Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಲಂಚ ಸ್ವೀಕರಿಸುತ್ತಿದ್ದಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ..!!
    ಇತ್ತೀಚಿನ ಸುದ್ದಿ

    ಮಂಗಳೂರು : ಲಂಚ ಸ್ವೀಕರಿಸುತ್ತಿದ್ದಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ..!!

    May 29, 2025
    Share

    ಮಂಗಳೂರು : ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸರ್ವೆ ನಂಬರ್ 279/5 ರಲ್ಲಿ 1.39 ಎಕರೆ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆ ಕಟ್ಟಲು ಜಾಗದಲ್ಲಿದ್ದ ಕಟ್ಟಡ ಕಲ್ಲು ತೆರವು ಮಾಡಿ ಸಮತಟ್ಟು ಮಾಡಲು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ 28/10/2024 ರಂದು ಅರ್ಜಿ ಸಲ್ಲಿಸಿದ್ದು. ಇದಕ್ಕೆ ಉಳ್ಳಾಲ  ತಹಶಿಲ್ದಾರರು 21/03/2025 ರಂದು ಪ್ರಮಾಣ ಪತ್ರ ನೀಡಿರುತ್ತಾರೆ. ಆದ್ರೆ ಗಣಿ ಇಲಾಖೆಯಲ್ಲಿ ಅನುಮತಿ ಪತ್ರ ನೀಡಿರುವುದಿಲ್ಲ . ಈ ಬಗ್ಗೆ ವಿಚಾರಿಸಲು ಗಣಿ ಇಲಾಖೆಗೆ ಹೋದಾಗ ಉಪ ನಿರ್ದೇಶಕಿ ಕೃಷ್ಣವೇಣಿಯ ಕೊಠಡಿಗೆ ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಸಿ ಫೈಲಿಗೆ  ಅನುಮತಿ  50 ಸಾವಿರ ಹಣ ತೆಗೆದುಕೊಳ್ಳಿ ನಂತರ ಸಹಿ ಮಾಡುವ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಉಪ ನಿರ್ದೇಶಕಿ ಕೃಷ್ಣವೇಣಿ ಮತ್ತು ಸಿಬ್ಬಂದಿ ಪ್ರದೀಪ್ ವಿರುದ್ಧ ದೂರುದಾರ ದೂರು ನೀಡಿದ್ದರು.

    ಲಂಚದ ಹಣ 50 ಸಾವಿರ ರೂಪಾಯಿ ಮಂಗಳೂರು ಮಲ್ಲಿಕಟ್ಟೆಯಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಯಲ್ಲಿ ಮೇ.28 ರಂದು ದೂರುದಾರರ ಕೈಯಿಂದ ವಾಹನ ಚಾಲಕ ಮಧು ಎಂಬಾತನ ಮೂಲಕ ಉಪ ನಿರ್ದೇಶಕಿ ಕೃಷ್ಣ ವೇಣಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ರೆಡ್ ಹ್ಯಾಂಡ್ ಅಗಿ ವಾಹನ ಚಾಲಕ ಮಧು ಮತ್ತು ಉಪ ನಿರ್ದೇಶಕಿ ಕೃಷ್ಣವೇಣಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    ಶ್ರೀ ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗರವರ ಮಾರ್ಗದರ್ಶನದಲ್ಲಿ, ಮಂಗಳೂರು  ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷರಾದ ಡಾ.ಗಾನ ಪಿ ಕುಮಾರ್, ಶ್ರೀ ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಶ್ರೀಮತಿ ಭಾರತಿ ಜಿ, ಶ್ರೀ ಚಂದ್ರಶೇಖರ್ ಕೆ.ಎನ್ , ಉಡುಪಿ ಜಿಲ್ಲಾ ಲೋಕಾಯುಕ್ತ ಉಪ ನಿರೀಕ್ಷಕರಾದ ಮಂಜುನಾಥ,  ರಾಜೇಂದ್ರ ನಾಯಕ್ ಸಿಬ್ಬಂದಿ ಜೊತೆ  ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

    Post Views: 227

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.