ಮಂಗಳೂರು: ನಗರದ ಮಾದಕ ವಸ್ತು ಗಾಂಜಾ ಸೆವನೆ ಮಾಡಿದ ಆರೋಪದಲ್ಲಿ ಇಬ್ಬರನ್ನು ಕಂಕನಾಡಿ ಹಾಗೂ ಬಂದರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಬಂಧಿತ ಆರೋಪಿಗಳನ್ನು ಉಡುಪಿ ಬೆಳಪು ಪಣಿಯೂರು ನಿವಾಸಿ ರಕ್ಷಿತ್ (30) ಹಾಗೂ ಮಂಗಳೂರು ಕೂಳೂರು ತೋಟಬೆಂಗ್ರೆ ನಿವಾಸಿ ದೀಕ್ಷಿತ್ (24) ಎಂದು ಗುರುತಿಸಲಾಗಿದೆ.
ಬಂಧಿತರಲ್ಲಿ ರಕ್ಷಿತ್ ಎಂಬಾತ ನಗರ ಹೊರವಲಯದ ಅಡ್ಯಾರ್ ನಲ್ಲಿ ಗಾಂಜಾ ಸೇವನೆ ಮಾಡಿದ್ದು, ಆತನನ್ನು ಕಂಕನಾಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಾಗೂ ದೀಕ್ಷಿತ್ ಎಂಬಾತ ನಗರದ ಕೋರ್ಟ್ ಆವರಣದ ಬಳಿ ಗಾಂಜಾ ಸೇವಿಸಿ ತೂರಾಡುತ್ತಿದ್ದು, ಆತನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಯಲಾಗಿದೆ.