Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಲೋಕಾಯುಕ್ತ ಅಧಿಕಾರಿಗಳು ದ.ಕ ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಕಿಯರ ವಸತಿ ಗೃಹ ಕ್ಕೆ ದಿಢೀರ್ ಭೇಟಿ
    ಇತ್ತೀಚಿನ ಸುದ್ದಿ

    ಮಂಗಳೂರು: ಲೋಕಾಯುಕ್ತ ಅಧಿಕಾರಿಗಳು ದ.ಕ ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಕಿಯರ ವಸತಿ ಗೃಹ ಕ್ಕೆ ದಿಢೀರ್ ಭೇಟಿ

    August 23, 2025
    Share

    ಮಂಗಳೂರು: ನಗರದ ಮಣ್ಣಗುಡ್ಡಯಲ್ಲಿರುವ ದ.ಕ. ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಕಿಯರ ವಸತಿಗೃಹಕ್ಕೆ ಮಂಗಳೂರು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕಿ ಡಾ. ಗಾನ ಪಿ. ಕುಮಾರ್ ಹಾಗು ಪೊಲೀಸ್ ನಿರೀಕ್ಷಕಿಯರಾದ ಭಾರತಿ ಜಿ, ರವಿ ಪವಾರ್ ನೇತೃತ್ವದ ತಂಡವು ಶುಕ್ರವಾರ ದಾಳಿ ನಡೆಸಿದ್ದಾರೆ.

    ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಸಾಕಷ್ಟು ಲೋಪದೋಷಗಳು ಕಂಡುಬಂದಿದೆ. ಮುಖ್ಯವಾಗಿ ವಸತಿಗೃಹದ ಅಡುಗೆ ಕೋಣೆಯಲ್ಲಿ ಶುಚಿತ್ವ ಇರಲಿಲ್ಲ. ಧವಸಧಾನ್ಯಗಳ ಸ್ಟಾಕ್ ಇರಲಿಲ್ಲ. ಅಕ್ಕಿಯಲ್ಲಿ ಹುಳುಗಳು ಕಂಡುಬಂದಿದೆ. ಸ್ಟಾಕ್ ರಿಜಿಸ್ಟರ್ ಕೂಡ ಇರಲಿಲ್ಲ. ಅಡುಗೆಗೆ ಕಡಿಮೆ ಗುಣಮಟ್ಟದ ಹೆಚ್ಚು ಪ್ಯಾಟ್ ಇರುವ ಪಾಮೋಲಿನ್ ಅಡುಗೆ ಎಣ್ಣೆಯನ್ನು ಬಳಸುವುದು ಕಂಡುಬಂದಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

    ವಸತಿ ಗೃಹದಲ್ಲಿ 33 ಮಕ್ಕಳಿದ್ದರು. ಅವರಿಗೆ ಪೌಷ್ಟಿಕಯುಕ್ತ ಆಹಾರ ನೀಡಿಲ್ಲ. ಊಟದ ಹಾಲ್‌ನಲ್ಲಿ ಹೆಚ್ಚಿನ ಸ್ಥಳವಕಾಶ ಇಲ್ಲದಿದ್ದರೂ ಕೂಡ ಎರಡು ವಸತಿ ಗೃಹದಲ್ಲಿನ ಬಾಲಕ ಮತ್ತು ಬಾಲಕಿಯರಿಗೆ ಒಂದೇ ಕಡೆಯಲ್ಲಿ ಊಟದ ವ್ಯವಸ್ಥೆ ಕಲ್ಪಿಸುವುದು ಕಂಡುಬಂದಿದೆ. ಸ್ಕಾಲರ್‌ಶಿಪ್ ಪಡೆದು ವಿದ್ಯಾಭ್ಯಾಸ ಮಾಡುವ ಹೆಚ್ಚಿನ ಮಕ್ಕಳು ಅಥ್ಲೆಟಿಕ್ಸ್‌ನವರಾಗಿದ್ದು, ಸರಕಾರದಿಂದ ಅನುದಾನ ಬರುತಿದ್ದರು ಕೂಡ ಸರಿಯಾದ ಆಹಾರದ ವ್ಯವಸ್ಥೆ ಮಾಡಿರುವುದಿಲ್ಲ ಎಂದು ತಿಳಿಸಿದ್ದಾರೆ.

