Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿ ಗೃಹ ಪ್ರವೇಶದ ಐದೇ ದಿನದಲ್ಲಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿ ಗೃಹ ಪ್ರವೇಶದ ಐದೇ ದಿನದಲ್ಲಿ ಆತ್ಮಹತ್ಯೆ

    June 8, 2023
    Share

    ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. 

    ಮೂಲತಃ ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25) ಆತ್ಮಹತ್ಯೆಗೈದ ಯುವತಿ. ನಿನ್ನೆ ರಾತ್ರಿ ಅಶ್ವಿನಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಳು ಎನ್ನಲಾಗಿದ್ದು ಸ್ನೇಹಿತೆ ಬೆಳಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ. ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. 

    ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆಯಂತೆ. ಅಶ್ವಿನಿ ಸಾಮಾನ್ಯ ಕುಟುಂಬದವರಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತಾ ಎಂಬವರಿಂದ ಅಶ್ವಿನಿಯೇ ಮನೆಯೊಂದನ್ನ ಖರೀದಿಸಿದ್ದು ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರೆನ್ನಲಾಗಿದೆ. ನಿನ್ನೆ ರಾತ್ರಿ ಇವರೆಲ್ಲ ಇದ್ದರೂ, ತನ್ನ ಕೋಣೆಯಲ್ಲಿ ಅಶ್ವಿನಿ ಸಾವಿಗೆ ಶರಣಾಗಿದ್ದು ಮನೆಯವರಿಗೇ ತಿಳಿದಿರಲಿಲ್ಲ. 

    ಅಶ್ವಿನಿ ಗೃಹ ಪ್ರವೇಶದಂದು ರಾತ್ರಿ ಸ್ನೇಹಿತೆಯರ ಜೊತೆ ಪಾರ್ಟಿ ಮಾಡಿ ಕುಣಿದು ಸಂಭ್ರಮಿಸಿದ್ದಳಂತೆ. ನಂತರವೂ ಸ್ನೇಹಿತೆಯರು ಮನೆಗೆ ಬರುತ್ತಿದ್ದು ಟೆರೇಸ್ ಮೇಲೆ ಪಾರ್ಟಿ ಮಾಡುತ್ತಿದ್ದರಂತೆ. ಡೆತ್ ನೋಟಲ್ಲಿ ಅಶ್ವಿನಿ ತನ್ನ ಪ್ರಿಯಕರನ ಹೆಸರು ಉಲ್ಲೇಖಿಸಿ ಐ ಲವ್ ಯೂ ಅಂತ ಬರೆದಿದ್ದು ತಾನು ಬಳಸುತ್ತಿದ್ದ ಐ ಫೋನನ್ನ ಆತನಿಗೆ ನೀಡಬೇಕೆಂದು ಹೇಳಿದ್ದಾಳೆ. ಅಶ್ವಿನಿಯ ತಾಯಿ ಮಗಳನ್ನ ನೆನೆದು ಮನೆಯೊಳಗಡೆ ಬಿದ್ದು ಹೊರಳಾಡುತ್ತಿರುವ ದೃಶ್ಯ ಮನಕಲಕುವಂತಿತ್ತು.

    ಬ್ಯಾಂಕ್ ಸಾಲದಿಂದ ಅಶ್ವಿನಿ‌ ಖಿನ್ನತೆಗೊಳಗಾಗಿ ಆತ್ಮ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಮೃತದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

    Post Views: 178

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.