Facebook Twitter Instagram
    Tuesday, June 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಂದಾಪುರ: ಕಾರು ಹಾಯಿಸಿ ಕೊಲೆಗೆ ಯತ್ನ: ದೂರು ದಾಖಲು
    ಇತ್ತೀಚಿನ ಸುದ್ದಿ

    ಕುಂದಾಪುರ: ಕಾರು ಹಾಯಿಸಿ ಕೊಲೆಗೆ ಯತ್ನ: ದೂರು ದಾಖಲು

    September 21, 2022
    Share

    ಶಂಕರನಾರಾಯಣ: ಜಾಗದ ತಕಾರಿಗೆ ಸಂಬಂಧಿಸಿ ತಮ್ಮ ಮೇಲೆ ಕಾರು ಹಾಯಿಸಿ ಕೊಲೆಗೆ ಯತ್ನಿಸಿರುವುದಾಗಿ ವ್ಯಕ್ತಿಯೊಬ್ಬರು ನಾಲ್ವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

    ಕುಂದಾಪುರದ ಸಿದ್ದಾಪುರ ಗ್ರಾಮದ ಬಾಳೆಬೇರು ನಿವಾಸಿ ಸುಧರ್ಶನ್ ಶೆಟ್ಟಿ ದೂರು ನೀಡಿದ ವ್ಯಕ್ತಿ. ರಾಜರಾಮ ಶೆಟ್ಟಿ, ರಘುರಾಮ ಶೆಟ್ಟಿ, ಶ್ರೀಧರ ಶೆಟ್ಟಿ ಮಂಗನಸಾಲು, ಬಿ.ಪ್ರಕಾಶ್ಚಂದ್ರ ಶೆಟ್ಟಿ ಇವರೊಂದಿಗೆ ಸಿದ್ದಾಪುರ ಗ್ರಾಮದಲ್ಲಿ ಜಾಗದ ವಿಚಾರದಲ್ಲಿ ತಕರಾರು ಇದ್ದು, ಈ ಜಾಗದ ತಕರಾರು ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ. ನ್ಯಾಯಾಲಯವು ಕುಂದಾಪುರ ತಹಶೀಲ್ದಾರರಿಗೆ ತಕರಾರು ಇರುವ ಜಾಗವನ್ನು ಸೆ.21 ರಂದು ಸರ್ವೇ ಮಾಡಿ ವರದಿ ನೀಡುವಂತೆ ಆದೇಶ ಮಾಡಿದೆ.

    ಈ ಜಾಗದ ತಕರಾರಿನ ಬಗ್ಗೆ ಸುಧರ್ಶನ್ ಶೆಟ್ಟಿ ಯವರು ಹೆಚ್ಚಾಗಿ ಓಡಾಡುತ್ತಿದ್ದರು. ಇದರಿಂದ ತಮಗೆ ತೊಂದರೆ ಆಗಬಹುದು ಎಂದು ಆರೋಪಿಗಳು, ಸೆ.18 ರಂದು ಸುದರ್ಶನ್ ಶೆಟ್ಟಿ ಅವರು ತಮ್ಮ ಸ್ಕೂಟಿಯಲ್ಲಿ ಬಾಳೆಬೇರು ಎಂಬಲ್ಲಿ ಮನೆಯ ಸಮೀಪ ನಿಲ್ಲಿಸಿಕೊಂಡು ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಕಾರಿನಲ್ಲಿ ಬಂದ ಆರೋಪಿಗಳು ಇವರ ಸ್ಕೂಟಿಯ ಮೇಲೆ ಕಾರು ಹಾಯಿಸಿದ್ದು, ಇದರಿಂದ ಸುಧರ್ಶನ್ ಶೆಟ್ಟಿರವರು ಜೋರಾಗಿ ಬೊಬ್ಬೆ ಹಾಕಿದಾಗ ಆರೋಪಿಗಳು ಕಾರನ್ನು ಅಲ್ಲಿಯೇ ಪರಾರಿಯಾಗಿದ್ದಾರೆ. ಅಪಘಾತದಿಂದ ರಸ್ತೆಗೆ ಬಿದ್ದ ಸುದರ್ಶನ್ ಶೆಟ್ಟಿ ಅವರು ಗಾಯಗೊಂಡಿದ್ದು, ಕುಂದಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವುದಾಗಿ ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 161

    Related Posts

    ಮಟ್ಕಾ ದಂಧೆಯ ವಿರುದ್ಧ ಬೃಹತ್ ಕಾರ್ಯಾಚರಣೆ: 12 ಮಂದಿ ವಶಕ್ಕೆ

    June 3, 2025

    ದಕ್ಷಿಣ ಕನ್ನಡದ 36 ಮಂದಿ ರೌಡಿಶೀಟರ್ ಗಳ ಗಡಿಪಾರು ಕಾನೂನು ಪ್ರಕ್ರಿಯೆ ಆರಂಭ

    June 3, 2025

    ಮಂಗಳೂರು: ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ- ಎಸ್ಪಿ ಡಾ.ಅರುಣ್ ಎಚ್ಚರಿಕೆ

    June 2, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.