Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಬೊಂಡಾ ಪ್ಯಾಕ್ಟರಿಯ ಎಳನೀರು ಕುಡಿದು ತುಂಬೆ ಪರಿಸರದ ನಿವಾಸಿಗಳು ಅಸ್ವಸ್ಥ..!
    ಇತ್ತೀಚಿನ ಸುದ್ದಿ

    ಮಂಗಳೂರು : ಬೊಂಡಾ ಪ್ಯಾಕ್ಟರಿಯ ಎಳನೀರು ಕುಡಿದು ತುಂಬೆ ಪರಿಸರದ ನಿವಾಸಿಗಳು ಅಸ್ವಸ್ಥ..!

    April 11, 2024
    Share

    ಮಂಗಳೂರು : ಅಡ್ಯಾರ್ ನಲ್ಲಿರುವ ನ್ಯಾಚುರಲ್ಸ್ ಐಸ್ ಕ್ರೀಂ ಸಂಸ್ಥೆ ಬೊಂಡಾ ಪ್ಯಾಕ್ಟರಿಯಲ್ಲಿ ಎಳನೀರು ಕುಡಿದು ತುಂಬೆ ಪರಿಸರದ ನಿವಾಸಿಗಳು ಅಸ್ವಸ್ಥರಾದ ಘಟನೆ ನಡೆದಿದ್ದು, ಇದೀಗ ಬೊಂಡಾ ಪ್ಯಾಕ್ಟರಿಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಎಳನೀರು ಸ್ಯಾಂಪಲ್ ನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

    ಎಪ್ರಿಲ್ 8 ರಂದು ಅಡ್ಯಾರ್ ನಲ್ಲಿರುವ ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಮ್ ಮಾರಾಟ ಮಾಡುವ ಸಂಸ್ಥೆಯಿಂದ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ಎಳನೀರನ್ನು ಲೀಟರ್ ಲೆಕ್ಕದಲ್ಲಿ ಖರೀದಿಸಿ ಕುಡಿದ ಕಾರಣ ದಿನಾಂಕ 9.4.2024 ರಂದು ಬೆಳಗ್ಗೆಯಿಂದ ಸಂಜೆಯ ತನಕ ವಾಂತಿ ಮತ್ತು ಭೇದಿಯಿಂದ ಬಳಲಿರುತ್ತಾರೆ. ಇದರಿಂದ ಉತ್ಪಾದನೆಯಾಗುವ ಎಳನೀರನ್ನು ಸಾರ್ವಜನಿಕರಿಗೆ ಲೀಟರ್ ಗೆ 40 ರೂಪಾಯಿಯಂತೆ ಸೋಮವಾರ ಸಂಜೆ ಈ ಎಳನೀರನ್ನು ಕುಡಿದ ಅಡ್ಯಾರು ಮತ್ತು ಕಣ್ಣೂರ್ ಸುತ್ತಮುತ್ತಲಿನ ಸಾರ್ವಜನಿಕರು ಮಂಗಳವಾರದಿಂದ ವಾಂತಿಬೇದಿಯಿಂದ ಬಳಲಿದ್ದು ಸ್ಥಳೀಯ ವೈದ್ಯರುಗಳಲ್ಲಿ ಪರೀಕ್ಷಿಸಿ ಔಷಧೋಪಚಾರ ಪಡೆದು ಗುಣಮುಖರಾಗದೆ ಮೂರು ಮಂದಿ ಪಲ್ನೀರ್ ನಲ್ಲಿರುವ ಹೈ ಲ್ಯಾಂಡ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತಿದ್ದಾರೆ.ಅವರ ಆರೋಗ್ಯ ಸ್ಥಿರವಾಗಿದೆ.ಉಳಿದ 12 ಮಂದಿ ತುಂಬೆಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆ ಮುಂತಾದ ಕಡೆ ಹೆಚ್ಚಿನ ಔಷಧೋಪಚಾರವನ್ನು ಹೊರರೋಗಿಗಳಾಗಿ ಪಡೆದಿರುತಾರೆ.

    ಬುಧವಾರದಂದು ಈ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಇವರಿಗೆ ವಾಟ್ಸಪ್ ಮುಖಾಂತರ ದೂರು ಸಲ್ಲಿಕೆಯಾಗಿದ್ದು ತಕ್ಷಣವೇ ಇವರಿಬ್ಬರೂ ಅಡ್ಯಾರ್ ನಲ್ಲಿರುವ ಬೊಂಡ ಫ್ಯಾಕ್ಟರಿ ಇಲ್ಲಿಗೆ ಭೇಟಿ ನೀಡಿ ಎಳನೀರಿನ ಸ್ಯಾಂಪಲನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ವಿಶ್ಲೇಷಣೆಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ.

    ಇಡೀ ಫ್ಯಾಕ್ಟರಿಯನ್ನು ತಥಾಕಾಲಿಕವಾಗಿ ಬಂದ್ ಮಾಡಿ ಶುಚಿಗೊಳಿಸಲಾಗಿದೆ. ಪಲ್ನೀರ್ ನಲ್ಲಿರುವ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಒಳರೋಗಿ ಯಾಗಿ ದಾಖಲೆ ಯಾಗಿರುವ ಸಂತ್ರಸ್ತರನ್ನು ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ವ್ಯದ್ಯರೊಂದಿಗೆ ಚರ್ಚೆಮಾಡಲಾಯಿತು. ಜಿಲ್ಲಾ ಆರೋಗ್ಯ ಅಧಿಕಾರಿ, ಆಹಾರ ಸುರಕ್ಷತಾ ಅಂಕಿತ ಅಧಿಕಾರಿ, ತಾಲೂಕು ಆರೋಗ್ಯ ಅಧಿಕಾರಿ ಇವರ ತಂಡ ಭೇಟಿ ನೀಡಿ ಸಾರ್ವಜನಿಕರ ಆರೋಗ್ಯ ಕಾಪಾಡಲು ಎಲ್ಲಾ ಕ್ರಮಗಳನ್ನು ಕೈಗೊಂಡಿರುತ್ತಾರೆ.

    Post Views: 331

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.