    ಸರಕಾರದಿಂದ ಪ್ರತಿ ವರ್ಷ ಸ್ಪೋರ್ಟ್ಸ್ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲು ಅನುದಾನ ನೀಡುತ್ತಿದ್ದರು ಕೂಡ ಅರ್ಧ ವರ್ಷ ಮಕ್ಕಳ ಪೋಷಕರೇ ತಮ್ಮ ಖರ್ಚಿನಲ್ಲಿ ಕ್ರೀಡಾ ಸಾಮಗ್ರಿಗಳನ್ನು ಮಕ್ಕಳಿಗೆ ಖರೀದಿಸಿ ಕೊಡಬೇಕಾಗುತ್ತದೆ. ಸರಕಾರದಿಂದ ಅನುದಾನ ಬರುತ್ತಿದ್ದರು ಕೂಡ ವಿತರಿಸಿರುವ ಶೂ, ಕಂಪನಿಯ ಶೂ ಆಗಿದ್ದರು ಕೂಡ ಕಳಪೆ ಗುಣಮಟ್ಟದಾಗಿದೆ. ಕೆಲವೇ ವಾರದಲ್ಲಿ ಹಾಳಾಗಿರುತ್ತದೆ ಎಂಬುದಾಗಿ ತಿಳಿದುಬಂದಿದೆ. ಕ್ರೀಡಾ ವಸತಿ ನಿಲಯದಲ್ಲಿ ಹೆಚ್ಚಿನ ಕೊಠಡಿಗಳು ಇದ್ದರೂ ಕೂಡ ಒಂದು ಕೊಠಡಿಯಲ್ಲಿ ಐದು ಮಕ್ಕಳಿಗೆ ವಸತಿ ವ್ಯವಸ್ಥೆ ಕಲ್ಪಿಸಿರು ವುದು ಕಂಡು ಬರುತ್ತದೆ ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಮಕ್ಕಳನ್ನು ವಿವಿಧ ಕ್ರೀಡೆಗಳಿಗೆ ಕರೆದುಕೊಂಡು ಹೋಗಲು ಸರಕಾರದಿಂದ ಅನುದಾನ ಬರುತ್ತಿದ್ದರೂ ಕೂಡ ಮಕ್ಕಳ ಪೋಷಕರೇ ಖರ್ಚನ್ನು ಭರಿಸಬೇಕಾಗುತ್ತದೆ. ಸರಕಾರದಿಂದ ಬರುವ ಅನುದಾನ ದುರುಪಯೋಗವಾಗುವುದು ಕಂಡುಬಂದಿದೆ. ಕ್ರೀಡಾ ವಸತಿ ಗೃಹದ ಮಕ್ಕಳು ತಮ್ಮ ಪೋಷಕರನ್ನು ಸಂಪರ್ಕಿಸಲು ದೂರವಾಣಿಯ ವ್ಯವಸ್ಥೆ ಇರುವುದಿಲ್ಲ. ವಿದ್ಯಾರ್ಥಿಗಳು ಕ್ರೀಡೆಯ ಸಂದರ್ಭ ಬೇರೆ ಬೇರೆ ಕಡೆಗೆ ತೆರಳಿದಾಗ ತರಗತಿಯ ಪಾಠ ಪ್ರವಚನಕ್ಕೆ ತೊಂದರೆಯಾಗುತ್ತಿದ್ದು, ಕಂಪ್ಯೂಟರ್ ಮೂಲಕ ಅಧ್ಯಯನಕ್ಕೆ ಸಂಬಂಧಿಸಿದ ವಿಷಯವನ್ನು ಪಡೆದುಕೊಳ್ಳಲು ಕಂಪ್ಯೂಟರನ್ನು ಒದಗಿಸಿರುವುದಿಲ್ಲ ಎಂಬುದು ತಿಳಿದು ಬಂದಿದೆ. ಕಂಪ್ಯೂಟರ್‌ಗಳು ಮಕ್ಕಳ ವಿದ್ಯಾಭ್ಯಾಸಕ್ಕೆ ಒದಗಿಸದ ಕಾರಣ ಹಾಳಾಗಿದೆ. ಮಕ್ಕಳಿಗೆ ಕೌನ್ಸಿಲಿಂಗ್ ಮತ್ತು ಹೆಲ್ತ್ ಚೆಕ್‌ಅಪ್ ಮಾಡಿರುವುದು ಕೂಡ ದಾಖಲಾತಿಯಿಂದ ಕಂಡುಬಂದಿಲ್ಲ.

    ನಗರದ ಮಂಗಳ ಸ್ಟೇಡಿಯಂನಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಮತ್ತು ಉಪ ನಿರ್ದೇಶಕರ ಕಚೇರಿಯ ಸಮೀಪ ಅಂದರೆ 100 ಮಿ. ದೂರದಲ್ಲಿ ಬಾಲಕ ಬಾಲಕಿಯರ ಕ್ರೀಡಾ ವಸತಿ ಗೃಹ ಇದ್ದರೂ ಕೂಡ ಕ್ರೀಡಾ ವಸತಿ ನಿಲಯಕ್ಕೆ ಇಲಾಖೆಯ ಸಹಾಯಕ ನಿರ್ದೇಶಕರು, ಉಪ ನಿರ್ದೇಶಕರು ಭೇಟಿಕೊಟ್ಟು ಪರಿಶೀಲನೆ ಮಾಡಿರುವುದು ಕಂಡುಬಂದಿಲ್ಲ. ಈ ಅಧಿಕಾರಿಗಳು ವಸತಿ ಗೃಹದಲ್ಲಿ ಆಹಾರದ ಕೊರತೆ, ಆಹಾರದ ಸರಬರಾಜಿನಲ್ಲಿ ಅವ್ಯವಹಾರ, ಟೆಂಡರ್ ಬದಲಾವಣೆ ಮಾಡದಿರುವುದು, ಸ್ಟಾಕ್ ಪರಿಶೀಲಿಸದಿರುವುದು ಕಂಡುಬಂದಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

    ಈ ಬಗ್ಗೆ ಸಮಗ್ರ ವರದಿಯನ್ನು ಲೋಕಾಯುಕ್ತರಿಗೆ ನೀಡಲಾಗುವುದು ಎಂದು ಪ್ರಭಾರ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Post Views: 180

    Related Posts

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.