ಬಂಟ್ವಾಳ: ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಇಪ್ಪತ್ತೆರಡು ವರ್ಷದ ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ ಸಾವನ್ನಪ್ಪಿದ ಮೃತ ದುರ್ದೈವಿ. ಈತ ರಜೆಯಲ್ಲಿದ್ದ ಕಾರಣ ಸ್ಟೇಜ್ ಡೆಕೋರೇಷನ್ ಕೆಲಸಕ್ಕೆ ಹೋಗಿದ್ದು ಬಿಸಿರೋಡಿನಿಂದ ಮನೆ ಕಡೆಗೆ ಸಂಚರಿಸುತ್ತಿದ್ದ ವೇಳೆ ಪಾಣೆಮಂಗಳೂರು ಎಂಬಲ್ಲಿ ಅತೀ ವೇಗವಾಗಿ ಬಂದ ಕಾರು ಢಿಕ್ಕಿಯಾಗಿ ಈ ಘಟನೆ ನಡೆದಿದೆ.
ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.