Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಣ್ಣೂರು: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
    ಇತ್ತೀಚಿನ ಸುದ್ದಿ

    ಕಣ್ಣೂರು: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

    April 30, 2024
    Share

    ಕಣ್ಣೂರು: ಕಾರು – ಲಾರಿ ನಡುವಿನ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಕಣ್ಣೂರು ಜಿಲ್ಲೆಯ ಚೆರುಕುನ್ನು ಸಮೀಪದ ಪುನ್ನಚೇರಿ ಎಂಬಲ್ಲಿ ಸೋಮವಾರ ರಾತ್ರಿ (ಏ.29 ರಂದು) ನಡೆದಿದೆ.

    ಕಾರು ಚಲಾಯಿಸುತ್ತಿದ್ದ ಕಾಸರಗೋಡು ಕಾಳೀಚನಡುಕ್ಕಂನ ಸಾಸ್ತಂಪಾರದ ಕೆ.ಎನ್.ಪದ್ಮಕುಮಾರ್ (59), ಭೀಮಾನಡಿಯ ಚೂರಿಕಟ್ಟೆಯ ಸುಧಾಕರನ್ (52), ಸುಧಾಕರನ್ ಅವರ ಪತ್ನಿ ಅಜತಾ (35), ಅವರ ತಂದೆ ಕೊಜುಮ್ಮಲ್ ಕೃಷ್ಣನ್ (65) ಮತ್ತು ಅಜಿತಾ ಅವರ ಸಹೋದರ ಅಜಿತ್ ಅವರ ಮಗ ಆಕಾಶ್ (9) ಮೃತಪಟ್ಟಿದ್ದಾರೆ.

    ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕ ಆಕಾಶ್‌ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ.

    ಚೆರುಕುನ್ನು ಬಳಿಯ ಪುನ್ನಚೇರಿಯ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ಸಂಭವಿಸಿದೆ. ಹಿಂಬದಿಯಿಂದ ಬಂದ ಲಾರಿ ಕಾರಿಗೆ ಢಿಕ್ಕಿ ಹೊಡೆದಿದ್ದರಿಂದ ಕಾರು ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.

    ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಮಂಗಳೂರಿನಿಂದ ಬರುತ್ತಿತ್ತು. ಸುಧಾಕರನ್ ಮತ್ತು ಅವರ ಕುಟುಂಬ ಸದಸ್ಯರು ತಮ್ಮ ಮಗ ಸೌರವ್‌ನನ್ನು ಕೋಝಿಕ್ಕೋಡ್ನಲ್ಲಿರುವ ಶಿಕ್ಷಣ ಸಂಸ್ಥೆಗೆ ಸೇರಿಸಿದ ನಂತರ ಕಾಸರಗೋಡಿಗೆ ಹಿಂತಿರುಗುತ್ತಿದ್ದರು.

    ಕಾರಿನೊಳಗೆ ಸಿಲುಕಿದ್ದವರನ್ನು ಕಾರಿನ ಗಾಜು ಒಡೆದು ಸ್ಥಳೀಯರು ಹೊರಗೆ ತೆಗೆಯಲು ಯತ್ನಿಸಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತ ಮಾಡಿದ ಲಾರಿಗಳ ಇಬ್ಬರು ಚಾಲಕರನ್ನು ಕನ್ನಪುರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    Post Views: 325

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.