Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಅಪಘಾತದ ನಾಟಕ ರಚಿಸಿ ತಮ್ಮನ ಕೊಲೆ ಮಾಡಿದ ಅಣ್ಣ; ಎಲ್‌ಐಸಿ ಹಣಕ್ಕಾಗಿ ಸಂಚು
    ಕರಾವಳಿ ಸುದ್ದಿ

    ಅಪಘಾತದ ನಾಟಕ ರಚಿಸಿ ತಮ್ಮನ ಕೊಲೆ ಮಾಡಿದ ಅಣ್ಣ; ಎಲ್‌ಐಸಿ ಹಣಕ್ಕಾಗಿ ಸಂಚು

    June 24, 2026
    Share

    ತುಮಕೂರು: ಎಲ್‌ಐಸಿ ಪಾಲಿಸಿಯಿಂದ ಸಿಗುವ 30 ಲಕ್ಷ ರೂ. ಆಸೆಗೆ ಸ್ವಂತ ತಮ್ಮನನ್ನೇ ಅಣ್ಣ ಕೊಲೆ ಮಾಡಿದ್ದ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಬೈಕ್ ಅಪಘಾತದ ಪ್ರಕರಣ ಭೇದಿಸಿದ ತುಮಕೂರು  ಜಿಲ್ಲೆ ಪಟ್ಟನಾಯಕನಹಳ್ಳಿ ಪೊಲೀಸರು ಅಸಲಿ ಕಹಾನಿ ಬಿಚ್ಚಿಟ್ಟಿದ್ದಾರೆ.

    ದುಡ್ಡು ಅಂದರೆ ಹೆಣನೂ ಬಾಯಿ ಬಿಡುತ್ತೆ ಅನ್ನೋ ಗಾದೆ ಮಾತಿದೆ. ಅಂಥ ದುಡ್ಡಿಗಾಗಿ ಎಂಥ ಹೇಯ ಕೃತ್ಯ ಮಾಡಲು ಜನ ಹಿಂದೂ ಮುಂದೂ ನೋಡಲ್ಲ. ಇಲ್ಲೊಬ್ಬ ಅಣ್ಣ, ತಮ್ಮನ ಹೆಸರಲ್ಲಿ ಇರುವ ಎಲ್‌ಐಸಿ ಪಾಲಿಸಿ ಹಣ ಲಪಟಾಯಿಸಲು ಸ್ವಂತ ತಮ್ಮನನ್ನೇ ಕೊಲೆ ಮಾಡಿ ಬೈಕ್ ಅಪಘಾತ ಎಂದು ಕಥೆ ಕಟ್ಟಿದ್ದಾನೆ.

    ತುಮಕೂರು ಜಿಲ್ಲೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂಥದೊಂದು ಘಟನೆ ನಡೆದಿದೆ. 35 ವರ್ಷದ ರಮೇಶ್‌ನನ್ನು ಅಣ್ಣ ಹನುಮಂತರಾಜು ಕೊಲೆ ಮಾಡಿ ನಾಟಕವಾಡಿದ್ದಾನೆ. ಮೃತ ರಮೇಶ್ ಮೂಲತಃ ಆಂಧ್ರಪ್ರದೇಶದವನು. ಕಳೆದ 6 ವರ್ಷದಿಂದ ಬೆಂಗಳೂರಿನಲ್ಲಿ ಎಳನೀರು ವ್ಯಾಪಾರ ಮತ್ತು ಮಂಡ್ಯದಲ್ಲಿ ಕಬ್ಬಿನ ಜ್ಯೂಸ್ ವ್ಯಾಪಾರ ಮಾಡಿಕೊಂಡಿದ್ದ. ಹೆಂಡತಿಯಿಂದ ದೂರವಾಗಿ ಮಾಟಮಂತ್ರ ಮಾಡುವ ವೃತ್ತಿಯಲ್ಲಿ ತೊಡಗಿದ್ದ. ಅಲ್ಲದೇ ತನ್ನ ಸ್ವಂತ ಅಣ್ಣಂದಿರ ಸಂಸಾರಕ್ಕೆ ಮಾಟಮಂತ್ರ ಮಾಡಿ ತೊಂದರೆ ಕೊಡುತ್ತಿದ್ದ ಎನ್ನಲಾಗಿದೆ.

