Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಗೆಳೆಯರ ಜೊತೆ ಸೇರಿ ತನ್ನ ಮನೆಯಿಂದಲೇ ಚಿನ್ನಾಭರಣ ಕಳವುಗೈದ ಬಾಲಕ..!
    ಇತ್ತೀಚಿನ ಸುದ್ದಿ

    ಉಳ್ಳಾಲ: ಗೆಳೆಯರ ಜೊತೆ ಸೇರಿ ತನ್ನ ಮನೆಯಿಂದಲೇ ಚಿನ್ನಾಭರಣ ಕಳವುಗೈದ ಬಾಲಕ..!

    July 6, 2024
    Share

    ಉಳ್ಳಾಲ: ಶೋಕಿ ಜೀವನಕ್ಕಾಗಿ ಮನೆಯ ಕಪಾಟಿನಲ್ಲಿದ್ದ ಹದಿನೈದು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನ ಮನೆ ಮಕ್ಕಳೇ ಎಗರಿಸಿರುವ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿ ಐದು ಮಂದಿಯನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆದರೆ, ಈ ಬಗ್ಗೆ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಮಾತ್ರ ಮಾಧ್ಯಮಗಳಿಗೆ ಮಾಹಿತಿ ಕೊಡದೆ ಮುಚ್ಚಿಟ್ಟಿದ್ದಾರೆ. ಜೂನ್ 8ರ ಬೆಳಗ್ಗೆ 8 ಗಂಟೆಯಿಂದ 16ರ ಮಧ್ಯಾಹ್ನ 12 ಗಂಟೆಯ ನಡುವೆ ಚಿನ್ನಾಭರಣ ಕಳವಾಗಿರುವ ಬಗ್ಗೆ ಉಳ್ಳಾಲ ಠಾಣೆಗೆ ಉಳ್ಳಾಲ ಬೈಲಿನ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಮನೆಯ ಬೆಡ್ ರೂಮಿನ ಕಪಾಟಿನಲ್ಲಿರಿಸಿದ್ದ ಸ್ವೀಲಿನ ಡಬ್ಬದಲ್ಲಿ ಇಟ್ಟಿದ್ದ ಚಿನ್ನದ ಕರಿಮಣಿ ಸರ, ನೆಕ್ಲಸ್, ಚೈನ್, ಬ್ರಾಸ್ ಲೈಟ್, ಉಂಗುರಗಳು, ಕಿವಿ ಓಲೆಗಳು, ಕೈಬಳೆಗಳು ಸೇರಿದಂತೆ ಅಂದಾಜು 15 ಲಕ್ಷಕ್ಕೂ ಹೆಚ್ಚು ಮೌಲ್ಯದ 32 ಪವನ್ ಗಿಂತಲೂ ಹೆಚ್ಚು ತೂಕದ ಚಿನ್ನದ ಆಭರಣಗಳನ್ನ ಕಳವುಗೈದ ಬಗ್ಗೆ ದೂರಿನಲ್ಲಿ ತಿಳಿಸಿದ್ದರು. ಪ್ರಕರಣದ ಜಾಡು ಹಿಡಿದ ಉಳ್ಳಾಲ ಪೊಲೀಸರಿಗೆ ತನಿಖೆಯ ವೇಳೆ ದೂರುದಾರರ ಪಿಯುಸಿ ಓದುತ್ತಿರುವ ಅಪ್ರಾಪ್ತ ಮಗನೇ ಕಳ್ಳತನದ ರೂವಾರಿ ಎಂದು ತಿಳಿದುಬಂದಿತ್ತು. ನೆರೆಮನೆಯ ಮತ್ತೋರ್ವ ಅಪ್ರಾಪ್ತ ಸೇರಿ ಇವರ ಸ್ನೇಹಿತರಾದ ಹೊರಗಿನ ಮೂವರು ಯುವಕರು ಕಳ್ಳತನದಲ್ಲಿ ಭಾಗಿಯಾಗಿದ್ದು ಉಳ್ಳಾಲ ಪೊಲೀಸರು ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಒಪ್ಪಿಕೊಂಡಿದ್ದಾರೆ. ಇವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ಬಗ್ಗೆ ಮಾಹಿತಿ ಇದೆ. ಅಪ್ರಾಪ್ತ ಆರೋಪಿಗಳಿಬ್ಬರಿಗೆ ಜಾಮೀನು ಸಿಕ್ಕಿರುವುದಾಗಿಯೂ ತಿಳಿದು ಬಂದಿದೆ. ಪೋಷಕರು ಮೊಬೈಲ್ ನೀಡದೆ ಕಟ್ಟುನಿಟ್ಟು ಮಾಡಿದ್ದಕ್ಕೆ ಮನೆ ಮಗನೇ ಸ್ನೇಹಿತರೊಂದಿಗೆ ಸೇರಿ ಕಳವು ಕೃತ್ಯ ಎಸಗಿದ್ದಾನೆ. ಮನೆಯಿಂದ ಕದ್ದ ಚಿನ್ನಾಭರಣಗಳಲ್ಲಿ ಸುಮಾರು ಆರು ಲಕ್ಷದಷ್ಟು ಮೌಲ್ಯದ ಚಿನ್ನವನ್ನ ಮಾರಾಟ ಮಾಡಿದ್ದು ಹುಡುಗರು ತಮಗಾಗಿ ಐಫೋನ್ ಗಳನ್ನು ಖರೀದಿಸಿದ್ದರು. ಕಳೆದ ಶುಕ್ರವಾರ ಪ್ರಮುಖ ಅಪ್ರಾಪ್ತ ಆರೋಪಿ ಮತ್ತು ಇತರರ ಬಂಧನವಾಗುತ್ತಿದ್ದಂತೆಯೇ ಅವರ ಪೋಷಕರು ಮರ್ಯಾದೆಗೆ ಅಂಜಿ ಪ್ರಕರಣ ದಾಖಲಿಸದಂತೆ ಠಾಣೆಯಲ್ಲೇ ಬಿಡಾರ ಹೂಡಿದ್ದರೆಂದು ತಿಳಿದುಬಂದಿದೆ. ಆರೋಪಿಗಳ ಬಂಧನ ನಡೆದು ವಾರ ಕಳೆದರೂ ಮಾಧ್ಯಮದವರು ಕೇಳಿದರೆ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಅವರು ಮಾಹಿತಿ ನೀಡದೇ ಮುಚ್ಚಿಟ್ಟಿದ್ದು ಭಾರೀ ಅನುಮಾನಕ್ಕೆ ಕಾರಣವಾಗಿದೆ.

    Post Views: 401

    Related Posts

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.