳಿಗೆ ನ್ಯಾಯಾಲಯದ ಮೂಲಕ ಕಠಿಣಾತಿ ಕಠಿಣ ಮರಣದಂಡನೆ ಶಿಕ್ಷೆ ಕೊಡಿಸಲು ಫಾಸ್ಟ್ ಟ್ರ್ಯಾಕ್ ಕೋರ್ಟ್ ಮೊರೆ ಹೋಗುವುದಾಗಿ ಕೈಮೂರ್ ಎಸ್ಪಿ ತಿಳಿಸಿದ್ದಾರೆ.

    Post Views: 102

    CrimeNews PoliceInvestigation

    Related Posts

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.