    ತಮ್ಮ ರಮೇಶ್ ಹೆಸರಿಗೆ ಅಣ್ಣ ಹನುಮಂತರಾಜು 15 ಲಕ್ಷ ರೂಪಾಯಿ ಎಲ್‌ಐಸಿ ಪಾಲಿಸಿ ಮಾಡಿಸುತ್ತಾನೆ. ಅದರ ನಾಮಿನಿ ತನ್ನ ಹೆಸರಿಗೆ ಮಾಡಿಸಿಕೊಳ್ಳುತ್ತಾನೆ. ಅಣ್ಣ ಹನುಮಂತರಾಜು ಪ್ರತಿ ವರ್ಷಕ್ಕೆ ತಮ್ಮನ ಪಾಲಿಸಿಗೆ 85,000 ರೂ. ವಿಮಾ ಕಂತನ್ನು ಪಾವತಿ ಮಾಡುತ್ತಾನೆ. ಚಾಲ್ತಿಯಲ್ಲಿ ಇರುವ ವಿಮೆಯು ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ನಾಮಿನಿದಾರರಿಗೆ ವಿಮೆ ಮೊತ್ತದ ಡಬಲ್ ಹಣ ಅಂದರೆ 30 ಲಕ್ಷ ಹಣ ಪಾವತಿಯಾಗುವಂತೆ ಇತ್ತು. ಈ ಹಣದ ದುರಾಸೆಯಿಂದ ಆರೋಪಿ ಹನುಮಂತರಾಜು ತಮ್ಮನನ್ನೇ ಕೊಲೆ ಮಾಡಿದ್ದಾನೆ. ಬೆಂಗಳೂರಿನ ನವಯುಗ ಟೋಲ್ ಬಳಿಯ ತನ್ನ ಅಂಗಡಿಗೆ ಬರುತಿದ್ದ ಲಕ್ಷ್ಮೀಕಾಂತ, ನವೀನ್ ಹಾಗೂ ಎಂ.ಡಿ.ಜಿಲಾನ್ ಜೊತೆ ಸೇರಿ ಸಂಚು ರೂಪಿಸಿ ಕೊಲೆ ಮಾಡಿದ್ದು ತನಿಖೆ ವೇಳೆ ಗೊತ್ತಾಗಿದೆ.

    ಕಳೆದ ಜೂನ್ 19ರಂದು ಯಾವುದೋ ನಿಧಿ ಪೂಜೆ ಇದೆ ಎಂದು ರಮೇಶ್‌ನನ್ನು ಶಿರಾ ಅಮರಾಪುರ ರಸ್ತೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದರು. ಅಲ್ಲಿ ದೊಣ್ಣೆಯಿಂದ ಆತನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಕಾರು ಹರಿಸಿದ್ದಾರೆ. ಆಗಲೂ ಜೀವ ಹೋಗದಿದ್ದಾಗ ಬ್ಯಾಟರಿ ಜಂಪಿಂಗ್ ವಯರ್ ಮೂಲಕ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ನಂತರ ಶವ ಹಾಗೂ ಬೈಕನ್ನು ರಸ್ತೆಯಲ್ಲಿ ಹಾಕಿದ್ದಾರೆ. ಬಳಿಕ ಬೈಕ್‌ನ ಮುಂಭಾಗವನ್ನು ಇವರೇ ಜಖಂ ಮಾಡಿ ಅಪಘಾತದ ನಾಟಕ ಮಾಡಿದ್ದಾರೆ.

    ಮೃತನ ಹಿರಿಯ ಅಣ್ಣ ರಂಗನಾಥ ಕೊಟ್ಟ ದೂರಿನ ಪ್ರಕಾರ ಪೊಲೀಸರು ಅನುಮಾನಸ್ಪದ ಸಾವು ಎಂದು ಎಫ್‌ಐಆರ್ ದಾಖಲಿಸಿದರು. ನಂತರ 3 ತಂಡಗಳನ್ನು ರಚಿಸಿದ ಪೊಲೀಸರು ಆರೋಪಿ ಹನುಮಂತರಾಜು ಸೇರಿ ಆರೋಪಿಗಳನ್ನು ಬಂಧಿಸಿದ್ದಾರೆ.

    Post Views: 133

    karnataka PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.