Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ನೌಕರರಿಗೆ 20% ಬೋನಸ್ ಘೋಷಣೆ ಮಾಡಿದ ಸಿಎಂ
    ಇತ್ತೀಚಿನ ಸುದ್ದಿ

    ಮಂಗಳೂರು : ನೌಕರರಿಗೆ 20% ಬೋನಸ್ ಘೋಷಣೆ ಮಾಡಿದ ಸಿಎಂ

    March 16, 2023
    Share

    ಮಂಗಳೂರು: ರಬ್ಬರ್ ಪ್ಲ್ಯಾಂಟೇಷನ್ ಟ್ಯಾಪರ್ ಗಳಿಗೆ ನೀಡುವ ಬೋನಸ್ ಅನ್ನು 12% ಹೆಚ್ಚುವರಿ ಮಾಡಿ ಒಟ್ಟು 20% ಬೋನಸ್ ಅನ್ನು ಇಂದು ಮಂಗಳೂರಿನಲ್ಲಿ ನಡೆದ ಫಲಾನುಭವಿಗಳ ಸಭೆಯಲ್ಲಿಯೇ ಘೋಷಣೆ ಮಾಡಿದರು. ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿಯರು, ರಬ್ಬರ್ ಪ್ಲ್ಯಾಂಟೇಷನ್ ಟ್ಯಾಪರ್ ಗಳಿಗೆ ನೀಡುವ ಬೋನಸ್ ಅನ್ನು 8%ನಿಂದ 12%ಗಳಿಗೆ ಏರಿಕೆ ಮಾಡಲಾಗುತ್ತದೆ ಎಂದು ಘೋಷಿಸುತ್ತಿದ್ದರು. ಈ ವೇಳೆ ಸಚಿವ ಅಂಗಾರ ವೇದಿಕೆಯಲ್ಲಿಯೇ ಅದನ್ನು 20%ಗೆ ಏರಿಕೆ ಮಾಡಬೇಕೆಂದು ಸಿಎಂಗೆ ಮನವಿ ಮಾಡಿದರು. ಅವರ ಮನವಿಗೆ ಅಸ್ತು ಎಂದ ಸಿಎಂ ಬೋನಸ್ ಅನ್ನು 12% ಏರಿಕೆ ಮಾಡಿ ಒಟ್ಟು 20% ಬೋನಸ್ ಕೊಡುವುದಕ್ಕೆ ತೀರ್ಮಾನಿಸಿದ್ದೇನೆ ಎಂದು ಫಲಾನುಭವಿಗಳ ಸಭೆಯಲ್ಲಿಯೇ ಘೋಷಣೆ ಮಾಡಿದರು. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗೆ ಯಾವ ಬೆಲೆಯಿಲ್ಲ. ಅದನ್ನು ಬ್ಯಾಂಕ್ ನಲ್ಲಿ ಇಡುವುದಕ್ಕೆ ಆಗುತ್ತಾ. ಉಪ್ಪಿನಕಾಯಿ ಹಾಕಿ ನಕ್ಕೋಕೆ ಆಗುತ್ತದೆ. ಗ್ಯಾರಂಟಿ ಕಾರ್ಡ್ ವಿಸಿಟಿಂಗ್ ಕಾರ್ಡ್ ಅಷ್ಟೇ. ರಾಜ್ಯದ ಜನತೆ ಆ ಕಾರ್ಡ್ ನ್ನು ಡಸ್ಟ್ ಬೀನ್ ಗೆ ಹಾಕುತ್ತಾರೆ ಎಂದು ಸಿಎಂ ಬೊಮ್ಮಾಯಿಯವರು ಲೇವಡಿ ಮಾಡಿದರು. ಕಾಂಗ್ರೆಸ್ ನವರು ಆಗದಿರುವುದನ್ನು ಹೇಳಿ ಜನರನ್ನು ನಂಬಿಸುತ್ತಿದ್ದಾರೆ. 2 ಸಾವಿರ ಕೋಟಿ ಅನುದಾನಕ್ಕೆ ತಿಂಗಳಿಗೆ 20 ಸಾವಿರ ಕೋಟಿ ಬೇಕಾಗುತ್ತದೆ. ಹಣ ಕೊಟ್ಟರೆ ಎಲ್ಲಾ ಯೋಜನೆಗಳು ಬಂದ್ ಆಗುತ್ತದೆ. ಛತ್ತಿಸ್ ಗಢದಲ್ಲಿ ಇದೇ ರೀತಿಯ ಹೇಳಿಕೆ ಕೊಟ್ಟು 4 ವರ್ಷಗಳಾದರೂ ಕೊಟ್ಟಿಲ್ಲ. 200 ಯುನಿಟ್ ಉಚಿತ ವಿದ್ಯುತ್ ಅನ್ನೂ ಕೊಡುವುದಿಲ್ಲ. ಜನರನ್ನು ಯಾಮಾರಿಸುತ್ತಾರೆ. ಎಲ್ಲಾ ಸಂದರ್ಭಗಳಲ್ಲೂ ಜನರನ್ನು ಮೋಸ ಮಾಡಲು ಸಾಧ್ಯವಿಲ್ಲ ಎಂದರು. ಕೇಂದ್ರ ಸರ್ಕಾರ ಅನ್ನದಾತ ರೈತನಿಗೆ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿಗೊಳಿಸಿದೆ. ಮೋದಿ ಬರುವುದಕ್ಕಿಂತ ಮೊದಲು ಈ ಯೋಜನೆ ಇರಲಿಲ್ಲ. ಯುಪಿಎ ಸರ್ಕಾರ ಇದರ ದೊಡ್ಡ ದೊಡ್ಡ ಬ್ಯಾನರ್ ಗಳನ್ನು ಹಾಕುತ್ತಿದ್ದರು. ಆದರೆ ಯುಪಿಎ ಸರ್ಕಾರದ ಕಾಲದಲ್ಲಿ 85% ಮಧ್ಯವರ್ತಿಗಳ ಪಾಲಾಗುತಿತ್ತು. ಯುಪಿಎ ಕಾಲದಲ್ಲಿ 85% ಸರ್ಕಾರ ನಡೆಯುತಿತ್ತು. ಈಗ ಮಧ್ಯವರ್ತಿಗಳೇ ಇಲ್ಲದೇ ನೇರವಾಗಿ ಫಲಾನುಭವಿಗಳ ಖಾತೆಗೆ ಅನುದಾನ ಹೋಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

    Post Views: 184

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.