Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ : ಜಾಲತಾಣ, ಯೂಟ್ಯೂಬ್ ಗಳಲ್ಲಿ ಧರ್ಮಸ್ಥಳ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ….!
    ಇತ್ತೀಚಿನ ಸುದ್ದಿ

    ಧರ್ಮಸ್ಥಳ : ಜಾಲತಾಣ, ಯೂಟ್ಯೂಬ್ ಗಳಲ್ಲಿ ಧರ್ಮಸ್ಥಳ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ….!

    August 30, 2025
    Share

    ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ , ಡಾ. ಡಿ. ವೀರೇಂದ್ರ ಹೆಗ್ಗಡೆ ,ಡಿ. ಹರ್ಷೇಂದ್ರ ಕುಮಾರ್ ಮತ್ತು ಅವರ ಕುಟುಂಬದ ವಿರುದ್ಧ ಯಾವುದೇ ಅವಹೇಳನಾಕಾರಿ ಮಾತುಗಳನ್ನು ಆಡದಂತೆ , ವರದಿ ಪ್ರಕಟಿಸದಂತೆ ಸಿಟಿ ಸಿವಿಲ್ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಜೊತೆಗೆ, ಆ ವಿಡಿಯೋಗಳನ್ನು ತಕ್ಷಣವೇ ಡಿಲೀಟ್ ಮಾಡಲು ಆದೇಶಿಸಿದೆ.

    ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಪ್ರಕಟವಾದ ಮಾನಹಾನಿಕರ ವಿಡಿಯೋಗಳ ವಿಷಯದಲ್ಲಿ ಡಿ.ಹರ್ಷೇಂದ್ರ ಕುಮಾರ್ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ನ್ಯಾಯಾಲಯವು ಏಕಪಕ್ಷೀಯ ತಡೆಯಾಜ್ಞೆ ನೀಡಿತ್ತು. ಆದರೆ, ಥರ್ಡ್ ಐ ಯೂಟ್ಯೂಬ್ ಚಾನಲ್ ಇದನ್ನು “ಗ್ಯಾಗ್ ಆರ್ಡರ್” ಎಂದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಿಟ್ ಅರ್ಜಿ (ಎಸ್‌ಎಲ್‌ಪಿ) ಸಲ್ಲಿಸಿತು. ಸುಪ್ರೀಂ ಕೋರ್ಟ್ ಈ ವಿಷಯವನ್ನು ಹೈಕೋರ್ಟ್‌ನಲ್ಲಿ ಇತ್ಯರ್ಥಗೊಳಿಸಲು ಸೂಚಿಸಿತು.

    ಕುಡ್ಲ ರಾಂ ಪೇಜ್ ಹೈಕೋರ್ಟ್‌ನಲ್ಲಿ ರಿಟ್ ಸಲ್ಲಿಸಿತು, ಇದನ್ನು ಪುರಸ್ಕರಿಸಿದ ಹೈಕೋರ್ಟ್ ಸಿಟಿ ಸಿವಿಲ್ ಕೋರ್ಟ್‌ನ ಏಕಪಕ್ಷೀಯ ಆದೇಶವನ್ನು ರದ್ದುಗೊಳಿಸಿ ಮರುತನಿಖೆಗೆ ಆದೇಶಿಸಿತು. ಇದರ ವಿರುದ್ಧ ಡಿ. ಹರ್ಷೇಂದ್ರ ಕುಮಾರ್ ಸುಪ್ರೀಂ ಕೋರ್ಟ್‌ನಲ್ಲಿ ಎಸ್‌ಎಲ್‌ಪಿ ಸಲ್ಲಿಸಿದರು. ಸುಪ್ರೀಂ ಕೋರ್ಟ್, ದಾಖಲೆಗಳ ಆಧಾರದ ಮೇಲೆ ಎರಡು ವಾರಗಳಲ್ಲಿ ಪುನಃ ಪರಿಶೀಲನೆಗೆ ಆದೇಶಿಸಿತು.ಸಿಟಿ ಸಿವಿಲ್ ಕೋರ್ಟ್ ಐದು ದಿನಗಳ ಕಾಲ ವಾದ-ವಿವಾದ ಆಲಿಸಿ, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್ ಟಿ. ಸೇರಿದಂತೆ ಇತರರಿಂದ ಪ್ರಕಟವಾದ ಮಾನಹಾನಿಕರ ವಿಡಿಯೊಗಳನ್ನು ನ್ಯಾಯಾಲಯದಲ್ಲಿ ವೀಕ್ಷಿಸಿ ತಡೆಯಾಜ್ಞೆ ನೀಡಿದ್ದು, ವಿಡಿಯೋಗಳನ್ನು ಡಿಲೀಟ್ ಮಾಡುವಂತೆ ಹೇಳಿದೆ.

    ಡಿ.ಹರ್ಷೇಂದ್ರ ಕುಮಾರ್ ಪರವಾಗಿ ಹೈಕೋರ್ಟ್ ವಕೀಲ ರಾಜಶೇಖರ್ ಹಿಲ್ಯಾರ್ ಸುದೀರ್ಘ ವಾದ ಮಂಡಿಸಿದರು

    Post Views: 184

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.