Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೋಟಿ ಕಾರಿನ ಮಾಲೀಕನಿಗೆ 130 ರೂ. ದೊಡ್ಡದಾಯಿತೇ? ಟೋಲ್ ಪ್ಲಾಜಾದಲ್ಲಿ ರೋಲ್ಸ್ ರಾಯ್ಸ್ ಎಸ್ಕೇಪ್
    ಇತ್ತೀಚಿನ ಸುದ್ದಿ

    ಕೋಟಿ ಕಾರಿನ ಮಾಲೀಕನಿಗೆ 130 ರೂ. ದೊಡ್ಡದಾಯಿತೇ? ಟೋಲ್ ಪ್ಲಾಜಾದಲ್ಲಿ ರೋಲ್ಸ್ ರಾಯ್ಸ್ ಎಸ್ಕೇಪ್

    June 17, 2026
    Share

    ಕೋಝಿಕ್ಕೋಡ್: ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಮಾಲೀಕರಿಗೆ ನೂರು-ಇನ್ನೂರು ರೂಪಾಯಿ ದೊಡ್ಡ ಮೊತ್ತವೇ ಅಲ್ಲ. ಆದರೆ, ರಾಷ್ಟ್ರೀಯ ಹೆದ್ದಾರಿ 66 ರ ಪಂಥೀರಂಕಾವು ಟೋಲ್ ಪ್ಲಾಜಾದಲ್ಲಿ ಜೂನ್ 4 ರಂದು ನಡೆದಿರುವ ಘಟನೆ ಮಾತ್ರ ಅಧಿಕಾರಿಗಳನ್ನೇ ಆಘಾತಕ್ಕೀಡು ಮಾಡಿದೆ. ಬರೋಬ್ಬರಿ 9 ಕೋಟಿ ರೂಪಾಯಿ ಮೌಲ್ಯದ ರೋಲ್ಸ್ ರಾಯ್ಸ್ ಘೋಸ್ಟ್ ಕಾರಿನ ಚಾಲಕನೊಬ್ಬ ಕೇವಲ 130 ರೂಪಾಯಿ ಟೋಲ್ ಶುಲ್ಕವನ್ನು ಪಾವತಿಸದೆ ಜಾಣತನದಿಂದ ವೇಗವಾಗಿ ಕಾರು ಚಲಾಯಿಸಿ ಪರಾರಿಯಾಗಿದ್ದಾನೆ.ಜೂನ್ 4ರ ಸಂಜೆ ಈ ಘಟನೆ ನಡೆದಿದ್ದು, ಕಪ್ಪು ಬಣ್ಣದ ಐಷಾರಾಮಿ ರೋಲ್ಸ್ ರಾಯ್ಸ್ ಕಾರು ಟೋಲ್ ಕೌಂಟರ್‌ನಲ್ಲಿ ಕಾಯುತ್ತಿದ್ದ ಮತ್ತೊಂದು ವಾಹನವನ್ನು ಹತ್ತಿರದಿಂದ ಹಿಂಬಾಲಿಸುತ್ತಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ. ಮುಂಭಾಗದ ವಾಹನವು ಟೋಲ್ ಪಾವತಿಸಿ ಬೂಮ್ ಬ್ಯಾರಿಯರ್ (ತಡೆಗೋಡೆ) ಮೇಲಕ್ಕೆದ್ದ ತಕ್ಷಣ, ರೋಲ್ಸ್ ರಾಯ್ಸ್ ಚಾಲಕ ಬ್ಯಾರಿಯರ್ ಮುಚ್ಚುವ ಮೊದಲೇ ಅತ್ಯಂತ ವೇಗವಾಗಿ ಲೇನ್ ಮೂಲಕ ಕಾರನ್ನು ನುಗ್ಗಿಸಿ ಟೋಲ್ ವಂಚಿಸಿದ್ದಾನೆ.ಟೋಲ್ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಅದು ಹರಿಯಾಣ ನೋಂದಣಿಯ ರೋಲ್ಸ್ ರಾಯ್ಸ್ ಘೋಸ್ಟ್ ಕಾರು ಎಂದು ಪತ್ತೆಯಾಗಿದೆ. ಅಧಿಕಾರಿಗಳು ಈ ವಾಹನದ ಫಾಸ್ಟ್‌ಟ್ಯಾಗ್ ಖಾತೆ ವಿವರ ಹಾಗೂ ಸಿಸಿಟಿವಿ ದೃಶ್ಯಗಳನ್ನು ಮುಂದಿನ ಕ್ರಮಕ್ಕಾಗಿ ಪಂಥೀರಂಕಾವು ಪೊಲೀಸರು ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಹಸ್ತಾಂತರಿಸಿದ್ದಾರೆ.ಇತ್ತೀಚೆಗೆ ರಾಮನಟ್ಟುಕರ ಮತ್ತು ವೆಂಗಲಂ ನಡುವಿನ ಆರು ಪಥದ NH 66 ರ ಟೋಲ್ ಪ್ಲಾಜಾ ಆರಂಭವಾದಾಗಿನಿಂದ ನಿತ್ಯ ಸರಾಸರಿ 200 ವಾಹನಗಳು ಟೋಲ್ ತಪ್ಪಿಸುತ್ತವೆ ಎಂದು ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ, ಟೋಲ್ ಪಾವತಿಸದ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾಯೋಗಿಕ ಮತ್ತು ಕಾನೂನು ಮಿತಿಗಳಿವೆ ಎಂದು ಪಂಥೀರಂಕವು ಪೊಲೀಸರು ತಿಳಿಸಿದ್ದಾರೆ. “ಟೋಲ್ ಬೂತ್‌ಗೆ ಹಣ ನೀಡದೆ ಹೋದ ತಕ್ಷಣವೇ ದಂಡ ವಿಧಿಸಲು ಕಾನೂನಿನಲ್ಲಿ ಯಾವುದೇ ನಿರ್ದಿಷ್ಟ ನಿಬಂಧನೆಗಳಿಲ್ಲ. ಟೋಲ್ ಪ್ಲಾಜಾದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅಥವಾ ಘರ್ಷಣೆ ನಡೆದರೆ ಮಾತ್ರ ನಾವು ಹಸ್ತಕ್ಷೇಪ ಮಾಡಬಹುದು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

    Post Views: 189

    CrimeNews PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.